ಒಳಚರಂಡಿ,ಕುಡಿಯುವನೀರು,ಘನತ್ಯಾಜ್ಯನಿರ್ವಹಣೆ ಯಶಸ್ವಿ: ಜೆ.ಆರ್‌.ಲೋಬೋ


Team Udayavani, May 10, 2018, 12:31 PM IST

10-May-11.jpg

ಮಹಾನಗರ: ವಿದ್ಯುತ್‌ ಸಬ್‌ ಸ್ಟೇಷನ್‌ಗಳ ನಿರ್ಮಾಣ, ನಗರದ ವಿದ್ಯುತ್‌ ಸಮಸ್ಯೆಗಳ ನಿವಾರಣೆ, ಮುಖ್ಯ ಭಾಗಗಳಲ್ಲಿ ಭೂಗತ ವಿದ್ಯುತ್‌ ಕೇಬಲ್‌ಗ‌ಳನ್ನು ಅಳವಡಿಸಿ ಮಂಗಳೂರನ್ನು ಅತ್ಯಾಧುನಿಕ ರೀತಿಯಲ್ಲಿ ಸಜ್ಜುಗೊಳಿಸಲಾಗಿದೆ. ಭವ್ಯ ಮಂಗಳೂರಿನ ನಿರ್ಮಾಣ ನನ್ನ ಸಂಕಲ್ಪ ಎಂದು ಮಂಗಳೂರು ದಕ್ಷಿಣ ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ, ಹಾಲಿ ಶಾಸಕ ಜೆ.ಆರ್‌. ಲೋಬೋ ತಿಳಿಸಿದ್ದಾರೆ.

ಅವರು ಕಾಂಗ್ರೆಸ್‌ ವತಿಯಿಂದ ಮಂಗಳೂರಿನ ನಾನಾ ಕಡೆ ಕಾಂಗ್ರೆಸ್‌ ಪ್ರಚಾರ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.

ರಾಜ್ಯ ಸರಕಾರದ 10 ಕೋಟಿ ರೂ. ವೆಚ್ಚದಲ್ಲಿ ಎ.ಬಿ. ಶೆಟ್ಟಿ ವೃತ್ತದಿಂದ ಕರಾವಳಿ ವೃತ್ತದವರೆಗೆ ಹಾಗೂ ಕದ್ರಿ ದೇವಸ್ಥಾನ ರಸ್ತೆಯಲ್ಲಿ ಭೂಗತ ಕೇಬಲ್‌ ಅಳವಡಿಸಲಾಗಿದೆ. ಈಗ ನಗರದ ಉಳಿದ ಪ್ರದೇಶಗಳಲ್ಲೂ ಇದನ್ನು ವಿಸ್ತರಿಸಲು 182 ಕೋಟಿ ರೂ. ವೆಚ್ಚದಲ್ಲಿ ಈ ಯೋಜನೆಗೆ ಮಂಜೂರಾತಿ ಪಡೆದು, ಟೆಂಡರ್‌ ಕರೆಯಲಾಗಿದ್ದು, ಶೀಘ್ರದಲ್ಲೇ ಕೆಲಸ ಆರಂಭಗೊಳ್ಳಲಿದೆ ಎಂದರು.

ಎಡಿಬಿ 1ನೇ ಯೋಜನೆಯಲ್ಲಿ ಸುಮಾರು 350 ಕೋಟಿ ರೂ. ನಗರಕ್ಕೆ ಬಂದಿತ್ತು. ಇದರಲ್ಲಿ ನೀರಿನ ಸರಬರಾಜು, ಒಳಚರಂಡಿ, ಘನತ್ಯಾಜ್ಯ ನಿರ್ವಹಣೆ, ರಸ್ತೆಗಳ ಅಭಿವೃದ್ಧಿ ಇತ್ಯಾದಿ ಕೆಲಸ ನಿರ್ವಹಿಸಲಾಯಿತು. ಆದರೆ ಅನುದಾನದ ಕೊರತೆಯಿಂದ ಒಳಚರಂಡಿ ಹಾಗೂ ಕುಡಿಯುವ ನೀರಿನ ವ್ಯವಸ್ಥೆ ನಿರೀಕ್ಷಿತ ರೀತಿಯಲ್ಲಿ ನಡೆಯಲಿಲ್ಲ. ಅದಕ್ಕಾಗಿ ಎಡಿಬಿ 2ನೇ ಯೋಜನೆಯಲ್ಲಿ ಸುಮಾರು 600 ಕೋಟಿ ರೂ. ಅನ್ನು ಮಂಜೂರು ಮಾಡಿಸಿದ್ದೇನೆ ಎಂದರು.

ಈ ಮೂಲಕ ನಗರದಲ್ಲಿ ಕುಡಿಯುವ ನೀರು ಹಾಗೂ ಒಳಚರಂಡಿ ವ್ಯವಸ್ಥೆಯಲ್ಲಿ ಸುಧಾರಣೆ ತರಲಾಗುವುದು. ಶಿವಭಾಗ್‌, ಶಕ್ತಿನಗರ, ಜಪ್ಪಿನಮೊಗರು, ಪಡೀಲು, ಬಜಾಲ್‌ ಇತ್ಯಾದಿ ಪ್ರದೇಶಗಳ ಒಳಚರಂಡಿಗೆ ಮನೆ ಸಂಪರ್ಕ ಕಲ್ಪಿಸಲಿದ್ದೇವೆ. ಜೆಪ್ಪಿನಮೊಗರು ತ್ಯಾಜ್ಯ ನಿರ್ವಹಣ ಘಟಕ ಹಾಗೂ ಅದರ ವೆಟ್‌ ವೆಲ್‌ಗ‌ಳು ಕಾರ್ಯಾರಂಭಗೊಂಡಿವೆ ಎಂದರು.

ಎಡಿಬಿ 2ನೇ ಮತ್ತು ಅಮೃತ್‌ ಯೋಜನೆಯಲ್ಲಿ ಹಾಗೂ ಎಡಿಬಿ 1ನೇ ಯೋಜನೆಯಲ್ಲಿ ಬಿಟ್ಟು ಹೋಗಿರುವ ಪ್ರದೇಶಗಳಲ್ಲಿ ಹೊಸ ಸಂಪರ್ಕ ಜಾಲ ಹರಿಯುತ್ತಿದೆ. ನಗರದ ಹಳೆ ಚರಂಡಿ ವ್ಯವಸ್ಥೆಯನ್ನು ಸರಿಪಡಿಸಿ ತೆರೆದ ಮಳೆ ನೀರು ಚರಂಡಿಗಳಲ್ಲಿ ಒಳಚರಂಡಿ ತ್ಯಾಜ್ಯ ಹರಿಯುವುದನ್ನು ಪೂರ್ಣವಾಗಿ ನಿಲ್ಲಿಸುವುದು ನನ್ನ ಗುರಿ ಎಂದು ಅವರು ತಿಳಿಸಿದರು.

ಎಡಿಬಿ 1ನೇ ಯೋಜನೆಯಡಿಯಲ್ಲಿ ಶಕ್ತಿನಗರ, ಅಳಪೆ, ಪಡೀಲು, ಬಜಾಲ್‌, ಜಪ್ಪಿನಮೊಗರು ಪ್ರದೇಶಗಳಿಗೆ ಒಳಚರಂಡಿ ವ್ಯವಸ್ಥೆ ಕಲ್ಪಿಸಲಾಗಿದೆ. ಬಿಟ್ಟು ಹೋಗಿರುವ ಪ್ರದೇಶಗಳಲ್ಲಿ 2ನೇ ಎಡಿಬಿ ಯೋಜನೆಯಡಿಯಲ್ಲಿ ಒಳಚರಂಡಿ ಕಲ್ಪಿಸಲಾಗುವುದು. ಕೇಂದ್ರ ಹಾಗೂ ರಾಜ್ಯದ ಸಮಪಾಲಿನೊಂದಿಗೆ 200 ಕೋ. ರೂ.ಗಳನ್ನು ಅಮೃತ್‌ ಯೋಜನೆಯಲ್ಲಿ ಮಂಜೂರುಗೊಳಿಸಲಾಗಿದೆ. ಎಡಿಬಿ 2ನೇ ಯೋಜನೆ ಹಾಗೂ ಅಮೃತ್‌ ಯೋಜನೆಯಲ್ಲಿ 600 ಕೋ.ರೂ. ವನ್ನು ಕುಡಿಯುವ ನೀರು ಹಾಗೂ ಒಳಚರಂಡಿಗೆ ನಿಯೋಗಿಸಲಾಗುವುದು ಎಂದು ಭರವಸೆ ನೀಡಿದರು.

ನನ್ನ ಅವಧಿಯಲ್ಲಿ ಮಂಗಳೂರು ಅಭಿವೃದ್ಧಿಗೊಂಡಿದ್ದು, ಮತದಾರರು ಮತ್ತೂಮ್ಮೆ ಹರಸಿದರೆ ನಗರದ ಸರ್ವತೋಮುಖ ಬೆಳವಣಿಗೆಗೆ ಕ್ರಮ ಕೈಗೊಳ್ಳಲಾಗುವುದು. ನಗರದಲ್ಲಿ ಬಂಡವಾಳ ಹೂಡಿಕೆಯ ಆಕರ್ಷಣೆ, ಕಾನೂನೂ- ಸುವ್ಯವಸ್ಥೆ ಪಾಲನೆ, ನಗರದದ ಹಸುರೀಕರಣಕ್ಕೆ ಒತ್ತು, ಮೀನುಗಾರಿಕೆ, ಶಿಕ್ಷಣ, ಆಸ್ಪತ್ರೆ, ಕ್ರೀಡೆ, ಪ್ರವಾಸ, ಧಾರ್ಮಿಕ ಸಾಮರಸ್ಯ, ಬಡವರ ಏಳಿಗೆ, ಆಶ್ರಯ ಮನೆಗಳ ನಿರ್ಮಾಣ ಕಾರ್ಯಕ್ಕೆ ಒತ್ತು ನೀಡಲಾಗುವುದು. ಪಿಲಿಕುಳದಲ್ಲಿ 36 ಕೋಟಿ ರೂ. ವೆಚ್ಚದಲ್ಲಿ 3ಡಿ ಪ್ಲಾನಟೋರಿಯಂ ರಚಿಸಿ ಪಿಲಿಕುಳದ ಸಮಗ್ರ ಅಭಿವೃದ್ಧಿ, ಕದ್ರಿಯಲ್ಲಿ ಸಂಗೀತ ರಸ ಸಂಜೆ ರಚಿಸಲಾಗುವುದು ಎಂದು ನುಡಿದರು.

ಕಸದಿಂದ ವಿದ್ಯುತ್‌!
ಯಾವುದೇ ನಗರಗಳಲ್ಲಿ ಘನ ತ್ಯಾಜ್ಯ ನಿರ್ವಹಣೆ ಒಂದು ಸಮಸ್ಯೆಯಾಗಿದ್ದು, ನಗರದಲ್ಲಿ ಇದಕ್ಕೆ ಪರಿಹಾರ ಹುಡುಕಲಾಗಿದೆ. ಮನೆಮನೆಯಿಂದ ಕಸ ಸಂಗ್ರಹಣೆಯಿಂದ ‘ತೊಟ್ಟಿ ರಹಿತ ನಗರ’ ಕಾರ್ಯಕ್ರಮ ಯಶಸ್ವಿಯಾಗಿದೆ. ಇತರ ನಗರಕ್ಕೆ ಹೋಲಿಸಿದರೆ ಮಂಗಳೂರು ಸ್ವಚ್ಛವಾಗಿದೆ. ಕಸ ವಿಂಗಡಿಸಿ ಪಚ್ಚನಾಡಿಯಲ್ಲಿ ಕಸ ಸಂಸ್ಕರಣೆ ಮಾಡಿಸುವುದು ನನ್ನ ಗುರಿ. ಕಸದಿಂದ ವಿದ್ಯುತ್‌ ಉತ್ಪಾದಿಸಲು ಸಾಧಕಬಾಧಕಗಳನ್ನು ಪರಿಶೀಲಿಸಲಾಗುವುದು ಎಂದು ಲೋಬೋ ಹೇಳಿದ್ದಾರೆ. 

ಟಾಪ್ ನ್ಯೂಸ್

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

19

Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್‌

BCCI instructions to share photos of the IPL match day ground!

IPL 2024 ಪಂದ್ಯ ದಿನ ಮೈದಾನದ ಫೋಟೋ ಹಂಚದಂತೆ ಬಿಸಿಸಿಐ ಸೂಚನೆ!

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

ಹೊಸ ಸೇರ್ಪಡೆ

5-shirva

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇವಸ್ಥಾನ

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

4-health

Nutritional Foods: ಹದಿಹರಯದಲ್ಲಿ ಪೌಷ್ಟಿಕಾಂಶ ಅಗತ್ಯಗಳು

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.