ಭವಿಷ್ಯನಿಧಿ ಸಮಸ್ಯೆ ಶೀಘ್ರ ಬಗೆಹರಿಸಲು ಆಗ್ರಹ


Team Udayavani, Sep 25, 2019, 5:00 AM IST

r-21

ಮಹಾನಗರ: ಬೀಡಿ ಉದ್ಯಮದಲ್ಲಿ ಕೆಲಸ ನಿರ್ವಹಿಸುವ ಬೀಡಿ ಕಾರ್ಮಿಕರು ಭವಿಷ್ಯ ನಿಧಿಗೆ (ಪಿಎಫ್‌) ಸಂಬಂಧಿಸಿದಂತೆ ಭವಿಷ್ಯನಿಧಿ ಇಲಾಖೆಯ ಹೊಸ ಕಾನೂನು ಹಾಗೂ ನಿಯಮದಿಂದ ತೀವ್ರ ಸಮಸ್ಯೆಗೆ ಸಿಲುಕಿದ್ದು ತತ್‌ಕ್ಷಣ ಇವುಗಳನ್ನು ಬಗೆ ಹರಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ಕರಾವಳಿ ಬೀಡಿ ವರ್ಕರ್ ಯೂನಿಯನ್‌, ಸೌತ್‌ಕೆನರಾ -ಉಡುಪಿ ಜಿಲ್ಲಾ ಬೀಡಿ ಕಂಟ್ರಾಕ್ಟರ್ ಯೂನಿಯನ್‌ ( ಎಚ್‌ಎಂಎಸ್‌) ವತಿಯಿಂದ ಮಂಗಳವಾರ ಮಂಗಳೂರಿನ ಭವಿಷ್ಯನಿಧಿ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ಜರಗಿತು.

ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಅಧ್ಯಕ್ಷ ಮಹಮ್ಮದ್‌ ರಫಿ ಭವಿಷ್ಯ ನಿಧಿ ಇಲಾಖೆಯ ಕೆಲವು ಅನಗತ್ಯ, ಅಸಂಬದ್ಧ ನಿಯಮ, ಧೋರಣೆಯಿಂದಾಗಿ ಬಡ ಬೀಡಿ ಕಾರ್ಮಿಕರು ಕಷ್ಟ ಅನುಭವಿಸುವಂತಾಗಿದೆ ಎಂದರು.

ವಂತಿಗೆದಾರರ ದಾಖಲೆಗಳನ್ನು ತಿದ್ದುಪಡಿ ಮಾಡಲು ಯಾವುದೇ ಅಡಚಣೆ ಮಾಡಬಾರದು, ವಂತಿಗೆದಾರರ ಹೆಸರು, ತಂದೆಯ ಹೆಸರು, ಜನ್ಮದಿನಾಂಕದ ತಿದ್ದುಪಡಿಯನ್ನು ಆಧಾರ್‌ನಲ್ಲಿ ನಮೂದಿಸಿದಂತೆ ಸರಿಪಡಿಸಬೇಕು. ಆಧಾರ್‌ ಅಲ್ಲದೆ ಬೇರೆ ಯಾವ ದಾಖಲೆಯನ್ನು ಕೇಳಬಾರದು, ಭವಿಷ್ಯನಿಧಿ ಪಿಂಚಣಿ ನೀಡುವ ಬ್ಯಾಂಕ್‌ಗಳಿಗೆ ಜೀವನ ಪ್ರಮಾಣ ಪತ್ರವನ್ನು ಪಿಂಚಣಿದಾರರಿಗೆ ಸಹಾಯವಾಗುವಂತೆ ವರ್ಷಪೂರ್ತಿ ಮಾಡಲು ಆದೇಶಿಸಬೇಕು. ಇದರಿಂದ ದೂರದ ಊರುಗಳಿಂದ ಬರುವ ವೃದ್ಧ ಪಿಂಚಣಿದಾರರು ಭವಿಷ್ಯನಿಧಿ ಕಚೇರಿಗೆ ಅಲೆದಾಡುವುದು ತಪ್ಪುತ್ತದೆ. ಬೀಡಿ ಕಾರ್ಮಿಕರು ತನ್ನ ಸರ್ವಿಸ್‌ ಅವಧಿಗೂ ಮುನ್ನ ಕೆಲಸಕ್ಕೆ ರಾಜೀನಾಮೆ ನೀಡಿದ್ದಲ್ಲಿ ಪಿಎಫ್‌ನಲ್ಲಿ ಜಮೆಯಾದ ಹಣಕ್ಕಾಗಿ ಅರ್ಜಿ ಸಲ್ಲಿಸಿದರೆ, ಸಂಪೂರ್ಣ ಪಾವತಿ ಮಾಡದೆ ವಿನಾ ಕಾರಣ ಸತಾಯಿಸಬಾರದು ಎಂದು ಒತ್ತಾಯಿಸಿದರು.

ಸಂಘಟನೆಯ ಪ್ರಧಾನ ಕಾರ್ಯದರ್ಶಿ ಹರೀಶ್‌ ಕೆ.ಎಸ್‌., ಉಪಾಧ್ಯಕ್ಷೆ ಭವಾನಿ, ಸಂಘಟನ ಕಾರ್ಯದರ್ಶಿ ನಮೃತಾ, ಕೋಶಾಧಿಕಾರಿ ಪಿ.ಎಚ್‌. ಮಹಮ್ಮದ್‌, ಜತೆ ಕಾರ್ಯದರ್ಶಿಗಳಾದ ಗಿರಿಜಾ, ಪದ್ಮಾವತಿ ಉಪಸ್ಥಿತರಿದ್ದರು. ಪ್ರತಿಭಟನೆಯ ಬಳಿಕ ಭವಿಷ್ಯ ನಿಧಿ ವಲಯ ಆಯುಕ್ತರಿಗೆ ಬೇಡಿಕೆಗಳ ಮನವಿ ಅರ್ಪಿಸಲಾಯಿತು. ಕಾರ್ಮಿಕರು ಸಂಕಷ್ಟವನ್ನು ಅನುಭವಿಸುವಂತಾಗಿದೆ

ಸಂಘಟನೆ ಗೌರವಾಧ್ಯಕ್ಷ ಎಂ. ಸುರೇಶ್ಚಂದ್ರ ಶೆಟ್ಟಿ  ಮಾತನಾಡಿ, ಇತ್ತೀಚಿನ ದಿನಗಳಲ್ಲಿ ವಂತಿಗೆದಾರರ ಹೆಸರು, ಗಂಡನ /ತಂದೆಯ ಹೆಸರು, ಜನ್ಮ ದಿನಾಂಕವನ್ನು ಸರಿಪಡಿಸಿಲು ಅನಗತ್ಯ ವಿಳಂಬ ಮಾಡಲಾಗುತ್ತಿದೆ. ವಂತಿಗೆದಾರನ ಜನ್ಮದಿನಾಂಕ ಒಂದು ವರ್ಷಕ್ಕಿಂತ ಹೆಚ್ಚು ಅಥವಾ ಕಡಿಮೆ ಇರುವುದನ್ನು ಆನ್‌ಲೈನ್‌ನಲ್ಲಿ ದಾಖಲೆ ಸಹಿತ ನೀಡಿದಾಗ ಅದನ್ನು ಅನಗತ್ಯವಾಗಿ ತಿರಸ್ಕರಿಸಲಾಗುತ್ತದೆ. ಇದರಿಂದ ಭವಿಷ್ಯ ನಿಧಿಗೆ ಸಂಬಂಧಪಟ್ಟು ಕಾರ್ಮಿಕರು ಬಹಳಷ್ಟು ಸಂಕಷ್ಟವನ್ನು ಅನುಭವಿಸುವಂತಾಗಿದೆ. ಕೂಡಲೇ ಇಲಾಖೆ ಈ ಬಗ್ಗೆ ಗಮನ ಹರಿಸಿ, ಇಲ್ಲದಿದ್ದಲ್ಲಿ ಮುಂದಿನ ದಿನಗಳಲ್ಲಿ ತೀವ್ರ ಹೋರಾಟವನ್ನು ಹಮ್ಮಿಕೊಳ್ಳಲಾಗುವುದು ಎಂದರು.

ಟಾಪ್ ನ್ಯೂಸ್

ಶ್ರೀ ಕ್ಷೇತ್ರ ಗೆಜ್ಜೆಗಿರಿ ಮೇಳದಿಂದ ವಿದೇಶದಲ್ಲಿ ಯಕ್ಷಗಾನ ಪ್ರದರ್ಶನ

ಶ್ರೀ ಕ್ಷೇತ್ರ ಗೆಜ್ಜೆಗಿರಿ ಮೇಳದಿಂದ ವಿದೇಶದಲ್ಲಿ ಯಕ್ಷಗಾನ ಪ್ರದರ್ಶನ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

Congress; ಕ್ಷೇತ್ರದ ಅಭಿವೃದ್ಧಿಗಾಗಿ ಪ್ರತ್ಯೇಕ ಪ್ರಣಾಳಿಕೆ: ಜಯಪ್ರಕಾಶ್‌ ಹೆಗ್ಡೆ

Congress; ಕ್ಷೇತ್ರದ ಅಭಿವೃದ್ಧಿಗಾಗಿ ಪ್ರತ್ಯೇಕ ಪ್ರಣಾಳಿಕೆ: ಜಯಪ್ರಕಾಶ್‌ ಹೆಗ್ಡೆ

banPuttur ಚುನಾವಣೆ ಕರ್ತವ್ಯ ನಿರತ ಅಂಗನವಾಡಿ ಕಾರ್ಯಕರ್ತೆಗೆ ಹಲ್ಲೆ

Puttur ಚುನಾವಣೆ ಕರ್ತವ್ಯ ನಿರತ ಅಂಗನವಾಡಿ ಕಾರ್ಯಕರ್ತೆಗೆ ಹಲ್ಲೆ

Kota ಮತದಾನ ಮಾಡಿ ಕೊನೆಯುಸಿರೆಳೆದ ಅಜ್ಜಿ!

Kota ಮತದಾನ ಮಾಡಿ ಕೊನೆಯುಸಿರೆಳೆದ ಅಜ್ಜಿ!

Bantwal: ಮನೆಯಲ್ಲೇ ಮತ ಚಲಾಯಿಸಿದ ಮಾಜಿ ಕೇಂದ್ರ ಸಚಿವ ಬಿ. ಜನಾರ್ದನ ಪೂಜಾರಿ

Bantwal: ಮನೆಯಲ್ಲೇ ಮತ ಚಲಾಯಿಸಿದ ಮಾಜಿ ಕೇಂದ್ರ ಸಚಿವ ಬಿ. ಜನಾರ್ದನ ಪೂಜಾರಿ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

Mangaluru ವೈದ್ಯಕೀಯ ಪದವೀಧರೆ ಪಿಜಿಯಲ್ಲಿ ಸಾವು

Mangaluru ವೈದ್ಯಕೀಯ ಪದವೀಧರೆ ಪಿಜಿಯಲ್ಲಿ ಸಾವು

17=

Mangaluru: ಬೈಕ್‌ಗೆ ಕಾರು ಢಿಕ್ಕಿ: ವಿದ್ಯಾರ್ಥಿ ಸಾವು

Moodabidri ಮೆದುಳು ಜ್ವರ ಉಲ್ಬಣಿಸಿ ವಿದ್ಯಾರ್ಥಿನಿ ನಿಧನ

Moodabidri ಮೆದುಳು ಜ್ವರ ಉಲ್ಬಣಿಸಿ ವಿದ್ಯಾರ್ಥಿನಿ ನಿಧನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಶ್ರೀ ಕ್ಷೇತ್ರ ಗೆಜ್ಜೆಗಿರಿ ಮೇಳದಿಂದ ವಿದೇಶದಲ್ಲಿ ಯಕ್ಷಗಾನ ಪ್ರದರ್ಶನ

ಶ್ರೀ ಕ್ಷೇತ್ರ ಗೆಜ್ಜೆಗಿರಿ ಮೇಳದಿಂದ ವಿದೇಶದಲ್ಲಿ ಯಕ್ಷಗಾನ ಪ್ರದರ್ಶನ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

Congress; ಕ್ಷೇತ್ರದ ಅಭಿವೃದ್ಧಿಗಾಗಿ ಪ್ರತ್ಯೇಕ ಪ್ರಣಾಳಿಕೆ: ಜಯಪ್ರಕಾಶ್‌ ಹೆಗ್ಡೆ

Congress; ಕ್ಷೇತ್ರದ ಅಭಿವೃದ್ಧಿಗಾಗಿ ಪ್ರತ್ಯೇಕ ಪ್ರಣಾಳಿಕೆ: ಜಯಪ್ರಕಾಶ್‌ ಹೆಗ್ಡೆ

banPuttur ಚುನಾವಣೆ ಕರ್ತವ್ಯ ನಿರತ ಅಂಗನವಾಡಿ ಕಾರ್ಯಕರ್ತೆಗೆ ಹಲ್ಲೆ

Puttur ಚುನಾವಣೆ ಕರ್ತವ್ಯ ನಿರತ ಅಂಗನವಾಡಿ ಕಾರ್ಯಕರ್ತೆಗೆ ಹಲ್ಲೆ

Kota ಮತದಾನ ಮಾಡಿ ಕೊನೆಯುಸಿರೆಳೆದ ಅಜ್ಜಿ!

Kota ಮತದಾನ ಮಾಡಿ ಕೊನೆಯುಸಿರೆಳೆದ ಅಜ್ಜಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.