ಬಿಜೆಪಿ ಸಂಸದರ ಮೌನವೇಕೆ: ಜೆ.ಆರ್‌. ಲೋಬೋ ಪ್ರಶ್ನೆ


Team Udayavani, Jan 11, 2019, 4:03 AM IST

vijayabank-cong-protest.jpg

ಮಂಗಳೂರು: ವಿಜಯ ಬ್ಯಾಂಕ್‌ ಉಳಿಸುವ ನಿಟ್ಟಿನಲ್ಲಿ ಬಿಜೆಪಿ ಸಂಸದರು, ಶಾಸಕರು ಮೌನ ತಾಳಿದ್ದಾರೆ ಎಂದು ಮಾಜಿ ಶಾಸಕ ಜೆ.ಆರ್‌. ಲೋಬೋ ಆರೋಪಿಸಿದ್ದಾರೆ. ನಗರದ ಜ್ಯೋತಿ ಚಿತ್ರಮಂದಿರ ಬಳಿ ಇರುವ ವಿಜಯ ಬ್ಯಾಂಕ್‌ ಸಂಸ್ಥಾಪಕರ ಶಾಖೆ ಎದುರು ಗುರುವಾರ ಕಾಂಗ್ರೆಸ್‌ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಅವರು ಮಾತನಾಡಿದರು.

ಎನ್‌ಡಿಎ ಸರಕಾರ ವಿಲೀನ ನಿರ್ಣಯಕ್ಕೆ ಬಂದಿರುವುದು ವಿಜಯ ಬ್ಯಾಂಕ್‌ ಮತ್ತು ಜಿಲ್ಲೆಗೆ ಮಾಡಿದ ಅವಮಾನ. ಸಂಸದರು ಇದನ್ನು ತಡೆಯುವ ಪ್ರಯತ್ನ ಮಾಡಲಿಲ್ಲ. ವಿಲೀನ ನಿರ್ಣಯ ಕೈ ಬಿಡದಿದ್ದರೆ ಮುಂದೆ ಮತ್ತಷ್ಟು ಹೋರಾಟ ನಡೆಸುವುದಾಗಿ ಎಚ್ಚರಿಸಿದರು.

ಮಾಜಿ ಸಚಿವ ಬಿ. ರಮಾನಾಥ ರೈ ಮಾತನಾಡಿ, ಈ ಹಿಂದೆ ಇಂದಿರಾ ಗಾಂಧಿ ಅವಧಿಯಲ್ಲಿ ಬ್ಯಾಂಕ್‌ ರಾಷ್ಟ್ರೀ ಕರಣಗೊಂಡರೂ ಬ್ಯಾಂಕ್‌ಗಳ ಹೆಸರು ಮಾತ್ರ ಬದಲಾಗಿರಲಿಲ್ಲ ಎಂದರು. ವಿಧಾನ ಪರಿಷತ್‌ ಸದಸ್ಯ ಹರೀಶ್‌ ಕುಮಾರ್‌ ವಿಲೀನ ಪ್ರಕ್ರಿಯೆ ಕೂಡಲೇ ರದ್ದುಗೊಳಿಸಬೇಕು ಎಂದು ಒತ್ತಾಯಿಸಿದರು. ವಿಜಯ ಬ್ಯಾಂಕ್‌ ನಿವೃತ್ತ ಉದ್ಯೋಗಿ ವಿಮಲಾ ರೈ ಮಾತನಾಡಿ, ಮೂಲ್ಕಿ ಸುಂದರ ರಾಮ ಶೆಟ್ಟಿ ಅವರ ಋಣವನ್ನು ಈ ಜನ್ಮದಲ್ಲಿ ತೀರಿಸಲಾಗದು ಎಂದರು. ಎ.ಸಿ. ವಿನಯ ರಾಜ್‌, ನವೀನ್‌ ಡಿ’ಸೋಜಾ, ಪ್ರವೀಣ್‌ ಆಳ್ವ, ಆಶಾ ಡಿಸಿಲ್ವ, ಅಪ್ಪಿ, ಕಳ್ಳಿಗೆ ತಾರಾನಾಥ ಶೆಟ್ಟಿ, ವಿಶ್ವಾಸ್‌ದಾಸ್‌, ಸಲೀಮ್‌, ಟಿ.ಕೆ. ಸುಧೀರ್‌, ನೀರಜ್‌ ಪಾಲ್‌, ಶುಭೋದಯ್‌ ಆಳ್ವ, ಶಶಿರಾಜ್‌ ಅಂಬಟ್‌, ಮರಿಯಮ್ಮ ಥಾಮಸ್‌, ಭಾರತಿ ಬಿ.ಎಂ., ಮರಿಲ್‌ ರೇಗೊ, ರಮಾನಂದ ಪೂಜಾರಿ, ಆಶಿತ್‌ ಪೆರೇರಾ ಇದ್ದರು.

ರಸ್ತೆ ವಿಚಾರದಲ್ಲಿ ವಿರೋಧಿಸಿದ್ದ ಬಿಜೆಪಿ ಈಗೆಲ್ಲಿ?
ಮಾಜಿ ಶಾಸಕ ಜೆ.ಆರ್‌. ಲೋಬೊ ಮಾತನಾಡಿ, ವರ್ಷದ ಹಿಂದೆ ಬಿಜೆಪಿ ನಾಯಕರು ಮೂಲ್ಕಿ ಸುಂದರ ರಾಮ ಶೆಟ್ಟಿ ರಸ್ತೆ ವಿಚಾರದಲ್ಲಿ ರಾಜಕೀಯ ನಡೆಸಿದ್ದರು. ಕಾಂಗ್ರೆಸ್‌ನವರನ್ನು ಬಂಟ ಸಮುದಾಯದ ವಿರೋಧಿಗಳು ಎಂದಿದ್ದರು. ವಿಜಯ ಬ್ಯಾಂಕ್‌ ಎ.ಬಿ. ಶೆಟ್ಟಿ ಮತ್ತು ಮೂಲ್ಕಿ ಸುಂದರರಾಮ ಶೆಟ್ಟಿ ಅವರ ಕನಸಿನ ಕೂಸು. ಆದರೆ ಅವರದೇ ಸಮುದಾಯಕ್ಕೆ ಸೇರಿದ ಸಂಸದ ನಳಿನ್‌ ಕೇಂದ್ರ ಸರಕಾರದ ಈ ಕ್ರಮನ್ನು ತಡೆಯುವ ಪ್ರಯತ್ನ ನಡೆಸಲಿಲ್ಲ ಎಂದರು. ಮೂಲ್ಕಿ ಸುಂದರ ರಾಮ ಶೆಟ್ಟಿ ಹೆಸರು ಬಳಸಿ ಚುನಾವಣೆಯಲ್ಲಿ ಗೆದ್ದ ಬಿಜೆಪಿ ಈಗ ವಿಜಯ ಬ್ಯಾಂಕ್‌ ಅಸ್ತಿತ್ವ ಅಳಿಸಲು ಮುಂದಾಗಿದೆ ಎಂದು ವಿಧಾನ ಪರಿಷತ್‌ ಸದಸ್ಯ ಐವನ್‌ ಡಿ’ಸೋಜಾ ಹೇಳಿದರು.

ಕಪ್ಪು ಪಟ್ಟಿ ಪ್ರತಿಭಟನೆ 
ಸೇರಿದ ಮಂದಿ ಕಪ್ಪು ಪಟ್ಟಿ ಧರಿಸಿ ಪ್ರತಿಭಟಿಸಿದರು. ಕೇಂದ್ರ ಸರಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಟಾಪ್ ನ್ಯೂಸ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

Mangaluru; ಪೆಟ್ರೋಲ್‌ ಬದಲು ಡೀಸೆಲ್‌ ತುಂಬಿಸಿದ ಆರೋಪ: ಕೋರ್ಟ್‌ಗೆ ಮೊರೆ

Mangaluru; ಕಾರಿಗೆ ಪೆಟ್ರೋಲ್‌ ಬದಲು ಡೀಸೆಲ್‌ ; ಕಾರು ಮಾಲಕರಿಗೆ ಲಕ್ಷಾಂತರ ರೂ.ನಷ್ಟ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.