ಪರಿಸರ ಸ್ನೇಹಿ ಪಟಾಕಿಗೆ ಹೆಚ್ಚಿದ ಬೇಡಿಕೆ; ಪಟಾಕಿ ಖರೀದಿಗೆ ಉತ್ಸಾಹ


Team Udayavani, Oct 23, 2022, 12:17 PM IST

8

ಮಹಾನಗರ: ಬೆಳಕಿನ ಹಬ್ಬ ದೀಪಾವಳಿ ಮತ್ತೆ ಬಂದಿದ್ದು, ತರಹೇವಾರಿ ಪಟಾಕಿಗಳು ಹಬ್ಬದ ಮೆರುಗನ್ನು ಮತ್ತಷ್ಟು ಹೆಚ್ಚಿಸುತ್ತದೆ. ಮಾರುಕಟ್ಟೆಯಲ್ಲಿ ಪಟಾಕಿ ಖರೀದಿಗೆ ಸಾರ್ವಜನಿಕರು ಹೆಚ್ಚಿನ ಉತ್ಸಾಹ ತೋರುತ್ತಿದ್ದಾರೆ.

ಕಳೆದೆರಡು ವರ್ಷಗಳಿಂದ ಕೋವಿಡ್‌ ಹಿನ್ನೆಲೆಯಲ್ಲಿ ಪಟಾಕಿ ಖರೀದಿ ಮತ್ತು ಪೂರೈಕೆ ಉತ್ತಮವಾಗಿರಲಿಲ್ಲ. ಇದೀಗ ಹಬ್ಬಕ್ಕೆ ಎರಡು ದಿನ ಇರುವಾಗಲೇ ಪಟಾಕಿ ಅಂಗಡಿಗಳಲ್ಲಿ ಹೆಚ್ಚಿನ ಜನ ಸಂದಣಿ ಇದ್ದು, ಪರಿಸರ ಸ್ನೇಹಿ ಹಸುರು ಪಟಾಕಿ ಖರೀದಿಗೆ ಜನರು ಆಸಕ್ತಿ ತೋರುತ್ತಿದ್ದಾರೆ. ನಗರದ ಅಂಗಡಿಗಳಿಗೆ ನಾನಾ ರೀತಿಯ ಪಟಾಕಿಗಳು ಈಗಾಗಲೇ ಬಂದಿದ್ದು, ಮುಂದಿನ ದಿನಗಳಲ್ಲಿ ಮತ್ತಷ್ಟು ಪೂರೈಕೆಯಾಗುವ ನಿರೀಕ್ಷೆಯೂ ಇದೆ. ಕೆಲವು ಅಂಗಡಿಗಳಲ್ಲಿ ಪಟಾಕಿ ಖರೀದಿ ಮೇಲೆ ಉತ್ತಮ ಆಫರ್‌ ಗಳನ್ನು ನೀಡಲಾಗುತ್ತಿದೆ.

ಬಣ್ಣ ಬಣ್ಣದ ಪಟಾಕಿಗಳು ಬೀಡಿ ಪಟಾಕಿ, ಮಳೆ, ಮಾಲೆ, ಬಾಣ ಪಟಾಕಿಗಳು, ರಾಕೆಟ್‌, ಹೂವಿನ ಕುಂಡಗಳು, ಕಲರ್‌ ಚೇಂಜಿಂಗ್‌ ಬಟರ್‌ ಫ್ಲೈ, ಡಕ್‌, ಲಯನ್‌, ಸ್ಟಾರ್‌ ಬರ್ಸ್ಡ್ ಕ್ರ್ಯಾಕಿಂಗ್‌ ಫ್ಲವರ್‌ ಪಾಟ್‌ ಸೇರಿದಂತೆ ಇನ್ನೂ ಅನೇಕ ಹೊಸ ಮಾದರಿಯ ಪಟಾಕಿಗಳು ಮಾರುಕಟ್ಟೆಯಲ್ಲಿದೆ. ಅಲ್ಲದೆ, “ವಿಂಗ್ಸ್‌ ಫೌಂಟೇನ್‌’, ಟೂ ಪ್ಲಸ್‌ ಒನ್‌ ಎಂಬ ಹೂದಾನಿ, ತ್ರಿವರ್ಣದ ಹೂದಾನಿ ಪಟಾಕಿ,ಬಟರ್‌ಫ್ಲೈ ಎಂಬ ಪಟಾಕಿ ಸೇರಿದಂತೆ ವಿವಿಧ ಮಾದರಿಯ ಪಟಾಕಿಗಳು ಮಾರುಕಟ್ಟೆಗೆ ಬಂದಿದೆ.

ಮಾಯಾ ಟ್ರೇಡರ್ ಮಾಲಕ ಅನಂತ್‌ ಕಾಮತ್‌ ಅವರು “ಉದಯವಾಣಿ ಸುದಿನ’ಕ್ಕೆ ಪ್ರತಿಕ್ರಿಯಿಸಿ, ಕಳೆದ ಕೆಲ ದಿನದಿಂದ ಪಟಾಕಿ ವ್ಯಾಪಾರ ಉತ್ತಮ ವಾಗಿದೆ. ಪರಿಸರ ಸ್ನೇಹಿ ಹಸುರು ಪಟಾಕಿ ಖರೀದಿಗೆ ಸಾರ್ವಜನಿಕರು ಆಸಕ್ತಿ ತೋರುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಪಟಾಕಿ ವ್ಯಾಪಾರ ಮತ್ತಷ್ಟು ಹೆಚ್ಚಾಗುವ ನಿರೀಕ್ಷೆ ಇದೆ ಎಂದರು.

ಗಣಪತಿ ಭಂಡಾರ್‌ಕಾರ್‌ ಆ್ಯಂಡ್‌ ಸನ್ಸ್‌ ಮಾಲಕ ದಿಲೀಪ್‌ ಭಂಡಾರ್‌ಕರ್‌ ಅವರು ಪ್ರತಿಕ್ರಿಯಿಸಿ, ಪಟಾಕಿ ಮಾರಾಟ ಉತ್ತಮವಾಗಿದೆ. ಆದರೆ, ಸಮರ್ಪಕವಾಗಿ ಪೂರೈಕೆಯಾಗುತ್ತಿಲ್ಲ. ಶಿವಕಾಶಿಯಲ್ಲಿ ಮಳೆ ಬಂದ ಪರಿಣಾಮ ಪಟಾಕಿ ಉತ್ಪಾದನೆ ತುಸು ಕಡಿಮೆಯಾಗಿದೆ. ಇದರಿಂದಾಗಿ ಪೂರೈಕೆಗೆ ತಕ್ಕಂತೆ ಉತ್ಪಾದನೆಯಾಗುತ್ತಿಲ್ಲ ಎಂದರು.

ಪಟಾಕಿ ಸಿಡಿಸಲು ಮಾರ್ಗಸೂಚಿ ಪಟಾಕಿ ಸಿಡಿಯುವಾಗ ಯಾವೆಲ್ಲ ಕ್ರಮಕೈಗೊಳ್ಳಬೇಕು ಎಂಬ ನಿಟ್ಟಿನಲ್ಲಿ ಈಗಾಗಲೇ ಮಾರ್ಗಸೂಚಿ ಬಿಡುಗಡೆ ಮಾಡಲಾಗಿದೆ. 125ಡಿ.ಬಿ(ಎ.ಐ) ಅಥವಾ 145 ಡಿ.ಬಿ(ಸಿ)ಪಿ.ಕೆ ಕ್ಕಿಂತ ಹೆಚ್ಚು ಶಬ್ದ ಮಾಡುವ ಪಟಾಕಿ ಹಾಗೂ ಸಿಡಿಮದ್ದುಗಳನ್ನು ಉಪಯೋಗಿಸಬಾರದು. ರಾತ್ರಿ 10 ರಿಂದ ಬೆಳಗ್ಗೆ 6 ಗಂಟೆಯವರೆಗೆ ಪಟಾಕಿ ಬಳಕೆ ನಿಷೇಧಿಸಲಾಗಿದೆ. ನಿಶಬ್ದ ವಲಯಗಳೆಂದು ಘೋಷಿಸಲ್ಪಟ್ಟಿರುವ ಸ್ಥಳಗಳ ಸುತ್ತಮುತ್ತ ಪಟಾಕಿ ಸಿಡಿಸಬಾರದು ಎಂದು ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳು ತಿಳಿಸಿದ್ದಾರೆ.

ಟಾಪ್ ನ್ಯೂಸ್

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Food ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Private Bus ಯಾನ ದರ 4 ಪಟ್ಟು ಹೆಚ್ಚಳ! ಮತದಾನಕ್ಕೆ ಬರುವವರ ಕಿಸೆಗೆ ಕತ್ತರಿ

Private Bus ಯಾನ ದರ 4 ಪಟ್ಟು ಹೆಚ್ಚಳ! ಮತದಾನಕ್ಕೆ ಬರುವವರ ಕಿಸೆಗೆ ಕತ್ತರಿ

Dakshina Kannada ರಾಜಕೀಯ ಮೇಲಾಟದ ಕ್ಷೇತ್ರದಲ್ಲಿ ಮತದಾರರದ್ದೇ ಕುತೂಹಲ!

Dakshina Kannada ರಾಜಕೀಯ ಮೇಲಾಟದ ಕ್ಷೇತ್ರದಲ್ಲಿ ಮತದಾರರದ್ದೇ ಕುತೂಹಲ!

ಅಧಿಕಾರಕ್ಕಾಗಿ ಪಿಎಫ್‌ಐಯ ರಾಜಕೀಯ ಮುಖವಾದ ಎಸ್‌ಡಿಪಿಐ ಜತೆ ಕಾಂಗ್ರೆಸ್‌ ಹೊಂದಾಣಿಕೆ: ನಳಿನ್‌

ಅಧಿಕಾರಕ್ಕಾಗಿ ಪಿಎಫ್‌ಐಯ ರಾಜಕೀಯ ಮುಖವಾದ ಎಸ್‌ಡಿಪಿಐ ಜತೆ ಕಾಂಗ್ರೆಸ್‌ ಹೊಂದಾಣಿಕೆ: ನಳಿನ್‌

Supreme Court ಆದೇಶದಿಂದ ಮೋದಿ ಸರಕಾರದ ಮುಖಭಂಗ: ಸುರ್ಜೇವಾಲ

Supreme Court ಆದೇಶದಿಂದ ಮೋದಿ ಸರಕಾರದ ಮುಖಭಂಗ: ಸುರ್ಜೇವಾಲ

Captain Brijesh Chowta ಚುನಾವಣ ವೆಚ್ಚಕ್ಕೆ ಪಿಂಚಣಿ ದುಡ್ಡು ದೇಣಿಗೆ

Captain Brijesh Chowta ಚುನಾವಣ ವೆಚ್ಚಕ್ಕೆ ಪಿಂಚಣಿ ದುಡ್ಡು ದೇಣಿಗೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Food ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.