ಕರಾವಳಿ, ಕೊಡಗು ವಿದ್ಯಾರ್ಥಿಗಳಿಗೆ ದೂರ ಶಿಕ್ಷಣ ಇನ್ನಷ್ಟು “ದೂರ’
Team Udayavani, Dec 15, 2020, 11:33 PM IST
ಸಾಂದರ್ಭಿಕ ಚಿತ್ರ
ಮಂಗಳೂರು: ಕರ್ನಾಟಕ ಮುಕ್ತ ವಿಶ್ವವಿದ್ಯಾನಿಲಯ (ಕೆಎಸ್ಒಯು)ದಿಂದ ಮಾತ್ರ ದೂರ ಶಿಕ್ಷಣ ನೀಡಬೇಕೆಂಬ ಮಸೂದೆಗೆ ವಿಧಾನಸಭೆಯಲ್ಲಿ ಒಪ್ಪಿಗೆ ನೀಡಿರುವುದರಿಂದ ಕರಾವಳಿ, ಕೊಡಗು ಭಾಗದ ಅಂದಾಜು 6 ಸಾವಿರ ವಿದ್ಯಾರ್ಥಿಗಳಿಗೆ ಸಮಸ್ಯೆಯಾಗಲಿದೆ. ದೂರ ಶಿಕ್ಷಣಕ್ಕಾಗಿ ಕೆಎಸ್ಒಯುವನ್ನೇ ಅವಲಂಬಿಸಬೇಕಾದ ಅನಿವಾರ್ಯ ಎದುರಾಗಿದೆ.
ಮಸೂದೆ ಅಂಗೀಕಾರವಾಗಿರುವುದು ಮಾತ್ರವಲ್ಲದೆ ಕೆಎಸ್ಒಯು ಹೊರತುಪಡಿಸಿ ಬೇರೆ ಯಾವುದೇ ವಿ.ವಿ.ಯಿಂದ ದೂರಶಿಕ್ಷಣ ನೀಡಬಾರದು ಮತ್ತು ಹೊಸದಾಗಿ ದಾಖಲಾತಿ ಮಾಡಿಕೊಳ್ಳಬಾರದು ಎಂಬ ಸುತ್ತೋಲೆಯನ್ನು ಮಂಗಳೂರು ವಿ.ವಿ. ದೂರ ಶಿಕ್ಷಣ ಕೇಂದ್ರ ಸಹಿತ ವಿವಿಧ ವಿ.ವಿ.ಗಳಿಗೆ ಒಂದು ವರ್ಷ ಹಿಂದೆಯೇ ನೀಡಲಾಗಿದೆ.
6 ಸಾವಿರ ವಿದ್ಯಾರ್ಥಿಗಳು
ಮಂಗಳೂರು ವಿ.ವಿ. ದೂರ ಶಿಕ್ಷಣ ಕೇಂದ್ರದಡಿ ಪ್ರತೀ ವರ್ಷ ಅಂದಾಜು 5ರಿಂದ 6 ಸಾವಿರದಷ್ಟು ವಿದ್ಯಾರ್ಥಿಗಳು ದೂರಶಿಕ್ಷಣ ಪಡೆಯುತ್ತಾರೆ. ಪ್ರಸ್ತುತ ಬಿಎ, ಬಿಕಾಂ, ಎಂಎ, ಎಂಕಾಂ ಹಾಗೂ ಬಿಎಡ್ ಶಿಕ್ಷಣ ಸೇರಿ ಸುಮಾರು 6 ಸಾವಿರ ವಿದ್ಯಾರ್ಥಿಗಳು ಕಲಿಯುತ್ತಿದ್ದಾರೆ. ಬಿಎಡ್ನ ಸುಮಾರು 500 ವಿದ್ಯಾರ್ಥಿಗಳು ಇದ್ದಾರೆ. ಬಿಎಡ್ನಲ್ಲಿ ದೂರ ಶಿಕ್ಷಣಕ್ಕೆ ಹೆಚ್ಚಿನ ಬೇಡಿಕೆ ಬರುತ್ತಿದ್ದು, ಸರಕಾರದ ಹೊಸ ನಿಯಮದಿಂದಾಗಿ ವಿದ್ಯಾರ್ಥಿಗಳಿಗೆ ಸಮಸ್ಯೆಯಾಗಲಿದೆ.
ನಾಲ್ಕು ಕೇಂದ್ರಗಳು
ಮಂಗಳೂರು ಮುಕ್ತ ವಿಶ್ವವಿದ್ಯಾನಿಲಯದ ಪ್ರಾದೇಶಿಕ ಕೇಂದ್ರಗಳು ವಿಶ್ವವಿದ್ಯಾನಿಲಯ, ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜು, ಮಡಿಕೇರಿ ಮತ್ತು ಉಡುಪಿಗಳಲ್ಲಿ ಕಾರ್ಯ ನಿರ್ವಹಿಸುತ್ತಿವೆ. ಕೆಎಸ್ಒಯುವಿನ ಮಂಗಳೂರು ಪ್ರಾದೇಶಿಕ ಕೇಂದ್ರ ಚಿಲಿಂಬಿಯಲ್ಲಿದೆ.
ನಾಲ್ಕು ಕೇಂದ್ರಗಳು
ಮಂಗಳೂರು ಮುಕ್ತ ವಿಶ್ವವಿದ್ಯಾನಿಲಯದ ಪ್ರಾದೇಶಿಕ ಕೇಂದ್ರಗಳು ವಿಶ್ವವಿದ್ಯಾನಿಲಯ, ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜು, ಮಡಿಕೇರಿ ಮತ್ತು ಉಡುಪಿಗಳಲ್ಲಿ ಕಾರ್ಯ ನಿರ್ವಹಿಸುತ್ತಿವೆ. ಕೆಎಸ್ಒಯುವಿನ ಮಂಗಳೂರು ಪ್ರಾದೇಶಿಕ ಕೇಂದ್ರ ಚಿಲಿಂಬಿಯಲ್ಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pilikula; ಎ. 29, ಮೇ ತಿಂಗಳ ಎಲ್ಲ ಸೋಮವಾರವೂ ಪಿಲಿಕುಳ ಮುಕ್ತ
Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್ ಗೆಲುವು ಕಾಣುವಾಸೆ..
Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!
Mangaluru: ಬಾಲಕಿಯನ್ನು ಅಪಹರಿಸಿ ಅತ್ಯಾಚಾರ; ಅಪರಾಧಿಗೆ 10 ವರ್ಷ ಕಠಿನ ಕಾರಾಗೃಹ ಶಿಕ್ಷೆ
Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು
MUST WATCH
ಹೊಸ ಸೇರ್ಪಡೆ
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ
ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್ ಶೆಟ್ಟಿ ಬೆಳ್ಳಾರೆ
ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ