ಚುನಾವಣೆ ಹಿನ್ನೆಲೆ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ತಪಾಸಣೆ ಬಿಗಿ
Team Udayavani, Mar 20, 2023, 6:45 AM IST
ಮಂಗಳೂರು: ಮುಂಬರುವ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಅಕ್ರಮಗಳನ್ನು ತಡೆಯುವುದಕ್ಕಾಗಿ ಹಾಗೂ ಇತರ ಕಾನೂನು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಮಂಗಳೂರು ಪೊಲೀಸ್ ಕಮಿಷನರೆಟ್ ವ್ಯಾಪ್ತಿ ಸಹಿತ ದ.ಕ. ಜಿಲ್ಲೆಯಾದ್ಯಂತ ಪೊಲೀಸರು ತಪಾಸಣೆ ಬಿಗಿಗೊಳಿಸಿದ್ದಾರೆ.
ದ.ಕ. ಜಿಲ್ಲಾ ಪೊಲೀಸರು ಚುನಾವಣೆಗೆ ಸಂಬಂಧಿಸಿ ಸೂಕ್ಷ್ಮ ಸ್ಥಳಗಳಲ್ಲಿ ಸಂಬಂಧಿಸಿದ ಪೊಲೀಸ್ ಅಧಿಕಾರಿ, ಸಿಬಂದಿಯ ಸಭೆ ನಡೆಸಿ ಸೂಚನೆಗಳನ್ನು ನೀಡಿದ್ದಾರೆ. ಮಂಗಳೂರು ಪೊಲೀಸ್ ಕಮಿಷನರೆಟ್ ವ್ಯಾಪ್ತಿಗೆ ಹೊಂದಿಕೊಂಡಿರುವ ಅಂತರ್ಜಿಲ್ಲಾ, ಅಂತರ್ರಾಜ್ಯ ಗಡಿಗಳಲ್ಲಿಯೂ ವಾಹನಗಳ ತಪಾಸಣೆ ಬಿಗಿಗೊಳಿಸಲಾಗಿದೆ.
ದಿಢೀರ್ ತಪಾಸಣೆ
ಮಂಗಳೂರು ನಗರದಲ್ಲಿರುವ 11 ಚೆಕ್ಪೋಸ್ಟ್ಗಳಲ್ಲಿ ನಿರಂತರವಾಗಿ ತಪಾಸಣೆ ನಡೆಯುತ್ತಿದೆ. ಅಲ್ಲದೆ ಕನಿಷ್ಠ 6 ಕಡೆಗಳಲ್ಲಿ ದಿಢೀರ್ ತಪಾಸಣೆ ನಡೆಸಲಾಗುತ್ತಿದೆ. 7 ಅಂತರ್ರಾಜ್ಯ ಚೆಕ್ಪೋಸ್ಟ್ಗಳಿದ್ದು, ಅಲ್ಲಿಯೂ ನಿರಂತರವಾಗಿ ತಪಾಸಣೆ ನಡೆಸಲಾಗುತ್ತಿದೆ ಎಂದು ಪೊಲೀಸ್ ಆಯುಕ್ತ ಕುಲದೀಪ್ ಕುಮಾರ್ ಜೈನ್ “ಉದಯವಾಣಿ’ಗೆ ತಿಳಿಸಿದ್ದಾರೆ.
98 ಸಿಸಿ ಕೆಮರಾಗಳು ಕಾರ್ಯಾರಂಭ
ಮಂಗಳೂರು ನಗರದ ಪ್ರಮುಖ ಸ್ಥಳಗಳಲ್ಲಿ ಪೊಲೀಸ್ ವತಿಯಿಂದ 98 ಸಿಸಿಟಿವಿ ಕೆಮರಾಗಳನ್ನು ಅಳವಡಿಸಲಾಗಿದ್ದು, ಇವುಗಳು ಕಾರ್ಯಾರಂಭ ಮಾಡಿವೆ. ಕಾನೂನು ಸುವ್ಯವಸ್ಥೆ ಕಾಪಾಡುವುದು, ಅಪರಾಧ ತಡೆ, ಸಂಚಾರ ನಿಯಂತ್ರಣಕ್ಕೆ ಇದರಿಂದ ಅನುಕೂಲವಾಗಲಿದೆ ಎಂದು ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ
ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್ ಭಾಟಿಯಾ ವ್ಯಂಗ್ಯ
Mangaluru ಪೆಟ್ರೋಲ್, ಡೀಸೆಲ್ ತುಟ್ಟಿ : ಪುಷ್ಪಾ ಅಮರನಾಥ್
Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!
College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ
MUST WATCH
ಹೊಸ ಸೇರ್ಪಡೆ
Muddebihal: ನೇಹಾ ಕೊಲೆ ಖಂಡಿಸಿ ಪ್ರತಿಭಟನೆ: ಮುಸ್ಲಿಂ ಮುಖಂಡರು ಭಾಗಿ
Mollywood: ಈ ದಿನ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿಗೆ ಬರುವುದು ಖಚಿತ; ಯಾವುದರಲ್ಲಿ ಸ್ಟ್ರೀಮ್?
IPL 2024; ಎಂ.ಎಸ್ ಧೋನಿ ದಾಖಲೆ ಮುರಿದ ಕೆ.ಎಲ್ ರಾಹುಲ್
Snake: 50 ಅಡಿ ಉದ್ದದ ದೈತ್ಯ ಹಾವು “ವಾಸುಕಿ’!
Mollywood: ಸೂಪರ್ ಹಿಟ್ ʼಪ್ರೇಮಲುʼ ಸೀಕ್ವೆಲ್ ಅನೌನ್ಸ್; ಹೆಚ್ಚಾಯಿತು ನಿರೀಕ್ಷೆ