ಕರಾವಳಿಯ ದೈವ ದೇವರುಗಳ ಮೊರೆ ಹೋದ ಸಿಎಂ ಬೊಮ್ಮಾಯಿ
Team Udayavani, Apr 13, 2023, 7:35 AM IST
ಮಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಗೆ ಮೊದಲ ಹಂತದ ಪಟ್ಟಿ ಬಿಡುಗಡೆಯಾದ ಕೂಡಲೇ ಸಿಎಂ ಬಸವರಾಜ ಬೊಮ್ಮಾಯಿ ಅವರು ದೇವರ ಮೊರೆ ಹೋಗಿದ್ದಾರೆ.
ಕರಾವಳಿಗೆ ಬುಧವಾರ ಪತ್ನಿಯೊಂದಿಗೆ ಆಗಮಿಸಿದ ಸಿಎಂ ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ ಭೇಟಿ ನೀಡಿದರು. ಸಂಜೆ ಮಂಗಳೂರಿಗೆ ಆಗಮಿಸಿದ ಅವರು ಬಿಜೆಪಿ ಅಭ್ಯರ್ಥಿಗಳಾದ ಡಿ.ವೇದವ್ಯಾಸ ಕಾಮತ್, ಡಾ| ವೈ.ಭರತ್ ಶೆಟ್ಟಿ ಅವರೊಂದಿಗೆ ಮಾತುಕತೆ ನಡೆಸಿದರು. ಇದೇ ವೇಳೆ ಮನಪಾ ಮಾಜಿ ಮೇಯರ್ ಪ್ರೇಮಾನಂದ ಶೆಟ್ಟಿ, ಬಿಜೆಪಿಯ ಮುಖಂಡರಾದ ಜಗದೀಶ್ ಶೇಣವ, ಸುಧೀರ್ ಶೆಟ್ಟಿ ಕಣ್ಣೂರು ಉಪಸ್ಥಿತರಿದ್ದರು.
ರಾತ್ರಿ ಸಿಎಂ ಅವರು ನಗರದ ಮಹತೋಭಾರ ಶ್ರೀ ಮಂಗಳಾದೇವಿ ದೇವಸ್ಥಾನ, ಕಂಕನಾಡಿ ಶ್ರೀ ಬ್ರಹ್ಮಬೈದರ್ಕಳ ಗರೋಡಿಗೆ ಭೇಟಿಯಿತ್ತರು. ಮಂಗಳೂರಿನ ಖಾಸಗಿ ಹೊಟೇಲ್ನಲ್ಲೇ ವಾಸ್ತವ್ಯ ಹೂಡಿದ್ದು ಎ.13ರಂದು ಬೆಳಗ್ಗೆ ಕಟೀಲು ಹಾಗೂ ಕೊಲ್ಲೂರಿಗೆ ಭೇಟಿ ನೀಡುವ ನಿರೀಕ್ಷೆ ಇದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Tollywood: ಅಧಿಕೃತವಾಗಿ ರಿವೀಲ್ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್ ಡೇಟ್
Mumbai 26/11 ದಾಳಿಯ ವಕೀಲ ಉಜ್ವಲ್ ನಿಕಮ್ ಗೆ ಬಿಜೆಪಿ ಟಿಕೆಟ್, ಪೂನಮ್ ಗೆ ಕೊಕ್?
Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ
Sandalwood: ಜಪಾನ್ನಲ್ಲಿ ಈ ದಿನ ರಿಲೀಸ್ ಆಗಲಿದೆ ‘777 ಚಾರ್ಲಿʼ?
Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ