ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೋಂಸ್ಟೇಗೆ ಬೇಡಿಕೆ


Team Udayavani, Sep 17, 2020, 5:54 AM IST

Demand for Homestay in Undivided Dakshina Kannada District

ಸಾಂದರ್ಭಿಕ ಚಿತ್ರ

ಮಹಾನಗರ: ರಾಜ್ಯದ ಕರಾವಳಿ ಭಾಗವು ಪ್ರವಾಸಿ ತಾಣಗಳಿಗೆ ಪ್ರಸಿದ್ಧಿ ಪಡೆದಿದೆ. ಆದರೆ ಕೊರೊನಾದಿಂದಾಗಿ ಪ್ರವಾಸಿಗರ ಸಂಖ್ಯೆ ತೀರಾ ಕಡಿಮೆಯಾಗಿದ್ದು, ಪ್ರವಾಸೋದ್ಯಮವನ್ನು ಉತ್ತೇಜಿಸುವುದಕ್ಕೆ ಇಲಾಖೆ ಇದೀಗ ಮುಂದಾಗಿದೆ. ಅದರಂತೆ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಹೋಂಸ್ಟೇ ನಿರ್ಮಾಣಕ್ಕೆ ಬೇಡಿಕೆ ಬರುತ್ತಿದೆ.

ದ.ಕ., ಉಡುಪಿ ಜಿಲ್ಲೆಗಳಲ್ಲಿ ಈಗ ಒಟ್ಟು 63 ಹೋಂಸ್ಟೇಗಳು ಕಾರ್ಯನಿರ್ವಹಿಸುತ್ತಿವೆ. ದ.ಕ. ಜಿಲ್ಲೆಯ ಮಂಗಳೂರು ನಗರ ಮತ್ತು ತಾಲೂಕು ವ್ಯಾಪ್ತಿಯಲ್ಲಿಯೇ 26 ಹೋಂ ಸ್ಟೇಗಳಿವೆ. ಅದೇ ರೀತಿ, ಬೆಳ್ತಂಗಡಿ ತಾಲೂಕಿನ ಕಲ್ಮಂಜ, ಮುಂಡಾಜೆಯಲ್ಲಿ ಬಂಟ್ವಾಳ ತಾಲೂಕಿನ ಅಡ್ಯನಡ್ಕ, ಬಡಗ ಕಜೆಕಾರ್‌, ಸುಳ್ಯ ತಾಲೂಕಿನ ಪೆರುವಾಜೆ, ಸಂಪಾಜೆಯಲ್ಲಿ ಒಂದೊಂದು ಹೋಂಸ್ಟೇಗಳಿವೆ. ಉಡುಪಿ ನಗರ, ತಾಲೂಕು ವ್ಯಾಪ್ತಿಯಲ್ಲಿ 17, ಕಾರ್ಕಳ ತಾಲೂಕಿ ನಲ್ಲಿ 8, ಕುಂದಾಪುರದಲ್ಲಿ 6 ಹೋಂಸ್ಟೇಗಳು ಕಾರ್ಯನಿರ್ವಹಿಸುತ್ತಿವೆ.

ಕೊರೊನಾ ಕಾರಣದಿಂದಾಗಿ ಕೆಲವು ತಿಂಗಳು ಗಳಿಂದ ಪ್ರವಾಸಿಗರ ಕೊರತೆ ಇದ್ದು, ಎಲ್ಲ ಹೋಂಸ್ಟೇ ಗಳು ಬಾಗಿಲು ಮುಚ್ಚಿದ್ದವು. ಲಾಕ್‌ಡೌನ್‌ ಸಡಿಲಿಕೆಯ ಬಳಿಕ ಇದೀಗ ಪ್ರವಾಸೋದ್ಯಮ ಚಟುವಟಿಕೆಗಳು ನಿಧಾನಕ್ಕೆ ಆರಂಭವಾಗತೊಡಗಿವೆ.

ಹೋಂ ಸ್ಟೇ ನಿರ್ಮಾಣಕ್ಕೆ ಉತ್ತೇಜನೆ
ಹೀಗಿರುವಾಗ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ಹೊಸದಾಗಿ ಹೋಂಸ್ಟೇ ನಿರ್ಮಾಣ ಮಾಡುವವರಿಗೆ ಹೆಚ್ಚಿನ ಉತ್ತೇಜನ ನೀಡಲು ಇಲಾಖೆ ಮುಂದಾಗಿದೆ. ಅದರಂತೆ ಉಭಯ ಜಿಲ್ಲೆಗಳಲ್ಲಿ ಈಗಾಗಲೇ 20ಕ್ಕೂ ಹೆಚ್ಚು ಮಂದಿ ಹೋಂಸ್ಟೇ ನಿರ್ಮಾಣಕ್ಕೆ ಮುಂದೆ ಬಂದಿದ್ದಾರೆ.

ಹೋಂಸ್ಟೇಗಳಿಗೆ ಹೆಚ್ಚಿದ ಬೇಡಿಕೆ
ಕರಾವಳಿ ಪ್ರದೇಶಕ್ಕೆ ಪ್ರವಾಸಕ್ಕೆಂದು ಬರು ವವರು ಹೆಚ್ಚಾಗಿ ಈ ಭಾಗದ ಗುತ್ತಿನ ಮನೆ, ಪಾರಂಪರಿಕ ಹಳೆ ಮನೆ ಸಹಿತ ಗ್ರಾಮೀಣ ಶೈಲಿಯ ಹೋಂಸ್ಟೇಗಳಲ್ಲಿ ಇರಲು ಇಷ್ಟಪಡುತ್ತಾರೆ. ಇದೇ ಕಾರಣಕ್ಕೆ ಕರಾವಳಿ ಭಾಗದಲ್ಲಿ ತುಳುನಾಡ ಪಾರಂಪರಿಕ ಮನೆಗಳ ವಿನ್ಯಾಸದ ಹೋಂ ಸ್ಟೇಗಳಿಗೆ ಬೇಡಿಕೆ ಕಂಡುಬರುತ್ತಿದೆ. ಹೋಂಸ್ಟೇಗಳ ವಿನ್ಯಾಸಕ್ಕೆ ತಕ್ಕಂತೆ ಅವುಗಳ ದರಗಳಲ್ಲಿಯೂ ಬದಲಾವಣೆಯಾಗುತ್ತವೆ.

ಅನಧಿಕೃತ ಹೋಂ ಸ್ಟೇ ವಿರುದ್ಧ ಕ್ರಮ
ಹೋಂಸ್ಟೇಗೆ ಅನುಮತಿ ಪತ್ರ ಪಡೆಯಲು ಪೊಲೀಸ್‌ ಇಲಾಖೆ, ಸ್ಥಳೀಯಾಡಳಿತ ಸಂಸ್ಥೆಗಳಿಂದ ನಿರಾಕ್ಷೇಪಣೆ ಪತ್ರ ಆವಶ್ಯಕ. ಮಹಾನಗರ ಪಾಲಿಕೆ ವ್ಯಾಪ್ತಿಯಾದರೆ ಮಂಗಳೂರು ಪೊಲೀಸ್‌ ಆಯ ಕ್ತರು ಹಾಗೂ ಮಹಾನಗರ ಪಾಲಿಕೆ, ಇದರ ಹೊರಗಿನ ವ್ಯಾಪ್ತಿಯಾದರೆ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ, ಗ್ರಾ.ಪಂ., ನಗರಸಭೆ, ಪುರಸಭೆ ಯಿಂದ ನಿರಾಕ್ಷೇಪಣೆ ಪತ್ರ ಪಡೆಯಬೇಕು. ಅನಧಿಕೃತವಾಗಿ ಹೋಂಸ್ಟೇ ನಿರ್ಮಿಸಿದರೆ ಅಂತಹ ಮಾಲಕರ ವಿರುದ್ಧ ಕಠಿನ ಕ್ರಮಕ್ಕೆ ಇಲಾಖೆ ಮುಂದಾಗಿದೆ. ಹೋಂಸ್ಟೇ ನಿರ್ಮಾಣ ವೇಳೆ ಕೆಲವೊಂದು ಷರತ್ತುಗಳಿವೆ. ಅದರಂತೆ ಯಾವುದೇ ಅನಪೇಕ್ಷಿತ ವಿದ್ಯಮಾನ, ವ್ಯವಹಾರಗಳಿಗೆ ಅಲ್ಲಿ ಆಸ್ಪದ ನೀಡಬಾರದು. ಪ್ರತಿ ಪ್ರವಾಸಿಗರಿಂದ ಗುರುತುಚೀಟಿ ಪಡೆದೇ ವಸತಿ ಸೌಲಭ್ಯ ನೀಡಬೇಕು. ಹೋಂಸ್ಟೇಗೆ ಬರುವ ಅತಿಥಿಗಳ ವಿವರ ಬಗ್ಗೆ ನೋಂದಣಿ ಮಾಡಬೇಕು.

ಪ್ರವಾಸೋದ್ಯಮಕ್ಕೆ ಆದ್ಯತೆ
ಪ್ರವಾಸೋದ್ಯಮ ಚಟುವಟಿಕೆಗಳಿಗೆ ಉತ್ತೇಜನ, ಪ್ರೋತ್ಸಾಹ ನೀಡುವ ಉದ್ದೇಶಗಳಿಂದ ಹೋಂಸ್ಟೇ ಯೋಜನೆಗಳಿಗೆ ಅನುಮೋದನೆ ನೀಡಲಾಗುತ್ತಿದೆ. ದ.ಕ. ಜಿಲ್ಲೆಯಲ್ಲಿ ಒಟ್ಟು 32 ಹೋಂಸ್ಟೇಗಳಿದ್ದು, 15 ಮಂದಿ ಹೊಸದಾಗಿ ಅರ್ಜಿ ಸಲ್ಲಿಸಿದ್ದಾರೆ. ಉಡುಪಿ ಜಿಲ್ಲೆಯಲಿ 31 ಹೋಂಸ್ಟೇಗಳಿವೆ. ಅನುಮತಿ ಪಡೆಯದೇ ಕಾರ್ಯಾಚರಿಸುತ್ತಿರುವ ಹೋಂಸ್ಟೇಗಳನ್ನು ಪತ್ತೆ ಹಚ್ಚಿ ಪೊಲೀಸ್‌ ಇಲಾಖೆ ಸಹಕಾರದೊಂದಿಗೆ ಸೂಕ್ತ ಕಾನೂನು ಕ್ರಮ ಕೈಗೊಳ್ಳುತ್ತೇವೆ.
-ಸೋಮಶೇಖರ್‌ ಬಿ.ಕೆ., ಸಹಾಯಕ ನಿರ್ದೇಶಕರು ದ.ಕ. ಜಿಲ್ಲಾ ಪ್ರವಾಸೋದ್ಯಮ ಇಲಾಖೆ
-ಚಂದ್ರಶೇಖರ ನಾೖಕ್‌, ಸಹಾಯಕ ನಿರ್ದೇಶಕರು ಉಡುಪಿ ಜಿಲ್ಲಾ ಪ್ರವಾಸೋದ್ಯಮ ಇಲಾಖೆ

ನವೀನ್‌ ಭಟ್‌ ಇಳಂತಿಲ

ಟಾಪ್ ನ್ಯೂಸ್

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ

1-weewqewqe

LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ

crime (2)

Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Billionaire Priyanka; Here is the property details of Satish Jarakiholi’s daughter

Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Mangaluru: ಗ್ರಾಮೀಣ ಭಾಗದಲ್ಲಿ ಬಗೆಹರಿಯದ “ಸ್ವಚ್ಛತೆ’ ಸಂಕಟ!

Mangaluru: ಗ್ರಾಮೀಣ ಭಾಗದಲ್ಲಿ ಬಗೆಹರಿಯದ “ಸ್ವಚ್ಛತೆ’ ಸಂಕಟ!

Mangaluru: ಕುಡಿಯುವ ನೀರಿನ ಕೊರತೆ, ಬೋಟ್‌, ಮಂಜುಗಡ್ಡೆ ಘಟಕಗಳಿಗೆ ಸಂಕಷ್ಟ

Mangaluru: ಕುಡಿಯುವ ನೀರಿನ ಕೊರತೆ, ಬೋಟ್‌, ಮಂಜುಗಡ್ಡೆ ಘಟಕಗಳಿಗೆ ಸಂಕಷ್ಟ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

death

Kollegala: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

Tiger

Ponnampet; ಹುಲಿ ದಾಳಿಗೆ ಅಸ್ಸಾಂ ಮೂಲದ ಕಾರ್ಮಿಕ ಬಲಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

8

Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ

1-wewqewqe

Koratagere; ಗೃಹ ಸಚಿವ ಪರಮೇಶ್ವರ್ ಮತಬೇಟೆ: 40 ಗ್ರಾಮದಲ್ಲಿ ಮಿಂಚಿನ ಸಂಚಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.