ಟೋಲ್‌ ನವೀಕರಣಕ್ಕೆ ನಾಗರಿಕ ಆಕ್ರೋಶ: ಧರಣಿ


Team Udayavani, Aug 15, 2018, 12:54 PM IST

15-agust-9.jpg

ಸುರತ್ಕಲ್‌ : ಇಲ್ಲಿನ ಟೋಲ್‌ ಗೇಟನ್ನು ಹಿಂಬಾಗಿಲ ಮೂಲಕ ಆರಂಭಿಸುವ ಹುನ್ನಾರಕ್ಕೆ ಟೋಲ್‌ ಗೇಟ್‌ ಸಮೀಪ ಉಪಾಹಾರ ಮಂದಿರ, ಶೌಚಾಲಯ ನಿರ್ಮಿಸುತ್ತಿರುವುದು ಸಾಕ್ಷಿಯಾಗಿತ್ತು. ಆ ಸಂದರ್ಭ ಡಿವೈಎಫ್‌ಐ ಸಹಿತ ಸ್ಥಳೀಯ ನಾಗರಿಕ ಸಮಿತಿಗಳ ಹೋರಾಟದಿಂದಾಗಿ ಕಾಮಗಾರಿಗಳು ಸ್ಥಗಿತವಾಗಿದ್ದವು. ಆದರೆ ಈಗ ಸಂಸದರ ನೇರ ಹಸ್ತಕ್ಷೇಪದಿಂದ ಮತ್ತೆ ಟೋಲ್‌ ಸುಂಕ ವಸೂಲಿ ಆರಂಭಿಸಲಾಗಿದೆ ಎಂದು ಡಿವೈಎಫ್‌ಐ ರಾಜ್ಯಾಧ್ಯಕ್ಷ ಮುನೀರ್‌ ಕಾಟಿಪಳ್ಳ ಆರೋಪಿಸಿದರು. ಸುರತ್ಕಲ್‌ ಟೋಲ್‌ಗೇಟ್‌ನ್ನು ಸ್ಥಗಿತಗೊಳಿಸಿ, ಹೆದ್ದಾರಿಯಲ್ಲಿರುವ ಅಪಾಯಕಾರಿ ಹೊಂಡ-ಗುಂಡಿಯನ್ನು ಮುಚ್ಚುವಂತೆ ಆಗ್ರಹಿಸಿ ನಡೆದ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು.

ಸಂಸದ ನಳಿನ್‌ ಕುಮಾರ್‌ ಕಟೀಲು ಅವರು ಟೋಲ್‌ಗೇಟ್‌ ಸಮೀಪ ಹೆಸರು ಸಹಿತ ಭಾವಚಿತ್ರ ಹಾಕಿ ದೇಶದ ನಂಬರ್‌ ವನ್‌ ಸಂಸದ ಎಂದು ಹೇಳಿಕೊಳ್ಳುತ್ತಿದ್ದಾರೆ. ಸಂಸತ್ತಿನಲ್ಲಿ ಕನ್ನಡದಲ್ಲಿ ಮಾತನಾಡಿ, ಕೇರಳ ಹಾಗೂ ಕರ್ನಾಟಕದ ನೆರೆ ಬಗ್ಗೆ ಮಾತನಾಡಿ, ಗಮನ ಸೆಳೆದಿರುವುದು ಅಭಿನಂದನಾರ್ಹ. ಆದರೆ ಜಿಲ್ಲೆಯ ಸಮಸ್ಯೆಗಳಿಗೆ ಸರಿಯಾಗಿ ಸ್ಪಂದಿಸದೆ ಇರುವುದು ಖೇಧಕರ. ಹೆದ್ದಾರಿಗಳು ಹೊಂಡಗಳಿಂದ ತುಂಬಿದ್ದು, ದುರಸ್ತಿ ಕಾರ್ಯ ನಡೆಸುವುದು ಹಾಗೂ ಹತ್ತು ಕಿ.ಮೀ. ಅಂತರದಲ್ಲಿರುವ ಮೂರ್‍ನಾಲ್ಕು ಟೋಲ್‌ ಸುಂಕ ಹಾಕುವುದನ್ನು ತಡೆಯಲು ಇಂದಿಗೂ ಅವರಿಂದ ಸಾಧ್ಯವಾಗಿಲ್ಲ ಎಂದರು.

ಕಾರ್ಪೋರೇಟರ್‌ ರೇವತಿ ಪುತ್ರನ್‌ ಮಾತನಾಡಿ, ಪ್ರಧಾನಿ ಮೋದಿ ಹೆಸರಿನಲ್ಲಿ ಮತ ಪಡೆಯುವ ಸಂಸದರು, ಸ್ವಯಂ ವರ್ಚಸ್ಸಿನಿಂದ ಮತ ಪಡೆಯಲು ಸಾಧ್ಯವಾಗುತ್ತಿಲ್ಲ. ಅಭಿವೃದ್ಧಿ ಕೇವಲ ಬಾಯಿಮಾತಿನಲ್ಲಿ ಮಾಡಿದರೆ ಸಾಲದು ಜನತೆಗೆ ಪ್ರಯೋಜನ ಲಭಿಸುವಂತಿರಬೇಕು. ಸಂಸದರು ಮತ್ತೆ ಜಯಗಳಿಸಿದರೆ ಮತ್ತಷ್ಟು ಟೋಲ್‌ ವಸೂಲಾತಿ ಕೇಂದ್ರಗಳು ಆರಂಭವಾಗಬಹುದು ಎಂದರು.

ಬಲಿಷ್ಠ ರಸ್ತೆ ನಿರ್ಮಿಸಲು ಸಾಧ್ಯವಾಗಿಲ್ಲ
ದಯಾನಂದ ಶೆಟ್ಟಿ ಪಂಜಿಮೊಗರು ಮಾತನಾಡಿ, ಸಂಸದ ನಳಿನ್‌ ಕುಮಾರ್‌ ಕಟೀಲು ಪಾಲಿಕೆ ಸಭೆಯ ಚರ್ಚಿಗೆ ಇಂದಿಗೂ ಬಂದಿಲ್ಲ. ಮಾತೆತ್ತಿದರೆ ಬಲಿಷ್ಠ ದೇಶ ನಿರ್ಮಾಣ ಮಾಡುತ್ತೇವೆ ಎನ್ನುತ್ತಾರೆ. ಹತ್ತು ವರ್ಷಗಳಲ್ಲಿ ಬಲಿಷ್ಠ ರಸ್ತೆ ನಿರ್ಮಿಸಲೂ ಅವರಿಗೆ ಸಾಧ್ಯವಾಗಲಿಲ್ಲ ಎಂದು ಟೀಕಿಸಿದರು.

ಜಯಕರ್ನಾಟಕ ಮುಖಂಡ ವೈ. ರಾಘವೇಂದ್ರ ರಾವ್‌, ಡಿವೈಎಫ್‌ಐ ಮುಖಂಡ ಇಮ್ತಿಯಾಝ್, ಸಂತೋಷ್‌ ಬಜಾಲ್‌, ಅಜ್ಮಲ್‌ ಕಾನಾ, ನವೀನ್‌ ಕೊಂಚಾಡಿ, ಮುಸ್ತಫಾ ಬೈಕಂಪಾಡಿ, ಮೂಸಬ್ಬ ಪಕ್ಷಿಕೆರೆ, ರಹೀಂ ಪಕ್ಷಿಕೆರೆ, ದಿನೇಶ್‌ ಆರ್‌. ಕೆ., ಸಂದೀಪ್‌ ಕಿನ್ನಿಗೋಳಿ, ಮುನಾವರ್‌ ಕುತ್ತಾರ್‌, ಕಮಲಾಕ್ಷ ಸಾಲ್ಯಾನ್‌, ಶಿವ ಪಂಜಿಮೊಗರು, ಉಮರ್‌ ಫಾರೂಕ್‌, ಜಾನ್‌ ಡಿ’ಸೋಜಾ, ಅಬೂಬಕರ್‌ ಬಾವಾ, ನಾಗರಿಕ ಸಮಿತಿಯ ಗಂಗಾಧರ ಬಂಜನ್‌ ಮೊದಲಾದವರು ಉಪಸ್ಥಿತರಿದ್ದರು. ಬಿ.ಕೆ. ಇಮ್ತಿಯಾಝ್ ಪ್ರಾಸ್ತಾವಿಸಿದರು. ಶ್ರೀನಾಥ್‌ ಕುಲಾಲ್‌ ಅವರು ಕಾರ್ಯಕ್ರಮ ಸ್ವಾಗತಿಸಿದರು.

ಟಾಪ್ ನ್ಯೂಸ್

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Checkbounce case: ಆರೋಪಿ ಮಹಿಳೆ ಖುಲಾಸೆ

Checkbounce case: ಆರೋಪಿ ಮಹಿಳೆ ಖುಲಾಸೆ

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

Fraud: ಸರಕಾರಿ ಉದ್ಯೋಗ ಆಮಿಷ: ಲಕ್ಷಾಂತರ ರೂಪಾಯಿ ವಂಚನೆ

Fraud: ಸರಕಾರಿ ಉದ್ಯೋಗ ಆಮಿಷ: ಲಕ್ಷಾಂತರ ರೂಪಾಯಿ ವಂಚನೆ

Kokkada: ತೋಟದಲ್ಲಿ ಕಟ್ಟಿದ್ದ ದನ ಕಳವು

Kokkada: ತೋಟದಲ್ಲಿ ಕಟ್ಟಿದ್ದ ದನ ಕಳವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.