ಸೈಬರ್‌ ಠಾಣೆಗೆ ತಜ್ಞ ತನಿಖಾಧಿಕಾರಿ ಇಲ್ಲ!


Team Udayavani, Aug 26, 2019, 5:18 AM IST

36

ಮಹಾನಗರ: ಸಾಮಾಜಿಕ ಜಾಲತಾಣಗಳು ಅತ್ಯಂತ ಪ್ರಭಾವಶಾಲಿ ಮಾಧ್ಯಮಗಳಾಗಿ ರೂಪು ಗೊಳ್ಳುತ್ತಿರುವ ಜತೆಗೆ ಸೈಬರ್‌ ಅಪರಾಧಗಳೂ ದಿನದಿಂದ ದಿನಕ್ಕೆ ಹೆಚ್ಚುತ್ತಿವೆ. ಇಂತಹ ಸಂದರ್ಭದಲ್ಲಿ ಮಂಗಳೂರಿನ ಸೈಬರ್‌ ಪೊಲೀಸ್‌ ಠಾಣೆಯಲ್ಲಿ ಸೈಬರ್‌ ಅಪರಾಧಗಳ ತನಿಖೆ ನಡೆಸಲು ಪರಿಣತ ತನಿಖಾಧಿಕಾರಿಯೇ ಇಲ್ಲ!

ಇಲ್ಲಿ 5 ತಿಂಗಳುಗಳಿಂದ ಖಾಯಂ ಪೊಲೀಸ್‌ ಇನ್‌ಸ್ಪೆಕ್ಟರ್‌ ಇರಲಿಲ್ಲ; ಎರಡು ದಿನಗಳ ಹಿಂದೆ ಒಬ್ಬರನ್ನು ನೇಮಕ ಮಾಡಲಾಗಿದೆ. ಠಾಣೆಯಲ್ಲಿ ಇದ್ದ ಇಬ್ಬರು ಸಬ್‌ ಇನ್‌ಪೆಕ್ಟರ್‌ಗಳೂ ಜೂನ್‌ನಲ್ಲಿ ವರ್ಗಾವಣೆಯಾಗಿದ್ದಾರೆ. ಪ್ರಸ್ತುತ ಅವರ ಹುದ್ದೆಗಳೂ ಖಾಲಿ ಇವೆ.

ಪ್ರಮುಖ ಹುದ್ದೆಗಳೂ ಖಾಲಿ
ಸೈಬರ್‌ ಠಾಣೆಯ ಪೊಲೀಸ್‌ ಇನ್‌ಸ್ಪೆಕ್ಟರ್‌ ಆಗಿದ್ದ ಸವಿತೃ ತೇಜ ಕಳೆದ ಲೋಕಸಭಾ ಚುನಾವಣೆ ಪ್ರಕ್ರಿಯೆ ಆರಂಭವಾಗುವಾಗ ವರ್ಗವಾಗಿದ್ದು, ತೆರ ವಾದ ಸ್ಥಾನಕ್ಕೆ ಚುನಾವಣೆ ಸಂದರ್ಭದಲ್ಲಿ ಸತೀಶ್‌ ನೇಮಕಗೊಂಡಿದ್ದರು. ಚುನಾವಣೆ ಪ್ರಕ್ರಿಯೆ ಮುಗಿದ ಬಳಿಕ ಜೂ. 20ರಂದು ಸತೀಶ್‌ ಕೂಡ ಮಾತೃ ಠಾಣೆ (ಎಸಿಬಿ)ಗೆ ಮರಳಿದ್ದಾರೆ. ಸವಿತೃ ತೇಜ ಸಾಮಾನ್ಯ ವರ್ಗಾವಣೆಗೊಂಡು ಬೆಂಗಳೂರಿಗೆ (ಐಎಸ್‌ಡಿ) ತೆರಳಿದ್ದರಿಂದ ವಾಪಸಾಗಿಲ್ಲ. ಈ ಠಾಣೆಯಲ್ಲಿ ಎಸ್‌ಐ ಆಗಿದ್ದ ಚಂದ್ರಶೇಖರಯ್ಯ ಸುರತ್ಕಲ್ ಠಾಣೆಗೂ ಇನ್ನೋರ್ವ ಎಸ್‌ಐ ಕುಮಾರೇಶನ್‌ ಪಣಂಬೂರು ಠಾಣೆಗೂ ವರ್ಗವಾಗಿದ್ದಾರೆ. ಉಳಿದಂತೆ ಇತರ 18 ಮಂದಿ ಸಿಬಂದಿ ಮಾತ್ರ ಇದ್ದಾರೆ.

ಇದೀಗ ಎರಡು ದಿನಗಳ ಹಿಂದೆ ಈ ಹಿಂದೆ ಮಂಗಳೂರಿನಲ್ಲಿ ಕೆಲಸ ಮಾಡಿದ್ದ ಓರ್ವ ಇನ್ಸ್‌ಪೆಕ್ಟರ್‌ ಅವರನ್ನು ಎರಡು ದಿನಗಳ ಹಿಂದೆ ಸೈಬರ್‌ ಠಾಣೆಗೆ ನೇಮಕ ಮಾಡಿದ ಬಗ್ಗೆ ಮಾಹಿತಿ ಬಂದಿದೆ ಎಂದು ಪೊಲೀಸ್‌ ಆಯುಕ್ತ ಡಾ| ಹರ್ಷ ಪಿ.ಎಸ್‌. ಅವರು ಉದಯವಾಣಿಗೆ ತಿಳಿಸಿದ್ದಾರೆ.

ಪ್ರತೀ ದಿನ 2- 3 ಹೊಸ ಪ್ರಕರಣ
ಠಾಣೆಯ ಅಂಕಿ-ಅಂಶಗಳ ಪ್ರಕಾರ ಪ್ರಸ್ತುತ 185 ಪ್ರಕರಣಗಳು ವಿಲೇವಾರಿಗೆ ಬಾಕಿ ಇವೆ. ತನಿಖಾಧಿಕಾರಿಯಾಗಿರುವ ಪೊಲೀಸ್‌ ಇನ್‌ಸ್ಪೆಕ್ಟರ್‌ ಹುದ್ದೆಯೇ 5 ತಿಂಗಳಿಂದ ಖಾಲಿ ಇದ್ದದ್ದು, ವಿಳಂಬಕ್ಕೆ ಕಾರಣ. ಪ್ರತೀ ದಿನ 2- 3 ಹೊಸ ಸೈಬರ್‌ ಅಪರಾಧ ಪ್ರಕರಣಗಳು ಸೇರ್ಪಡೆಗೊಳ್ಳುತ್ತಿದ್ದು, ಪಟ್ಟಿ ಬೆಳೆಯುತ್ತಲೇ ಇದೆ.

ಕೆಲವು ದಿನಗಳ ಹಿಂದೆ ಪ್ರಕರಣವೊಂದರ ತನಿಖೆ ತುರ್ತಾಗಿ ನಡೆಯಬೇಕಿತ್ತು. ಆಗ ಅನಿವಾರ್ಯವಾಗಿ ಬಂದರು (ಮಂಗಳೂರು ಉತ್ತರ) ಠಾಣೆಯ ಪೊಲೀಸ್‌ ಇನ್‌ಸ್ಪೆಕ್ಟರ್‌ ಗೋವಿಂದರಾಜು ಅವರಿಗೆ ತನಿಖೆಯ ಪ್ರಭಾರವನ್ನು ಆಯುಕ್ತರು ವಹಿಸಿದ್ದರು. ಆದರೆ ಅವರಿಗೆ ಬಂದರು ಠಾಣೆಯ ಜವಾಬ್ದಾರಿಯೂ ಇರುವುದರಿಂದ ಸೈಬರ್‌ ಠಾಣೆ ಬಗ್ಗೆ ಗಮನ ಸಾಧ್ಯವಾಗುತ್ತಿರಲಿಲ್ಲ.

ಪರಿಣತ ಅಧಿಕಾರಿ ಬೇಕು

ಸೈಬರ್‌ ಠಾಣೆಗೆ ಇನ್‌ಸ್ಪೆಕ್ಟರ್‌ ನೇಮಕ ಮಾಡುವಂತೆ ನಿಕಟಪೂರ್ವ ಪೊಲೀಸ್‌ ಆಯುಕ್ತ ಸಂದೀಪ್‌ ಪಾಟೀಲ್ ಅವರು ಪೊಲೀಸ್‌ ಇಲಾಖೆಯ ಕೇಂದ್ರ ಕಚೇರಿಗೆ ಪತ್ರ ಬರೆದಿದ್ದು, ಇದೀಗ ನಾನು ಕೂಡಾ ಪತ್ರ ಬರೆದಿದ್ದೇನೆ. ಎರಡು ದಿನಗಳ ಹಿಂದೆ ಒಬ್ಬರನ್ನು ನೇಮಕ ಮಾಡಿರುವ ಬಗ್ಗೆ ಮಾಹಿತಿ ಬಂದಿದೆ. ಆದರೆ ಸೈಬರ್‌ ಅಪರಾಧಗಳ ತನಿಖೆಗೆ ಕಂಪ್ಯೂಟರ್‌ ಸೈನ್ಸ್‌ ಅಥವಾ ಮಾಹಿತಿ ತಂತ್ರಜ್ಞಾನದಲ್ಲಿ ಪರಿಣತಿ ಇರುವವರನ್ನು ನೇಮಕ ಮಾಡುವ ಆವಶ್ಯಕತೆ ಇದೆ. ತಂತ್ರಜ್ಞಾನದಲ್ಲಿ ತ್ವರಿತಗತಿಯಲ್ಲಿ ಬದಲಾವಣೆಗಳಾಗುತ್ತಿವೆ. ಹೊಸ ಹೊಸ ತಂತ್ರಜ್ಞಾನ ಬಳಸಿ ಕಳ್ಳರು ಅಪರಾಧ ಎಸಗುತ್ತಾರೆ. ನುರಿತ ಅಧಿಕಾರಿ ಇದ್ದರೆ ಮಾತ್ರ ಪರಿಣಾಮಕಾರಿ ತನಿಖೆ ಸಾಧ್ಯ.
– ಡಾ| ಹರ್ಷ ಪಿ.ಎಸ್‌.ಮಂಗಳೂರು ಪೊಲೀಸ್‌ ಆಯುಕ್ತರು

•ಹಿಲರಿ ಕ್ರಾಸ್ತಾ

ಟಾಪ್ ನ್ಯೂಸ್

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.