ಪುರಭವನದ ಆವರಣ ಡಂಪಿಂಗ್‌ ಯಾರ್ಡ್‌?

ಶೀಘ್ರ ಟೆಂಡರ್‌ ಕರೆದು ಇವುಗಳನ್ನು ತೆರವುಗೊಳಿಸುವ ಆವಶ್ಯಕತೆಯಿದೆ.

Team Udayavani, Feb 2, 2023, 6:25 PM IST

ಪುರಭವನದ ಆವರಣ ಡಂಪಿಂಗ್‌ ಯಾರ್ಡ್‌?

ಮಹಾನಗರ: ನಗರದ ಕುದ್ಮುಲ್‌ ರಂಗರಾವ್‌ ಪುರಭವನದ ಆವರಣ ಅಕ್ಷರಶಃ ಡಂಪಿಂಗ್‌ ಯಾರ್ಡ್‌ ಅಗಿ ಪರಿವರ್ತನೆಯಾಗಿದ್ದು, ದಿನದಿಂದ ದಿನಕ್ಕೆ ಬಂದು ಬೀಳುವ ತ್ಯಾಜ್ಯದ ಪ್ರಮಾಣ ಹೆಚ್ಚಾಗುತ್ತಿದೆ. ಪರಿಣಾಮ ಮಿನಿ ಪಚ್ಚನಾಡಿಯಾಗಿ ಪರಿವರ್ತನೆಯಾಗಿದೆ.

ಪುರಭವನದ ನಗರದ ಪ್ರಮುಖ ಸಭಾಂಗಣಗಳಲ್ಲಿ ಒಂದಾಗಿದ್ದು, ಸಾಕಷ್ಟು ಸಂಖ್ಯೆಯಲ್ಲಿ ಸರಕಾರಿ, ಖಾಸಗಿ ಕಾರ್ಯಕ್ರಮಗಳು ಇಲ್ಲಿ ಆಯೋಜನೆಗೊಳ್ಳುತವೆ. ಇಂತಹ ಕಾರ್ಯಕ್ರಮಗಳಲ್ಲಿ ದೇಶ ವಿದೇಶಗಳಿಂದ ಬರುವ ಜನರು ಪಾಲ್ಗೊಳ್ಳುವುದರಿಂದ, ಆವರಣದಲ್ಲಿರುವ ತ್ಯಾಜ್ಯ ರಾಶಿ ಅವರಲ್ಲಿ ನಗರದ ಸೌಂದರ್ಯದ ಬಗ್ಗೆ ತಪ್ಪು ಕಲ್ಪನೆ ಮೂಡಿಸಬಹುದು ಎಂದು ಸಾರ್ವಜನಿಕರು ಅಭಿಪ್ರಾಯಪಟ್ಟಿದ್ದಾರೆ.

ಈ ಮೊದಲು ನಗರದ ವಿವಿಧೆಡೆ ಬೀದಿ ಬಿದಿ ವ್ಯಾಪಾರಿಗಳನ್ನು ಕಾರ್ಯಾಚರಣೆ ಮೂಲಕ ತೆರವುಗೊಳಿಸಿ, ಅವರ ಗೂಡಂಗಡಿ ಸಹಿತ ವಿವಿಧ ವಸ್ತುಗಳನ್ನು ಪುರಭವನದ ಆವರಣದಲ್ಲಿ ತಂದು ಹಾಕುತ್ತಿದ್ದರು. ಇದೀಗ ಅವುಗಳೊಂದಿಗೆ ಇತರ ವಸ್ತುಗಳು ಬಂದು ಸೇರಿವೆ. ಶೀಘ್ರ ಟೆಂಡರ್‌ ಕರೆದು ಇವುಗಳನ್ನು ತೆರವುಗೊಳಿಸುವ ಆವಶ್ಯಕತೆಯಿದೆ.

ಏನೇನು ತ್ಯಾಜ್ಯಗಳಿವೆ
ಪುರಭವನದಲ್ಲಿ ಆಯೋಜನೆಗೊಳ್ಳುವ ಕಾರ್ಯಕ್ರಮಗಳ ಊಟೋಪಚಾರದ ತ್ಯಾಜ್ಯವನ್ನು ವಿಲೇವಾರಿ ಮಾಡುವ ಬದಲು ಆವರಣದಲ್ಲೇ ಸುರಿಯಲಾಗುತ್ತದೆ. ಸ್ಟೇಟ್‌ ಬ್ಯಾಂಕ್‌ನ ಸರ್ವಿಸ್‌ ಬಸ್‌ ನಿಲ್ದಾಣವನ್ನು ಮರು ನಿರ್ಮಾಣ ಮಾಡುವ ವೇಳೆ ಅಲ್ಲಿದ್ದ ಕಬ್ಬಿಣದ ಬೀಮ್‌ಗಳನ್ನು ತಂದು ರಾಶಿ ಹಾಕಲಾಗಿದೆ. ಉಳಿದಂತೆ ಪೊಲೀಸ್‌ ಇಲಾಖೆಗೆ ಸಂಬಂಧಪಟ್ಟ ಬ್ಯಾರಿಕೇಡ್‌ ಗಳು, ಪಾಲಿಕೆಯ ವಿವಿಧೆಡೆಯ ಬೀದಿ ದೀಪ ಕಂಬಗಳ ರಾಶಿ, ಕಾಮಗಾರಿ ವೇಳೆ ತೆರವುಗೊಳಿಸಲಾದ ಸ್ಮಾರ್ಟ್‌ ಪೋಲ್‌, ಟಯರ್‌ಗಳ ರಾಶಿ, ತುಂಡಾದ ಇಂಟರ್‌ ಲಾಕ್‌ಗಳ ರಾಶಿ, ವಿದ್ಯುತ್‌ ಕೇಬಲ್‌ ಗಳು ಹೀಗೆ ಸಾಕಷ್ಟು ವಸ್ತುಗಳನ್ನು ತಂದು ಸುರಿಯಾಗಿದೆ.

ಪಾರ್ಕಿಂಗ್‌ಗೆ ಸ್ಥಳದ ಕೊರತೆ
ಪುರಭವನದ ಪಾರ್ಕಿಂಗ್‌ ಸ್ಥಳದಲ್ಲೇ ಈ ತಾಜ್ಯ, ಗುಜಿರಿ ವಸ್ತುಗಳನ್ನು ತಂದು ಹಾಕಿರುವುದರಿಂದ ಪಾರ್ಕಿಂಗ್‌ಗೂ ಸ್ಥಳಾವಕಾಶ ವಿಲ್ಲದಂತಾಗಿದೆ. ದ್ವಿಚಕ್ರ ವಾಹನಗಳ ನಿಲುಗಡೆಗೆ ಮೀಸಲಾಗಿರಿಸಿರುವ ಸ್ಥಳದಲ್ಲೇ ಗುಜರಿ ವಸ್ತುಗಳನ್ನು ರಾಶಿ ಹಾಕಿದ್ದು, ಇದರಿಂದ ಸವಾರರು ಬೇರೆ ಕಡೆಗಳಲ್ಲಿ ವಾಹನ ನಿಲ್ಲಿಸುವಂತಾಗಿದೆ. ಪಾರ್ಕಿಂಗ್‌ಗೆ ಸ್ಥಳದ ಕೊರತೆ ಉಂಟಾಗುತ್ತಿದೆ.

ಹಾಕಲು ಬೇರೆ ಸ್ಥಳವಿಲ್ಲ!
ಪಾಲಿಕೆ ವ್ಯಾಪ್ತಿಯಲ್ಲಿ ಗುಜರಿ ವಸ್ತುಗಳನ್ನು ಹಾಕಲು ಸ್ಥಳದ ಕೊರತೆಯಿದೆ ಎನ್ನುತ್ತಾರೆ ಅಧಿಕಾರಿಗಳು ಮತ್ತು ಜನ ಪ್ರತಿನಿಧಿಗಳು. ಈ ಮೊದಲು ಪಾಲಿಕೆ ಕಟ್ಟಡದ ಹಿಂಭಾಗದಲ್ಲೇ ಇಂತಹ ಗುಜರಿ ವಸ್ತುಗಳನ್ನು ತಂದು ಸುರಿಯಲಾಗುತ್ತಿತ್ತು. ಈ ಬಗ್ಗೆ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಇದೀಗ ಪಾಲಿಕೆ ಆವರಣದಲ್ಲಿಯೇ ತಂದು ಸುರಿಯಲಾಗುತ್ತಿದೆ.

ತೆರವಿಗೆ ಕ್ರಮ
ಪುರಭವನದ ಆವರಣದಲ್ಲಿ ಈ ಹಿಂದೆ ತಂದು ಹಾಕಿದ್ದ ತ್ಯಾಜ್ಯ ವಸ್ತುಗಳನ್ನು ತೆರವುಗೊಳಿಸಲಾಗಿತ್ತು. ಇದೀಗ ಮತ್ತೆ ತಂದು ತಂದು ಹಾಕಿರುವುದರಿಂದ ಕಮಿಷನರ್‌ ಜತೆ ಮಾತನಾಡಿ ತೆರವುಗೊಳಿಸಲು ಕ್ರಮ ಕೈಗೊಳ್ಳಲಾಗುವುದು.
ಜಯಾನಂದ ಅಂಚನ್‌, – ಮೇಯರ್‌

ಟಾಪ್ ನ್ಯೂಸ್

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

6-court

Mangaluru: ಬಾಲಕಿಯನ್ನು ಅಪಹರಿಸಿ ಅತ್ಯಾಚಾರ; ಅಪರಾಧಿಗೆ 10 ವರ್ಷ ಕಠಿನ ಕಾರಾಗೃಹ ಶಿಕ್ಷೆ

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

1-JP-H

Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.