ಮಂಜನಾಡಿ ಗ್ರಾ.ಪಂ.: “ಕೃಷಿಕರಿಗೆ  ಇಲಾಖೆ ಮಾಹಿತಿ ಕಾರ್ಯಾಗಾರ’


Team Udayavani, Jul 27, 2017, 7:55 AM IST

manjanadi.jpg

ಮಂಜನಾಡಿ: ಮಂಜನಾಡಿ ಗ್ರಾ.ಪಂ.,ತೋಟಗಾರಿಕೆ ಇಲಾಖೆ ಜಂಟಿ ಯಾಗಿ ಕೃಷಿಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಬೃಹತ್‌ ಕೃಷಿಮೇಳವನ್ನು ಆಯೋ ಜಿಸುವ ಅನಿವಾರ್ಯತೆಯಿದೆ ಎಂದು ಜಿಲ್ಲಾ ಪಂಚಾಯತ್‌ ಮಾಜಿ ಸದಸ್ಯ ಎನ್‌.ಎಸ್‌. ಕರೀಂ ಅಭಿಪ್ರಾಯಪಟ್ಟರು.

ಅವರು ಮಂಜನಾಡಿ ಗ್ರಾ.ಪಂ., ತೋಟಗಾರಿಕೆ ಇಲಾಖೆ, ಕೃಷಿ ಇಲಾಖೆ, ಹಾಗೂ ಪಶುಸಂಗೋಪನ ಇಲಾಖೆ ಮಂಗಳೂರು ಇವುಗಳ ಸಹಯೋಗದೊಂದಿಗೆ, ಮಂಜನಾಡಿ ಗ್ರಾ.ಪಂ. ಸಭಾಂಗಣದಲ್ಲಿ  ಮಂಗಳವಾರ ಆಯೋಜಿಸಿದ್ದ “ಕೃಷಿಕರಿಗೆ  ಇಲಾಖೆ ಮಾಹಿತಿ ಕಾರ್ಯಾಗಾರ’ದಲ್ಲಿ ಮಾತನಾಡಿದರು.

ಕೃಷಿ ಮೇಳದಲ್ಲಿ ತೆಂಗಿನ ಗಿಡ, ಅಡಿಕೆ ಗಿಡ, ಕಾಳು ಮೆಣಸಿನ ಗಿಡ ಹೀಗೆ ಹಲವಾರು ಬಗೆಯ ಗಿಡಗಳನ್ನು ವಿತರಿಸಬೇಕಿದೆ. ಕೃಷಿಕರು ಮೇಳದಲ್ಲಿ ತಮ್ಮ ಜಾಗಕ್ಕೆ ಸಂಬಂಧಿಸಿದ ದಾಖಲೆಗಳನ್ನು ತಂದು ಯೋಜನೆಯಡಿ ಸಿಗುವ ಸವಲತ್ತುಗಳನ್ನು ಪಡೆಯಬಹುದಾಗಿದೆ ಎಂದರು. 

ಇದರಿಂದ ಕೃಷಿಕರು ಸವಲತ್ತುಗಳಿಗೆ ಅಲೆದಾಡುವುದು ತಪ್ಪಿದಂತಾಗುವುದು. ಅಲ್ಲದೆ, ಪ್ರತಿ ಸವಲತ್ತುಗಳ  ಪ್ರಯೋಜನ ವನ್ನು ಪಡೆಯಬಹುದಾಗಿದೆ. ಅದಕ್ಕಾಗಿ ಹಿರಿಯ ಅಧಿಕಾರಿಗಳ ಜತೆಗೆ ಸಮಾಲೋ ಚನೆ ನಡೆಸಿ ಶೀಘ್ರವೇ ಕೃಷಿ ಮೇಳವನ್ನು ಆಯೋಜಿಸಬೇಕಿದೆ ಎಂದು ಹೇಳಿದರು.

ತೋಟಗಾರಿಕೆ ಇಲಾಖೆಯ ಸಹಾಯಕ ಅಧಿಕಾರಿ ನೇತ್ರಾವತಿ ಅವರು ಕೃಷಿಕರಿಗೆ ಮಾಹಿತಿ ನೀಡಿ, ಎರಡು ಎಕರೆ  ಜಾಗವಿರುವ ಕೃಷಿಕರಿಗೆ ಹನಿ ನೀರಾವರಿ ಮತ್ತು ತುಂತುರು ನೀರಾವರಿ ಯೋಜನೆಯಡಿ  ಶೇ.90ರಷ್ಟು ಸಹಾಯಧನ ಹಾಗೂ  2 ರಿಂದ  5 ಎಕರೆ ಜಾಗವಿರುವ  ಕೃಷಿಕರಿಗೆ ಶೇ. 50  ಸಹಾಯ ಧನವನ್ನು  ಕೃಷಿ ಅಭಿವೃದ್ಧಿಗೆ ತೋಟಗಾರಿಕೆ ಇಲಾಖೆ ವತಿಯಿಂದ ನೀಡಲಾಗುವುದು ಎಂದರು. 

ಅಡಿಕೆ ತೋಟ ಪುನಶ್ಚೇತನಕ್ಕೆ ಮಹಾತ್ಮಾ ಗಾಂಧಿ ಉದ್ಯೋಗ ಖಾತರಿ ಯೋಜನೆ ಯಡಿ ಮಾತ್ರ ಅವಕಾಶವಿದ್ದು, ಪಂಚಾ ಯತ್‌ನಲ್ಲಿ ಉದ್ಯೋಗ ಚೀಟಿಯನ್ನು ನೋಂದಾಯಿಸಿ ಯೋಜನೆಯಲ್ಲಿ ತೊಡ ಗಿಸಿಕೊಳ್ಳಬಹುದಾಗಿದೆ. ಯೋಜನೆಯಡಿ 200 ಗಿಡಗಳಿಗೆ 24,000 ರೂ. ಸಹಾಯ ಧನ ಹಾಗೂ ಗೊಬ್ಬರ,  ಗಿಡ ಖರೀದಿ ರಶೀದಿ ಗಳಿದ್ದಲ್ಲಿ ಅದನ್ನು ಇಲಾಖೆಯಿಂದ ಪಡೆದು ಕೊಳ್ಳಬಹುದು ಎಂದು ತಿಳಿಸಿದರು. 

ಗೇರು, ಬಾಳೆ, ಕೋಕೊ, ತೆಂಗು ಗಿಡ ಗಳನ್ನು ಇಲಾಖೆಯಿಂದ  ವಿತರಿಸಲಾ ಗುವುದು.  ಕಾಳು ಮೆಣಸು ಪುನಶ್ಚೇತನದಡಿ ಇಲಾಖೆ ವತಿಯಿಂದ 1 ಎಕರೆಗೆ  200 ಗಿಡಗಳನ್ನು ನೀಡಲಾಗುವುದು ಎಂದರು. 
ಫಲಾನುಭವಿಗಳಿಗೆ ಸಹಾಯಧನ ಚೆಕ್‌ಗಳನ್ನು ವಿತರಿಸಲಾಯಿತು.

ಪಶು ಸಂಗೋಪನ ಇಲಾಖೆಯ ಹಿರಿಯ ಪಶುವೈದ್ಯಕೀಯ ಪರೀಕ್ಷಕ ದೇವಾನಂದ ಎಸ್‌. ಸಹಾಯಕ ಕೃಷಿ ಅಧಿಕಾರಿ ಬಾಲಕೃಷ್ಣ, ನಿವೃತ್ತ ತೋಟಗಾರಿಕೆ ಅಧಿಕಾರಿ ಕೇಶವ ಶೆಟ್ಟಿ, ಪಿಡಿಒ ಪರಮೇಶ್ವರ ಭಂಡಾರಿ, ಮಂಜನಾಡಿ ಗ್ರಾ.ಪಂ. ಅಧ್ಯಕ್ಷ ಮಹಮ್ಮದ್‌, ಉಪಾಧ್ಯಕ್ಷೆ ಮರಿಯಮ್ಮ, ಮಾಜಿ ಅಧ್ಯಕ್ಷ ಮೊದಿನ್‌ ಕುಂಞ ಮರಾಟಿಮೂಲೆ, ಸದಸ್ಯರಾದ ಎ.ಎಂ. ಇಸ್ಮಾಯಿಲ್‌, ಎಂ. ಇಲಿಯಾಸ್‌,  ಕುಂಞಿ ಬಾವಾ, ಎಂ. ಅಬ್ಟಾಸ್‌, ನಿವೃತ್ತ ಪಿಡಿಒ ರಮಾನಾಥ ಪೂಂಜ ಉಪಸ್ಥಿತರಿದ್ದರು.

ಮೌಲಾನ ಆಜಾದ್‌ ಆಂಗ್ಲ ಮಾಧ್ಯಮ ಶಾಲೆ
ರಾಜ್ಯದಲ್ಲಿ 100 ಸರಕಾರಿ ಆಂಗ್ಲ ಮಾಧ್ಯಮ ಶಾಲೆಗಳ ಸ್ಥಾಪನೆಗೆ ರಾಜ್ಯ ಸರಕಾರ ಈ ವರ್ಷದ ಬಜೆಟಿನಲ್ಲಿ ಶಿಫಾರಸ್ಸು ಮಾಡಿದ್ದು ಜಿಲ್ಲೆ ಯಲ್ಲಿ ಪ್ರಾರಂಭಗೊಳ್ಳಲಿರುವ ನಾಲ್ಕು ಶಾಲೆಗಳಲ್ಲಿ ಒಂದು ಮಂಜನಾಡಿಯಲ್ಲಿ ಸ್ಥಾಪನೆಗೊಳ್ಳಲಿದೆ ಎಂದು ಜಿ.ಪಂ. ಮಾಜಿ ಸದಸ್ಯ ಎಂ.ಎಸ್‌. ಕರೀಂ ತಿಳಿಸಿದರು. ಮಾಹಿತಿ ಕಾರ್ಯಾಗಾರದಲ್ಲಿ  ಮಾತನಾಡಿದ ಅವರು, ಪಂಚಾಯತ್‌ ಸದಸ್ಯರ ಶ್ರಮ ಹಾಗೂ ಈ ಭಾಗದ ಶಾಸಕ ಯು.ಟಿ. ಖಾದರ್‌ ಅವರ ಮುತುವರ್ಜಿಯಿಂದ ಅಲ್ಪಸಂಖ್ಯಾಕರೇ ಹೆಚ್ಚಿರುವ ಮಂಜನಾಡಿ ಗ್ರಾ.ಪಂ. ವ್ಯಾಪ್ತಿಯಲ್ಲಿ ಮೌಲಾನ ಆಜಾದ್‌ ಆಂಗ್ಲ ಮಾಧ್ಯಮ ಶಾಲೆ ಆರಂಭವಾಗಲಿದ್ದು, ಇಲ್ಲಿ 6ರಿಂದ 10ನೇ ತರಗತಿಯವರೆಗೆ 75 ಶೇ.ದಷ್ಟು ಅಲ್ಪಸಂಖ್ಯಾಕರಿಗೆ ಹಾಗೂ ಶೇಕಡಾ 25 ರಷ್ಟು ಇತರ ಸಮುದಾಯದ ವಿದ್ಯಾರ್ಥಿ ಗಳಿಗೆ ಉಚಿತ ಶಿಕ್ಷಣ, ವಸತಿ, ಪುಸ್ತಕ, ಬ್ಯಾಗ್‌ ನೀಡಲಾಗುತ್ತದೆ. ಸರಕಾರಿ ಕನ್ನಡ ಮಾಧ್ಯಮ ಶಾಲೆಗಳಿಗಿಂತ ಹೆಚ್ಚಿನ ರೀತಿಯಲ್ಲಿ ಸೌಲಭ್ಯಗಳನ್ನು ಈ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ನೀಡಲಾಗುತ್ತಿದ್ದು ಇದರ ಸದುಪಯೋಗವನ್ನು ಪ್ರತಿಯೊಬ್ಬರು ಪಡೆಯಬೇಕೆಂದು ತಿಳಿಸಿದರು. “ಮಂಜನಾಡಿ ಆಸುಪಾಸಿನಲ್ಲಿ ಖಾಸಗಿ ಆಂಗ್ಲ ಮಾಧ್ಯಮ ಶಾಲೆಗಳಿದ್ದು, ಬಡವರ್ಗದ ಜನರಿಗೆ ಅಧಿಕ ಶುಲ್ಕವನ್ನು ಕಟ್ಟಿ ಕಲಿಸಲು ಅಲ್ಲಿ ಸಾಧ್ಯವಾಗುತ್ತಿಲ್ಲ. ಇದನ್ನು ಮನಗಂಡ ರಾಜ್ಯ ಸರಕಾರ ಬಡ ವರ್ಗದ ಜನರಿಗೆ ಅನೂಕೂಲವಾಗುವಂತೆ ಉಚಿತ ಆಂಗ್ಲ ಶಿಕ್ಷಣವನ್ನು ನೀಡುವ ನಿಟ್ಟಿ ನಲ್ಲಿ ಶಾಲೆಗಳನ್ನು  ಸ್ಥಾಪಿಸಿದೆ. ಈಗ 6ರಿಂದ 10ನೇ ತರಗತಿಯವರೆಗೆ ಆರಂಭವಾಗುವ ಈ ಶಾಲೆ ಭವಿಷ್ಯದಲ್ಲಿ ಪ್ರಥಮ ಪಿಯುಸಿ ಹಾಗೂ ದ್ವಿತೀಯ ಪಿಯುಸಿವರೆಗೂ ಆರಂಭವಾಗುವ ನಿರೀಕ್ಷೆಯಲ್ಲಿದ್ದೇವೆ’ ಎಂದರು.

ಟಾಪ್ ನ್ಯೂಸ್

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-brijesh

Brijesh Chowta; ಎ.4: ಅಧಿಕೃತ ನಾಮಪತ್ರ ಸಲ್ಲಿಕೆ; ಕ್ಯಾ| ಚೌಟರ ಆಸ್ತಿ ಇಷ್ಟು !

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

1-qweqwew

Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

13-good-friday

ಶುಭ ಶುಕ್ರವಾರ: ಸಾಮಾಜಿಕ ನ್ಯಾಯದ ಪ್ರತೀಕ ಯೇಸು ಕ್ರಿಸ್ತ

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

12-kejriwal

Delhi CM Arvind Kejriwalಗೆ ಮತ್ತೆ 4 ದಿನ ಇ.ಡಿ. ಕಸ್ಟಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.