ಇಂದು ಕಾಂಗ್ರೆಸ್ ವೀಕ್ಷಕರ ಭೇಟಿ:ಟಿಕೆಟ್ ಆಕಾಂಕ್ಷಿಗಳ ಮಾಹಿತಿ ಸಂಗ್ರಹ
Team Udayavani, Feb 9, 2019, 12:33 AM IST
ಉಡುಪಿ/ಮಂಗಳೂರು:ಕಾಂಗ್ರೆಸ್ ಪಕ್ಷದ ಲೋಕಸಭಾ ಚುನಾವಣಾ ಸಿದ್ಧತೆ ಅಂಗವಾಗಿ ಎಐಸಿಸಿ ಕಾರ್ಯದರ್ಶಿಗಳಾದ ಪಿ.ಸಿ. ವಿಷ್ಣುನಾಥನ್, ಮಾಣಿಕಮ್ ಠಾಗೂರ್, ಮಧು ಯಕ್ಷಿ ಗೌಡಅವರು ಮಂಗಳೂರಿನಲ್ಲಿ ಫೆ. 9ರಂದು ಉಡುಪಿ-ಚಿಕ್ಕಮಗಳೂರು, ಕಾರವಾರ ಮತ್ತು ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿಗಳ ಕುರಿತು ಮಾಹಿತಿ ಕಲೆ ಹಾಕುವರು.
ಬೆಳಗ್ಗೆ 11ರಿಂದ 1 ಗಂಟೆವರೆಗೆ ಉಡುಪಿ ಚಿಕ್ಕಮಗಳೂರು, 2ರಿಂದ 4ರ ವರೆಗೆ ಕಾರವಾರ ಮತ್ತು ಸಂಜೆ 4ರಿಂದ 6ರ ವರೆಗೆ ದ.ಕ. ಕ್ಷೇತ್ರದ ಸಭೆ ಜರಗಲಿದೆ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರು, ಹಿಂದಿನ ಲೋಕಸಭೆ ಮತ್ತು ವಿಧಾನಸಭಾ ಚುನಾವಣೆಯ ಅಭ್ಯರ್ಥಿಗಳು, ಸಚಿವರು, ಶಾಸಕರು, ಕೆಪಿಸಿಸಿ, ಎಐಸಿಸಿ ಜಿಲ್ಲಾ ಉಸ್ತುವಾರಿ ಪ್ರಭಾರಿಗಳು, ಮಾಜಿ ಸಚಿವರು, ಮಾಜಿ ಶಾಸಕರು, ಜಿ.ಪಂ. ಅಧ್ಯಕ್ಷ, ಉಪಾಧ್ಯಕ್ಷ, ಸದಸ್ಯರು, ತಾ.ಪಂ. ಅಧ್ಯಕ್ಷರು, ಬ್ಲಾಕ್ ಅಧ್ಯಕ್ಷರು, ಕೆಪಿಸಿಸಿ-ಎಐಸಿಸಿ ಸದಸ್ಯರು, ವಿವಿಧ ಘಟಕಗಳ ಜಿಲ್ಲಾಧ್ಯಕ್ಷರು ಅಭಿಪ್ರಾಯ ನೀಡುವರು.
ಉಡುಪಿ-ಚಿಕ್ಕಮಗಳೂರು ಕ್ಷೇತ್ರಕ್ಕೆ ಮಾಜಿ ಸಚಿವರಾದ ಪ್ರಮೋದ್ ಮಧ್ವರಾಜ್, ವಿನಯಕುಮಾರ್ ಸೊರಕೆ, ಚಿಕ್ಕಮಗಳೂರು ಮೂಲದ ಅನಿವಾಸಿ ಕನ್ನಡಿಗರ ಸಮಿತಿ ಉಪಾಧ್ಯಕ್ಷೆ ಡಾ| ಆರತಿ ಕೃಷ್ಣರೊಂದಿಗೆ ಚಿಕ್ಕಮಗಳೂರು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಡಾ| ವಿಜಯ ಕುಮಾರ್, ಉಡುಪಿಯ ಮುಖಂಡರಾದ ಅಮೃತ್ ಶೆಣೈ, ಪ್ರಖ್ಯಾತ ಶೆಟ್ಟಿಯವರ ಹೆಸರೂ ಕೇಳಿಬರುತ್ತಿದೆ. ವಿನಯಕುಮಾರ್ ಸೊರಕೆಯವರು ದ.ಕ. ಕ್ಷೇತ್ರದತ್ತಲೂ ಕಣ್ಣಿಟ್ಟಿದ್ದಾರೆ.
ದ.ಕ. ಜಿಲ್ಲೆಯ ಪೈಕಿ ಮಾಜಿ ಸಚಿವ ರಮಾನಾಥ ರೈ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಬಿ.ಕೆ. ಹರಿಪ್ರಸಾದ್, ಸಂಸದೀಯ ಕಾರ್ಯದರ್ಶಿ ಐವನ್ ಡಿ’ಸೋಜಾ, ಮುಖಂಡರಾದ ಯು.ಕೆ. ಮೋನು, ಮಿಥುನ್ ರೈ, ರಾಜಶೇಖರ ಕೋಟ್ಯಾನ್ ಹೆಸರು ಚಾಲ್ತಿಯಲ್ಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ
Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Loksabha Election; ದೇಶದಲ್ಲಿ ಹಂತ-1: ಮತ ಇಂದು