‘ಒಡಿಎಫ್‌ ಪ್ಲಸ್‌ ಪ್ಲಸ್‌’ ಗರಿಯತ್ತ ಮಹಾನಗರ ಪಾಲಿಕೆ

ಸಮುದಾಯ, ಸಾರ್ವಜನಿಕ ಶೌಚಾಲಯ ಸುಸ್ಥಿರತೆ ಮಾನದಂಡ

Team Udayavani, Apr 19, 2022, 10:57 AM IST

corporation

ಮಹಾನಗರ: ಬಿಬಿಎಂಪಿ ಮತ್ತು ಮೈಸೂರು ಪಾಲಿಕೆಯ ಬಳಿಕ ಇದೀಗ ಮಂಗಳೂರು ಪಾಲಿಕೆಯು ‘ಒಡಿಎಫ್‌ ಪ್ಲಸ್‌ ಪ್ಲಸ್‌’ ಗರಿಯನ್ನು ತನ್ನದಾಗಿಸಲು ಮುಂದಡಿ ಇಡುತ್ತಿದೆ.

ಮಂಗಳೂರು ಮಹಾನಗರ ಪಾಲಿಕೆ ಈಗಾಗಲೇ ಒಡಿಎಫ್‌ ಮತ್ತು ಒಡಿಎಫ್‌ ಪ್ಲಸ್‌ ಗ್ರೇಡ್‌ ಹೊಂದಿದ್ದು, ಈ ವರ್ಷ ಒಡಿಎಫ್‌ ಪ್ಲಸ್‌ ಪ್ಲಸ್‌ ಸ್ಥಾನಕ್ಕಾಗಿ ಸ್ಪರ್ಧೆಗಿಳಿದಿದೆ. ನಗರದ ಶೌಚಾಲಯಗಳನ್ನು ಅತ್ಯಂತ ಉತ್ತಮ ಮಟ್ಟದಲ್ಲಿ ಶುಚಿತ್ವ ಕಾಪಾಡಿಕೊಳ್ಳುವುದು ಒಡಿಎಫ್‌ ಪ್ಲಸ್‌ ಪ್ಲಸ್‌ ಪ್ರಮುಖ ಮಾನದಂಡವಾಗಿದ್ದು, ಈಗಾಗಲೇ ಈ ನಿಟ್ಟಿನಲ್ಲಿ ಕೇಂದ್ರ ವಸತಿ ಮತ್ತು ನಗರಾಭಿವೃದ್ಧಿ ಸಚಿವಾಲಯದ ಅಧಿಕಾರಿಗಳು ನಗರದಲ್ಲಿ ಸರ್ವೇ ನಡೆಸಿದ್ದಾರೆ. ಇನ್ನೇನು ಕೆಲವು ದಿನಗಳಲ್ಲಿಯೇ ಫಲಿತಾಂಶವೂ ಹೊರ ಬೀಳಲಿದೆ.

ಒಡಿಎಫ್‌ ಪ್ಲಸ್‌ ಪ್ಲಸ್‌ ಸ್ಥಾನಮಾನ ಹೊಂದಲು ನಗರದ ಸಾರ್ವಜನಿಕ ಹಾಗೂ ಸಮುದಾಯ ಶೌಚಾಲಯಗಳು ಸ್ವಚ್ಛವಾಗಿರಬೇಕು. ಏರ್‌ಪ್ರಷನರ್‌, ಟವೆಲ್‌, ಸಾಬೂನು, ಮಕ್ಕಳಿಗೆ ಅನುಕೂಲಕರ ಶೌಚಾಲಯ (ಎತ್ತರ), ನ್ಯಾಪ್‌ ಕಿನ್‌, ಕೈ ಒಣಗಿಸುವ ಯಂತ್ರ ಇದ್ದು, ಶೌಚಾಲಯದ ಹೊರ ಪ್ರದೇಶ ರಾತ್ರಿ ವೇಳೆ ಕತ್ತಲಿನಿಂದ ಕೂಡಿರಬಾರದು. ಎಲ್ಲ ಶೌಚಾಲಯಗಳ ಕಟ್ಟಡಗಳು ಸುವ್ಯವಸ್ಥೆಯಲ್ಲಿವೆ ಎಂದು ಪ್ರಮಾಣೀಕರಿಸಿರಬೇಕು ಎನ್ನುವುದು ಸಹಿತ ಹಲವು ಪ್ರಮುಖ ಮಾನದಂಡಗಳ ಮೇಲೆ ಒಡಿಎಫ್‌ ಪ್ಲಸ್‌ ಪ್ಲಸ್‌ ಗ್ರೇಡ್‌ ಸಿಗುತ್ತದೆ.

ಪಾಲಿಕೆಯಲ್ಲಿ ಹರಿನಾಥ್‌ ಅವರು ಮೇಯರ್‌ ಆಗಿದ್ದಾಗ ಮಂಗಳೂರನ್ನು ಬಯಲು ಮಲ ವಿಸರ್ಜನೆ ಮುಕ್ತ ನಗರವೆಂದು (ಒಡಿಎಫ್‌) ಘೋಷಣೆ ಮಾಡಲಾಗಿತ್ತು. ಮುಂದೆ ‘ಒಡಿಎಫ್‌ ಪ್ಲಸ್‌’ ನಗರವಾಗಿ ಬೆಳೆಯಲು ಅರ್ಹತೆ ಪಡೆದಿತ್ತು. ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯವು ಸಮುದಾಯ ಮತ್ತು ಸಾರ್ವಜನಿಕ ಶೌಚಾಲಯಗಳ ಸುಸ್ಥಿರತೆ ಉದ್ದೇಶದಿಂದ ಮಂಗಳೂರು ನಗರವನ್ನು ಕಳೆದ ವರ್ಷ ಒಡಿಎಫ್‌ ಪ್ಲಸ್‌ ಆಗಿ ಘೋಷಣೆ ಮಾಡಲಾಗಿತ್ತು.

ಸರ್ವೇ ಪೂರ್ಣ

ಮಂಗಳೂರು ಮಹಾನಗರ ಪಾಲಿಕೆ ಈ ಬಾರಿ ಒಡಿಎಫ್‌ ಪ್ಲಸ್‌ ಪ್ಲಸ್‌ ಸ್ಪರ್ಧೆಯಲ್ಲಿ ಸ್ಪರ್ಧಿಸುತ್ತಿದೆ. ಕಳೆದ ಬಾರಿ ಪಾಲಿಕೆಗೆ ಒಡಿಎಫ್‌ ಪ್ಲಸ್‌ ಪ್ರಮಾಣಪತ್ರ ಸಿಕ್ಕಿತು. ಒಡಿಎಫ್‌ ಪ್ಲಸ್‌ ಪ್ಲಸ್‌ ಸ್ಪರ್ಧೆಯ ಹಿನ್ನೆಲೆಯಲ್ಲಿ ಕೇಂದ್ರದ ತಂಡ ಈಗಾಗಲೇ ಮಂಗಳೂರು ನಗರದಲ್ಲಿ ಸರ್ವೇ ನಡೆಸಿದ್ದು, ಇನ್ನು ಫಲಿತಾಂಶ ಘೋಷಣೆ ಮಾಡಿಲ್ಲ. ಈ ಫಲಿತಾಂಶವು ಸ್ವಚ್ಛ ಸರ್ವೇಕ್ಷಣೆ ಉತ್ತಮ ಅಂಕ ಪಡೆಯಲು ಸಹಕಾರಿಯಾಗಲಿದೆ. -ಅಕ್ಷಯ್‌ ಶ್ರೀಧರ್‌, ಪಾಲಿಕೆ ಆಯುಕ್ತರು

ನವೀನ್‌ ಭಟ್‌ ಇಳಂತಿಲ

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.