ನಕಲಿ ಆ್ಯಪ್‌ ಸೃಷ್ಟಿಸಿ ವಂಚನೆ: ತಜ್ಞರಿಂದ ಎಚ್ಚರಿಕೆ


Team Udayavani, Jul 29, 2020, 1:05 PM IST

ನಕಲಿ ಆ್ಯಪ್‌ ಸೃಷ್ಟಿಸಿ ವಂಚನೆ: ತಜ್ಞರಿಂದ ಎಚ್ಚರಿಕೆ

ಸಾಂದರ್ಭಿಕ ಚಿತ್ರ

ಮಹಾನಗರ: ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವ ಈ ದಿನಗಳಲ್ಲಿ ಜನರಲ್ಲಿ ಕೆಲವು ಗೊಂದಲಗಳು ಸೃಷ್ಟಿಯಾಗುತ್ತಿದ್ದು ಈ ಸಂದರ್ಭವನ್ನು ಕೆಲವು ಸೈಬರ್‌ ವಂಚಕರು ದುರುಪಯೋಗ ಪಡಿಸಿಕೊಳ್ಳುವ ಅಪಾಯವಿದೆ ಎಂದು ಸೈಬರ್‌ ತಜ್ಞರು ಎಚ್ಚರಿಕೆ ನೀಡಿದ್ದಾರೆ. ನಕಲಿ ಆ್ಯಪ್‌, ನಕಲಿ ಪೋರ್ಟಲ್‌ ಲಿಂಕ್‌ಗಳ ಮೂಲಕ ವಿವಿಧ ರೀತಿಯಲ್ಲಿ ವಂಚಿಸುತ್ತಿರುವುದು ಕಂಡುಬಂದಿದೆ ಎಂದು ಕೆಲವು ಮಂದಿ ಸೈಬರ್‌ ತಜ್ಞರು ತಿಳಿಸಿದ್ದಾರೆ. ಕೋವಿಡ್ ಬಗ್ಗೆ ಸಂಪೂರ್ಣ ಮಾಹಿತಿ ನೀಡುತ್ತೇವೆ, ಕೋವಿಡ್ ಗೆ ಚಿಕಿತ್ಸೆ ನೀಡುತ್ತೇವೆ. ಸರಕಾರ ಅಥವಾ ಇಲಾಖೆ ಗಳಿಗೆ ತಿಳಿಯದಂತೆಯೇ ಮಾಹಿತಿ ನೀಡುತ್ತೇವೆ ಎಂಬಿತ್ಯಾದಿಯಾಗಿ ಹೇಳಿ ಆ್ಯಪ್‌ ಡೌನ್‌ಲೋಡ್‌ ಮಾಡಿಕೊಳ್ಳುವಂತೆ ತಿಳಿಸಲಾಗುತ್ತದೆ. ಅನಂತರ ಬಳಕೆದಾರರ ಮೊಬೈಲ್‌ ನಲ್ಲಿರುವ ಮಾಹಿತಿಯನ್ನು ಕದಿಯುವ ಸಾಧ್ಯತೆಗಳು ಹೆಚ್ಚಾಗಿವೆ ಎಂದು ತಜ್ಞರು ತಿಳಿಸಿದ್ದಾರೆ.

ನಕಲಿ ಆ್ಯಕ್ಸಿಮೀಟರ್‌ ಆ್ಯಪ್‌
ರಕ್ತದಲ್ಲಿ ಆಕ್ಸಿಜನ್‌ ಪ್ರಮಾಣ ಕಡಿಮೆಯಾಗುವುದು ಕೂಡ ಕೋವಿಡ್ ಲಕ್ಷಣ ಎಂದು ಕೆಲವು ವೈದ್ಯಕೀಯ ವರದಿಗಳು ಹೇಳಿರುವ ಹಿನ್ನೆಲೆಯಲ್ಲಿ ಅನೇಕ ಮಂದಿ ರಕ್ತದಲ್ಲಿ ಆಕ್ಸಿಜನ್‌ ಪ್ರಮಾಣ ಪರೀಕ್ಷಿಸಲು ಮುಂದಾಗುತ್ತಿದ್ದಾರೆ. ಕೆಲವರು ಆ್ಯಕ್ಸಿಮೀಟರ್‌ ಖರೀದಿಸುತ್ತಿದ್ದಾರೆ. ಇನ್ನು ಕೆಲವರು ಆಕ್ಸಿಮೀಟರ್‌ ಆ್ಯಪ್‌ಗಳಿಗೆ ಹುಡುಕಾಡಿದ್ದು ಅವರಿಗೆ ನಕಲಿ ಆ್ಯಪ್‌ಗಳು ಕೂಡ ದೊರೆತಿವೆ. ಇದರಿಂದ ವಂಚನೆಗೊಳಗಾಗುತ್ತಿದ್ದಾರೆ. ಆ್ಯಪ್‌ನೊಂದಿಗೆ ಇರುವ ನಕಲಿ ಲಿಂಕ್‌ನ್ನು ಕ್ಲಿಕ್‌ ಮಾಡಿದರೆ ಮೊಬೈಲ್‌ನಲ್ಲಿರುವ ಎಲ್ಲ ಮಾಹಿತಿಗಳು ಕೂಡ ಸೈಬರ್‌ ವಂಚಕರಿಗೆ ಲಭಿಸುವ ಸಾಧ್ಯತೆಗಳಿವೆ ಎನ್ನುತ್ತಾರೆ ತಜ್ಞರು.

ಈ ಹಿಂದೆ ಪಾಕಿಸ್ಥಾನ ಸೃಷ್ಟಿಸಿತ್ತು
ಆಕ್ಸಿಮೀಟರ್‌ ಆ್ಯಪ್‌ ಎಂದು ಪರಿಚಯಿಸುವ ಸೈಬರ್‌ ವಂಚಕರು ಬೇರೊಂದು ನಕಲಿ ಆ್ಯಪ್‌ನ ಲಿಂಕ್‌ನ್ನು ಕೊಡುತ್ತಾರೆ. ಅದನ್ನು ಒತ್ತಿದ ಕೂಡಲೇ ಕೆಲವು ಮಾಹಿತಿ(ಒಪ್ಪಿಗೆ) ಪಡೆಯಲಾಗುತ್ತದೆ. ಅದಕ್ಕೆ ಒಪ್ಪಿಗೆ ಸೂಚಿಸಿದ ಅನಂತರ ಅದು ಕ್ರಿಯಾಶೀಲವಾಗುತ್ತದೆ. ಆಗ ಆ ಮೊಬೈಲ್‌ ಬಳಕೆದಾರರಿಗೆ ಸಂಬಂಧಿಸಿದ ಮಾಹಿತಿಯನ್ನು ಕಳವು ಮಾಡುತ್ತದೆ. ಈ ಹಿಂದೆ ಆರೋಗ್ಯಸೇತು ಆ್ಯಪ್‌ ಬಿಡುಗಡೆಯಾದ ಸಂದರ್ಭದಲ್ಲಿ ಪಾಕಿಸ್ಥಾನದ ಹ್ಯಾಕರ್‌ಗಳು ನಕಲಿ ಆರೋಗ್ಯ ಆ್ಯಪ್‌ ಸೃಷ್ಟಿಸಿದ್ದರು. ಇಂತಹ ಸೈಬರ್‌ ವಂಚಕರು ಜನರ ಅಗತ್ಯದ ಬಗ್ಗೆ ಗಮನಹರಿಸುತ್ತ ಇರುತ್ತಾರೆ. ಕೂಡಲೇ ಆ ಸಂದರ್ಭದಲ್ಲಿ ಕಾರ್ಯಪ್ರವೃತ್ತರಾಗಿ ಜನರನ್ನು ವಂಚಿಸುತ್ತಾರೆ.
 - ಅನಂತ್‌ ಪ್ರಭು, ಸೈಬರ್‌ ಲಾ ಆ್ಯಂಡ್‌ ಸೆಕ್ಯುರಿಟಿ ತಜ್ಞರು, ಮಂಗಳೂರು

ಎಚ್ಚರಿಕೆ ವಹಿಸಿ
ಅಂತರ್ಜಾಲದಲ್ಲಿ ಯಾವುದೇ ರೀತಿಯ ಚಟುವಟಿಕೆ ನಡೆಸುವಾಗ ಹೆಚ್ಚಿನ ಜಾಗ್ರತೆ ವಹಿಸಿ. ಕೋವಿಡ್ ಸಂಕಷ್ಟವನ್ನು ಇದೀಗ ಕೆಲವರು ದುರುಪಯೋಗ ಪಡೆಯಲು ಪ್ರಯತ್ನಿಸುತ್ತಿರುವುದು ಗಮನಕ್ಕೆ ಬಂದಿದೆ. ಈ ಬಗ್ಗೆ ನಿರ್ದಿ ಷ್ಟವಾಗಿ ಪ್ರಕರಣ ದಾಖಲಾಗಿಲ್ಲ. ಆದರೂ ಜನತೆ ಸಾಮಾಜಿಕ ಜಾಲತಾಣ ಸಹಿತ ಅಂತರ್ಜಾಲ ಬಳಕೆಯಲ್ಲಿ ವಿಶೇಷ ಎಚ್ಚರಿಕೆ ವಹಿಸಬೇಕು.
 - ಗಿರೀಶ್‌, ಇನ್‌ಸ್ಪೆಕ್ಟರ್‌, ಸೈಬರ್‌ ಅಪರಾಧಗಳ ಪೊಲೀಸ್‌ ಠಾಣೆ, ಮಂಗಳೂರು

ಟಾಪ್ ನ್ಯೂಸ್

ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

Brahmavar ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

Mangaluru; ಪೆಟ್ರೋಲ್‌ ಬದಲು ಡೀಸೆಲ್‌ ತುಂಬಿಸಿದ ಆರೋಪ: ಕೋರ್ಟ್‌ಗೆ ಮೊರೆ

Mangaluru; ಕಾರಿಗೆ ಪೆಟ್ರೋಲ್‌ ಬದಲು ಡೀಸೆಲ್‌ ; ಕಾರು ಮಾಲಕರಿಗೆ ಲಕ್ಷಾಂತರ ರೂ.ನಷ್ಟ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-wqewqewq

Doping: ಶಾಲು ಚೌಧರಿ ದೋಷಮುಕ್ತ

ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

Brahmavar ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.