ದ.ಕ.:11 ಸಾವು, 493 ಮಂದಿಗೆ ಸೋಂಕು
Team Udayavani, Oct 2, 2020, 1:36 AM IST
ಸಾಂದರ್ಭಿಕ ಚಿತ್ರ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗುರುವಾರ 493 ಮಂದಿಗೆ ಕೊರೊನಾ ದೃಢಪಟ್ಟಿದ್ದು, ಜಿಲ್ಲೆಯಲ್ಲಿ ಕಳೆದ ಆರು ತಿಂಗಳ ಅವಧಿಯಲ್ಲೇ ಇದೇ ಮೊದಲ ಬಾರಿಗೆ ಇಷ್ಟೊಂದು ಸಂಖ್ಯೆಯಲ್ಲಿ ಸೋಂಕು ಪತ್ತೆಯಾಗಿದೆ. ಇದೇ ವೇಳೆ 11 ಮಂದಿ ಮೃತಪಟ್ಟಿದ್ದಾರೆ.
ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನೇದಿನೇ ಏರಿಕೆಯಾಗುತ್ತಿದೆ. ಕಳೆದ ಕೆಲವು ದಿನಗಳಿಂದ ಪ್ರತಿದಿನ 200ಕ್ಕೂ ಹೆಚ್ಚು ಮಂದಿಗೆ ಸೋಂಕು ದೃಢಗೊಳ್ಳುತ್ತಿದೆ. ಒಂದೇ ದಿನ 493 ಮಂದಿಗೆ ಸೋಂಕು ತಗಲಿರುವುದು ಆತಂಕಕ್ಕೆ ಕಾರಣವಾಗಿದೆ.
ಈವರೆಗೆ ಜಿಲ್ಲೆಯಲ್ಲಿ 23,429 ಮಂದಿಗೆ ಕೊರೊನಾ ದೃಢಪಟ್ಟಿದ್ದು, 545 ಮಂದಿ ಸಾವನ್ನಪ್ಪಿದ್ದಾರೆ. 17,088 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ. ಸದ್ಯ 5,806 ಮಂದಿ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಗ್ರಾಮ ಮಟ್ಟದಲ್ಲಿ ಪರೀಕ್ಷೆ
ದ.ಕ. ಜಿಲ್ಲಾ ಪಂ. ಸೋಮವಾರದಿಂದ ಪ್ರತಿ ಗ್ರಾಪಂ ಮಟ್ಟದಲ್ಲಿ ಕೊರೊನಾ ಪರೀಕ್ಷೆ ಹಮ್ಮಿಕೊಂಡಿದ್ದು, ಗುರುವಾರ ಜಿಲ್ಲೆಯಲ್ಲಿ 175 ಮಂದಿಗೆ ಕೊರೊನಾ ದೃಢಪಟ್ಟಿದೆ. ಜಿಲ್ಲೆಯ ವಿವಿಧ ಗ್ರಾ. ಪಂ.ಗಳ ವ್ಯಾಪ್ತಿ, ವೆನ್ಲಾಕ್ ಆಸ್ಪತ್ರೆ ಮತ್ತು ಖಾಸಗಿ ಲ್ಯಾಬ್ಗಳಲ್ಲಿ ಒಟ್ಟು 3,927 ಮಂದಿ ಪರೀಕ್ಷೆ ಮಾಡಿಸಿಕೊಂಡಿದ್ದರು. ಈ ಪೈಕಿ ಮಂಗಳೂರು ತಾಲೂಕಿನ ಗ್ರಾಪಂ ವ್ಯಾಪ್ತಿಯಲ್ಲಿ 710 ಮಂದಿಗೆ ರ್ಯಾಟ್ (62 ದೃಢ), 411 ಮಂದಿಗೆ ಆರ್ಟಿಪಿಸಿಆರ್ ಪರೀಕ್ಷೆ ಮಾಡಲಾಗಿದೆ. ಸುಳ್ಯದಲ್ಲಿ 159 ಮಂದಿ ರ್ಯಾಟ್ (15 ದೃಢ), 86 ಆರ್ಟಿಪಿಸಿಆರ್, ಬೆಳ್ತಂಗಡಿಯಲ್ಲಿ 436 ರ್ಯಾಟ್ (18 ದೃಢ), 85 ಆರ್ಟಿಪಿಸಿಆರ್, ಪುತ್ತೂರಿನಲ್ಲಿ 427 ರ್ಯಾಟ್ (39 ದೃಢ), 49 ಆರ್ಟಿಪಿಸಿಆರ್, ಬಂಟ್ವಾಳದಲ್ಲಿ 484 ರ್ಯಾಟ್ (21 ದೃಢ), 352 ಆರ್ಟಿಪಿಸಿಆರ್ ಪರೀಕ್ಷೆ ನಡೆಸಲಾಗಿದೆ.
ಇದಲ್ಲದೆ ವೆನ್ಲಾಕ್ ಆಸ್ಪತ್ರೆಯಲ್ಲಿ 35 ರ್ಯಾಟ್ (19 ದೃಢ), 34 ಆರ್ಟಿಪಿಸಿಆರ್, ಎಲ್ಜಿಎಚ್ಗಳಲ್ಲಿ 24 ರ್ಯಾಟ್ (0 ದೃಢ) ಪರೀಕ್ಷೆ ನಡೆಸಲಾಗಿದೆ. ಅಲ್ಲದೆ, ಕೆಲವು ಖಾಸಗಿ ಲ್ಯಾಬ್ಗಳಲ್ಲಿಯೂ ಮಾಡಿರುವ ಪರೀಕ್ಷೆ ಸೇರಿ ಒಟ್ಟು 3927 ಮಂದಿ ಬುಧವಾರ ಕೊರೊನಾ ಪರೀಕ್ಷೆ ಮಾಡಿಸಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ