ಮಂಗಳೂರು: ತೈಲಬೆಲೆ ಏರಿಕೆ ವಿರೋಧಿಸಿ ನೇಣುಹಗ್ಗ ಪ್ರದರ್ಶಿಸಿ ಪ್ರತಿಭಟನೆ!
Team Udayavani, Mar 9, 2021, 2:53 PM IST
ಮಂಗಳೂರು: ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ವಿರೋಧಿಸಿ ಹಾಗೂ ಓಲಾ ಉಬೆರ್ ಟ್ಯಾಕ್ಸಿ ಚಾಲಕರಿಗೆ ಸರಕಾರ ನಿಗದಿಪಡಿಸಿರುವ ದರ ನೀಡುವಂತೆ ಒತ್ತಾಯಿಸಿ ದಕ್ಷಿಣ ಕನ್ನಡ ಜಿಲ್ಲಾ ಆನ್ ಲೈನ್ ಟ್ಯಾಕ್ಸಿ ಚಾಲಕರ ಸಂಘದ ನೇತೃತ್ವದಲ್ಲಿ ನೇಣು ಹಗ್ಗ ಪ್ರದರ್ಶಿಸಿ ವಿಶಿಷ್ಟ ಪ್ರತಿಭಟನೆಯನ್ನು ಮಂಗಳೂರಿನ ಮಿನಿ ವಿಧಾನಸೌಧದ ಬಳಿ ನಡೆಸಿದರು.
ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ಸಂಘದ ಗೌರವಧ್ಯಕ್ಷ, ಬಿ.ಕೆ ಇಮ್ತಿಯಾಜ್ ಅವರು ಕೇಂದ್ರ ಮತ್ತು ರಾಜ್ಯ ಸರಕಾರಗಳು ಪೆಟ್ರೋಲ್ ಮತ್ತು ಡೀಸೆಲ್ ಮೇಲೆ ತೆರಿಗೆ ಹಾಕಿ ಜನ ಸಾಮಾನ್ಯರ ಜೇಬಿಗೆ ಕನ್ನ ಹಾಕಿದೆ. ಸಂಕಷ್ಟದಲ್ಲಿರುವ ಚಾಲಕರಿಗೆ ತೈಲ ಬೆಲೆ ಏರಿಕೆಯು ಗಾಯದ ಉಪ್ಪು ಸುರಿದಂತಾಗಿದೆ. ಚಾಲಕರ ದುಡಿಮೆಯು ಪೆಟ್ರೋಲ್ ಡೀಸೆಲ್ ಖರೀದಿಗೆ ಸಾಕಾಗುತ್ತಿಲ್ಲ. ಸಾಲದ ಕಂತು ಕಟ್ಟಲಾಗದ ಕಾರಣ ಕಾರುಗಳನ್ನು ಹಣಕಾಸು ಸಂಸ್ಥೆಗಳು ವಶಕ್ಕೆ ಪಡೆಯುತ್ತಿದೆ. ಇದೇ ಪರಿಸ್ಥಿತಿ ಮುಂದುವರಿದರೆ ಚಾಲಕರು ಸಾಮೂಹಿಕ ಆತ್ಮಹತ್ಯೆ ದಾರಿ ಹಿಡಿಯಬಹುದು ಎಂದರು.
ಇದನ್ನೂ ಓದಿ:ಬೆಳ್ತಂಗಡಿ: ಮರ ಕಡಿಯುವಾಗ ದಾರುಣ ಘಟನೆ; ಮೈಮೇಲೆ ಮರಬಿದ್ದು ಮೂವರು ಸಾವು
ಪ್ರತಿಭಟನೆಯಲ್ಲಿ ಸಂಘದ ಅಧ್ಯಕ್ಷರಾದ ಎನ್.ರವೀಂದ್ರ ಕಾವೂರು, ಮುಖಂಡರಾದ ರಾಕೇಶ್, ಕರುಣಾಕರ, ಕಲೀಮ್ ಮದನಿ, ವೈ ಶಿವ, ರಶೀದ್, ಮುಸ್ತಫಾ, ಅಲ್ತಾಫ್ ಉಳ್ಳಾಲ, ಮುಂತಾದವರು ಉಪಸ್ಥಿತರಿದ್ದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್ ಬೈಕ್ನಲ್ಲಿ 64ರ ಹಿರಿಯರ ಸಾಹಸ ಯಾನ
Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್
Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್ ಸಾವು
Mangaluru: ಗ್ರಾಮೀಣ ಭಾಗದಲ್ಲಿ ಬಗೆಹರಿಯದ “ಸ್ವಚ್ಛತೆ’ ಸಂಕಟ!
Mangaluru: ಕುಡಿಯುವ ನೀರಿನ ಕೊರತೆ, ಬೋಟ್, ಮಂಜುಗಡ್ಡೆ ಘಟಕಗಳಿಗೆ ಸಂಕಷ್ಟ