5 ಬಸ್‌ ತಂಗುದಾಣಗಳಲ್ಲಿ ಕುಡಿಯುವ ನೀರಿನ ವ್ಯವಸ್ಥೆ

ಖಾಸಗಿ ಸಂಸ್ಥೆಗಳ ಸಹಭಾಗಿತ್ವದಲ್ವಿ ಮಹತ್ವದ ಯೋಜನೆ

Team Udayavani, May 27, 2022, 11:15 AM IST

drinking-water1

ಮಹಾನಗರ: ಪಾಲಿಕೆ ವ್ಯಾಪ್ತಿಯ ಹೆಚ್ಚು ಜನಸಂದಣಿ ಇರುವ 5 ಬಸ್‌ತಂಗುದಾಣಗಳಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸುವ ಮಹತ್ವದ ಯೋಜನೆ ಖಾಸಗಿ ಸಂಸ್ಥೆಗಳ ಸಹಭಾಗಿತ್ವದಲ್ಲಿ ಈಗ ಸಾಕಾರಗೊಳ್ಳುತ್ತಿದೆ.

‘ಬಸ್‌ ತಂಗುದಾಣಗಳಲ್ಲಿ ನೆರಳಿದೆ- ನೀರಿರಲಿ’ ಎಂಬ ಶೀರ್ಷಿಕೆಯೊಂದಿಗೆ ಉದಯವಾಣಿ ‘ಸುದಿನ’ ಎ. 8ರಂದು ವಿಶೇಷ ವರದಿಯನ್ನು ಪ್ರಕಟಿಸಿತ್ತು. ನಗರದ ವಿವಿಧ ಬಸ್‌ ತಂಗುದಾಣಗಳಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಅಳವಡಿಸುವ ನೆಲೆಯಲ್ಲಿ ವರದಿ ಪ್ರಕಟವಾಗಿತ್ತು.

ದ.ಕ. ಆಟೋಮೊಬೈಲ್‌ ಆ್ಯಂಡ್‌ ಟಯರ್‌ ಡೀಲರ್ ಅಸೋಸಿ ಯೇಶನ್‌ ನೇತೃತ್ವದಲ್ಲಿ ಮಂಗಳೂರು ಮಹಾನಗರ ಪಾಲಿಕೆಯ ಸಹಕಾರದಿಂದ 5 ಕಡೆಯ ಬಸ್‌ ತಂಗುದಾಣಗಳಲ್ಲಿ ಕುಡಿಯುವ ನೀರು ಸಂಪರ್ಕ ಯೋಜನೆ ಅನುಷ್ಠಾನವಾಗುತ್ತಿದೆ. ಲೇಡಿಗೋಶನ್‌ ಮುಂಭಾಗದ ಬಸ್‌ನಿಲ್ದಾಣ, ಹಂಪನಕಟ್ಟೆ ವಿ.ವಿ. ಕಾಲೇಜಿನ ಮುಂಭಾಗ, ಬಂಟ್ಸ್‌ಹಾಸ್ಟೆಲ್‌ ಬಸ್‌ ನಿಲ್ದಾಣ, ಎಂ.ಜಿ.ರಸ್ತೆಯ ಟಿಎಂಎ ಪೈ ಸಭಾಂಗಣ ಮುಂಭಾಗ, ಪಾಲಿಕೆ ಕಚೇರಿ ಮುಂಭಾಗ ಈ ವ್ಯವಸ್ಥೆಯನ್ನು ಮಾಡಲಾಗಿದೆ. ಲೇಡಿಹಿಲ್‌, ಪಂಪ್‌ ವೆಲ್‌ ಸಹಿತ ಇತರ ಕಡೆಗಳಲ್ಲಿಯೂ ನೀರಿನ ವ್ಯವಸ್ಥೆ ಕಲ್ಪಿಸುವ ಬಗ್ಗೆ ಚಿಂತಿಸಲಾಗಿದೆ.

ಒಂದೆರಡು ದಿನದಲ್ಲಿ ಉದ್ಘಾಟನೆ

5 ಬಸ್‌ ನಿಲ್ದಾಣಗಳಲ್ಲಿ ತಲಾ 75 ಲೀ. ಸಾಮರ್ಥ್ಯದ ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗಿದೆ. ಕುಡಿಯುವ ನೀರಿನ ಯಂತ್ರ, ಮುಂದಿನ ನಿರ್ವಹಣೆಯನ್ನು ದ.ಕ. ಆಟೋಮೊಬೈಲ್‌ ಆ್ಯಂಡ್‌ ಟಯರ್‌ ಡೀಲರ್‌ ಅಸೋಸಿಯೇಶನ್‌ ನಡೆಸಲಿದ್ದು, ನೀರು, ವಿದ್ಯುತ್‌ ಸಂಪರ್ಕವನ್ನು ಪಾಲಿಕೆ ನಡೆಸಿದೆ. ಒಂದೆರಡು ದಿನದಲ್ಲಿ ಉದ್ಘಾಟನೆ ನಡೆಯಲಿದೆ’ ಎನ್ನುತ್ತಾರೆ ಅಸೋಸಿಯೇಶನ್‌ನ ಸಮಿತಿ ಪ್ರಮುಖರಾದ ರತ್ನಾಕರ ಪೈ.

ಕುಡಿಯುವ ನೀರಿನ ವ್ಯವಸ್ಥೆಗೆ ಕ್ರಮ

ಉದಯವಾಣಿ ಸುದಿನ ಪ್ರಕಟಿಸಿರುವ ವರದಿಯ ಆಧಾರದಲ್ಲಿ ನಗರದ ವಿವಿಧ ಬಸ್‌ತಂಗುದಾಣದಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಲು ಆದ್ಯತೆ ನೀಡಲಾಗಿದೆ. ಇದರ ಪ್ರಾರಂಭಿಕ ನೆಲೆಯಲ್ಲಿ ದ.ಕ. ಆಟೋಮೊಬೈಲ್‌ ಆ್ಯಂಡ್‌ ಟಯರ್‌ ಡೀಲರ್ ಅಸೋಸಿಯೇಶನ್‌ ವತಿಯಿಂದ 5 ಕಡೆಗಳಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಲಾಗಿದೆ. ಮುಂದೆ ಇನ್ನಷ್ಟು ಕಡೆ ಪ್ರತ್ಯೇಕವಾಗಿ ಮಾಡಲು ಕ್ರಮ ಕೈಗೊಳ್ಳಲಾಗುವುದು. ಪ್ರೇಮಾನಂದ ಶೆಟ್ಟಿ, ಮೇಯರ್‌, ಮಹಾನಗರ ಪಾಲಿಕೆ

ಸುದಿನ ವರದಿ ಪರಿಗಣಿಸಿ ನೀರಿನ ವ್ಯವಸ್ಥೆ

ಬಸ್‌ನಿಲ್ದಾಣದಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಇದ್ದರೆ ಉತ್ತಮ ಎಂಬ ಉದಯವಾಣಿ ಸುದಿನ ವರದಿಯನ್ನು ಪರಿಗಣಿಸಿ, ಜನರಿಗೆ ಅನುಕೂಲವಾಗುವ ನೆಲೆಯಲ್ಲಿ ಕುಡಿಯುವ ನೀರಿನ ವ್ಯವಸ್ಥೆಯನ್ನು ಕಲ್ಪಿಸಿದ್ದೇವೆ. ಕಸ್ತೂರಿ ಪ್ರಭಾಕರ ಪೈ, ಅಧ್ಯಕ್ಷರು, ದ.ಕ. ಆಟೋಮೊಬೈಲ್‌ ಆ್ಯಂಡ್‌ ಟಯರ್‌ ಡೀಲರ್‌ ಅಸೋಸಿಯೇಶನ್‌

ಟಾಪ್ ನ್ಯೂಸ್

1-eewqewq

UNICEF ಇಂಡಿಯಾಗೆ ಕರೀನಾ ಕಪೂರ್‌ ರಾಯಭಾರಿ

MOdi (3)

Next 5 years ಭ್ರಷ್ಟರಿಗೆ ತಕ್ಕ ಶಾಸ್ತಿ, ನನ್ನ ಬಳಿ ಸ್ವಂತ ಮನೆ ಯೂ ಇಲ್ಲ: ಮೋದಿ

mamata

Sandeshkhali ಪ್ರಕರಣ ಬಿಜೆಪಿಯದ್ದೇ ಪಿತೂರಿ: ಸಿಎಂ ಮಮತಾ ಆಕ್ರೋಶ

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

ಮಂಗಳೂರಿನಲ್ಲಿ ಜನಾಕರ್ಷಣೆ ಕೇಂದ್ರವಾದ ರ್‍ಯಾಂಬೊ ಸರ್ಕಸ್‌

ಮಂಗಳೂರಿನಲ್ಲಿ ಜನಾಕರ್ಷಣೆ ಕೇಂದ್ರವಾದ ರ್‍ಯಾಂಬೊ ಸರ್ಕಸ್‌

Kapu ಪಿಲಿ ಕೋಲ ಸಂಪನ್ನ; ಓರ್ವನನ್ನು ಸ್ಪರ್ಶಿಸಿದ ಪಿಲಿ!

Kapu ಪಿಲಿ ಕೋಲ ಸಂಪನ್ನ; ಓರ್ವನನ್ನು ಸ್ಪರ್ಶಿಸಿದ ಪಿಲಿ!

Surathkal ಸೂರಿಂಜೆ ಮೂಡುಬೆಟ್ಟು; ಅಣೆಕಟ್ಟು ಕುಸಿತ, ಕೃಷಿಕರು ಕಂಗಾಲು

Surathkal ಸೂರಿಂಜೆ ಮೂಡುಬೆಟ್ಟು; ಅಣೆಕಟ್ಟು ಕುಸಿತ, ಕೃಷಿಕರು ಕಂಗಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಂಗಳೂರಿನಲ್ಲಿ ಜನಾಕರ್ಷಣೆ ಕೇಂದ್ರವಾದ ರ್‍ಯಾಂಬೊ ಸರ್ಕಸ್‌

ಮಂಗಳೂರಿನಲ್ಲಿ ಜನಾಕರ್ಷಣೆ ಕೇಂದ್ರವಾದ ರ್‍ಯಾಂಬೊ ಸರ್ಕಸ್‌

mangalore international airport

Mangaluru; ವಿಮಾನ ನಿಲ್ದಾಣದಲ್ಲಿ ಬಾಂಬ್ ಸ್ಪೋಟ ಬೆದರಿಕೆ; ಪೊಲೀಸ್ ಭದ್ರತೆ

CRZ ಮರಳು ಇನ್ನು ಸದ್ಯಕ್ಕೆ ಮರೀಚಿಕೆ

ಸಿಆರ್‌ಝಡ್‌ ಮರಳು ಇನ್ನು ಸದ್ಯಕ್ಕೆ ಮರೀಚಿಕೆ

Kinnigoli: ಕಾಂತಬಾರೆ-ಬೂದಬಾರೆಯರ ತೊಟ್ಟಿಲು ಕಟ್ಟಿದ್ದ ಮರ ಇನ್ನಿಲ್ಲ!

Kinnigoli: ಕಾಂತಬಾರೆ-ಬೂದಬಾರೆಯರ ತೊಟ್ಟಿಲು ಕಟ್ಟಿದ್ದ ಮರ ಇನ್ನಿಲ್ಲ!

bjpRoad Mishap ಉಳ್ಳಾಲ: ಬಿಜೆಪಿ ಕಾರ್ಯಕರ್ತ ಸಾವು

Road Mishap ಉಳ್ಳಾಲ: ಬಿಜೆಪಿ ಕಾರ್ಯಕರ್ತ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Onion

Onion ರಫ್ತು ನಿಷೇಧ ತೆರವು: ಕಳೆದ ವರ್ಷಕ್ಕಿಂತ ಕಡಿಮೆ ಉತ್ಪಾದನೆ ಸಾಧ್ಯತೆ

1-eewqewq

UNICEF ಇಂಡಿಯಾಗೆ ಕರೀನಾ ಕಪೂರ್‌ ರಾಯಭಾರಿ

MOdi (3)

Next 5 years ಭ್ರಷ್ಟರಿಗೆ ತಕ್ಕ ಶಾಸ್ತಿ, ನನ್ನ ಬಳಿ ಸ್ವಂತ ಮನೆ ಯೂ ಇಲ್ಲ: ಮೋದಿ

mamata

Sandeshkhali ಪ್ರಕರಣ ಬಿಜೆಪಿಯದ್ದೇ ಪಿತೂರಿ: ಸಿಎಂ ಮಮತಾ ಆಕ್ರೋಶ

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.