ಜಂಕ್ಷನ್‌ಗಳಲ್ಲಿ ಅಳವಡಿಸಿದ್ದ ರಬ್ಬರ್‌ ಕೋನ್‌ ಬದಲಾವಣೆಗೆ ನಿರ್ಧಾರ

ಸುಗಮ ವಾಹನ ಸಂಚಾರ, ಚಾಲನೆ ನಿಯಂತ್ರಣಕ್ಕೆ ಪೂರಕ

Team Udayavani, Sep 23, 2020, 5:05 AM IST

ಜಂಕ್ಷನ್‌ಗಳಲ್ಲಿ ಅಳವಡಿಸಿದ್ದ ರಬ್ಬರ್‌ ಕೋನ್‌ ಬದಲಾವಣೆಗೆ ನಿರ್ಧಾರ

ನಗರದ ಎಂ.ಜಿ. ರಸ್ತೆಯಲ್ಲಿ ಬಸ್‌ ಬೇಗೆ ಅಳವಡಿಸಿದ್ದ ರಬ್ಬರ್‌ ಕೋನ್‌ ತೆಗೆಯಲಾಗಿದೆ.

ಮಹಾನಗರ: ಸುಗಮ ವಾಹನ ಸಂಚಾರ ಮತ್ತು ವಾಹನಗಳ ಚಾಲನೆಯನ್ನು ನಿಯಂತ್ರಿಸುವ ನಿಟ್ಟಿನಲ್ಲಿ ನಗರದ ವಿವಿಧ ಜಂಕ್ಷನ್‌ಗಳಲ್ಲಿ ಈಗಾಗಲೇ ಅಳವಡಿಸಿ ಕಿತ್ತು ಹೋದ ರಬ್ಬರ್‌ ಕೋನ್‌ಗಳನ್ನು ಬದಲಾವಣೆ ಮಾಡಲು ಪೊಲೀಸ್‌ ಇಲಾಖೆಯು ನಿರ್ಧರಿಸಿದೆ.

ಅಡ್ಡಾದಿಡ್ಡಿ ವಾಹನ ಸಂಚಾರ ತಡೆಯುವ ಉದ್ದೇಶದಿಂದ ನಗರದ ವಿವಿಧ ಜಂಕ್ಷನ್‌ಗಳು, ಬಸ್‌ ಬೇಗಳಲ್ಲಿ ಈಗಾಗಲೇ ರಬ್ಬರ್‌ ಕೋನ್‌ಗಳನ್ನು ಅಳವಡಿಸಲಾಗಿತ್ತು. ಬಸ್‌ಗಳ ಚಕ್ರಗಳಿಗೆ ಸಿಲುಕಿ ಬಹುತೇಕ ಕೋನ್‌ಗಳು ಕಿತ್ತು ಹೋಗಿದ್ದವು. ಇದರಿಂದಾಗಿ ವಾಹನಗಳು ಅಪಘಾತವಾಗುವ ಸಾಧ್ಯತೆ ಹೆಚ್ಚಿತ್ತು. ಈ ಬಗ್ಗೆ “ಉದಯವಾಣಿ ಸುದಿನ’ ಕೆಲವು ತಿಂಗಳ ಹಿಂದೆ ರಿಯಾಲಿಟಿ ಚೆಕ್‌ ನಡೆಸಿ, ವಾಸ್ತವವನ್ನು ಸಾರ್ವಜನಿಕರ ಮುಂದಿಟ್ಟಿತ್ತು. ಪರ್ಯಾಯ ಯೋಜನೆ ಬಗ್ಗೆ ಪೊಲೀಸ್‌ ಇಲಾಖೆ ಭರವಸೆ ನೀಡಿತ್ತು. ಅದರಂತೆ ಇದೀಗ ಕಿತ್ತು ಹೋದ ರಬ್ಬರ್‌ ಕೋನ್‌ ತೆಗೆದು ಹೊಸ ಕೋನ್‌ ಅಳವಡಿಸಲು ಮುಂದಾಗಿದೆ. ನಗರದ ಕರಂಗಲ್ಪಾಡಿ ಜಂಕ್ಷನ್‌ ಬಳಿ ಜೈಲ್‌ ರೋಡ್‌ಗೆ

ತೆರಳುವಲ್ಲಿ ಸುಗಮ ಸಂಚಾರದ ನಿಟ್ಟಿನಲ್ಲಿ ಅಳವಡಿಸಲಾಗಿದ್ದ ರಬ್ಬರ್‌ ಕೋನ್‌ಗಳ ಮೇಲೆ ಬಸ್‌ ಚಲಾಯಿಸಿ ಹಾನಿಗೊಳಿಸಿದ ಕಾರಣಕ್ಕೆ ಕೇರಳ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್‌ ಚಾಲಕನೊಬ್ಬನ ಮೇಲೆ ಪೊಲೀಸರು ಪ್ರಕರಣ ದಾಖಲಿಸಿದ್ದರು. ಅಲ್ಲದೇ, ಇದಾದ ಕೆಲ ದಿನಗಳ ಹಿಂದೆ, ನಗರದ ಜ್ಯೋತಿ ಚಿತ್ರಮಂದಿರ ಬಳಿ ಕೋನ್‌ಗಳಿಗೆ ಹಾನಿ ಎಸಗಿದ ಮೂರು ಕರ್ನಾಟಕ ಸಾರಿಗೆ ಬಸ್‌ ಮತ್ತು ಎರಡು ಖಾಸಗಿ ಬಸ್‌ ಚಾಲಕರ ವಿರುದ್ಧ ಇದೇ ರೀತಿ ಕ್ರಮ ಜರಗಿಸಲಾಗಿತ್ತು.

ಪ್ರತ್ಯೇಕ ಮಾರ್ಕಿಂಗ್‌
ರಸ್ತೆಗಳಲ್ಲಿ ರಬ್ಬರ್‌ ಕೋನ್‌ಗಳನ್ನು ತೆರವು ಮಾಡಿದ ಕಾರಣ ಬಸ್‌ ಬೇಗಳಲ್ಲಿ ಸದ್ಯ ತೊಂದರೆ ಉಂಟಾಗಿದೆ. ಬಸ್‌ ಬೇ ಗಳಲ್ಲಿ ಬಸ್‌ಗಳಲ್ಲದೆ ಇತರ ವಾಹನಗಳು ಕೂಡ ಸಂಚರಿಸುತ್ತಿವೆ. ಈ ನಿಟ್ಟಿನಲ್ಲಿ ಕಟ್ಟುನಿಟ್ಟಿನ ಕ್ರಮಕ್ಕೆ ಪೊಲೀಸ್‌ ಇಲಾಖೆ ಮುಂದಾಗಿದೆ. ಹೊಸತಾದ ರಬ್ಬರ್‌ ಕೋನ್‌ ಅಳವಡಿಸುವವರೆಗೆ ಬಸ್‌ ಬೇಗಳಲ್ಲಿ ಪ್ರತ್ಯೇಕ ಮಾರ್ಕಿಂಗ್‌ ಮಾಡಲು ಪೊಲೀಸ್‌ ಇಲಾಖೆ ನಿರ್ಧರಿಸಿದೆ.

ಹೊಸ ಕೋನ್‌ ಅಳವಡಿಕೆ
ಕೆಲ ಸಮಯದ ಹಿಂದೆ ನಗರದಲ್ಲಿ ಕೆಲವೊಂದು ಕಡೆಗಳಲ್ಲಿ ಅಳವಡಿಸಿದ್ದ ರಸ್ತೆ ಕೋನ್‌ಗಳು ಎದ್ದು ಹೋಗಿದ್ದವು. ಅವುಗಳನ್ನು ಗುರುತಿಸಿ, ಇದೀಗ ತೆಗೆಯ ಲಾಗಿದ್ದು, ಅಲ್ಲಿ ಮತ್ತೆ ಹೊಸ ಕೋನ್‌ಗಳನ್ನು ಅಳವಡಿಸಲಾಗುವುದು. ಅಲ್ಲಿಯವರೆಗೆ ಬಸ್‌ ಬೇಗಳಲ್ಲಿ ಮುನ್ನೆಚ್ಚರಿಕೆ ದೃಷ್ಟಿಯಿಂದ ಲೈನ್‌ ಅಳವಡಿಸಲಾಗುವುದು.
-ನಟರಾಜ್‌, ಮಂಗಳೂರು ಟ್ರಾಫಿಕ್‌ ಎಸಿಪಿ

ಟಾಪ್ ನ್ಯೂಸ್

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Mangaluru: ಗ್ರಾಮೀಣ ಭಾಗದಲ್ಲಿ ಬಗೆಹರಿಯದ “ಸ್ವಚ್ಛತೆ’ ಸಂಕಟ!

Mangaluru: ಗ್ರಾಮೀಣ ಭಾಗದಲ್ಲಿ ಬಗೆಹರಿಯದ “ಸ್ವಚ್ಛತೆ’ ಸಂಕಟ!

Mangaluru: ಕುಡಿಯುವ ನೀರಿನ ಕೊರತೆ, ಬೋಟ್‌, ಮಂಜುಗಡ್ಡೆ ಘಟಕಗಳಿಗೆ ಸಂಕಷ್ಟ

Mangaluru: ಕುಡಿಯುವ ನೀರಿನ ಕೊರತೆ, ಬೋಟ್‌, ಮಂಜುಗಡ್ಡೆ ಘಟಕಗಳಿಗೆ ಸಂಕಷ್ಟ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.