“ಕಾಯಿಲೆ ಹರಡಲು ಪೂರಕವಾದವರ ವಿರುದ್ಧ ಕ್ರಮ’
Team Udayavani, May 12, 2020, 6:27 AM IST
ಮೂಲ್ಕಿ: ನ.ಪಂ. ವ್ಯಾಪ್ತಿಯಲ್ಲಿ ಮಲೇರಿಯಾ ಮತ್ತು ಡೆಂಗ್ಯೂ ಕಾಯಿಲೆ ಪಸರಿಸಲು ಪೂರಕವಾದ ಪರಿಸರ ಕಾರಣವಾಗದ ಯಾವುದೇ ಸಂಸ್ಥೆ ಯಾ ವ್ಯಕ್ತಿಗಳ ಮೇಲೆ ಆರೋಗ್ಯದ ದೃಷ್ಟಿಯಿಂದ ಯಾವುದೇ ನಿರ್ದಾಕ್ಷಿಣ್ಯ ಕ್ರಮ ಜರಗಿಸುವಂತೆ ಶಾಸಕ ಉಮಾನಾಥ ಕೋಟ್ಯಾನ್ ಸೋಮವಾರ ಪಂ.ನಲ್ಲಿ ನಡೆದ ಸಭೆಯಲ್ಲಿ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಮಳೆಗಾಲ ಸಮೀಪಿಸುತ್ತಿದೆ. ಮಾತ್ರವಲ್ಲ ಆಗಾಗ ಮಳೆ ಬರುತ್ತಿದೆ. ಈ ಸಂದರ್ಭ ವಿವಿಧೆಡೆ ನೀರು ನಿಲುಗಡೆಯಾಗಿ ಸೊಳ್ಳೆ ಉತ್ಪಾದನೆಗೊಂಡು ಮಲೇರಿಯಾ, ಡೆಂಗ್ಯೂವಿನಂತಹ ಕಾಯಿಲೆ ಹರಡುವ ಸಾಧ್ಯತೆ ಇದೆ. ಕೋವಿಡ್ ಭೀತಿ ಇರುವುದರಿಂದ ಜನ ಔಷಧ ತೆಗೆದುಕೊಳ್ಳಲು ಆಸ್ಪತ್ರೆ ಹೋಗದಿರುವ ಸಾಧ್ಯತೆ ಇದೆ. ಆದುದರಿಂದ ಜನ ಪ್ರತಿನಿಧಿಗಳು ಜನರ ಆರೋಗ್ಯದ ರಕ್ಷಣೆಯಲ್ಲಿ ನಗರ ಪಂಚಾಯತ್ನೊಂದಿಗೆ ಸಹಕರಿಸಬೇಕು ಎಂದರು.
ಕಾರ್ನಾಡು ಕೈಗಾರಿಕಾ ಪ್ರದೇಶದಲ್ಲಿ ಇರುವ ಆಸ್ಪತ್ರೆಯ ತ್ಯಾಜ್ಯ ಸುಡುವ ಕಾರ್ಖಾನೆಯಿಂದ ಪರಿಸರ ಮಾಲೀನಗೊಳ್ಳುತ್ತಿದೆ. ಇದನ್ನು ನಿಲ್ಲಿಸುವಂತೆ ದೂರು ಬಂದಿರುವುದರಿಂದ ಸೂಕ್ತ ಕ್ರಮ ಜರಗಿಸಲು ಶಾಸಕರು ಸೂಚಿಸಿದರು.
ತ್ಯಾಜ್ಯ: ನಿರ್ಲಕ್ಷ್ಯ ಸಲ್ಲದು
ಮೂಲ್ಕಿ ಕೆಲವು ಕಸ್ಟ್ರಕ್ಷನ್ ಸಂಸ್ಥೆಗಳ ಬಳಿ ನೀರು ಸಂಗ್ರಹವಾಗುವುದನ್ನು ತಡೆಗಟ್ಟುವಂತೆ ತಿಳಿಸಿದರೂ ನಿರ್ಲಕ್ಷ್ಯ ಉಂಟಾಗುತ್ತಿದೆ. ಕೆಲವು ಹೊಟೇಲುಗಳ ತ್ಯಾಜ್ಯ ಒಂದೆಡೆ ಸಂಗ್ರಹವಾಗುವುದನ್ನು ನಿಲ್ಲಿಸಲು ಪೂರಕವಾಗಿ ಹೊಟೇಲು ಮಾಲಕರ ಸಭೆಯನ್ನು ಕರೆಯುವಂತೆ ಶಾಸಕರು ಮುಖ್ಯಾಧಿಕಾರಿಗೆ ಸೂಚಿಸಿದರು.
ನ.ಪಂ.ಆಡಳಿತಾಧಿಕಾರಿ ಮತ್ತು ಮೂಲ್ಕಿ ತಹಶೀಲ್ದಾರ್ ಮಾಣಿಕ್ಯ ಎನ್, ಮುಖ್ಯಾಧಿಕಾರಿ ಪಿ. ಚಂದ್ರ ಪೂಜಾರಿ ಮಾತನಾಡಿದರು. ಆರೋಗ್ಯ ನಿರೀಕ್ಷಕಿ ಲಿಲ್ಲಿ ನಾಯರ್, ಎಂಜಿನಿಯರ್ ದಿವಾಕರ್, ಮಾಜಿ ಅಧ್ಯಕ್ಷ ಸುನೀಲ್ ಆಳ್ವ, ಸದಸ್ಯರಾದ ಶೈಲೇಶ್ ಕುಮಾರ್, ಪುತ್ತು ಬಾವಾ, ಯೋಗೀಶ್ ಕೋಟ್ಯಾನ್ ಮತ್ತಿತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
MUST WATCH
ಹೊಸ ಸೇರ್ಪಡೆ
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…