ದೇವಿ ದೇಗುಲ, ಮಸೀದಿಗಳಲ್ಲಿ ಭಕ್ತರಿಲ್ಲದ ಶುಕ್ರವಾರ


Team Udayavani, Mar 28, 2020, 8:00 AM IST

ದೇವಿ ದೇಗುಲ, ಮಸೀದಿಗಳಲ್ಲಿ ಭಕ್ತರಿಲ್ಲದ ಶುಕ್ರವಾರ

ಮಂಗಳೂರು/ಉಡುಪಿ: ಕೋವಿಡ್ 19 ಸೋಂಕು ಪ್ರಸರಣ ತಡೆಯುವ ನಿಟ್ಟಿನಲ್ಲಿ ಎಲ್ಲ ದೇಗುಲ, ಮಸೀದಿ, ಚರ್ಚ್‌ ಸೇರಿದಂತೆ ಆರಾಧನಾ ಮಂದಿರಗಳಲ್ಲಿ ಭಕ್ತರ ಆಗಮನವನ್ನು ನಿಷೇಧಿಸಲಾಗಿದೆ. ಪ್ರತಿ ಶುಕ್ರವಾರ ಹಿಂದೂಗಳು ದೇವಿ ದೇವಸ್ಥಾನಗಳಿಗೆ ಮತ್ತು ಮುಸ್ಲಿಮರು ಮಸೀದಿಗಳಿಗೆ ತೆರಳಿ ಸಾಮೂಹಿಕ ಪೂಜೆ, ಪ್ರಾರ್ಥನೆ ನೆರವೇರಿಸುವುದು ಸಾಮಾನ್ಯ. ಆದರೆ ಈ ಶುಕ್ರವಾರ ಮಾತ್ರ ಕರಾವಳಿಯ ಎಲ್ಲ ದೇವಿ ದೇವಸ್ಥಾನಗಳು, ಮಸೀದಿಗಳಲ್ಲಿ ಭಕ್ತರೇ ಇರಲಿಲ್ಲ.

ಭಕ್ತರಿಲ್ಲದೆ ವಾಗ್ದೇವಿಯ ಸನ್ನಿಧಿ ಬರಿದು
ಕೊಲ್ಲೂರು: ಪ್ರತಿ ಶುಕ್ರವಾರ ಕನಿಷ್ಠ ಏಳೆಂಟು ಸಾವಿರ ಭಕ್ತರಿಂದ ತುಂಬಿರುತ್ತಿದ್ದ ಕೊಲ್ಲೂರು ಶ್ರೀ ಮೂಕಾಂಬಿಕಾ ಕ್ಷೇತ್ರ ಕೋವಿಡ್ 19 ಸಾಂಕ್ರಾಮಿಕ ರೋಗದ ಭೀತಿಯಿಂದಾಗಿ ಇಂದು ಭಕ್ತರೇ ಇಲ್ಲದೆ ಭಣಗುಡುತ್ತಿತ್ತು. ದೇಗುಲದ ಅರ್ಚಕರು ಹಾಗೂ ಕೆಲವೇ ಸಿಬಂದಿಗೆ ಮಾತ್ರ ದೇಗುಲ ಪ್ರವೇಶಕ್ಕೆ ಅವಕಾಶ ನೀಡಲಾಗಿದೆ. ಒಳ ಹಾಗೂ ಹೊರ ಪೌಳಿಯಲ್ಲಿ ಪೊಲೀಸ್‌ ಹಾಗೂ ಭದ್ರತಾ ಸಿಬಂದಿಯನ್ನು ನಿಯೋಜಿಸಲಾಗಿದೆ. ಕೊಲ್ಲೂರು ಪೊಲೀಸರು ವಾಹನ ಸಂಚಾರ ತಡೆಗೆ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದರು.

ಕಟೀಲು ದೇವಸ್ಥಾನ
ಕಿನ್ನಿಗೋಳಿ: ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ಗೇಟಿಗೆ ಬೀಗ ಜಡಿಯಲಾಗಿದೆ. ಯಾವುದೇ ಸೇವೆ, ಊಟ, ವಸತಿ ಸೌಲಭ್ಯ ಇಲ್ಲ ಎಂಬ ಫ‌ಲಕವನ್ನು ಗೇಟಿನಲ್ಲೇ ನೇತುಹಾಕಲಾಗಿದೆ. ಪ್ರತಿ ಶುಕ್ರವಾರ ದೇವಿಯ ದರ್ಶನ ಮಾಡುವ ಸ್ಥಳೀಯ ಭಕ್ತರು ಇಂದು ಹೊರಗಿನಿಂದಲೇ ಕೈಮುಗಿದು ತೆರಳಿದ್ದಾರೆ.

ಬಪ್ಪನಾಡು ದೇವಸ್ಥಾನ
ಮೂಲ್ಕಿ: ಬಪ್ಪನಾಡು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಪ್ರತಿ ಶುಕ್ರವಾರ ದೇವರ ದರ್ಶನಕ್ಕೆ ಮತ್ತು ಮಧ್ಯಾಹ್ನದ ಅನ್ನಪ್ರಸಾದಕ್ಕೆ ಭಕ್ತರು ಅಧಿಕ ಸಂಖ್ಯೆಯಲ್ಲಿ ಸೇರುತ್ತಿದ್ದರು. ಆದರೆ ಇಂದು ಸರಕಾರದ ಆದೇಶದಂತೆ ಎಲ್ಲವೂ ಸ್ತಬ್ಧವಾಗಿತ್ತು. ನಿತ್ಯ ಪೂಜೆ ಮತ್ತು ದೇವರ ಬಲಿಯನ್ನು ಅತ್ಯಂತ ಸರಳವಾಗಿ ಬೆರಳೆಣಿಕೆಯ ಸಿಬಂದಿಯ ಉಪಸ್ಥಿತಿಯಲ್ಲಿ ನಡೆಸಲಾಯಿತು.

ಮುಂದಿನ ಸೂಚನೆ ವರೆಗೆ ಭಕ್ತರು ಯಾವುದೇ ಕಾರಣಕ್ಕೂ ದೇಗುಲದತ್ತ ಬರುವುದು ಬೇಡ; ಮನೆಗಳಲ್ಲೇ ದೇವಿಯನ್ನು ಪ್ರಾರ್ಥಿಸಿ ಎಂದು ಆಡಳಿತ ಮೋಕ್ತೆಸರ ಎನ್‌.ಎಸ್‌. ಮನೋಹರ ಶೆಟ್ಟಿ ಮತ್ತು ಕಾರ್ಯನಿರ್ವಹಣಾಧಿಕಾರಿ ಪಿ. ಜಯಮ್ಮ ಮನವಿ ಮಾಡಿದ್ದಾರೆ.

ಮಂಗಳಾದೇವಿ ದೇವಸ್ಥಾನ
ಮಂಗಳೂರು: ಮಹತೋಭಾರ ಶ್ರೀ ಮಂಗಳಾದೇವಿ ದೇವಸ್ಥಾನಕ್ಕೆ ಪ್ರತೀ ದಿನ ಸಾವಿರಾರು ಮಂದಿ ಭಕ್ತರು ಆಗಮಿಸುತ್ತಾರೆ. ಇತ್ತೀಚೆಗಷ್ಟೇ ದೇವಸ್ಥಾನದಲ್ಲಿ ವರ್ಷಾವಧಿ ಉತ್ಸವ ಪೂರ್ಣಗೊಂಡಿದೆ.

ಕೋವಿಡ್ 19 ಭೀತಿ ಹಿನ್ನೆಲೆಯಲ್ಲಿ ಮಾ. 18ರಿಂದ ದೇವಸ್ಥಾನಕ್ಕೆ ಭಕ್ತರ ಪ್ರವೇಶಕ್ಕೆ ನಿಷೇಧ ಹೇರಲಾಗಿದೆ. ಇದೀಗ ದೇವಸ್ಥಾನದಲ್ಲಿ ದೇವರಿಗೆ ಬೆಳಗ್ಗೆ 6 ಗಂಟೆ, ಮಧ್ಯಾಹ್ನ 1 ಗಂಟೆ ಮತ್ತು ರಾತ್ರಿ 8.30ಕ್ಕೆ ದೈನಂದಿನ ಪೂಜೆ ಮಾತ್ರ ಭಕ್ತರ ಅನುಪಸ್ಥಿತಿಯಲ್ಲಿ ನಡೆಯುತ್ತಿದೆ.

ಉಡುಪಿ: ಉಡುಪಿ ನಗರದ ಪ್ರಮುಖ ದೇವಿ ದೇವಸ್ಥಾನಗಳಾದ ಪುತ್ತೂರು ಶ್ರೀ ಭಗವತೀ ದುರ್ಗಾಪರಮೇಶ್ವರೀ ದೇವಸ್ಥಾನ, ಜನಾರ್ದನ ಮಹಾಕಾಳಿ
ದೇವಸ್ಥಾನ ಅಂಬಲಪಾಡಿ, ಜಯದುರ್ಗಾಪರಮೇಶ್ವರೀ ದೇವಸ್ಥಾನ ಕನ್ನರ್ಪಾಡಿ, ಶ್ರೀ ಆದಿಶಕ್ತಿ ದೇವಸ್ಥಾನ ದೊಡ್ಡಣಗುಡ್ಡೆ, ದುರ್ಗಾಪರಮೇಶ್ವರೀ ದೇವಸ್ಥಾನ ಪಡುಅಲೆವೂರು, ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನ ಹೆರ್ಗಾ, ಮಹಿಷಮರ್ದಿನಿ ದೇವಸ್ಥಾನ ಬೈಲೂರು, ಮಹಿಷಮರ್ದಿನಿ ದೇವಸ್ಥಾನ
ಕಡಿಯಾಳಿ, ಶ್ರೀ ದುರ್ಗಾಂಬಿಕಾ ದೇವಸ್ಥಾನ ಮಣಿಪಾಲದಲ್ಲಿ ಅರ್ಚಕರಷ್ಟೇ ಇದ್ದು ಪೂಜೆ ನೆರವೇರಿಸಿದರು.

ಟಾಪ್ ನ್ಯೂಸ್

19

Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mamata Banerjee: ಹೆಲಿಕಾಪ್ಟರ್ ಹತ್ತುವಾಗ ಬಿದ್ದು ಮತ್ತೆ ಗಾಯ ಮಾಡಿಕೊಂಡ ಮಮತಾ ಬ್ಯಾನರ್ಜಿ

Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

19

Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

18-

UV Fusion: ತೇರು ಬೀದಿಗೆ ಬಂದಿದೆ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

Moksha Kushal

Moksha Kushal; ಕೊಡಗಿನ ಬೆಡಗಿಯ ಕಣ್ತುಂಬ ಕನಸು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.