ಸೋಂಕಿತರು ಪ್ರಾಥಮಿಕ ಸಂಪರ್ಕದ ಮಾಹಿತಿ ಮುಚ್ಚಿಟ್ಟರೆ ಅಪಾಯ ಹೆಚ್ಚು!


Team Udayavani, May 2, 2021, 4:20 AM IST

ASCas

ಮಹಾನಗರ: ದ.ಕ. ಜಿಲ್ಲೆಯಲ್ಲಿ ಕೊರೊನಾ ಎರಡನೇ ಅಲೆ ತೀವ್ರಗತಿಯಲ್ಲಿ ಹಬ್ಬುತ್ತಿದ್ದು, ಗುರುವಾರ ಒಂದೇ ದಿನ ಸಾವಿರಕ್ಕೂ ಹೆಚ್ಚಿನ ಪಾಸಿಟಿವ್‌ ಪ್ರಕರಣ ದೃಢಪಟ್ಟಿವೆ. ಕೊರೊನಾ ಸೋಂಕಿಗೆ ಒಳಗಾಗಿರುವ ಕೆಲವು ಮಂದಿ ತಮ್ಮ ಪ್ರಾಥಮಿಕ ಸಂಪರ್ಕಿತರ ಮಾಹಿತಿಯನ್ನು ಗೌಪ್ಯವಾಗಿಡುತ್ತಿದ್ದು, ಇದು ಕೊರೊನಾ ಮತ್ತಷ್ಟು ಹರಡಲು ಕಾರಣವಾಗುತ್ತಿದೆ.

ಸೋಂಕಿತರ ಪೈಕಿ ಕೆಲವರು ಆರೋಗ್ಯ ಇಲಾಖೆಗೆ ತಾವು ಎಲ್ಲೆಲ್ಲಿ ಓಡಾಡಿದ್ದೇವೆ ಹಾಗೂ ಯಾರನ್ನೆಲ್ಲ ಸಂಪರ್ಕಿಸಿದ್ದೇವೆ ಎಂಬ ಬಗ್ಗೆ ಮಾಹಿತಿ ನೀಡುತ್ತಿಲ್ಲ. ಈ ಕಾರಣಕ್ಕೆ ಸೋಂಕಿತರು, ಅವರ ಸಂಪರ್ಕಿತರನ್ನು ಪತ್ತೆ ಮಾಡುವುದು ಆರೋಗ್ಯ ಇಲಾಖೆಗೂ ಸವಾಲಾಗಿದೆ.

ಕೊರೊನಾ ಬಂತೆಂದು ಹೆದರುವ ಅಗತ್ಯವಿಲ್ಲ. ರೋಗ ಲಕ್ಷಣ ಬಂದಾಗ ಕಡ್ಡಾಯವಾಗಿ ತಪಾಸಣೆ ನಡೆಸಬೇಕು. ಸೂಕ್ತ ಸಮಯದಲ್ಲಿ ಚಿಕಿತ್ಸೆ ಪಡೆದರೆ ರೋಗ ಗುಣವಾಗುತ್ತದೆ. ಆದರೆ ಕೆಲವು ಮಂದಿ ಕೊರೊನಾ ಗುಣ-ಲಕ್ಷಣ ಇದ್ದರೂ ಮೆಡಿಕಲ್‌ಗ‌ಳಿಂದ ಜ್ವರ, ಶೀತ, ತಲೆನೋವಿನ ಮಾತ್ರೆ ಸೇವನೆಗೆ ಮುಂದಾಗುತ್ತಿದ್ದಾರೆ. ಇದರಿಂದ ರೋಗ ಮತ್ತಷ್ಟು ಉಲ್ಬಣಗೊಳ್ಳುತ್ತದೆ. ಬಳಿಕ ಯಾವುದೇ ರೀತಿಯ ಚಿಕಿತ್ಸೆ ನೀಡಿದರೂ ಅದು ಅಷ್ಟೊಂದು ಪರಿಣಾಮಕಾರಿಯಾಗುವುದಿಲ್ಲ.

ಕೊರೊನಾ ತಡೆಯುವ ನಿಟ್ಟಿನಲ್ಲಿ ಸಾರ್ವಜನಿಕರ ಜವಾಬ್ದಾರಿ ಹೆಚ್ಚು ಇದೆ. ಒಂದು ವೇಳೆ ಕೊರೊನಾ ಸೋಂಕಿತ ವ್ಯಕ್ತಿಯು ತನ್ನ ಸಂಪರ್ಕಕ್ಕೆ ಬಂದಿದ್ದರೆ ಆ ವಿಷಯ ಮುಚ್ಚಿಡದೆ ತಾನು ಸ್ವಯಂ ಆಗಿ ತಪಾಸಣೆಗೆ ಒಳಗಾಗಬೇಕು. ಪಾಸಿಟಿವ್‌ ಬಂದರೆ, ತನ್ನ ಪ್ರಾಥಮಿಕ ಸಂಪರ್ಕದ ಮಾಹಿತಿಯನ್ನು ಆರೋಗ್ಯ ಇಲಾಖೆ ಜತೆಗೆ ಹಂಚಿಕೊಳ್ಳಬೇಕು. ಸರಕಾರಿ ಆಸ್ಪತ್ರೆಗಳಲ್ಲಿ ಕೊರೊನಾ ತಪಾಸಣೆಯನ್ನು ಉಚಿತವಾಗಿ ನಡೆಸಲಾಗುತ್ತಿದೆ.

ಜಿಲ್ಲೆಯಲ್ಲಿ ಒಂದು ತಿಂಗಳಿನಿಂದ ಕೊರೊನಾ ರೋಗ ಪತ್ತೆ ತಪಾಸಣೆ ಏರಿಕೆ ಕಂಡಿದೆ. ಇತ್ತೀಚಿನ ದಿನಗಳಲ್ಲಿ ಮನೆಗಳಲ್ಲಿ, ಅಪಾರ್ಟ್‌ಮೆಂಟ್‌, ಹಾಸ್ಟೆಲ್‌, ಕಾನ್ವೆಂಟ್‌ಗಳಲ್ಲಿ ಹೆಚ್ಚಾಗಿ ಕೊರೊನಾ ಸೋಂಕು ಕಂಡುಬರುತ್ತಿದ್ದು, ಸೋಂಕಿತರೆಲ್ಲರ ಪ್ರಾಥಮಿಕ ಸಂಪರ್ಕವನ್ನು ತಪಾಸಣೆ ಮಾಡಲಾಗುತ್ತಿದೆ. ಅದೇ ರೀತಿ, ರೋಗ ಲಕ್ಷಣ ಇರುವವರ ತಪಾಸಣೆಯೂ ನಡೆಯುತ್ತಿದೆ. ದಿನವೊಂದಕ್ಕೆ ಸರಾಸರಿ 4ರಿಂದ 5 ಸಾವಿರ ಮಂದಿಯ ಕೊರೊನಾ ತಪಾಸಣೆ ನಡೆಯುತ್ತಿದ್ದು, ಇದರಿಂದಾಗಿ ಕೊರೊನಾ ತಪಾಸಣ ವರದಿ ಬರಲು ವಿಳಂಬವಾಗುತ್ತಿದೆ. ಹಾಗಂತ ವರದಿ ಬರುವವರೆಗೆ ಯಾವುದೇ ಕಾರಣಕ್ಕೆ ಮನೆಯಿಂದ ಹೊರಗೆ ಹೋಗದೆ, ಹೋಂ ಐಸೋಲೇಶನ್‌ನಲ್ಲಿ ಇರಬೇಕು.

ಸಾಮಾನ್ಯ ಜ್ವರವೆಲ್ಲಾ ಕೋವಿಡ್ ಅಲ್ಲ

ಕರಾವಳಿ ಭಾಗದಲ್ಲಿ ಕೆಲವು ದಿನಗಳಿಂದ ಮಳೆ ಬಿರುಸು ಪಡೆದಿದ್ದು, ಅನೇಕ ಕಡೆಗಳಲ್ಲಿ ಬಿಟ್ಟು ಬಿಟ್ಟು ಮಳೆಯಾಗುತ್ತಿದೆ. ವಾತಾವರಣ ಬದಲಾವಣೆಯಿಂದಾಗಿ ಸಾಮಾನ್ಯ ಶೀತ, ಜ್ವರ ಸಹಿತ ವೈರಲ್‌ ಜ್ವರ ಹೆಚ್ಚಾಗುವ ಸಾಧ್ಯತೆ ಇದ್ದು, ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಅಗತ್ಯ. ಶೀತ, ತಲೆನೋವು, ಕೆಮ್ಮು, ಜ್ವರವನ್ನು ನಿರ್ಲಕ್ಷé ಮಾಡದೇ ವೈದ್ಯರ ಸಲಹೆಯಂತೆ ಸೂಕ್ತ ಔಷಧ ಪಡೆದುಕೊಳ್ಳಬೇಕು. ವೈದ್ಯರ ಸಲಹೆಯಿಲ್ಲದೆ, ಮೆಡಿಕಲ್‌ ಶಾಪ್‌ಗ್ಳಿಂದ ಔಷಧ ಖರೀದಿಸಿ ಸೇವಿಸಬಾರದು.

ತಪಾಸಣೆ ಅಗತ್ಯ

ಕೊರೊನಾ ರೋಗ ತೀವ್ರಗತಿಯಲ್ಲಿ ಹರಡುತ್ತಿದೆ. ಮೊದಲನೇ ಅಲೆಗಿಂತ ಎರಡನೇ ಅಲೆ ಹರಡುವಿಕೆ ಹೆಚ್ಚಾಗುತ್ತಿದೆ. ಈ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಜಾಗರೂಕರಾಗಿ, ಕೊರೊನಾ ಮಾರ್ಗಸೂಚಿ ಪಾಲನೆ ಮಾಡಬೇಕು. ಕೊರೊನಾ ಬಂತೆಂದು ಹೆದರಬೇಕಿಲ್ಲ. ಗುಣ ಲಕ್ಷಣವುಳ್ಳವರು ಕಡ್ಡಾಯವಾಗಿ ತಪಾಸಣೆ ನಡೆಸಬೇಕು. ಅವರ ಪ್ರಾಥಮಿಕ ಸಂಪರ್ಕ ಪತ್ತೆಗೆ ಆರೋಗ್ಯ ಇಲಾಖೆ ಜತೆ ಕೈಜೋಡಿಸಬೇಕು.
-ಡಾ| ಕಿಶೋರ್‌ ಕುಮಾರ್‌, ದ.ಕ. ಜಿಲ್ಲಾ ಆರೋಗ್ಯಾಧಿಕಾರಿ

ಟಾಪ್ ನ್ಯೂಸ್

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

14-mng

Ullala: ಮಲಗಿದ್ದಲ್ಲೇ ಹೃದಯಾಘಾತದಿಂದ ಸಾವು

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.