ಪಂಪ್‌ವೆಲ್‌ ಫ್ಲೈ ಓವರ್‌ ಕೆಳಭಾಗ ಸುಂದರಗೊಳಿಸಲು ನಿರ್ಧಾರ


Team Udayavani, May 9, 2022, 11:56 AM IST

fly-over

ಪಂಪ್‌ವೆಲ್‌: ನಗರದ ಮಹತ್ವದ ಪಂಪ್‌ವೆಲ್‌ ಫ್ಲೈ ಓವರ್‌ನ ಕೆಳಭಾಗವನ್ನು ಆಕರ್ಷಣೀಯವಾಗಿ ರೂಪಿಸುವ ಮಹತ್ವದ ಯೋಜನೆ ಕೆಲವೇ ದಿನಗಳಲ್ಲಿ ಸಾಕಾರವಾಗಲಿದೆ.

ಪ್ರತಿಷ್ಠಿತ ಕರ್ಣಾಟಕ ಬ್ಯಾಂಕ್‌ ವತಿಯಿಂದಲೇ ಫ್ಲೈ ಓವರ್‌ನ ಕೆಳಭಾಗದಲ್ಲಿ ಆಕರ್ಷಣೀಯ ಯೋಜನೆ ರೂಪಿಸಲು ಈಗಾಗಲೇ ನಿರ್ಧರಿ ಸಲಾಗಿದೆ. ಇದರ ಪೂರ್ವಭಾವಿಯಾಗಿ ಫ್ಲೈ ಓವರ್‌ ನ ಕೆಳಭಾಗದಲ್ಲಿ ಮಣ್ಣು ಹಾಕಿ ಸಮತಟ್ಟು ಮಾಡುವ ಕಾಮಗಾರಿ ನಡೆಸಲಾಗಿದೆ. ಮುಂದೆ ಪೂರ್ಣವಾಗಿ ಸಮತಟ್ಟು ಮಾಡಿದ ಅನಂತರ ಹಸುರೀಕರಣದ ಮುಖೇನ ಫ್ಲೈ ಓವರ್‌ನ ಕೆಳಭಾಗ ಸುಂದರಗೊಳಿಸಲಾಗಿದೆ. ಈಗಾಗಲೇ ಫ್ಲೈ ಓವರ್‌ನ ಪೂರ್ಣ ಗೋಡೆಯನ್ನು ಕರ್ಣಾಟಕ ಬ್ಯಾಂಕ್‌ ವತಿಯಿಂದ ಸುಂದರಗೊಳಿಸಲಾಗಿದೆ. ಕರ್ಣಾಟಕ ಬ್ಯಾಂಕ್‌ ವತಿ ಯಿಂದ ಫ್ಲೈ ಓವರ್‌ ಕೆಳಭಾಗದ ರಸ್ತೆಯ ನಾಲ್ಕೂ ಬದಿಯಲ್ಲಿ ಹೂಕುಂಡಗಳ ಮೂಲಕ ಅಲಂಕಾರ ಮಾಡಲಾಗುತ್ತದೆ. ಇದರ ಮಧ್ಯಭಾಗದಲ್ಲಿ ಎತ್ತರವಾಗಿ ಮಣ್ಣು ಹಾಕಿ ಹಸುರೀಕರಣದೊಂದಿಗೆ ಸುಂದರಗೊಳಿಸಲಾಗುತ್ತದೆ. ಫ್ಲೈ ಓವರ್‌ನ ಪಿಲ್ಲರ್‌ಗಳಲ್ಲಿ ಆಕರ್ಷಣೀಯ ಚಿತ್ರದ ಮೂಲಕ ಗಮನಸೆಳೆ ಯುವಂತೆ ಮಾಡಲಾಗುತ್ತದೆ. ಈ ಮೂಲಕ ಪಂಪ್‌ವೆಲ್‌ ಫ್ಲೈ ಓವರ್‌ ಪ್ರದೇಶ ಆಕರ್ಷಣೀಯ ಸ್ಥಳವಾಗಿ ರೂಪುಗೊಳ್ಳಲಿದೆ ಎನ್ನುತ್ತಾರೆ ಮೇಯರ್‌ ಪ್ರೇಮಾನಂದ ಶೆಟ್ಟಿ.

ಕೇರಳ ಸಹಿತ ದೇಶದ ವಿವಿಧ ಭಾಗಗಳಿಂದ ನಗರ ಪ್ರವೇಶಕ್ಕೆ ಬಹುಮುಖ್ಯ ಸ್ಥಳ ಪಂಪ್‌ವೆಲ್‌ ಫ್ಲೈ ಓವರ್‌. ಆದರೆ ಫ್ಲೈ ಓವರ್‌ ಕೆಳಭಾಗ ಮಾತ್ರ ನಿರ್ವಹಣೆಯ ಕೊರತೆ ಎದುರಿಸುತ್ತಿತ್ತು. ನಿರಾಶ್ರಿತರ ತಾಣವಾಗಿ ಬದಲಾಗಿತ್ತು. ಗಲೀಜು ಮಾಡಲಾಗುತ್ತಿತ್ತು. ನಗರ ಪ್ರವೇಶಿಸುವವರಿಗೆ ಇಲ್ಲಿನ ಅಸ್ತವ್ಯಸ್ತ ವ್ಯವಸ್ಥೆಗಳನ್ನು ಕಂಡು ಗಲಿಬಿಲಿಗೊಂಡಿದ್ದರು. ಜತೆಗೆ ಸುತ್ತಲೂ ಫ್ಲೆಕ್ಸ್‌ ಗಳೇ ಇಲ್ಲಿ ತುಂಬಿಕೊಂಡಿದ್ದವು. ಇದೆಲ್ಲದಕ್ಕೆ ಪರಿಹಾರವೆಂಬಂತೆ ಇದೀಗ ಸುಂದರಗೊಳಿಸುವ ಮಹತ್ವದ ಯೋಜನೆ ಸಾಕಾರವಾಗುತ್ತಿರುವುದು ಸ್ಥಳೀಯರಲ್ಲಿ ಹರ್ಷ ಮೂಡಿಸಿದೆ.

ನಗರದ ಉಳಿದ ಫ್ಲೈ ಓವರ್‌ ಕೆಳಗೂ ಅವಕಾಶವಿದೆ!

ಫ್ಲೈ ಓವರ್‌ ಕೆಳಭಾಗ ಚೆಲುವಿಗೆ ಭೂಷಣವಾಗಲಿ’ ಎಂಬ ಶೀರ್ಷಿಕೆಯಲ್ಲಿ ಎ. 5ರಂದು ‘ಉದಯವಾಣಿ ಸುದಿನ’ ಫೋಟೋ ಸ್ಟೋರಿ ಪ್ರಕಟಿಸಿತ್ತು. ಪಂಪ್‌ ವೆಲ್‌, ತೊಕ್ಕೊಟ್ಟು, ಕುಂಟಿಕಾನ, ಕುಲಶೇಖರ ಫ್ಲೈ ಓವರ್‌ ಕೆಳಭಾಗವನ್ನು ಅಭಿವೃದ್ಧಿಪಡಿಸಲು ಅವಕಾಶವಿದೆ ಎಂದು ವರದಿಯಲ್ಲಿ ಉಲ್ಲೇಖೀಸಲಾಗಿತ್ತು. ಸದ್ಯ ಪಂಪ್‌ವೆಲ್‌ ಸುಂದರೀಕರಣಕ್ಕೆ ತೆರೆದುಕೊಂಡಿದ್ದು, ಉಳಿದ ಫ್ಲೈ ಓವರ್‌ನ ಕೆಳಭಾಗದಲ್ಲಿಯೂ ಸುಂದರಗೊಳಿಸಲು ಅವಕಾಶಗಳಿವೆ.

ಟಾಪ್ ನ್ಯೂಸ್

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

1-wqeewqe

Mumbai Indians ವಿರುದ್ಧ ತವರಿನ ಅಂಗಳ: ರಾಹುಲ್‌ಗೆ ಮಹತ್ವದ ಪಂದ್ಯ

PCB

Champions Trophy ತಾಣ ಅಂತಿಮ ಲಾಹೋರ್‌, ಕರಾಚಿಯಲ್ಲಿ: ಭಾರತದ ಪಂದ್ಯಗಳೆಲ್ಲಿ?

1-weweweqwe

Manipal ಹಾಸ್ಪಿಟಲ್ಸ್‌ ಪಾಲಾದ ಮೆಡಿಕಾ ಸಿನರ್ಜಿ

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

Dakshina Kannada ಚೆಕ್‌ಪೋಸ್ಟ್‌ ಕಾರ್ಯ ನಿರ್ವಹಣೆಗೆ ಡಿಸಿ ಸೂಚನೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

1-wqeewqe

Mumbai Indians ವಿರುದ್ಧ ತವರಿನ ಅಂಗಳ: ರಾಹುಲ್‌ಗೆ ಮಹತ್ವದ ಪಂದ್ಯ

PCB

Champions Trophy ತಾಣ ಅಂತಿಮ ಲಾಹೋರ್‌, ಕರಾಚಿಯಲ್ಲಿ: ಭಾರತದ ಪಂದ್ಯಗಳೆಲ್ಲಿ?

1-weweweqwe

Manipal ಹಾಸ್ಪಿಟಲ್ಸ್‌ ಪಾಲಾದ ಮೆಡಿಕಾ ಸಿನರ್ಜಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.