ಹವಮಾನ ವೈಪರಿತ್ಯ: ಬೆಂಗಳೂರಿನಲ್ಲಿ ಲ್ಯಾಂಡ್ ಆದ ದುಬೈ-ಮಂಗಳೂರು ವಿಮಾನ
Team Udayavani, Feb 15, 2020, 10:03 AM IST
ಮಂಗಳೂರು: ಕರಾವಳಿಯಲ್ಲಿ ಹವಾಮಾನ ವೈಪರೀತ್ಯದಿಂದಾಗಿ ದುಬೈನಿಂದ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಶನಿವಾರ ಮುಂಜಾನೆ ಬಂದಿಳಿಯಬೇಕಾಗಿದ್ದ ಸ್ಪೈಸ್ ಜೆಟ್ ವಿಮಾನ ಮಾರ್ಗ ಬದಲಿಸಿ ಬೆಂಗಳೂರಿನಲ್ಲಿ ಲ್ಯಾಂಡ್ ಆಗಿದೆ.
ದಮ್ಮಾಮ್ ಮತ್ತು ದುಬೈ ನಿಂದ ಬಂದಿದ್ದ ಏರ್ ಇಂಡಿಯಾ ವಿಮಾನ ಮುಂಜಾವು 4:30ಕ್ಕೆ ಮಂಗಳೂರು ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಆಗಿದ್ದು, ಆದರೆ 8:30 ಕ್ಕೆ ಬಂದಿದ್ದ ಮತ್ತೊಂದು ವಿಮಾನ ನೇರವಾಗಿ ಬೆಂಗಳೂರಿನಲ್ಲಿ ಇಳಿದಿದೆ.
ಬೆಂಗಳೂರಿನಿಂದ ಬೆಳಗ್ಗೆ 8:00 ಗಂಟೆಗೆ ಹೊರಟಿದ್ದ ಸ್ಪೈಸ್ ಜೆಟ್, ಇಂಡಿಗೋ ವಿಮಾನಗಳು ಮಂಗಳೂರಿನಲ್ಲಿ ಮಬ್ಬು ಕವಿದ ವಾತಾವರಣವಿದ್ದರಿಂದ ಮರಳಿ ಬೆಂಗಳೂರಿಗೆ ವಾಪಸ್ಸಾಗಿದೆ ಎಂದು ವರದಿಯಾಗಿದೆ.
ಹೈದರಬಾದ್ ನಿಂದ ಬಂದಿದ್ದ ಮತ್ತೊಂದು ವಿಮಾನಕ್ಕೂ ಹವಮಾನ ವೈಪರಿತ್ಯ ಹಿನ್ನಲೆಯಲ್ಲಿ ಲ್ಯಾಂಡ್ ಆಗಲು ಅನುಮತಿ ದೊರೆತಿಲ್ಲ.