ರಾಜಕಾಲುವೆಯಿಂದ ತೆಗೆದ ಹೂಳು ಮತ್ತೆ ಕಾಲುವೆಗೆ!


Team Udayavani, Apr 26, 2022, 11:44 AM IST

kottara-chowki

ಮಹಾನಗರ: ನಗರದ ರಾಜ ಕಾಲುವೆಯ ಹೂಳೆತ್ತುವ ಕಾಮಗಾರಿ ಬಹುತೇಕ ಪೂರ್ಣವಾಗಿದ್ದರೂ ಕಾಲುವೆ ಯಿಂದ ತೆಗೆದ ಹೂಳನ್ನು ಅಲ್ಲೇ ಬದಿಯಲ್ಲಿ ಪೇರಿಸಿಟ್ಟ ಪರಿಣಾಮ ನಗರದ ಕೆಲವೆಡೆ ಹೂಳು ಮತ್ತೆ ತೋಡು ಸೇರುವ ಪರಿಸ್ಥಿತಿ ನಿರ್ಮಾಣವಾಗಿದೆ!

ಮಳೆಗಾಲದ ಪೂರ್ವ ಭಾವಿಯಾಗಿ ಮಳೆ ನೀರು ಸರಾಗವಾಗಿ ಹರಿಯಲು ಅನುಕೂಲ ವಾಗುವ ನಿಟ್ಟಿನಲ್ಲಿ ರಾಜಕಾಲುವೆಯ ಹೂಳೆತ್ತುವ ಕಾಮಗಾರಿ ನಗರದ ವಿವಿಧ ಕಡೆಗಳಲ್ಲಿ ಭರದಿಂದ ಸಾಗುತ್ತಿದೆ. ಜತೆಗೆ ಸಣ್ಣ ಪುಟ್ಟ ಚರಂಡಿ, ತೋಡಿನ ಹೂಳು ಕೂಡ ಅಲ್ಲಲ್ಲಿ ತೆಗೆಯಲಾಗುತ್ತಿದೆ. ಆದರೆ ತೆಗೆದ ಹೂಳನ್ನು ಕೆಲವು ಕಡೆ ಸೂಕ್ತ ರೀತಿಯಲ್ಲಿ ವಿಲೇವಾರಿ ಮಾಡುತ್ತಿಲ್ಲ ಎಂಬುದು ಸದ್ಯ ಎದುರಾದ ಆರೋಪ.

ನಿಯಮ ಪ್ರಕಾರ ತೋಡಿನಿಂದ ಹೂಳನ್ನು ಜೆಸಿಬಿ ಮುಖೇನ ತೆಗೆದು ಅದನ್ನು ಸೂಕ್ತ ಸ್ಥಳಕ್ಕೆ ಕೊಂಡೊಯ್ದು ವಿಲೇವಾರಿ ಮಾಡಬೇಕು. ಆದರೆ ವಿಲೇವಾರಿ ಬಗ್ಗೆ ಗಮನ ನೀಡದ ಗುತ್ತಿಗೆದಾರರು ತೋಡಿನ ಬದಿಯಲ್ಲಿಯೇ ಹೂಳನ್ನು ಪೇರಿಸಿಟ್ಟು ಕೈ ತೊಳೆಯುವ ಪರಿಸ್ಥಿತಿ ನಗರದ ಕೆಲವು ಕಡೆ ಆಗಿದೆ. ತೋಡಿನಿಂದ ಹೂಳು ತೆಗೆಯುವುದು ಮಾತ್ರ ಕಾಮಗಾರಿ ಎಂದಷ್ಟೇ ಭಾವಿಸಿದ ಗುತ್ತಿಗೆದಾರರು ಹೂಳು ವಿಲೇವಾರಿ ಬಗ್ಗೆ ಹೆಚ್ಚು ಗಮನ ನೀಡಿದಂತಿಲ್ಲ.

ಮಳೆಗೆ ಮತ್ತೆ ತೋಡಿಗೆ!

ಮಳೆ ನೀರು ಸರಾಗವಾಗಿ ಹರಿಯ ಬೇಕು ಎಂಬ ಕಾರಣದಿಂದ ಹೂಳು ತೆಗೆಯಲಾಗುತ್ತದೆ. ಆದರೆ ತೆಗೆದ ಹೂಳನ್ನು ರಾಜಕಾಲುವೆಯ ಬದಿಯಲ್ಲಿ ಇಟ್ಟರೆ ಮಳೆ ಬಂದು ಮತ್ತೆ ಹೂಳು ಕಾಲುವೆ ಸೇರುವಂತಾಗುತ್ತದೆ. ಜತೆಗೆ ತೆಗೆದ ಹೂಳು ರಸ್ತೆಗೆ ಬಿದ್ದು ವಾಹನ ಸವಾರರಿಗೂ ಸಮಸ್ಯೆ ಆಗುವ ಸಾಧ್ಯತೆಯಿದೆ.

ರಾಜಕಾಲುವೆಗೆ ತಡೆಗೋಡೆ ಭದ್ರತೆ

ನಗರದ ವಿವಿಧ ಕಡೆಗಳಲ್ಲಿ ರಾಜಕಾಲು ವೆಯ ಬದಿಯ ರಕ್ಷಣೆಗಾಗಿ ತಡೆಗೋಡೆ ನಿರ್ಮಿಸಲಾಗುತ್ತಿದೆ. ಇದರ ಕಾಮಗಾರಿ ವಿವಿಧ ಕಡೆಗಳಲ್ಲಿ ನಡೆಯುತ್ತಿದೆ. ಇದು ಈ ಮಳೆಗಾಲದ ಮುನ್ನ ಪೂರ್ಣಗೊಂಡರೆ ನಗರದ ವಿವಿಧ ಕಡೆಗಳ ನೆರೆ ನೀರಿನ ಸಮಸ್ಯೆ ಪರಿಹಾರವಾಗಬಹುದು.

ವಿಲೇವಾರಿಗೆ ಕ್ರಮ

ನಗರದ ಬಹುತೇಕ ರಾಜಕಾಲುವೆಯ ಹೂಳೆತ್ತುವ ಕಾಮಗಾರಿ ಈಗಾಗಲೇ ನಡೆದಿದ್ದು, ಉಳಿದ ಕಡೆಯಲ್ಲಿ ಕಾಮಗಾರಿ ಈಗಲೂ ನಡೆಯುತ್ತಿದೆ. ಆದರೆ ತೆಗೆದ ಹೂಳಿನ ನೀರಿನ ಅಂಶ, ವಾಸನೆ ಹೋಗಲಿ ಎಂಬ ಕಾರಣಕ್ಕೆ ಒಂದೆರಡು ದಿನ ಹಾಗೆಯೇ ಇಟ್ಟಿರುತ್ತಾರೆ. ಬಳಿಕ ವಿಲೇವಾರಿ ಮಾಡಲಾಗುತ್ತದೆ. ಒಂದು ವೇಳೆ ತೋಡಿನ ಬದಿಯ ಹೂಳು ತೆಗೆಯದಿದ್ದರೆ ಅದರ ವಿಲೇವಾರಿಗೆ ಸೂಚಿಸಲಾಗುವುದು. ಪ್ರೇಮಾನಂದ ಶೆಟ್ಟಿ, ಮೇಯರ್‌, ಮಹಾನಗರ ಪಾಲಿಕೆ

ಟಾಪ್ ನ್ಯೂಸ್

IND VS PAK

ಸಮಸ್ಯೆ ಸೌಹಾರ್ದವಾಗಿ ಬಗೆಹರಿಸಿಕೊಳ್ಳಿ: ಭಾರತ, ಪಾಕ್‌ಗೆ ಅಮೆರಿಕ ಸಲಹೆ

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

Supreme Court

Supreme Courtನಲ್ಲಿ ಪಿವಿಎನ್‌, ಮನಮೋಹನ್‌ ಸಿಂಗ್‌ಗೆ ಕೇಂದ್ರ ಸರಕಾರ ಶ್ಲಾಘನೆ

Rajeev Chandrashekhar

Corrupt ಡಿಕೆಶಿ ಸರ್ಟಿಫಿಕೆಟ್‌ ಬೇಕಾಗಿಲ್ಲ: ಕೇಂದ್ರ ಸಚಿವ ರಾಜೀವ್‌ ತಿರುಗೇಟು

1-wqewqe

2014 ಭರವಸೆ, 2019 ನಂಬಿಕೆ, 2024ರಲ್ಲಿ ಗ್ಯಾರಂಟಿ: ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru: ಗ್ರಾಮೀಣ ಭಾಗದಲ್ಲಿ ಬಗೆಹರಿಯದ “ಸ್ವಚ್ಛತೆ’ ಸಂಕಟ!

Mangaluru: ಗ್ರಾಮೀಣ ಭಾಗದಲ್ಲಿ ಬಗೆಹರಿಯದ “ಸ್ವಚ್ಛತೆ’ ಸಂಕಟ!

Mangaluru: ಕುಡಿಯುವ ನೀರಿನ ಕೊರತೆ, ಬೋಟ್‌, ಮಂಜುಗಡ್ಡೆ ಘಟಕಗಳಿಗೆ ಸಂಕಷ್ಟ

Mangaluru: ಕುಡಿಯುವ ನೀರಿನ ಕೊರತೆ, ಬೋಟ್‌, ಮಂಜುಗಡ್ಡೆ ಘಟಕಗಳಿಗೆ ಸಂಕಷ್ಟ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

Mangaluru ವೈದ್ಯಕೀಯ ಪದವೀಧರೆ ಪಿಜಿಯಲ್ಲಿ ಸಾವು

Mangaluru ವೈದ್ಯಕೀಯ ಪದವೀಧರೆ ಪಿಜಿಯಲ್ಲಿ ಸಾವು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

IND VS PAK

ಸಮಸ್ಯೆ ಸೌಹಾರ್ದವಾಗಿ ಬಗೆಹರಿಸಿಕೊಳ್ಳಿ: ಭಾರತ, ಪಾಕ್‌ಗೆ ಅಮೆರಿಕ ಸಲಹೆ

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

Supreme Court

Supreme Courtನಲ್ಲಿ ಪಿವಿಎನ್‌, ಮನಮೋಹನ್‌ ಸಿಂಗ್‌ಗೆ ಕೇಂದ್ರ ಸರಕಾರ ಶ್ಲಾಘನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.