ಕೋವಿಡ್‌ ಆತಂಕದ ನಡುವೆ: ಶೀತ, ಜ್ವರ, ಗಂಟಲು ನೋವು ಭೀತಿ!


Team Udayavani, Jan 12, 2022, 5:24 PM IST

ಕೋವಿಡ್‌ ಆತಂಕದ ನಡುವೆ: ಶೀತ, ಜ್ವರ, ಗಂಟಲು ನೋವು ಭೀತಿ!

ಮಹಾನಗರ: ಕೊರೊನಾ ತೀವ್ರತೆ ಹೆಚ್ಚಾಗುತ್ತಿದ್ದಂತೆ ಇದೀಗ ನಗರ ದಲ್ಲಿ ಸಾಂಕ್ರಾಮಿಕ ರೋಗದ ಭೀತಿ ಎದುರಾಗಿದೆ. ಸಾರ್ವಜನಿಕರಲ್ಲಿ ಸದ್ಯ ಶೀತ, ಜ್ವರ, ಗಂಟಲ ನೋವು ಬಾಧೆ ಕಾಣಿಸಿಕೊಳ್ಳುತ್ತಿದ್ದು, ಈ ರೋಗದ ಕುರಿತು ವೈದ್ಯರ ಬಳಿ ಬರುವವರ ಸಂಖ್ಯೆಯೂ ಏರಿಕೆಯಾಗುತ್ತಿದೆ.

ಚಳಿ ಸಹಿತ ಹವಾಮಾನ ವೈಪರೀತ್ಯದ ಪರಿಣಾಮ ಜನವರಿ, ಫೆಬ್ರವರಿ ತಿಂಗಳಿನಲ್ಲಿ ಸಾಮಾನ್ಯವಾಗಿ ಈ ರೀತಿಯ ಸಾಂಕ್ರಾಮಿಕ ರೋಗ ಕಾಣಿಸಿಕೊಳ್ಳುತ್ತದೆ. ಆದರೆ, ಈ ಬಾರಿ ಈ ರೋಗ ಹೆಚ್ಚಿನವರಲ್ಲಿ ಕಾಣಿಸಿಕೊಳ್ಳುತ್ತಿದೆ. ಶೀತ, ಜ್ವರ, ಗಂಟಲ ನೋವು ಸಹಿತ ಯಾವುದೇ ರೋಗಕ್ಕೆ ಒಳಗಾದರೆ ಸಾರ್ವಜನಿಕರು ಕೂಡಲೇ ವೈದ್ಯರನ್ನು ಭೇಟಿಯಾಗಿ ಸೂಕ್ತ ಸಲಹೆ ಪಡೆದುಕೊಳ್ಳಬೇಕಿದೆ. ಯಾವುದೇ ಕಾರಣಕ್ಕೆ ಮನೆ ಮದ್ದು ಸಹಿತ ಔಷಧಕ್ಕೆಂದು ದಿನವ್ಯಯ ಮಾಡಿದರೆ ರೋಗ ಮತ್ತಷ್ಟು ಗಂಭೀರತೆ ಪಡೆಯುವ ಸಾಧ್ಯತೆ ಹೆಚ್ಚಿರುತ್ತದೆ.

ರೋಗದ ಲಕ್ಷಣ ಕಂಡುಬಂದ ತತ್‌ಕ್ಷಣ ವೈದ್ಯರ ಸಲಹೆ ಪಡೆದರೆ ರೋಗವನ್ನು ನಿಯಂತ್ರಣಕ್ಕೆ ತರಲು ಸಾಧ್ಯವಿದೆ. ನಿರ್ಲಕ್ಷé ಮಾಡದೇ ವೈದ್ಯರ ಸಲಹೆಯಂತೆ ಸೂಕ್ತ ಔಷಧ ಪಡೆದುಕೊಳ್ಳಬೇಕು. ಕೆಮ್ಮಿದಾಗ ಹಳದಿ ಕಫ ಹೋಗು ವುದು, ಶೀತದಿಂದ ಹಳದಿ ಸಿಂಬುಳ ಬಂದಲ್ಲಿ ಬ್ಯಾಕ್ಟೀರಿ ಯಲ್‌ ಇನೆ#ಕ್ಷನ್‌ ಖಚಿತ ವಾಗುತ್ತದೆ. ಆಗ ಆ್ಯಂಟಿ ಬಯೋಟಿಕ್‌ ಔಷಧ ಅಗತ್ಯ ವಾಗಿರುತ್ತದೆ ಎನ್ನುತ್ತಾರೆ ಆರೋಗ್ಯ ಇಲಾಖೆ ಅಧಿಕಾರಿಗಳು.

ಒಂದು ವೇಳೆ ಶೀತ-ಜ್ವರ ಬಂದರೆ ಅದು ಸಾಂಕ್ರಾಮಿಕ ರೋಗವೂ ಆಗಿರಬಹುದು ಅಥವಾ ಕೊರೊನಾವೂ ಇರಬಹುದು. ಹೀಗಿರುವಾಗ, ಇದೀಗ ಸಾಮಾನ್ಯವಾಗಿ ಕಾಣಿಸುವ ಶೀತ-ಜ್ವರ ಕೂಡ ಕೊರೊನಾ ನಿಯಂತ್ರಣಕ್ಕೆ ತರುವಲ್ಲಿ ಸವಾಲಾಗಿ ಪರಿಣಮಿಸುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಜ್ವರ ಬಂದರೆ ನಿರ್ಲಕ್ಷ್ಯ ತೋರುವುದು ಸರಿಯಲ್ಲ. ಒಂದುವೇಳೆ ಯಾವುದೇ ಜ್ವರ ಬಂದರೂ ಮೆಡಿಕಲ್‌ಗ‌ಳಿಂದ ಮಾತ್ರೆ ತೆಗೆದುಕೊಳ್ಳದೆ ತತ್‌ಕ್ಷಣ ವೈದ್ಯರನ್ನು ಭೇಟಿ ಮಾಡಬೇಕು. ವೈದ್ಯರ ಸಲಹೆ ಮೇರೆಗೇ ಮುಂದುವರೆಯಬೇಕು.

ಮುನ್ನೆಚ್ಚರಿಕೆ ಅಗತ್ಯ
ಸಾರ್ವಜನಿಕರು ಕುದಿಸಿ ಆರಿಸಿದ ಉಗುರು ಬೆಚ್ಚಗಿನ ನೀರನ್ನೇ ಕುಡಿಯಬೇಕು. ಜ್ವರ ಬಾಧಿಸಿದ ಯಾರೂ ಕೂಡ ತಣ್ಣೀರನ್ನು ಕುಡಿಯಲೇಬಾರದು. ಜ್ವರ ಕಡಿಮೆಯಾಗುವವರೆಗೆ ತಲೆ ಸ್ನಾನ ಮಾಡದಿರುವುದೇ ಉತ್ತಮ. ನಿತ್ರಾಣ ಇಲ್ಲದಂತಾಗಲು ಸರಿಯಾದ ರೀತಿಯಲ್ಲಿ ಆಹಾರ ತೆಗೆದುಕೊಳ್ಳಬೇಕು. ತಂಪು ಪಾನೀಯ ಸೇವಿಸದಿರುವುದೇ ಉತ್ತಮ ಎನ್ನುತ್ತಾರೆ ವೈದ್ಯರು.

ನಿರ್ಲಕ್ಷಿಸಬೇಡಿ
ಕೆಲ ದಿನಗಳಿಂದ ಹೆಚ್ಚಿನ ಮಂದಿ ಶೀತ, ಜ್ವರ, ಗಂಟಲು ನೋವು ಸಮ ಸ್ಯೆಗೆ ತುತ್ತಾಗುತ್ತಿದೆ. ಚಳಿಗಾಲದಲ್ಲಿ ಸಾಮಾನ್ಯ ವಾಗಿ ಬ್ಯಾಕ್ಟೀರಿಯ ತೀವ್ರತೆ ಹೆಚ್ಚಾಗಿ ಈ ರೀತಿಯ ಕಾಯಿಲೆಗೆ ತುತ್ತಾಗುತ್ತಾರೆ. ಆದರೆ ಈ ಬಾರಿ ಸಾಂಕ್ರಾಮಿಕ ರೋಗದ ತೀವ್ರತೆ ಹೆಚ್ಚಿದೆ. ಜನ ಸಾಮಾನ್ಯರು ಯಾವುದೇ ರೋಗವನ್ನು ನಿರ್ಲಕ್ಷಿಸದೆ ವೈದ್ಯರನ್ನು ಭೇಟಿಯಾಗಬೇಕು..
-ಡಾ| ಸುರೇಶ್‌ ನೆಗಳಗುಳಿ,
ಆಯುರ್ವೇದ, ಅಲೋಪತಿ ತಜ್ಞರು

ಸ್ವಯಂ ಪಾಲನೆಯಿಂದ ನಿಯಂತ್ರಣ
ಮಲೇರಿಯಾ, ಡೆಂಗ್ಯೂ ಸಹಿತ ಸಾಂಕ್ರಾಮಿಕ ರೋಗಗಳ ಬಗ್ಗೆ ಪ್ರತಿಯೊಬ್ಬರು ಜಾಗರೂಕರಾಗಬೇಕಾದ ಆವಶ್ಯಕತೆ ಇದೆ. 2020ಕ್ಕೆ ಹೋಲಿಸಿದರೆ 2021ರಲ್ಲಿ ಮಲೇರಿಯಾ ಪ್ರಮಾಣ ಕಡಿಮೆಯಾಗಿದೆ. ಆದರೂ, ಜಾಗರೂಕತೆ ಅಗತ್ಯ. ಡೆಂಗ್ಯೂ ಹರಡುವ ಲಾರ್ವಾ ಉತ್ಪತ್ತಿಯಾಗುವುದೇ ನಿಂತಿರುವ ಶುದ್ಧ ನೀರಿನಲ್ಲಿ. ಮನೆ ಸುತ್ತಮುತ್ತ ನೀರು ನಿಲ್ಲಿಸದಂತೆ ಆರೋಗ್ಯ ಇಲಾಖೆ ಆಗಾಗ್ಗೆ ಜನರಲ್ಲಿ ಜಾಗೃತಿ ಮೂಡಿಸುತ್ತಲೇ ಇದೆ. ಜನ ಸ್ವಯಂ ಎಚ್ಚರಿಕೆ ವಹಿಸಿಕೊಂಡು ಇದನ್ನು ಪಾಲನೆ ಮಾಡಬೇಕು. ಹಾಗಿದ್ದರೆ ಮಾತ್ರ ರೋಗ ನಿಯಂತ್ರಣ ಸಾಧ್ಯವಾಗುತ್ತದೆ.
-ಡಾ| ನವೀನ್‌ಚಂದ್ರ ಕುಲಾಲ್‌,
ಜಿಲ್ಲಾ ರೋಹವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ

 

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.