ಕ್ರೈಸ್ತ ಅಭಿವೃದ್ಧಿ ನಿಗಮಕ್ಕೆ ತಾತ್ವಿಕ ಒಪ್ಪಿಗೆ: ಐವನ್
Team Udayavani, Jul 22, 2018, 12:24 PM IST
ಮಂಗಳೂರು:ಕ್ರೈಸ್ತ ಅಭಿವೃದ್ಧಿ ನಿಗಮ ಸ್ಥಾಪನೆಗೆ ಮುಖ್ಯಮಂತ್ರಿಯವರು ತಾತ್ವಿಕ ಒಪ್ಪಿಗೆ ನೀಡಿದ್ದು, ಸಮುದಾಯದ ಉನ್ನತಿಗೆ ಇರುವ ಯೋಜನೆಗಳು ತ್ವರಿತ ಅನುಷ್ಠಾನಕ್ಕೆ ಅನುಕೂಲವಾದೀತು ಎಂದು ವಿಧಾನ ಪರಿಷತ್ ಸದಸ್ಯ ಐವನ್ ಡಿ’ಸೋಜಾ ಹೇಳಿದ್ದಾರೆ.
ನಗರದಲ್ಲಿ ಶನಿವಾರ ಪತ್ರಿಕಾಗೋಷ್ಠಿ ಯನ್ನುದ್ದೇಶಿಸಿ ಮಾತನಾಡಿದ ಅವರು, ಪ್ರಸ್ತುತ ಇರುವ ಕ್ರೈಸ್ತ ಅಭಿವೃದ್ಧಿ ಪರಿಷತ್ತನ್ನು ಅಭಿವೃದ್ಧಿ ನಿಗಮವಾಗಿ ಮಾಡಬೇಕೆಂದು 4 ವರ್ಷದಿಂದ ಆಗ್ರಹಿಸಲಾಗುತ್ತಿತ್ತು. ಕಳೆದ ಚುನಾವಣೆಯಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ತಮ್ಮ ಪ್ರಣಾಳಿಕೆಯಲ್ಲಿ ಇದನ್ನು ಸೇರಿಸಿದ್ದವು. ಅಧಿವೇಶನದಲ್ಲಿ ಬಜೆಟ್ ಚರ್ಚೆಯ ಸಂದರ್ಭ ತಾನು ವಿಧಾನ ಪರಿಷತ್
ನಲ್ಲಿ ಈ ಬಗ್ಗೆ ಪ್ರಸ್ತಾವಿಪಿಸಿದೆ. ಇದಕ್ಕೆ ಸ್ಪಂದಿಸಿರುವ ಮುಖ್ಯಮಂತ್ರಿ ಯವರು ನಿಗಮ ರಚನೆಗೆ ತಾತ್ವಿಕ ಒಪ್ಪಿಗೆ ನೀಡಿದರು ಎಂದರು.ಶೀಘ್ರವೇ ಪೂರಕ ಪ್ರಕ್ರಿಯೆಗಳನ್ನು ಕೈಗೊಂಡು ನಿಗಮ ರಚಿಸಬೇಕು. ಸಿದ್ದರಾಮಯ್ಯ ಅವರ ಬಜೆಟ್ನಲ್ಲಿ ಕ್ರೈಸ್ತ ಅಭಿವೃದ್ಧಿ ಪರಿಷತ್ಗೆ ನೀಡಿದ್ದ 200 ಕೋ.ರೂ.ಗೆ ಹೆಚ್ಚುವರಿಯಾಗಿ 100 ಕೋ.ರೂ. ಸೇರಿಸಿ ಕೂಡಲೇ ಅನುದಾನ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿದರು.
ಪರಿಷತ್ನಿಂದ 5,981 ವಿದ್ಯಾರ್ಥಿ ಗಳಿಗೆ ಒಟ್ಟು 20.46 ಕೋ.ರೂ. ಶೈಕ್ಷಣಿಕ ಸಾಲ ನೀಡಲಾಗಿದೆ. ಆದರೆ ಬಹಳಷ್ಟು ವಿದ್ಯಾರ್ಥಿಗಳಿಗೆ ಉದ್ಯೋಗ ನೀಡಲಾಗಿಲ್ಲ. ಈ ಹಿನ್ನೆಲೆಯಲ್ಲಿ ಈ ಎಲ್ಲ ಸಾಲಗಳನ್ನು ಮನ್ನಾ ಮಾಡಬೇಕೆಂದು ಆಗ್ರಹಿಸಿದರು.
ಮನೆ -ಮಳಿಗೆ ಯೋಜನೆ ಕೋಮು ಗಲಭೆ, ಪ್ರಾಕೃತಿಕ ವಿಕೋಪದಿಂದ ಮನೆ, ವ್ಯಾಪಾರ ಸ್ಥಳ ಕಳೆದುಕೊಂಡ ಅಲ್ಪಸಂಖ್ಯಾಕರಿಗೆ, ಸನ್ನಡತೆ ಆಧಾರದಲ್ಲಿ ಕಾರಾಗೃಹ ದಿಂದ ಬಿಡುಗಡೆಗೊಂಡ ಅಲ್ಪ ಸಂಖ್ಯಾಕ ಕೈದಿಗಳಿಗೆ ಹಾಗೂ ವಿವಿಧ ಪ್ರಕರಣಗಳಲ್ಲಿ ಬಂಧಿತರಾಗಿ ಆರೋಪ ಸಾಬೀತು ಆಗದೆ ಬಿಡುಗಡೆಗೊಂಡ ಅಲ್ಪಸಂಖ್ಯಾಕ ನಿರಪ ರಾಧಿಗಳಿಗೆ 10 ಲಕ್ಷ ರೂ. ಸಾಲ ಸೌಲಭ್ಯ
ನೀಡಲಾಗುತ್ತಿದೆ ಎಂದರು. ಲೋಕಸಭಾ ಚುನಾ ವಣೆಗೆ ಸಂಬಂಧಪಟ್ಟು ಕಾಂಗ್ರೆಸ್ 28 ಸ್ಥಾನ ಗಳಲ್ಲಿ ಕನಿಷ್ಠ 20 ಸ್ಥಾನಗಳನ್ನು ಗೆಲ್ಲುವ ಗುರಿ ಇರಿಸಿಕೊಳ್ಳಲಾಗಿದೆ ಎಂದರು. ಸಂತೋಷ್ ಕುಮಾರ್ ಶೆಟ್ಟಿ, ಹಬೀಬ್ ಕಣ್ಣೂರು, ಮುದಾಸ್ಸಿರ್ ಕುದ್ರೋಳಿ, ಪುನೀತ್, ಮನುರಾಜ್, ಐ. ಮೋನು, ಸತೀಶ್ ಪೆಂಗಾಲ್, ನಜೀರ್ ಬಜಾಲ್ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್ ಬೈಕ್ನಲ್ಲಿ 64ರ ಹಿರಿಯರ ಸಾಹಸ ಯಾನ
Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್
Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್ ಸಾವು
Mangaluru: ಗ್ರಾಮೀಣ ಭಾಗದಲ್ಲಿ ಬಗೆಹರಿಯದ “ಸ್ವಚ್ಛತೆ’ ಸಂಕಟ!
Mangaluru: ಕುಡಿಯುವ ನೀರಿನ ಕೊರತೆ, ಬೋಟ್, ಮಂಜುಗಡ್ಡೆ ಘಟಕಗಳಿಗೆ ಸಂಕಷ್ಟ
MUST WATCH
ಹೊಸ ಸೇರ್ಪಡೆ
Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ
ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್ ಸಿಟಿ ಅಧಿಕಾರಿ ಶ್ರೀನಿವಾಸ
Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!