ಡ್ರಗ್ಸ್‌ ಹಾವಳಿ ತಡೆಗಟ್ಟಿ : ಸಾರ್ವಜನಿಕರ ಆಗ್ರಹ

ಸುರತ್ಕಲ್ ಪೊಲೀಸ್‌ ಠಾಣೆ: ಬೀಟ್ ಸದಸ್ಯರ ಸಭೆ

Team Udayavani, Jul 8, 2019, 5:11 AM IST

n-22

ಸುರತ್ಕಲ್: ಇಲ್ಲಿನ ಶಾಲಾ ಕಾಲೇಜು ಪರಿಸರದಲ್ಲಿ ಡ್ರಗ್ಸ್‌ ಹಾವಳಿ ತಡೆಗಟ್ಟಬೇಕು, ಹೋಮ್‌ ಸ್ಟೇ, ಬೀಚ್ ರೆಸಾರ್ಟ್‌ಗಳ ಮೇಲೆ ನಿಗಾ ಇಡಬೇಕು, ಹಾಳಾದ ಸಿಸಿ ಟಿವಿ ದುರಸ್ತಿಪಡಿಸಿ, ದನ ಗಳ್ಳತನದ ಬಗ್ಗೆ ಕಠಿನ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕರು ಸುರತ್ಕಲ್ ಪೊಲೀಸ್‌ ಠಾಣಾ ವ್ಯಾಪ್ತಿಯ ಬೀಟ್ ಪೊಲೀಸ್‌ ಸಭೆಯಲ್ಲಿ ರವಿವಾರ ಒತ್ತಾಯಿಸಿದರು.

ಕುಳಾಯಿಯ ಬೀಟ್ ಸದಸ್ಯ ಯೋಗೀಶ್‌ ಸನಿಲ್ ಕುಳಾಯಿ ಮಾತನಾಡಿ, ಹೆದ್ದಾರಿ ಸಹಿತ ವಿವಿಧೆಡೆ ಹಾಕಲಾದ ಸಿಸಿಟಿವಿ ದುರಸ್ತಿಗೆ ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದರು.

ಮಹಿಳೆಯರು ಒಬ್ಬರು ಅಪರಿಚಿತ ಸೇಲ್ಸ್ಮ್ಯಾನ್‌ಗಳ ಬಗ್ಗೆ ಗಮನ ಸೆಳೆದು ಕೆಲವು ಬಾರಿ ಅವರ ವರ್ತನೆಗಳು ಅನು ಮಾನಾಸ್ಪದವಾಗಿರುತ್ತವೆ. ಪೊಲೀಸರು ಅಂತಹವರಿಗೆ ಗುರುತು ಚೀಟಿ ನೀಡುವಂತೆ ಮನವಿ ಮಾಡಿದರು.

ದನ ಕಳವು ತಡೆಗೆ ಕ್ರಮ ಕೈಗೊಳ್ಳಿ
ಇಡ್ಯಾದ ಗಿರಿಯಪ್ಪ ಮಾತನಾಡಿ, ದನ ಕಳವು ಪ್ರಕರಣಗಳನ್ನು ತಡೆಯಲು ಸಮರ್ಪಕ ಕ್ರಮ ಕೈಗೊಳ್ಳಬೇಕು. ಪೊಲೀಸರು ಆರೋಪಿಗಳನ್ನು ಹಿಡಿದರೂ ಶಿಕ್ಷೆಯಾಗುವುದು ಅಪರೂಪ. ಇದಕ್ಕೆ ಪರ್ಯಾಯ ಕ್ರಮ ಸಾಧ್ಯವೆ ಎಂದು ಪ್ರಶ್ನಿಸಿದರು.

ಎನ್‌ಐಟಿಕೆ ಬಳಿ ಮಧ್ಯರಾತ್ರಿ ವರೆಗೆ ಗೂಡಂಗಡಿಗಳು ವ್ಯಾಪಾರ ಮಾಡುತ್ತವೆ, ಇದಲ್ಲದೆ ಸುತ್ತಮುತ್ತ ಅಮಲು ಪದಾರ್ಥಗಳು ಹೇಗೆ ಸಿಗುತ್ತವೆ. ಈ ಬಗ್ಗೆ ವ್ಯಾಪಾರಕ್ಕೆ ಸಮಯ ನಿಗದಿ ಪಡಿಸಬೇಕು ಎಂದು ಮಾಜಿ ಕಾರ್ಪೊರೇಟರ್‌ ರೇವತಿ ಪುತ್ರನ್‌ ಒತ್ತಾಯಿಸಿದರು.

ಪುಷ್ಪರಾಜ್‌ ಕುಡುಂಬೂರು ಅವರು ಬೈಕುಗಳಲ್ಲಿ ಮೂರು ಜನ ಹೆಲ್ಮೆಟ್ ಇಲ್ಲದೆ ಓಡಾಟ, ಒಳ ರಸ್ತೆಗಳಲ್ಲಿ ಓವರ್‌ಸ್ಪೀಡ್‌ ಸಂಚಾರ ಮತ್ತಿತರ ಸಮಸ್ಯೆಗಳ ಬಗ್ಗೆ ಸಾರ್ವಜನಿಕರು ಗಮನಸೆಳೆದರು.

ದುರಸ್ತಿಗೆ ಕ್ರಮ
ಅಧ್ಯಕ್ಷತೆ ವಹಿಸಿ ಮಾತನಾಡಿದ ಪಣಂಬೂರು ಪೊಲೀಸ್‌ ಉಪವಿಭಾಗದ ಸಹಾಯಕ ಆಯುಕ್ತ ಶ್ರೀನಿವಾಸ ಗೌಡ ಅವರು, ಪಣಂಬೂರು ಠಾಣಾ ವ್ಯಾಪ್ತಿಯಲ್ಲಿ ಸಿಸಿಟಿವಿ ಅಳವಡಿಕೆಗೆ ಕ್ರಮ ಕೈಗೊ ಳ್ಳಲಾಗಿದೆ ಈಗಾಗಲೇ ಸಿಸಿಟಿವಿ ಉಪಕರಣ ಗಳು ಬಂದಿವೆ. ಸಿಸಿಟಿವಿಗಳು ಹಾಳಾದ ಕಡೆ ದುರಸ್ತಿಗೆ ಕ್ರಮಕೊಳ್ಳಲಾಗಿದೆ ಎಂದರು.

ದನ ಕಳವು ಸಂಬಂಧಪಟ್ಟಂತೆ ರೈತರು ಸಾರ್ವಜನಿಕರು ಕಾನೂನು ಕೈಗೆತ್ತಿಕೊಳ್ಳ ಬಾರದು. ಪೊಲೀಸರಿಗೆ ಮಾಹಿತಿ ನೀಡಿದಲ್ಲಿ ಸೂಕ್ತ ಕಾನೂನು ಕ್ರಮ ಕೈಗೊಳ್ಳ ಲಾಗುವುದು. ಪಣಂಬೂರು ಠಾಣಾ ವ್ಯಾಪ್ತಿಯ ಗೆಸ್ಟ್‌ ಹೌಸ್‌, ಹೋಂಸ್ಟೇ ಮೇಲೆ ನಿಗಾ ಇಡಲಾಗಿದೆ. ಯಾವುದೇ ಅತಿರೇಕದ ಚಟುವಟಿಕೆಗೆ ಅವಕಾಶ ನೀಡುವುದಿಲ್ಲ ಎಂದರು.

ಪೋಲಿಸರ ಮೇಲೆ ಹಲ್ಲೆಗಳು ನಡೆಯುತ್ತಿರುವುದು ವಿಷಾದನೀಯ. ಆದರೆ ಅಪರಾಧ ಮಾಡಿದವರ ಮೇಲೆ ನಾವು ಕಠಿನ ಕಾನೂನು ಕೈಗೊಳ್ಳದೆ ಬಿಡುವುದಿಲ್ಲ . ಕೆಲವು ಬಾರಿ ಪೊಲೀಸರು ನಿಷ್ಠೆಯಿಂದ ನಮ್ಮ ಕರ್ತವ್ಯ ಮಾಡಿದರೂ ತಪ್ಪು ಸಂದೇಶ ರವಾನೆಯಾಗಿ ಆರೋಪಿಯನ್ನು ವೈಭವೀಕರಿಸಲಾಗುತ್ತದೆ ಎಂದು ಸಹಾಯಕ ಆಯುಕ್ತ ಶ್ರೀನಿವಾಸ ಗೌಡ ಬೇಸರ ವ್ಯಕ್ತಪಡಿಸಿದರು. ಪೊಲೀಸ್‌ ಠಾಣೆಯಲ್ಲಿ ಪೊಲೀಸರ ದುರ್ನಡತೆ ಕಂಡುಬಂದರೆ ಅದಕ್ಕೆ ನಾನು ಕ್ಷಮೆಯಾಚಿಸುತ್ತೇನೆ, ಮುಂದೆ ಈ ರೀತಿ ಘಟನೆಗಳು ನಡೆಯದಂತೆ ನೋಡಿಕೊಳ್ಳಲಾಗುವುದು. ಅಪರಾಧ ಚಟುವಟಿಕೆಗಳನ್ನು ಮಟ್ಟಹಾಕಲು ಪೊಲೀಸರೊಂದಿಗೆ ಸಹಕರಿಸಿ ಎಂದರು.

ಅಪರಾಧಿಗಳ ವಿರುದ್ಧ ಕಠಿನ ಕ್ರಮ
ಪೋಲಿಸರ ಮೇಲೆ ಹಲ್ಲೆಗಳು ನಡೆಯುತ್ತಿರುವುದು ವಿಷಾದನೀಯ. ಆದರೆ ಅಪರಾಧ ಮಾಡಿದವರ ಮೇಲೆ ನಾವು ಕಠಿನ ಕಾನೂನು ಕೈಗೊಳ್ಳದೆ ಬಿಡುವುದಿಲ್ಲ . ಕೆಲವು ಬಾರಿ ಪೊಲೀಸರು ನಿಷ್ಠೆಯಿಂದ ನಮ್ಮ ಕರ್ತವ್ಯ ಮಾಡಿದರೂ ತಪ್ಪು ಸಂದೇಶ ರವಾನೆಯಾಗಿ ಆರೋಪಿಯನ್ನು ವೈಭವೀಕರಿಸಲಾಗುತ್ತದೆ ಎಂದು ಸಹಾಯಕ ಆಯುಕ್ತ ಶ್ರೀನಿವಾಸ ಗೌಡ ಬೇಸರ ವ್ಯಕ್ತಪಡಿಸಿದರು. ಪೊಲೀಸ್‌ ಠಾಣೆಯಲ್ಲಿ ಪೊಲೀಸರ ದುರ್ನಡತೆ ಕಂಡುಬಂದರೆ ಅದಕ್ಕೆ ನಾನು ಕ್ಷಮೆಯಾಚಿಸುತ್ತೇನೆ, ಮುಂದೆ ಈ ರೀತಿ ಘಟನೆಗಳು ನಡೆಯದಂತೆ ನೋಡಿಕೊಳ್ಳಲಾಗುವುದು. ಅಪರಾಧ ಚಟುವಟಿಕೆಗಳನ್ನು ಮಟ್ಟಹಾಕಲು ಪೊಲೀಸರೊಂದಿಗೆ ಸಹಕರಿಸಿ ಎಂದರು.

ಟಾಪ್ ನ್ಯೂಸ್

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು1

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.