ಸೋಂಕು ಹರಡುವ ಸ್ವರೂಪವೇ ಈಗ ಕಗ್ಗಂಟು!

ಉಪ್ಪಿನಂಗಡಿ, ಬಂಟ್ವಾಳದ ಕೋವಿಡ್-19 ಪ್ರಕರಣ

Team Udayavani, Apr 21, 2020, 10:23 AM IST

ಸೋಂಕು ಹರಡುವ ಸ್ವರೂಪವೇ ಈಗ ಕಗ್ಗಂಟು!

ಸಾಂದರ್ಭಿಕ ಚಿತ್ರ

ಮಂಗಳೂರು: ಕೋವಿಡ್-19 ಎಲ್ಲಿ ಯಾವಾಗ, ಹೇಗೆ ಮನುಷ್ಯನಿಂದ ಮನುಷ್ಯನಿಗೆ ಹರಡುತ್ತದೆ ಎಂಬುದನ್ನು ಊಹಿಸಲೂ ಆಗದಷ್ಟರ ಮಟ್ಟಿಗೆ ಇದರ ಸ್ವರೂಪ ತಿಳಿಯದಾಗಿದ್ದು, ಇದಕ್ಕೆ ಉಪ್ಪಿನಂಗಡಿ ಮತ್ತು ಬಂಟ್ವಾಳದ ಎರಡು ಪ್ರಕರಣಗಳೇ ಸಾಕ್ಷಿ.

ಸೋಂಕು ನಿಯಂತ್ರಣಕ್ಕೆ ಹಗಲಿರುಳು ಶ್ರಮಿಸುತ್ತಿರುವ ಆರೋಗ್ಯ ಇಲಾಖೆಯನ್ನು ಒಳಗೊಂಡಂತೆ ಜಿಲ್ಲಾಡಳಿತಕ್ಕೂ ಇದು ಬಹುದೊಡ್ಡ ಸವಾಲಾಗಿ ಪರಿಣಮಿಸಿದೆ. ರವಿವಾರ ಮೃತಪಟ್ಟ ಬಂಟ್ವಾಳದ ಮಹಿಳೆಯ ಪುತ್ರ ಫೆ. 13ರಂದು ಅಬಧಾಬಿಯಿಂದ ಆಗಮಿಸಿದ್ದರು. ಅವರಲ್ಲಿ ಕೋವಿಡ್-19 ಹೋಲುವ ಯಾವುದೇ ರೋಗ ಲಕ್ಷಣಗಳಿರಲಿಲ್ಲ. ಆದರೆ 2 ತಿಂಗಳ ಬಳಿಕ ಅವರ ತಾಯಿಯಲ್ಲಿ ಕೋವಿಡ್-19 ಪಾಸಿಟಿವ್‌ ಕಂಡು ಬಂದು ಸಾವಿಗೆ ಕಾರಣವಾಗಿದೆ. ಇದರಿಂದಾಗಿ ಕೋವಿಡ್-19 ಹರಡುವಿಕೆ ಹೇಗೆ, ಯಾರಿಂದ ಎಂಬ ಬಗ್ಗೆ ಮತ್ತಷ್ಟು ಆತಂಕ ಆರಂಭವಾಗಿದೆ.

ಎ. 17ರಂದು ಕೋವಿಡ್-19 ಪಾಸಿಟಿವ್‌ ಕಂಡುಬಂದ ಉಪ್ಪಿನಂಗಡಿಯ ವ್ಯಕ್ತಿಯದ್ದೂ ಇದೇ ಕತೆ. ಅವರು ಹೊಸದಿಲ್ಲಿಯಿಂದ ಮಾರ್ಚ್‌ನಲ್ಲೇ ಬಂದಿದ್ದು, ಕ್ವಾರೆಂಟೈನ್‌ ಆಗಿದ್ದರು. ಮೊದಲ ಪರೀಕ್ಷೆಯಲ್ಲಿ ಕೋವಿಡ್-19 ನೆಗೆಟಿವ್‌ ಬಂದಿದ್ದರೂ ಮುನ್ನೆಚ್ಚರಿಕಾ ಕ್ರಮವಾಗಿ ಆಸ್ಪತ್ರೆಯ ನಿಗಾದಲ್ಲಿರಿಸಲಾಗಿತ್ತು. ಎ. 13ರಂದು ಮತ್ತೆ ಅವರ ಗಂಟಲ ದ್ರವ ಮಾದರಿಯನ್ನು ಪರೀಕ್ಷೆಗೆ ಕಳುಹಿಸಲಾಗಿತ್ತು. ಎ. 17ರಂದು ಬಂದ ವರದಿಯು ಪಾಸಿಟಿವ್‌ ಸೂಚಿಸಿತ್ತು. ಮೊದಲು ನೆಗೆಟಿವ್‌ ಇದ್ದ ವರದಿ ಮರು ಪರೀಕ್ಷೆಯಲ್ಲಿ ಪಾಸಿಟಿವ್‌ ಆಗಿರುವುದು ಕೋವಿಡ್-19ದ ಹರಡುವಿಕೆಯ ದಾರಿಯ ಬಗ್ಗೆ ಭೀತಿ ಹುಟ್ಟಿಸಿದೆ.

ಎರಡು ಬಾರಿ ಪರೀಕ್ಷೆ
ಈ ಬಗ್ಗೆ ಪ್ರತಿಕ್ರಿಯಿಸಿರುವ ವೈದ್ಯ ಡಾ| ದೀಪಕ್‌ ಅವರು, ಕೋವಿಡ್-19 ಲಕ್ಷಣಗಳು 5-14 ದಿನಗಳೊಳಗೆ ಕಂಡುಬರುತ್ತವೆ. ಕೆಲವರಲ್ಲಿ ಲಕ್ಷಣಗಳು ವಿಳಂಬವಾಗಿ ಕಾಣಿಸಿಕೊಳ್ಳಬಹುದು. ಅದಕ್ಕಾಗಿಯೇ ಎರಡೆರಡು ಬಾರಿ ಪರೀಕ್ಷೆ ಮಾಡಲಾಗುತ್ತದೆ. ಮೊದಲು ನೆಗೆಟಿವ್‌ ಬಂದವರಿಗೆ ಎರಡನೇ ಬಾರಿಯ ಪರೀಕ್ಷೆಯಲ್ಲಿ ಪಾಸಿಟಿವ್‌ ಬರುವ ಸಾಧ್ಯತೆಗಳು ಇರುತ್ತವೆ. ಯಾವುದೇ ಪ್ರಕರಣಗಳ ಬಗ್ಗೆಯೂ ತಿಳಿಯದೇ ಏನನ್ನೂ ಹೇಳಲಾಗದು; ಪಾಸಿಟಿವ್‌ ಪ್ರಕರಣಗಳಿಗೆ ಸಂಬಂಧಿಸಿದಂತೆ ಅವರ ಒಟ್ಟು ಹಿಸ್ಟರಿ ಕಲೆ ಹಾಕಬೇಕಾಗುತ್ತದೆ ಎನ್ನುತ್ತಾರೆ.

ಒಂದೆಡೆ ಸೇರಬೇಡಿ
ಸೋಂಕು ವ್ಯಾಪಕವಾಗದಂತೆ ಸಾರ್ವ ಜನಿಕರು ಮತ್ತಷ್ಟು ಮುನ್ನೆಚ್ಚರಿಕಾ ಕ್ರಮಗಳನ್ನು ಅನುಸರಿಸುವುದು ಮುಖ್ಯ. ರಜೆ ಬೇರೆ ಇರುವುದರಿಂದ ಮಕ್ಕಳು, ಹಿರಿಯರನ್ನೆದೆ ಅಕ್ಕಪಕ್ಕದ ಮನೆಯವರೊಂದಿಗೆ ಸೇರಿ ಗುಂಪುಗೂಡಿ ಆಡುವುದು, ಒಟ್ಟಾಗಿ ವಾಕಿಂಗ್‌ ಮಾಡುವುದು ಈಗಲೂ ನಡೆಯುತ್ತಿದೆ. ಕೆಲವು ಅಂಗಡಿಗಳಲ್ಲಿಯೂ ಸಾಮಾಜಿಕ ಅಂತರ ಕಾಯ್ದುಕೊಳ್ಳದೆ, ಮಾಸ್ಕ್ ಧರಿಸದೆಯೇ ಒಟ್ಟಾಗಿ ಮುಗಿ ಬೀಳುವುದು ಕಾಣಿಸುತ್ತಿದೆ. ಸಾಮಾಜಿಕ ಅಂತರ ಕಾಯ್ದುಕೊಂಡು, ಸ್ವ ಮುನ್ನೆಚ್ಚರಿಕೆ ವಹಿಸಿಕೊಂಡಾಗ ಮಾತ್ರ ಕೋವಿಡ್-19 ಮಹಾಮಾರಿಯಿಂದ ದೂರವಿರಲು ಸಾಧ್ಯ ಎಂಬು ಪ್ರಜ್ಞೆ ಪ್ರತಿಯೊಬ್ಬರಲ್ಲೂ ಮೂಡಬೇಕಿದೆ.

ನಾನು ಮನೆಯಲ್ಲಿಯೇ ಸ್ವಂತ ವ್ಯವಹಾರ ನಡೆಸುತ್ತಿದ್ದು, ಹೊರಗೆ ಹೋಗುವುದೇ ಕಡಿಮೆ. ಫೆ. 5ರಂದು ಪ್ರವಾಸ ಪ್ರಯುಕ್ತ ವಿದೇಶಕ್ಕೆ ತೆರಳಿ ಫೆ. 13ರಂದು ಹಿಂದಿರುಗಿದ್ದೆ. ಬಳಿಕ ಹೊರಗೆಲ್ಲೂ ಹೋಗಿಲ್ಲ. ನನಗಾಗಲಿ, ಕುಟುಂಬದ ಇತರ ಸದಸ್ಯರಿಗಾಗಲಿ ಯಾವುದೇ ಆರೋಗ್ಯದ ಸಮಸ್ಯೆ ಕಂಡುಬಂದಿಲ್ಲ. ಅಜ್ಜಿಗೆ ಒಂದು ತಿಂಗಳ ಹಿಂದೆ ಬ್ರೈನ್‌ ಹ್ಯಾಮರೇಜ್‌ ಆಗಿದ್ದು, ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಐಸಿಯುವಿನಲ್ಲಿ ಇದ್ದು ಗುಣಮುಖರಾಗಿ ವಾರ್ಡ್‌ಗೆ ಶಿಫ್ಟ್‌ ಆಗಿದ್ದಾರೆ.
– ಮೃತ ಮಹಿಳೆಯ ಪುತ್ರ

ಟಾಪ್ ನ್ಯೂಸ್

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mamata Banerjee: ಹೆಲಿಕಾಪ್ಟರ್ ಹತ್ತುವಾಗ ಬಿದ್ದು ಮತ್ತೆ ಗಾಯ ಮಾಡಿಕೊಂಡ ಮಮತಾ ಬ್ಯಾನರ್ಜಿ

Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

Hubli; ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡ ಶಕ್ತಿ: ದಿಂಗಾಲೇಶ್ವರ ಸ್ವಾಮೀಜಿ

ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ

12-prakash-raj

April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

Moksha Kushal

Moksha Kushal; ಕೊಡಗಿನ ಬೆಡಗಿಯ ಕಣ್ತುಂಬ ಕನಸು

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

15

UV Fusion: ಜೀವನವನ್ನು ಪ್ರೀತಿಸೋಣ

Mamata Banerjee: ಹೆಲಿಕಾಪ್ಟರ್ ಹತ್ತುವಾಗ ಬಿದ್ದು ಮತ್ತೆ ಗಾಯ ಮಾಡಿಕೊಂಡ ಮಮತಾ ಬ್ಯಾನರ್ಜಿ

Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.