ಕೋವಿಡ್ ಆತಂಕ : ಈ ಬಾರಿಯೂ ಕರಾವಳಿ ಉತ್ಸವ ಇಲ್ಲ
Team Udayavani, Jan 15, 2022, 5:22 PM IST
ವಿಶೇಷ ವರದಿ-ಮಹಾನಗರ: ಕರಾವಳಿಗರು ಸಂಭ್ರಮದಿಂದ ಪಾಲ್ಗೊಳ್ಳುವ ಕರಾವಳಿ ಉತ್ಸವ ಈ ಬಾರಿಯೂ ಆಯೋಜನೆಗೊಳ್ಳುವುದು ಅನುಮಾನ ಎನ್ನಲಾಗಿದೆ. ಜನವರಿ ತಿಂಗಳಿನಲ್ಲಿ ಕರಾವಳಿ ಉತ್ಸವ ನಡೆಸುವ ಕುರಿತಂತೆ ಜಿಲ್ಲಾಡಳಿತ ಚಿಂತನೆ ನಡೆಸಿತ್ತಾದರೂ ಕೊರೊನಾ ಭೀತಿ ಹಿನ್ನೆಲೆಯಲ್ಲಿ ಸದ್ಯದ ಮಟ್ಟಿಗೆ ಕರಾವಳಿ ಉತ್ಸವವನ್ನು ತಡೆಹಿಡಿಯಲು ನಿರ್ಧರಿಸಲಾಗಿದೆ.
ಕರಾವಳಿ ಉತ್ಸವವನ್ನು ಜನವರಿ ತಿಂಗಳಿನಲ್ಲಿ ಆಯೋಜಿಸಲು ದ.ಕ. ಜಿಲ್ಲಾಡಳಿತ ಈ ಹಿಂದೆ ಸಿದ್ಧತೆ ನಡೆಸಿತ್ತು. ವಿಶೇಷವಾಗಿ ಆಯೋಜಿಸುವ ಕುರಿತು ಚರ್ಚೆಯನ್ನೂ ನಡೆಸಲಾಗಿತ್ತು. ಉತ್ಸವ ಆಯೋಜನೆಗೆ ಹಣಕಾಸಿನ ನೆರವಿಗೆಂದು ರಾಜ್ಯ ಸರಕಾರಕ್ಕೆ ಪತ್ರ ಬರೆಯಲು ನಿರ್ಧರಿಸಲಾಗಿತ್ತು. ಆದರೆ ಸದ್ಯ ದಿನವಹಿ ಕೋವಿಡ್ ಪ್ರಕರಣ ಏರುಗತಿಯಲ್ಲಿ ಸಾಗುತ್ತಿದ್ದು, ಜಿಲ್ಲೆಯ ಪಾಸಿಟಿವಿಟಿ ದರ ಕೂಡ ಹೆಚ್ಚಳವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಸದ್ಯಕ್ಕೆ ಕರಾವಳಿ ಉತ್ಸವವನ್ನು ನಡೆಸದಿರಲು ನಿರ್ಧರಿಸಲಾಗಿದೆ.
ಸಾಮಾನ್ಯವಾಗಿ ಡಿಸೆಂಬರ್ ಅಂತ್ಯ-ಜನವರಿ ವೇಳೆಗೆ ಕರಾವಳಿ ಉತ್ಸವವು ಮಂಗಳೂರು ಕೇಂದ್ರೀಕೃತವಾಗಿ ನಡೆಯುತ್ತದೆ. ಕಡಲ ಕಿನಾರೆಯಲ್ಲಿ ಬೀಚ್ ಉತ್ಸವ, ಕದ್ರಿ ಪಾರ್ಕ್ನಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ, ಉತ್ಸವ ಮೈದಾನದಲ್ಲಿ ಸಾಂಸ್ಕೃತಿಕ ಉತ್ಸವ, ವಸ್ತು ಪ್ರದರ್ಶನ ಸೇರಿದಂತೆ ಹತ್ತು ಹಲವು ಕಾರ್ಯ ಕಲಾಪಗಳು ಜನರ ಮನ ಸೆಳೆಯುತ್ತದೆ. ಇದನ್ನು ವೀಕ್ಷಿಸಲು ಹಾಗೂ ಸಂಭ್ರಮಿಸಲು ಲಕ್ಷಾಂತರ ಜನರು ವಿವಿಧ ಕಡೆಗಳಿಂದ ಆಗಮಿಸುತ್ತಿದ್ದರು.
ಕಳೆದ ವರ್ಷವೂ ಉತ್ಸವರದ್ದು
ಕೋವಿಡ್ ಕಾರಣದಿಂದಾಗಿ ಮಂಗಳೂರು ನಗರದಲ್ಲಿ ಕಳೆದ ವರ್ಷವೂ ಕರಾವಳಿ ಉತ್ಸವ ನಡೆಯಲಿಲ್ಲ. ಕರಾವಳಿ ಉತ್ಸವ ಮೈದಾನದಲ್ಲಿ ಪ್ರತೀ ವರ್ಷ ನಡೆಯುವ ವಸ್ತು ಪ್ರದರ್ಶನದಲ್ಲಿ ವಿವಿಧ ಜಿಲ್ಲೆ/ರಾಜ್ಯಗಳ ಹತ್ತಾರು ಮಳಿಗೆಗಳು ಇರುತ್ತವೆ. ಇದನ್ನು ವೀಕ್ಷಿಸಲು ಮತ್ತು ವಸ್ತುಗಳ ಖರೀದಿಗಾಗಿ ಪ್ರತೀ ದಿನ ಸಾವಿರಾರು ಮಂದಿ ಉತ್ಸವ ಮೈದಾನಕ್ಕೆ ಆಗಮಿಸುತ್ತಿದ್ದರು. ಇದು ಸ್ಥಳೀಯ ಆರ್ಥಿಕತೆಯ ಉತ್ತೇಜನಕ್ಕೂ ಪೂರಕವಾಗುತ್ತಿತ್ತು.
ಫಲಪುಷ್ಪ ಪ್ರದರ್ಶನವೂ ಇಲ್ಲ
ಗಣರಾಜ್ಯೋತ್ಸವ ಹಿನ್ನೆಲೆಯಲ್ಲಿ ಮಂಗಳೂರಿನ ಕದ್ರಿ ಪಾರ್ಕ್ನಲ್ಲಿ ಆಯೋಜಿಸಲಾಗುತ್ತಿದ್ದ ಫಲಪುಷ್ಪ ಪ್ರದರ್ಶನವನ್ನು ಕೂಡ ಈ ಬಾರಿ ಆಯೋಜನೆ ಮಾಡದಿರಲು ನಿರ್ಧರಿ ಸಲಾಗಿದೆ. ಕೊರೊನಾ ಹಿನ್ನೆಲೆಯಲ್ಲಿ ಕಳೆದ ವರ್ಷವೂ ಫಲಪುಷ್ಪ ಪ್ರರ್ದಶನ ರದ್ದುಗೊಂಡಿತ್ತು. ಈ ಹಿಂದೆ ಕದ್ರಿ ಪಾರ್ಕ್ ಮೂರು ದಿನಗಳ ಕಾಲ ಕಣ್ಮನ ಸೆಳೆಯುವ ಬಣ್ಣ ಬಣ್ಣದ ಪುಷ್ಪಗಳು, ತರಕಾರಿ, ಹಣ್ಣುಗಳಿಂದ ಕಂಗೊಳಿಸುತ್ತಿತ್ತು.
ತಾತ್ಕಾಲಿಕ ರದ್ದು
ದಕ್ಷಿಣ ಕನ್ನಡ ಸಹಿತ ರಾಜ್ಯದಲ್ಲಿ ಕೊರೊನಾ ದಿನದ ವರದಿ ಏರುಗತಿಯಲ್ಲಿ ಸಾಗುತ್ತಿದೆ. ಈ ಹಿನ್ನೆಲೆಯಲ್ಲಿ ಈ ಬಾರಿಯ ಕರಾವಳಿ ಉತ್ಸವವನ್ನು ಸದ್ಯದ ಮಟ್ಟಿಗೆ ನಡೆಸದಿರಲು ತೀರ್ಮಾನಿಸಿದ್ದೇವೆ. ಉತ್ಸವ ಆಚರಣೆಗೆ ಸಿದ್ಧತೆ ನಡೆಸಿದ್ದೆವು. ಆದರೆ ಕೊರೊನಾ ತೀವ್ರತೆ ಹಿನ್ನೆಲೆಯಲ್ಲಿ ಉತ್ಸವವನ್ನು ತಾತ್ಕಾಲಿಕವಾಗಿ ರದ್ದುಗೊಳಿಸಲಾಗಿದೆ. ಕೊರೊನಾ ತೀವ್ರತೆ ಕಡಿಮೆಯಾದರೆ ಮುಂದಿನ ದಿನಗಳಲ್ಲಿ ಆಯೋಜನೆ ಮಾಡುತ್ತೇವೆ.
-ಡಿ. ವೇದವ್ಯಾಸ ಕಾಮತ್, ಶಾಸಕರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
MUST WATCH
ಹೊಸ ಸೇರ್ಪಡೆ
Kollywood: ಅಜಿತ್ ಹುಟ್ಟುಹಬ್ಬಕ್ಕೆ ಸೂಪರ್ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್ ಖುಷ್
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ