ಅವೈಜ್ಞಾನಿಕ ಕಾಮಗಾರಿಯಿಂದ ಉಚ್ಚಿಲ ಸಮುದ್ರ ರಸ್ತೆಗೆ ಹಾನಿ; ಆರೋಪ


Team Udayavani, May 6, 2022, 10:26 AM IST

uchchila

ಉಳ್ಳಾಲ: ಉಚ್ಚಿಲದಲ್ಲಿ ಸಮುದ್ರ ಕೊರೆತವಿದ್ದರೂ ಹಲವು ಬಾರಿ ಕಲ್ಲುಗಳನ್ನು ಹಾಕಲಾಗಿದೆ. ಎಡಿಬಿಯಿಂದ ನಡೆಸಿದ ಶಾಶ್ವತ ಕಾಮಗಾರಿಯ ಅಂಗವಾಗಿ ಸಮುದ್ರದ ಮಧ್ಯದಲ್ಲೇ ಅಲೆಗಳ ರಭಸಕ್ಕೆ ಬ್ರೇಕ್‌ ಹಾಕಿ ಸಮುದ್ರ ತೀರದ ಮನೆಗಳನ್ನು ರಕ್ಷಿಸುವ ಉದ್ದೇಶದಿಂದ ರೀಫ್ಗಳನ್ನು ಅಳವಡಿಸಿದ್ದು, ಅವೈಜ್ಞಾ ನಿಕವಾಗಿ ಕಾಮಗಾರಿ ನಡೆದ ಪರಿಣಾಮ ಸ್ಥಳೀಯರನ್ನು ಗಣನೆಗೆ ತೆಗೆದುಕೊಳ್ಳದೆ ಕಾಮಗಾರಿ ನಿರ್ವಹಿಸಿದ್ದರಿಂದ ರಸ್ತೆ ಸಮೇತ ಸಮುದ್ರ ತೀರ ಕೊಚ್ಚಿ ಹೋಗಿವೆ ಎಂದು ಉಚ್ಚಿಲ ಬೀಚ್‌, ಬಟ್ಟಪ್ಪಾಡಿ ನಿವಾಸಿಗಳು ಆರೋಪಿಸಿದರು.

ಸಮುದ್ರ ಕೊರೆತ ಪ್ರದೇಶವಾದ ಸೋಮೇಶ್ವರ ಉಚ್ಚಿಲ ಮತ್ತು ಉಳ್ಳಾಲ ಕಡಲ್ಕೊರೆತ ಪ್ರದೇಶಕ್ಕೆ ಭೇಟಿ ನೀಡಿದ ಭರವಸೆ ಸಮಿತಿಯ ಅಧ್ಯಕ್ಷ ಬಿ.ಎಂ. ಫಾರೂಕ್‌ ಅವರಿಗೆ ಸ್ಥಳೀಯ ನಿವಾಸಿಗಳು ದೂರು ನೀಡಿದರು. ಎರಡು ವರ್ಷದ ಹಿಂದೆ ಬೃಹತ್‌ ಗಾತ್ರದಲ್ಲಿ ಮರಳು ಶೇಖರಣೆ ಮಾಡಿ ಕಡಲ್ಕೊರೆತ ತಡೆಗೆ ಅವೈಜ್ಞಾನಿಕ ಕಾಮಗಾರಿ ನಡೆಸಿದ್ದರು. ಆದರೆ ಮಳೆಗಾಲದಲ್ಲಿ ಮರಳು ಸಮುದ್ರ ಪಾಲಾಗಿ ಕೇರಳ ಭಾಗದಲ್ಲಿ ಶೇಖರಣೆಗೊಂಡಿದೆ. ಇಲ್ಲಿ ಅಧಿಕಾರಿ, ಜನಪ್ರತಿನಿಧಿಗಳು ಪ್ರತೀ ವರ್ಷ ಬಂದು ಕಡಲ್ಕೊರೆತವನ್ನು ವೀಕ್ಷಿಸಿ ಹೋಗುತ್ತಾರೆ. ಭರವಸೆ ನೀಡುತ್ತಾರೆ. ಆದರೆ ನಾವು ಮಾತ್ರ ಇಲ್ಲಿ ಪ್ರತಿನಿತ್ಯ ಆತಂಕದಲ್ಲೇ ದಿನ ಕಳೆಯುತ್ತಿದ್ದೇವೆ. ಈ ಬಾರಿ ನಮ್ಮ ಮನೆಗಳೂ ಸಮುದ್ರ ಪಾಲಾಗುವ ಆತಂಕವನ್ನು ಎದುರಿಸುತ್ತಿದ್ದೇವೆ ಎಂದು ಸ್ಥಳೀಯರು ಅಳಲು ತೋಡಿಕೊಂಡರು.

ಸಮಿತಿಯ ಅಧ್ಯಕ್ಷ ಬಿ.ಎಂ. ಫಾರೂಕ್‌ ಅಧಿಕಾರಿಗಳ ಜತೆ ಮಾತನಾಡಿ, ಪ್ರತೀ ವರ್ಷ ಇಲ್ಲಿ ಮಳೆಗಾಲದ ಸಂದರ್ಭ ಕಡಲ್ಕೊರೆತಕ್ಕೆ ರಸ್ತೆಗಳು ಸಮುದ್ರ ಪಾಲಾಗುತ್ತವೆ. ಮತ್ತೆ ಕೋಟಿಗಟ್ಟಲೆ ಹಣ ವ್ಯಯಿಸಿ ರಸ್ತೆ ನಿರ್ಮಿಸಲಾಗುತ್ತದೆ. ಆದರೆ ಒಂದೇ ವರ್ಷದಲ್ಲಿ ಅದು ಕಡಲ್ಕೊರೆತಕ್ಕೆ ಕೊಚ್ಚಿ ಹೋಗುತ್ತವೆ. ಇಲ್ಲಿ ಸಮುದ್ರದ ಅಲೆಯನ್ನು ತಡೆಯಲು ಶಾಶ್ವತ ಕ್ರಮ ವಹಿಸದೆ ರಸ್ತೆ ಮಾಡಿ ಏನೂ ಪ್ರಯೋಜನವಿಲ್ಲ ಎಂದರು. ಇಲ್ಲಿ ಕೇವಲ ಕಲ್ಲುಹಾಕುವುದರಿಂದ ಪ್ರಯೋಜನವಾಗದು. ಅದನ್ನು ಪರಿಶೀಲಿಸುವುದಕ್ಕಾಗಿಯೇ ನಾವು ಬಂದಿದ್ದೇವೆ ಎಂದು ಬಿ.ಎಂ. ಫಾರೂಕ್‌ ಜನರ ಮನವಿಗೆ ಪ್ರತಿಕ್ರಿಯಿಸಿದರು.

ಸಮಿತಿ ಸದಸ್ಯರಾದ ಯು.ಬಿ. ವೆಂಕಟೇಶ್‌, ಶಶೀಲ್‌ ಜಿ. ನಮೋಶಿ, ಕೆ.ಟಿ. ಶ್ರೀಕಂಠೇಗೌಡ, ಡಿಸಿ ಡಾ| ರಾಜೇಂದ್ರ ಕುಮಾರ್‌, ಜಿ.ಪಂ. ಸಿಇಒ ಡಾ|ಕುಮಾರ, ಸಹಾಯಕ ಆಯುಕ್ತ ಮದನ್‌ ಮೋಹನ್‌ ಮೊದಲಾದವರಿದ್ದರು.

ಅನುಮತಿ ಪಡೆಯದೇ ಕಾಮಗಾರಿ

ಉಳ್ಳಾಲದ ಎಸ್‌ಟಿಪಿ (ಒಳಚರಂಡಿ ಸಂಸ್ಕರಣೆ ಘಟಕ)ಗೆ ಸಮಿತಿ ಭೇಟಿ ನೀಡಿದ ವೇಳೆ ಸ್ಥಳೀಯರು ಅಲ್ಲಿನ ಒಳಚರಂಡಿ ವ್ಯವಸ್ಥೆಗಳ ಬಗ್ಗೆ ಗಮನ ಸೆಳೆದರು. 2009ರಲ್ಲಿ ಆರಂಭವಾದ ಎಸ್‌ಟಿಪಿ ಕಾಮಗಾರಿಗೆ ಸುಮಾರು 16 ವರ್ಷಗಳ ಬಳಿಕ ರಾಷ್ಟ್ರೀಯ ಹಸುರು ನ್ಯಾಯಮಂಡಳಿ (ಎನ್‌ಜಿಟಿ)ಯಿಂದ ಒಂದೆರಡು ವರ್ಷದ ಹಿಂದಷ್ಟೇ ಅನುಮತಿ ಪಡೆಯಲಾಗಿದೆ. ಕಾಮಗಾರಿ ಆರಂಭವಾಗುವ ಮೊದಲು ಸರ್ವೇ ಆರಂಭದಲ್ಲಿಯೇ ಈ ಅನುಮತಿಯನ್ನು ಪಡೆಯಬೇಕಾಗಿದ್ದರೂ ಅದನ್ನು ಪಡೆಯದೇ ಕಾಮಗಾರಿ ಆರಂಭಿಸಲಾಗಿದೆ. ಇದು ಯಾವ ಆಧಾರದಲ್ಲಿ ಮಾಡಿರುವುದು ಎಂದು ಬಿ.ಎಂ. ಫಾರೂಕ್‌ ಅಧಿಕಾರಿಗಳನ್ನು ಪ್ರಶ್ನಿಸಿದರು. ಎಸ್‌ಟಿಪಿ ಸಮುದ್ರ ದಡದಲ್ಲಿ ಕಾಣುವಂತೆ ನಿರ್ಮಾಣವಾಗಿರುವುದನ್ನು ಸ್ಥಳೀಯ ಹಿರಿಯರೊಬ್ಬರು ಅಧಿಕಾರಿಗಳಿಲ್ಲಿ ಆತಂಕವ್ಯಕ್ತಪಡಿಸಿದರು.

ಟಾಪ್ ನ್ಯೂಸ್

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.