ಸಿಆರ್ಝಡ್ ವಲಯ: 14 ಬ್ಲಾಕ್ಗಳಲ್ಲಿ ಅವಕಾಶ
6 ತಿಂಗಳುಗಳಿಂದ ಮರಳುಗಾರಿಕೆ ಸ್ಥಗಿತ; ಕಳೆದ ಬಾರಿಗಿಂತ ಒಂದು ದಿಬ್ಬ ಅಧಿಕ
Team Udayavani, Mar 12, 2022, 5:50 AM IST
ಮಂಗಳೂರು: ಸಿಆರ್ಝಡ್ ವಲಯದಲ್ಲಿ ಮರಳುಗಾರಿಕೆಗೆ ಕರ್ನಾಟಕ ಕರಾವಳಿ ವಲಯ ನಿರ್ವಹಣೆ ಸಮಿತಿ (ಕೆಸಿಝಡ್ಎಂ)ಯಿಂದ ಅನುಮೋದನೆ ಲಭಿಸಿದೆ. ಇದರೊಂದಿಗೆ ಬಹುನಿರೀಕ್ಷಿತ ಸಿಆರ್ಝಡ್ ವಲಯದ ಮರಳುಗಾರಿಕೆಗೆ ಸದ್ಯದಲ್ಲೇ ಮರು ಚಾಲನೆ ದೊರಕಲಿದೆ.
ಸಿಆರ್ಝಡ್ ವಲಯದಲ್ಲಿ ಆರು ತಿಂಗಳುಗಳಿಂದ ಮರಳುಗಾರಿಕೆ ಸ್ಥಗಿತಗೊಂಡಿತ್ತು. ಕೆಸಿಝಡ್ಎಂ ಪರಿಸರ ವಿಮೋಚನ ಪತ್ರ (ಇಸಿ ಕ್ಲಿಯರೆನ್ಸ್ ) ಅವಧಿ 2021ರ ಸೆ. 16ಕ್ಕೆ ಮುಕ್ತಾಯಗೊಂಡ ಹಿನ್ನೆಲೆಯಲ್ಲಿ ಮರಳುಗಾರಿಕೆಯನ್ನು ನಿಲ್ಲಿಸಲಾಗಿತ್ತು.
14 ಬ್ಲಾಕ್ಗಳು
ಸಿಆರ್ಝಡ್ ವಲಯದ ನೇತ್ರಾವತಿಯಲ್ಲಿ 9 ಮತ್ತು ಫಲ್ಗುಣಿ ನದಿಯಲ್ಲಿ 5 ಬ್ಲಾಕ್ಗಳು ಸೇರಿದಂತೆ ಒಟ್ಟು 14 ಬ್ಲಾಕ್ (ದಿಬ್ಬ)ಗಳಲ್ಲಿ ಮರಳು ತೆರವಿಗೆ ಈ ಬಾರಿ ಕೆಸಿಝಡ್ಎಂ ಪರಿಸರ ವಿಮೋಚನ ಪತ್ರ (ಇಸಿ ಕ್ಲಿಯರೆನ್ಸ್) ನೀಡಿದೆ. ಕಳೆದ ಬಾರಿ ನೇತ್ರಾವತಿ ನದಿಯಲ್ಲಿ 8, ಫಲ್ಗುಣಿ ನದಿಯಲ್ಲಿ 4 ಹಾಗೂ ಶಾಂಭವಿ ನದಿಯಲ್ಲಿ 1 ಬ್ಲಾಕ್ ಸೇರಿದಂತೆ 13 ಬ್ಲಾಕ್ (ದಿಬ್ಬ)ಗಳಲ್ಲಿ ಮರಳು ತೆರವಿಗೆ ಎರಡು ಹಂತಗಳಲ್ಲಿ 105 ಮಂದಿ ಗುತ್ತಿಗೆದಾರರಿಗೆ ಪರವಾನಿಗೆ ನೀಡಲಾಗಿತ್ತು. ಸುಮಾರು 2,35,414 ಮೆ. ಟನ್ ಮರಳು ತೆರವುಗೊಳಿಸಲಾಗಿತ್ತು.
ಮರಳುಗಾರಿಕೆಗೆ ಅನುವು ದೊರಕಿರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಈ ಸಂಬಂಧ ಮುಂದಿನ ಕ್ರಮಗಳನ್ನು ಕೈಗೊಳ್ಳಲಿದೆ. ಜಿಲ್ಲಾಧಿಕಾರಿಯವರ ಅಧ್ಯಕ್ಷತೆಯ ಜಿಲ್ಲಾ ಮರಳು ಉಸ್ತುವಾರಿ ಸಮಿತಿ ಸಭೆ ಸೇರಿ ಮರಳುಗಾರಿಕೆಗೆ ಗುತ್ತಿಗೆದಾರರಿಗೆ ಪರವಾನಿಗೆ ಕುರಿತಂತೆ ಮುಂದಿನ ಪ್ರಕ್ರಿಯೆಗಳನ್ನು ಕೈಗೊಳ್ಳಲಿದೆ. ಎಪ್ರಿಲ್ ಮೊದಲ ವಾರದಲ್ಲಿ ಸಿಆರ್ಝಡ್ ವಲಯದಲ್ಲಿ ಮರಳುಗಾರಿಕೆ ಆರಂಭಗೊಳ್ಳುವ ನಿರೀಕ್ಷೆಗಳಿವೆ.
ನೇತ್ರಾವತಿ ಹಾಗೂ ಫಲ್ಗುಣಿ ನದಿಯ ಸಿಆರ್ಝಡ್ ವಲಯದಲ್ಲಿ ಮೀನುಗಾರಿಕಾ ಕಾಲೇಜಿನ ತಜ್ಞರ ತಂಡ ಕಳೆದ ಅಕ್ಟೋಬರ್ನಲ್ಲಿ ಸಮೀಕ್ಷೆ ನಡೆಸಿ ನವೆಂಬರ್ನಲ್ಲಿ ಇದರ ವರದಿಯನ್ನು ಗಣಿ ಮತ್ತು ಭೂವಿಜ್ಞಾನ ಇಲಾಖೆಗೆ ಸಲ್ಲಿಸಿತ್ತು. ಆದರೆ ಈ ಸಮೀಕ್ಷೆಯಲ್ಲಿ ಮರಳುದಿಬ್ಬಗಳ ಪ್ರಮಾಣ ಕಳೆದ ಬಾರಿಗಿಂತ ಗಣನೀಯ ಪ್ರಮಾಣದಲ್ಲಿ ಇಳಿಕೆಯಾಗಿದ್ದ ಹಿನ್ನೆಲೆಯಲ್ಲಿ ಜಿಲ್ಲಾ ಮರಳು ಸಮಿತಿ ಮತ್ತೆ ಮರು ಸಮೀಕ್ಷೆಗೆ ಎನ್ಐಟಿಕೆಗೆ ವಹಿಸಿಕೊಟ್ಟಿತ್ತು. ಎನ್ಐಟಿಕೆ ಸಲ್ಲಿಸಿದ್ದ ವರದಿಯನ್ನು ಜಿಲ್ಲಾ ಮರಳು ಉಸ್ತುವಾರಿ ಸಮಿತಿ ಪರಿಶೀಲಿಸಿ ಅನುಮೋದನೆಗಾಗಿ ಕರ್ನಾಟಕ ಕರಾವಳಿ ವಲಯ ನಿರ್ವಹಣೆ ಸಮಿತಿಗೆ ಕಳುಹಿಸಿಕೊಟ್ಟಿತ್ತು.
ಪ್ರಸ್ತುತ ನಾನ್ಸಿಆರ್ಝಡ್ ವಲಯದ 17 ಬ್ಲಾಕ್ಗಳಲ್ಲಿ ಮರಳುಗಾರಿಕೆ ಚಾಲನೆಯಲ್ಲಿದ್ದು, ಇಲ್ಲಿಂದ ಮರಳು ಕಾಮಗಾರಿಗಳಿಗೆ ಪೂರೈಕೆಯಾ ಗುತ್ತಿದೆ. ಜಿಲ್ಲಾ ಮರಳು ಉಸ್ತುವಾರಿ ಸಮಿತಿಯ ಪ್ರಕಾರ ನಾನ್ ಸಿಆರ್ಝಡ್ ವಲಯದಲ್ಲಿ 50 ಸಾವಿರ ಮೆ. ಟನ್ ಮರಳು ಲಭ್ಯತೆ ಇದೆ.
ಪರವಾನಿಗೆಗಳ ಸಂಖ್ಯೆ ಹೆಚ್ಚಳ
ಎರಡು ವರ್ಷಗಳಲ್ಲಿ ಸಿಆರ್ಝಡ್ ವಲಯದಲ್ಲಿ ಮರಳುಗಾರಿಕೆಗೆ ನೀಡುತ್ತಿದ್ದ ಪರವಾನಿಗೆಗಳ ಸಂಖ್ಯೆಯನ್ನು ಹೆಚ್ಚಿಸಲು ನಿರ್ಧರಿಸಲಾಗಿದೆ. ಕಳೆದ ಬಾರಿ ಎರಡು ಹಂತಗಳಲ್ಲಿ ಸಾಂಪ್ರದಾಯಿಕ ಮರಳುಗಾರಿಕೆ ನಡೆಸುತ್ತಿದ್ದ ಒಟ್ಟು 105 ಮಂದಿಗೆ ಪರವಾನಿಗೆ ನೀಡಲಾಗಿತ್ತು. ಕರಾವಳಿಯಲ್ಲಿ ಮರಳು ಸಮಸ್ಯೆ ತಲೆದೋರದಂತಾಗಲು 2017ರಲ್ಲಿ ಸಿಆರ್ಝಡ್ ಹಾಗೂ ನಾನ್ಸಿಆರ್ಝಡ್ ವ್ಯಾಪ್ತಿಯಲ್ಲಿ ಜಾರಿಯಲ್ಲಿದ್ದ ಮರಳು ನೀತಿಯನ್ನು ಅನುಸರಿಸಲು ಕ್ರಮ ಕೈಗೊಳ್ಳಬೇಕು ಮತ್ತು ಆಗ ಇದ್ದಂತೆ ಹೆಚ್ಚಿನ ಮಂದಿಗೆ ಪರವಾನಿಗೆ ನೀಡಬೇಕು ಎಂದು ಕರಾವಳಿ ಭಾಗದ ಶಾಸಕರು ಭೂವಿಜ್ಞಾನ ಮತ್ತು ಗಣಿಗಾರಿಕೆ ಸಚಿವ ಹಾಲಪ್ಪ ಆಚಾರ್ ಅವರಿಗೆ ಮನವಿ ಮಾಡಿದ್ದರು.
ಸಿಆರ್ಝಡ್ ವಲಯದಲ್ಲಿ ಮರಳುದಿಬ್ಬ ತೆರವಿಗೆ ಕೆಸಿಝಡ್ಎಂನಿಂದ ಪರಿಸರ ವಿಮೋಚನಾ ಪತ್ರ ಲಭಿಸಿದೆ. ಕಳೆದ ಬಾರಿ ಇದ್ದ ಪರವಾನಿಗೆಗಳಲ್ಲದೆ ಹೊಸದಾಗಿಯೂ ಪರವಾನಿಗೆಗಳನ್ನು ನೀಡಲು ಅವಕಾಶ ಕಲ್ಪಿಸಲಾಗಿದೆ. ಜಿಲ್ಲಾ ಮರಳು ಉಸ್ತುವಾರಿ ಸಮಿತಿ ಶೀಘ್ರದಲ್ಲೆ ಸಭೆ ಸೇರಿ ಪರಿಶೀಲಿಸಿ ಕ್ರಮಗಳನ್ನು ಕೈಗೊಳ್ಳಲಿದೆ.
-ಡಾ| ಕೆ.ವಿ. ರಾಜೇಂದ್ರ, ಜಿಲ್ಲಾಧಿಕಾರಿ,
ದ. ಕನ್ನಡ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ
Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್
Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!
Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ
Sandalwood: ಧೀರೇನ್ ರೀ ಇಂಟ್ರೊಡಕ್ಷನ್