ಧೈರ್ಯ, ಆತ್ಮವಿಶ್ವಾಸವೇ ದೊಡ್ಡ ಮದ್ದು; ಕೋವಿಡ್ ಮಣಿಸಿದ ಮಂಗಳೂರಿನ ಕುಟುಂಬ

ಕೋವಿಡ್ ನಿಂದ ಗುಣಮುಖರಾಗಿ ಮನೆಗೆ ಬಂದಾಗ ನೆರೆಹೊರೆಯವರು ಅವರನ್ನು ಗೌರವದಿಂದ ಕಾಣಬೇಕು

Team Udayavani, Aug 7, 2020, 11:50 AM IST

ಧೈರ್ಯ, ಆತ್ಮವಿಶ್ವಾಸವೇ ದೊಡ್ಡ ಮದ್ದು; ಕೋವಿಡ್ ಮಣಿಸಿದ ಮಂಗಳೂರಿನ ಕುಟುಂಬ

ಮಂಗಳೂರು: “ಕೋವಿಡ್ ವೈರಲ್‌ ಕಾಯಿಲೆಗಳಂತೆ ಸಾಮಾನ್ಯ ಸೋಂಕು. ಇದಕ್ಕೆ ಯಾರೂ ಭಯಪಡುವ ಅಗತ್ಯವಿಲ್ಲ. ಧೈರ್ಯ, ಆತ್ಮವಿಶ್ವಾಸವೇ ಕೋವಿಡ್ ಹೊಡೆದೋಡಿಸಲು ಇರುವ ಬಹುದೊಡ್ಡ ಮದ್ದು’. ಮೂರು ತಿಂಗಳ ಹಿಂದೆ ಕೋವಿಡ್ ದೃಢಪಟ್ಟು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಗುಣಮುಖರಾಗಿ ಇದೀಗ ಸಾಮಾನ್ಯ ಜೀವನ ನಡೆಸುತ್ತಿರುವ ಮಂಗಳೂರಿನ ಮಹಿಳೆಯೋರ್ವರ ಆಂತರ್ಯವಿದು.

“ನಮ್ಮ ಮನೆಯಲ್ಲಿ ಐವರಿಗೆ ಕೋವಿಡ್ ಬಾಧಿಸಿತ್ತು. ಕೊರೊನಾದಿಂದಾಗಿ ನಾವು ನಮ್ಮ ತಾಯಿಯನ್ನು ಕಳೆದುಕೊಂಡೆವು. ಆ ನೋವು ಈಗಲೂ ಕಾಡುತ್ತಿದೆ. ಉಳಿದ ನಾಲ್ವರೂ ಕೆಲವು ದಿನಗಳಲ್ಲಿ ಕೋವಿಡ್ ಮುಕ್ತರಾಗಿ ಹೊರಬಂದಿದ್ದೇವೆ. ನಾವು ಬಹುಬೇಗ ಆಸ್ಪತ್ರೆಯಿಂದ ಹೊರ ಬರಲು ಕೊರೊನಾ ಮುಕ್ತರಾಗುವೆವು ಎಂಬ ಆತ್ಮವಿಶ್ವಾಸ ಮತ್ತು ಕೊರೊನಾ ವಿರುದ್ಧ ಗೆಲ್ಲುವ ಧೈರ್ಯವೇ ಕಾರಣವಾಯಿತು’ ಎನ್ನುತ್ತಾರೆ ಅವರು.

ಕಷಾಯ ಕುಡಿಯುತ್ತಿರಿ
ರೋಗನಿರೋಧಕ ಶಕ್ತಿಯ ಮುಂದೆ ಕೋವಿಡ್ ಉಳಿಯುವುದಿಲ್ಲ. ಹಾಗಾಗಿ ರೋಗನಿರೋಧಕ ಶಕ್ತಿ ಹೆಚ್ಚಿಸುವ ಕಷಾಯ ಕುಡಿಯುವುದನ್ನು ಜನ ರೂಢಿಸಿಕೊಳ್ಳಬೇಕು ಎನ್ನುತ್ತಾರೆ ಗುಣಮುಖರಾದ ಈ ಮಹಿಳೆ.

ಮನುಷ್ಯರಂತೆ ಕಾಣಿ
ಮಲೇರಿಯಾ, ಡೆಂಗ್ಯೂ ಮುಂತಾದ ಸಾಂಕ್ರಾಮಿಕ ಕಾಯಿಲೆಗಳಂತೆ ಕೊರೊನಾವೊಂದು ಕಾಯಿಲೆಯಷ್ಟೇ. ಯಾರೂ ಕೂಡ ಬಯಸಿ ಈ ಕಾಯಿಲೆಯನ್ನು ತರಿಸಿಕೊಳ್ಳುವುದಿಲ್ಲ. ಎಲ್ಲ ಎಚ್ಚರಿಕೆ ಹೊರತಾಗಿಯೂ ಕೋವಿಡ್ ಬಂದರೆ ಸೋಂಕಿಗೊಳಗಾದವರು ಏನೂ ಮಾಡಲಾಗುವುದಿಲ್ಲ. ಆದರೆ ಸೋಂಕಿಗೊಳಗಾಗಿ ಗುಣಮುಖರಾಗಿ ಮನೆಗೆ ತೆರಳುವವರನ್ನು ಮನುಷ್ಯರಂತೆ ಕಾಣುವುದನ್ನು ಅಕ್ಕಪಕ್ಕದವರು, ಊರಿನವರು ರೂಢಿಸಿಕೊಳ್ಳಬೇಕು. ನನ್ನ ಅನುಭವದ ಮೇರೆಗೆ ಈ ಮಾತನ್ನು ಹೇಳುತ್ತಿದ್ದೇನೆ ಎನ್ನುವುದು ಅವರ ಅಂತರಾಳ.

ಈ ಮನೆಯಲ್ಲಿ ಅನಾರೋಗ್ಯದಿಂದ ಬಳಲುತ್ತಿದ್ದ 58 ವರ್ಷದ ಮಹಿಳೆ ಕೊರೊನಾ ದೃಢಪಟ್ಟು ಬಳಿಕ ಮೃತಪಟ್ಟಿದ್ದರು. ಬಳಿಕ ಸುಮಾರು 62 ವರ್ಷದ ಅವರ ಪತಿ, 35-45ರ ಆಸುಪಾಸಿನಲ್ಲಿರುವ ಮಗಳು, ಅಳಿಯ ಮತ್ತು 11 ವರ್ಷದ ಮೊಮ್ಮಗಳಿಗೂ ಕೋವಿಡ್ ದೃಢಪಟ್ಟು ಚಿಕಿತ್ಸೆ ಪಡೆದು ಗುಣಮುಖರಾಗಿದ್ದರು. ಆದರೆ ವಿಧಿಯು ಒಬ್ಬರ ಪ್ರಾಣಕ್ಕೆ ಕುತ್ತು ತಂದಿದ್ದರೆ, ಉಳಿದ ನಾಲ್ವರು ಸೋಂಕಿನಿಂದ ಗೆದ್ದುಬಂದು ಆತ್ಮವಿಶ್ವಾಸದ ಬದುಕು ನಡೆಸುತ್ತಿರುವುದು ಗಮನಾರ್ಹ.

ಕೋವಿಡ್ ಎಲ್ಲರಿಗೂ ಮಾರಣಾಂತಿಕವಲ್ಲ. ಈಗಾಗಲೇ ಕೋವಿಡ್ ಸೋಂಕಿಗೊಳಗಾದ ಶೇ. 98 ಮಂದಿ ಗುಣಮುಖರಾಗಿದ್ದಾರೆ. ಕೆಲವರು ಭಯದಿಂದ ಸಾವು ತಂದುಕೊಳ್ಳುವವರಿದ್ದಾರೆ. ಅಂತಹವರಿಗೆ ನಾನು ಹೇಳುವುದಿಷ್ಟೇ. ಭಯ ಪಡಬೇಡಿ, ಧೈರ್ಯ ತಂದುಕೊಳ್ಳಿ. ಆ ಮೂಲಕ ಕೋವಿಡ್ ನ್ನು ಗೆಲ್ಲಬಹುದು.
– ಮಹಿಳೆ, ಕೋವಿಡ್ ನಿಂದ ಗುಣಮುಖರಾದವರು

ಟಾಪ್ ನ್ಯೂಸ್

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

Chitradurga; We are not waiting for anyone, nomination is sure…: M. Chandrappa

Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-brijesh

Brijesh Chowta; ಎ.4: ಅಧಿಕೃತ ನಾಮಪತ್ರ ಸಲ್ಲಿಕೆ; ಕ್ಯಾ| ಚೌಟರ ಆಸ್ತಿ ಇಷ್ಟು !

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

1-qweqwew

Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

18-

Book Brahma ಸ್ವಾತಂತ್ರ‍್ಯೋತ್ಸವ ಕಥಾ ಸ್ಪರ್ಧೆ, ಕಾದಂಬರಿ ಪುರಸ್ಕಾರ- 2024: ವಿವರಗಳು

Toravi Narasimha Temple: ಮನೆದೇವರ ದರ್ಶನ ಪಡೆದ ಸಚಿವ ಪ್ರಹ್ಲಾದ ಜೋಶಿ

Toravi Narasimha Temple: ಮನೆದೇವರ ದರ್ಶನ ಪಡೆದ ಸಚಿವ ಪ್ರಹ್ಲಾದ ಜೋಶಿ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

Chitradurga; We are not waiting for anyone, nomination is sure…: M. Chandrappa

Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.