ಮಂಗಳೂರು: 22 ಎಟಿಎಂ ಸ್ಕಿಮ್ಮಿಂಗ್ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಅಂತಾರಾಜ್ಯ ಚೋರರ ಬಂಧನ
Team Udayavani, Feb 24, 2021, 1:42 PM IST
ಮಂಗಳೂರು: ಕಳೆದ ವರ್ಷದ ನವೆಂಬರ್ ನಿಂದ ಇಲ್ಲಿಯವರೆಗೆ ನಗರದ ಹಲವೆಡೆ ಎಟಿಎಂ ಗಳಲ್ಲಿ ಸ್ಕಿಮ್ಮಿಂಗ್ ಉಪಕರಣ ಅಳವಡಿಸಿ ಹಣ ದೋಚುತ್ತಿದ್ದ ನಾಲ್ವರು ಅಂತಾರಾಜ್ಯ ಚೋರರನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ.
ಕೇರಳದ ತ್ರಿಶ್ಯೂರ್ ನ ಗ್ಲಾಡಿವಿನ್ ಜಿಂಟೋ ಜಾಯ್ (37 ವ), ದೆಹಲಿ ಪ್ರೇಮ್ ನಗರ ನಿವಾಸಿ ದಿನೇಶ್ ಸಿಂಗ್ ರಾವತ್ (44 ವ), ಕಾಸರಗೋಡು ಜಿಲ್ಲೆಯ ಅಬ್ದುಲ್ ಮಜೀದ್ (27 ವ) ಮತ್ತು ಕೇರಳ ರಾಜ್ಯದ ಅಲಪುರ ನಿವಾಸಿ ರಾಹುಲ್ ಟಿ ಎಸ್ (24 ವ) ಬಂಧಿತ ಆರೋಪಿಗಳು.
ಇದನ್ನೂ ಓದಿ:ಅಪರಾಧಗಳ ಕಡಿವಾಣಕ್ಕೆ ಸಿಸಿ ಕ್ಯಾಮೆರಾ ಹದ್ದಿನ ಕಣ್ಣು
2020ರ ನವೆಂಬರ್ ನಿಂದ ಇಲ್ಲಿಯವರೆಗೆ ನಗರದ ಕುಳಾಯಿ ಬ್ಯಾಂಕ್ ಆಫ್ ಇಂಡಿಯಾ ಎಟಿಎಂ, ಚಿಲಿಂಬಿ, ನಾಗುರಿ, ಕಪಿತಾನಿಯೋ ದ ಕೆನರಾ ಬ್ಯಾಂಕ್ ಎಟಿಎಂ, ಮಂಗಳಾದೇವಿಯ ಎಸ್ ಬಿಐ ಎಟಿಎಂ ಗಳಲ್ಲಿ ಸ್ಕಿಮ್ಮಿಂಗ್ ಅಳವಡಿಸಿ, ಗ್ರಾಹಕರ ಮಾಹಿತಿ ಕದ್ದು ನಕಲಿ ಎಟಿಎಂ ಕಾರ್ಡು ತಯಾರಿಸಿ ದೆಹಲಿ, ಬೆಂಗಳೂರು, ಕಾಸರಗೋಡು, ಮಡಿಕೇರಿ, ಗೋವಾ ಮುಂತಾದ ಕಡೆಗಳಲ್ಲಿ ಹಣ ವಿಡ್ರಾ ಮಾಡುತ್ತಿದ್ದರು. ಈ ಬಗ್ಗೆ ಮಂಗಳೂರು ನಗರ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ 22 ಪ್ರಕರಣಗಳು ದಾಖಲಾಗಿತ್ತು.
ಆರೋಪಿಗಳಿಂದ ಸ್ಕಿಮ್ಮಿಂಗ್ ಡಿವೈಸ್, ಎರಡು ಕಾರು, ನಕಲಿ ಎಟಿಎಂ ಕಾರ್ಡುಗಳು, ಐದು ಮೊಬೈಲ್, ಎರಡು ಆಪಲ್ ವಾಚ್ ಗಳನ್ನು ವಶಪಡಿಸಿಕೊಳ್ಳಲಾಗಿದೆ.
ಇದನ್ನೂ ಓದಿ:ಮೈಸೂರು ಪಾಲಿಕೆ ಚುನಾವಣೆ: ಬಿಜೆಪಿ ಲೆಕ್ಕಾಚಾರ ಉಲ್ಟಾ, ಜೆಡಿಎಸ್ ತೆಕ್ಕೆಗೆ ಮೇಯರ್ ಪಟ್ಟ!
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
MUST WATCH
ಹೊಸ ಸೇರ್ಪಡೆ
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ