ಸಂಘಟನೆಗೆ ಕಾರ್ಯಕರ್ತರ ಶ್ರಮ ಅಗತ್ಯ: ಬಾಬುಶಾಸ್ತ 


Team Udayavani, Sep 24, 2018, 12:14 PM IST

24-sepctember-9.jpg

ಉಳ್ಳಾಲ: ಸಂಘಟನೆ ಬಲಿಷ್ಠವಾಗಿ ಕಾರ್ಯಾಚರಿಸಬೇಕಾದರೆ ಅದರ ಹಿಂದೆ ಸಂಘ ಕಟ್ಟಿ ಬೆಳೆಸಿದ ಅನೇಕ ಹಿರಿಯರ, ಕಾರ್ಯಕರ್ತರ ತ್ಯಾಗ ಪರಿಶ್ರಮವಿದೆ. ಇವರಿಂದಲೇ ಈ ಸಂಘಟನೆ ಬಲಿಷ್ಠವಾಗಿ ಬೆಳೆಯಲು ಸಾಧ್ಯವಾಗಿದೆ ಎಂದು ಶ್ರೀ ಧೂಮಾವತಿ ಬಂಟ ದೈವಸ್ಥಾನ ಭಂಡಾರ ಮನೆ ಬೆಳರಿಂಗೆ ಇದರ ಆಡಳಿತ ಮೊಕ್ತೇಸರ ಬಾಬುಶಾಸ್ತ ಕಿನ್ಯ ಅಭಿಪ್ರಾಯಪಟ್ಟರು.

ಮುನ್ನೂರು ಯುವಕ ಮಂಡಲ ಕುತ್ತಾರ ಪದವು ಇದರ ಸುವರ್ಣ ಮಹೋತ್ಸವದ ಅಂಗವಾಗಿ ದ.ಕ.ಜಿಲ್ಲಾ ಅಮೆಚೂರು ಬಾಡಿ ಬಿಲ್ಡಿಂಗ್‌ ಅಸೋಸಿಯೇಶನ್‌ ಸಹಕಾರದೊಂದಿಗೆ ಜಿಲ್ಲಾ ಮಟ್ಟದ ಬಾಡಿಬಿಲ್ಡಿಂಗ್‌ ಸ್ಪರ್ಧೆ ‘ಮಿಸ್ಟರ್‌ ಎಂವೈಎಂ’ಗೆ ಚಾಲನೆ ನೀಡಿ ಅವರು ಮಾತನಾಡಿದರು. ಈ ಹಿಂದೆ ಕುಗ್ರಾಮವಾಗಿದ್ದ ಈ ಪ್ರದೇಶದಲ್ಲಿ ಸಂಘಟನೆಯನ್ನು ಕಟ್ಟಿ ಬೆಳೆಸುವ ಕಾರ್ಯ ಮಹತ್ವದ್ದು,ಇದರೊಂದಿಗೆ ಸಮಾಜಮುಖಿ ಕಾರ್ಯಗಳೊಂದಿಗೆ ಮುನ್ನಡೆಯುತ್ತಿರುವುದು, ಸುವರ್ಣ ಮಹೋತ್ಸವದ ಅಂಗವಾಗಿ ವರ್ಷವಿಡೀ ಸಮಾಜಮುಖಿ ಕಾರ್ಯಕ್ರಮ ಶ್ಲಾಘನೀಯ ಎಂದರು.

ಸಮಾಜಮುಖಿ  ಕಾರ್ಯ ಜಾತ್ಯತೀತ ಜನತಾದಳದ ಜಿಲ್ಲಾ ಕಾರ್ಯದರ್ಶಿ ಹೈದರ್‌ ಪರ್ತಿಪ್ಪಾಡಿ ಅಧ್ಯಕ್ಷತೆ ವಹಿಸಿ, ಸಂಘಟನೆಗಳು ಸಮಾಜಮುಖಿ ಕಾರ್ಯಗಳನ್ನು ಅಳವಡಿಸಿದಾಗ ಜನರು ಬೆಂಬಲಿಸುತ್ತಾರೆ ಎನ್ನುವುದಕ್ಕೆ ಮುನ್ನೂರು ಯುವಕ ಮಂಡಲ ಸಾಕ್ಷಿಯಾಗಿದ್ದು, ಹಿರಿಯ ಮಾರ್ಗದರ್ಶನದಲ್ಲಿ ಯುವ ಜನರು ಈ ಸಂಘಟನೆಯನ್ನು ಮುನ್ನಡೆಸು ತ್ತಿರುವುದು ಶ್ಲಾಘನೀಯ ಎಂದರು. ಏಕಲವ್ಯ ಪ್ರಶಸ್ತಿ ಪುರಸ್ಕೃತ ಅಂತಾರಾಷ್ಟ್ರೀಯ ದೇಹದಾರ್ಡ್ಯ ಪಟು ರೋಶನ ಫೆರಾವೋ, ಕುತ್ತಾರು ಶ್ರೀ ವೀರಾಂಜನೇಯ ವ್ಯಾಯಾಮ ಶಾಲೆಯ ಅಧ್ಯಕ್ಷ ದಿವ್ಯನ್‌ ತೇವುಲ, ಕುತ್ತಾರು ಶ್ರೀ ರಾಮ ವೀರಾಂಜನೇಯ ವ್ಯಾಯಾಮ ಶಾಲೆಯ ಅಧ್ಯಕ್ಷ ಚರಣ್‌ ಕುತ್ತಾರು, ರಾಜ್ಯಮಟ್ಟದ ಪವರ್‌ ಲಿಫ್ಟರ್‌ ಬಾಲಕೃಷ್ಣ ಕುಲಾಲ್‌, ದೇರಳಕಟ್ಟೆಯ ಯೇನಪೊಯ ವಿವಿಯ ವ್ಯಾಯಾಮ ತರಬೇತುದಾರ ರಾಮಕೃಷ್ಣ ಮುಖ್ಯ ಅತಿಥಿಗಳಾಗಿದ್ದರು. ಮುನ್ನೂರು ಯುವಕ ಮಂಡಲದಸುವರ್ಣ  ಮಹೋತ್ಸವ ಸಮಿತಿ ಅಧ್ಯಕ್ಷ ಶಶೀಂದ್ರ ಕುಕ್ಯಾನ್‌, ಕೋಶಾಧಿಕಾರಿ ಭೋಜ ಶೆಟ್ಟಿ, ಪ್ರ. ಕಾರ್ಯದರ್ಶಿ ಚಂದ್ರಹಾಸ್‌, ಜತೆ ಕಾರ್ಯದರ್ಶಿ ರೋಹಿತ್‌ ಕುತ್ತಾರು, ಕ್ರೀಡಾ ಕಾರ್ಯದರ್ಶಿಗಳಾದ ಗಣೇಶ್‌ ಪ್ರಸಾದ್‌, ಮೋಹನ್‌ದಾಸ್‌ ಉಪಸ್ಥಿತರಿದ್ದರು. ಸುವರ್ಣ ಮಹೋತ್ಸವ ಸಮಿತಿ ಉಪಾಧ್ಯಕ್ಷ ಐತ್ತಪ್ಪ ಸ್ವಾಗತಿಸಿದರು. ಗೌರವಾಧ್ಯಕ್ಷ ಹರೀಶ್‌ ಮುಂಡೋಳಿ ವಿವರ ನೀಡಿದರು. ಸಲಹೆಗಾರ ಕೃಷ್ಣಪ್ಪ ಸಾಲ್ಯಾನ್‌ ಪ್ರಸ್ತಾವನೆಗೈದರು. ಕಾರ್ಯಕಾರಿ ಸಮಿತಿ ಸದಸ್ಯರಾದ ಮನೋಹರ್‌ ನಿರ್ವಹಿಸಿದರು. ವಸಂತ ವಂದಿಸಿದರು.

ಕ್ರೀಡೆಯಲ್ಲಿ ತೊಡಗಿಸಿ
ಮುಖ್ಯ ಅತಿಥಿಯಾಗಿ ಭಾಗವಹಿಸಿದ ಏಕಲವ್ಯ ಪ್ರಶಸ್ತಿ ಪುರಸ್ಕೃತ ಅಂತಾರಾಷ್ಟ್ರೀಯ ದೇಹದಾರ್ಡ್ಯ ಪಟು ಭಾಸ್ಕರ ತೊಕ್ಕೊಟ್ಟು ಮಾತನಾಡಿ, ಆರೋಗ್ಯದೊಂದಿಗೆ ಸದೃಡ ಸಮಾಜ ನಿರ್ಮಾಣದಲ್ಲಿ ದೇಹ ದಾರ್ಡ್ಯ ಅತ್ಯಂತ ಅಗತ್ಯವಾಗಿದ್ದು, ಇಂದಿನ ಯುವಜನರು ಇಂತಹ ಸಂಘಟನೆಗಳ ಮೂಲಕ ವಿವಿಧ ಕ್ರೀಡೆಗಳಲ್ಲಿ ತೊಡಗಿಸಿಕೊಳ್ಳಬೇಕು ಎಂದು ಅವರು ಹೇಳಿದರು. 

ಟಾಪ್ ನ್ಯೂಸ್

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

1-RR

Modi ಹಾವಿನ ರೀತಿಯಲ್ಲಿ ರೈತರ ವಿರುದ್ಧ ಸೇಡಿಗೆ ಕಾಯ್ತಿದ್ದಾರೆ: ರೇವಂತ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.