Mangaluru: ಮೈನವಿರೇಳಿಸಿದ ಕೋಸ್ಟ್‌ಗಾರ್ಡ್‌ ಕಾರ್ಯಾಚರಣೆ

ಜೀವರಕ್ಷಣೆ, ಕಡಲ್ಗಳ್ಳರ ವಶ, ಹಡಗಿನ ಬೆಂಕಿ ನಂದಿಸುವ ಅಣಕು

Team Udayavani, Feb 24, 2024, 11:11 AM IST

3-mangaluru

ಮಂಗಳೂರು: ಆಕಾಶದಲ್ಲಿ ಹೆಲಿಕಾಪ್ಟರ್‌, ಡೋರ್ನಿಯರ್‌ಗಳು, ಸಮುದ್ರದಲ್ಲಿ ಹಡಗುಗಳು, ಇಂಟರ್‌ ಸೆಪ್ಟರ್‌, ಗಸ್ತು ನೌಕೆಗಳು…. ನೀರಿನಲ್ಲಿ ಮುಳುಗುತ್ತಿದ್ದವರ ರಕ್ಷಣೆ, ಹಡಗಿಗೆ ತಗಲಿದ ಬೆಂಕಿಯನ್ನು ನಂದಿಸುವುದು, ಶಂಕಾಸ್ಪದ ಹಡಗುಗಳ ಮೇಲೆ ನಿಗಾ, ಕಡಲ್ಗಳ್ಳರ ಹಡಗಿನ ಪತ್ತೆ, ದಾಳಿ, ವಶ…

ಇವು ನವಮಂಗಳೂರು ಬಂದರಿನಿಂದ 15 ನಾಟಿಕಲ್‌ ಮೈಲು ದೂರದ ಸಮುದ್ರದಲ್ಲಿ ಶುಕ್ರವಾರ ನಡೆದ ಭಾರತೀಯ ತಟರಕ್ಷಣ ಪಡೆಯ (ಕೋಸ್ಟ್‌ಗಾರ್ಡ್‌) ಸಾಹಸಮಯ ಕಾರ್ಯಾಚರಣೆಗಳು.

“ಕೋಸ್ಟ್‌ಗಾರ್ಡ್‌ ರೈಸಿಂಗ್‌ ಡೇ’ ಪ್ರಯುಕ್ತ ಶುಕ್ರವಾರ ಸರಿಸುಮಾರು ಎರಡೂವರೆ ಗಂಟೆ ಕಾಲ ನಡೆದ ಅಣಕು ಕಾರ್ಯಾಚರಣೆ ರೋಮಾಂಚನ ವನ್ನುಂಟು ಮಾಡಿತು. ತಟರಕ್ಷಣ ಪಡೆಯ ಸಾಮರ್ಥ್ಯ, ಕಾರ್ಯಕ್ಷಮತೆಯನ್ನು ಪ್ರಸ್ತುತಪಡಿಸಿತು.

ವೈವಿಧ್ಯಮಯ ಕಸರತ್ತು

ಸಮುದ್ರದಲ್ಲಿ ಮುಳುಗುತ್ತಿದ್ದ ವ್ಯಕ್ತಿಯನ್ನು ಹೆಲಿಕಾಪ್ಟರ್‌ ಮೂಲಕ ಪತ್ತೆ ಹಚ್ಚಿ ಸುಮಾರು ಅರ್ಧ ತಾಸಿನ ಕಾರ್ಯಾಚರಣೆಯಲ್ಲಿ (ಸರ್ಚ್‌ ಆ್ಯಂಡ್‌ ರೆಸ್ಕ್ಯೂ -ಸಾಸ್‌) ರಕ್ಷಿಸಲಾಯಿತು. ಅನಂತರ ಮತ್ತೋರ್ವನನ್ನು ಸ್ಪೀಡ್‌ಬೋಟ್‌ ಮೂಲಕ ರಕ್ಷಿಸಲಾಯಿತು.

ಸಮುದ್ರ ಮಧ್ಯೆ ಹಡಗಿನಲ್ಲಿ ಬೆಂಕಿ ಅವಘಡ ಸಂದರ್ಭ ನಡೆಸುವ ಕಾರ್ಯಾಚರಣೆಯ ಮಾದರಿಯಲ್ಲಿ ವಿಕ್ರಮ್‌ ಹಡಗಿನಲ್ಲಿದ್ದ ಬೃಹತ್‌ ನೀರಿನ ಸ್ಪ್ರಿಂಕ್ಲರ್‌ನಿಂದ ಸುಮಾರು ಒಂದು ಕಿ.ಮೀ. ದೂರಕ್ಕೆ ನೀರು ಹಾಯಿಸಲಾಯಿತು.

ಕಡಲ್ಗಳ್ಳರ ಹಡಗಿನ ಪತ್ತೆ, ಗುಂಡು ಹಾರಾಟ ಇತ್ಯಾದಿ ಬೆಳಗ್ಗೆ 11ರಿಂದ ಸುಮಾರು 1.30ರ ವರೆಗೆ ನಡೆಯಿತು. ಕಾರ್ಯಾಚರಣೆಯಲ್ಲಿ 2 ಇಂಟರ್‌ ಸೆಪ್ಟರ್‌ಗಳು, 2 ಡೋರ್ನಿಯರ್‌ಗಳು (ವಿಮಾನ), ಒಂದು ಅತ್ಯಾಧುನಿಕ ಹೆಲಿಕಾಪ್ಟರ್‌, 6 ಹಡಗುಗಳು, ಒಂದು ಕಡಲಾಚೆಯ ಗಸ್ತು ಹಡಗು (ಆಫ್ ಶೋರ್‌ ಪ್ಯಾಟ್ರೊಲ್‌ ವೆಸೆಲ್‌- ಒಪಿವಿ), 3 ವೇಗದ ಗಸ್ತು ನೌಕೆ (ಫಾಸ್ಟ್‌ ಪ್ಯಾಟ್ರಲ್‌ ವೆಸೆಲ್‌- ಎಫ್ಪಿವಿ)ಗಳು ಪಾಲ್ಗೊಂಡವು.

ರಾಜ್ಯಪಾಲರಿಂದ ವೀಕ್ಷಣೆ

ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ತಟರಕಣ ಪಡೆಯ ಹಡಗಿನಲ್ಲಿ ಕುಳಿತು ಕಾರ್ಯಾಚರಣೆಯನ್ನು ವೀಕ್ಷಿಸಿ ಶ್ಲಾಘಿಸಿದರು.

ಕರ್ನಾಟಕ ಕೋಸ್ಟ್‌ ಗಾರ್ಡ್‌ ಕಮಾಂಡರ್‌ ಪ್ರವೀಣ್‌ ಕುಮಾರ್‌ ಮಿಶ್ರಾ, ಕಮಾಂಡಿಂಗ್‌ ಅಫೀಸರ್‌ ಹಾಗೂ ಡಿಐಜಿ ಅಶೋಕ್‌ ಕುಮಾರ್‌ ಭಾಮ, ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌, ಪೊಲೀಸ್‌ ಆಯುಕ್ತ ಅನುಪಮ್‌ ಅಗರ್‌ವಾಲ್‌, ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ| ಆನಂದ್‌ ಪಾಲ್ಗೊಂಡರು.

“ಸಾಹಸಮಯ ಅನುಭವ

ಬಿಹಾರ ಕೋಸ್ಟ್‌ಗಾರ್ಡ್‌ ಅಧಿಕಾರಿ ಯೋರ್ವರು ಮಾತನಾಡಿ, “30 ವರ್ಷ ಗಳಿಂದ ಕೋಸ್ಟ್‌ಗಾರ್ಡ್‌ನಲ್ಲಿದ್ದು, ಪಾರಾದೀಪ್‌, ವಿಶಾಖಪಟ್ಟಣ, ಗಾಂಧಿ ನಗರ ಮೊದಲಾದೆಡೆ ಸೇವೆ ಸಲ್ಲಿಸಿ ಮಂಗಳೂರಿನಲ್ಲಿದ್ದೇನೆ. ಕೋಸ್ಟ್‌ಗಾರ್ಡ್‌ ನಲ್ಲಿ ಕೆಲಸವೆಂದರೆ ಸಾಹಸಮಯ ಅನುಭವ ಮಾತ್ರವಲ್ಲದೆ ಪ್ರಕೃತಿಯೊಂ ದಿಗಿನ ಒಡನಾಟ’ ಎಂದರು.

“ಕೋಸ್ಟ್‌ಗಾರ್ಡ್‌ನ ಈ ಅದ್ಭುತ ಸಾಹಸಮಯ ಕವಾಯತು ನೋಡುವ ಮೊದಲ ಅವಕಾಶ ನನ್ನದಾಯಿತು. ದೇಶದ ಕಡಲು ರಕ್ಷಣೆಯಲ್ಲಿ ಕೋಸ್ಟ್‌ ಗಾರ್ಡ್‌ ಪಾತ್ರ ಬಹುಮುಖ್ಯವಾಗಿದ್ದು, ನಮ್ಮ ಕೋಸ್ಟ್‌ಗಾರ್ಡ್‌ ನಮ್ಮ ಹೆಮ್ಮೆ’ ಎಂದು ಪಂಜಾಬ್‌ ನಿವಾಸಿ ಅಮಿತಾ ಶರ್ಮಾ ಹೇಳಿದರು.

ಟಾಪ್ ನ್ಯೂಸ್

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

1-RR

Modi ಹಾವಿನ ರೀತಿಯಲ್ಲಿ ರೈತರ ವಿರುದ್ಧ ಸೇಡಿಗೆ ಕಾಯ್ತಿದ್ದಾರೆ: ರೇವಂತ್‌

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Congress 1.20 ಲಕ್ಷಕ್ಕೂ ಅಧಿಕ ಮತಗಳ ಗೆಲುವು: ಪದ್ಮರಾಜ್‌ ಆರ್‌.

Congress 1.20 ಲಕ್ಷಕ್ಕೂ ಅಧಿಕ ಮತಗಳ ಗೆಲುವು: ಪದ್ಮರಾಜ್‌ ಆರ್‌.

BJP ಅಭೂತಪೂರ್ವ ವಿಜಯದ ವಿಶ್ವಾಸ: ಕಾ| ಬೃಜೇಶ್‌ ಚೌಟ

BJP ಅಭೂತಪೂರ್ವ ವಿಜಯದ ವಿಶ್ವಾಸ: ಕಾ| ಬೃಜೇಶ್‌ ಚೌಟ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

1-wwqw

CRPF DIG ಯಿಂದ ಲೈಂಗಿಕ ಕಿರುಕುಳ: ಖಜಾನ ವಜಾ ಸಾಧ್ಯತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.