ಚುನಾವಣೆ ಪರಿಣಾಮ: ಖಾಸಗಿ ಬಸ್‌ ಯಾನ ಬಲು ದುಬಾರಿ


Team Udayavani, Apr 25, 2023, 7:12 AM IST

Election Impact: Private bus travel is very expensive

ಮಂಗಳೂರು: ಮತದಾನ ಮಾಡಲೆಂದು ಊರಿಗೆ ತೆರಳಲು ಮನ ಮಾಡಿರುವ ದೂರದ ಊರಿನಲ್ಲಿರುವ ಮಂದಿಗೆ ಆಘಾತಕಾರಿ ಸುದ್ದಿಯೊಂದು ಕಾದಿದೆ. ಖಾಸಗಿ ಬಸ್‌ಗಳು ತಮ್ಮ ಹಳೇ ಚಾಳಿಯನ್ನು ಮುಂದುವರಿಸಿದ್ದು, ಪ್ರಯಾಣ ದರವನ್ನು ಮೂರುಪಟ್ಟು ಏರಿಕೆ ಮಾಡಿವೆ. ಸಾಮಾನ್ಯ ಪ್ರಯಾಣಿಕರು ಮತ ಚಲಾಯಿಸಲು ಹೆಚ್ಚಿನ ದರ ನೀಡಿ ತಮ್ಮ ಊರಿಗೆ ಬರುವ ಅನಿವಾರ್ಯ ಎದುರಾಗಿದೆ.

ಬೆಂಗಳೂರು, ಮೈಸೂರು ಸೇರಿದಂತೆ ಇನ್ನಿತರ ಪ್ರದೇಶದಲ್ಲಿರುವ ಮಂದಿ ಸಾಮಾನ್ಯವಾಗಿ ಚುನಾವಣೆಗೆಂದು ತಮ್ಮ ತಮ್ಮ ಊರಿಗೆ ಬರುತ್ತಾರೆ. ಅದರಲ್ಲಿಯೂ ಈ ಬಾರಿ ಚುನಾವಣೆ ದಿನದಿಂದ ಎರಡು ದಿನದಲ್ಲೇ ಎರಡನೇ ಶನಿವಾರ ಬಳಿಕ ರವಿವಾರ ರಜಾ ಇರುವ ಕಾರಣ ಈಗಾಗಲೇ ಯೋಜನೆಯನ್ನೂ ರೂಪಿಸಿರುತ್ತಾರೆ. ಇದನ್ನೇ ಬಂಡವಾಳವಾಗಿರಿಸಿಕೊಂಡ ಕೆಲ ಖಾಸಗಿ ಬಸ್‌ ಮಾಲಕರು ತಮ್ಮ ಬಸ್‌ ಟಿಕೆಟ್‌ ದರವನ್ನು ಏಕಾಏಕಿ ಏರಿಕೆ ಮಾಡಿದ್ದಾರೆ. ಸಾರ್ವಜನಿಕ ವಲಯದಲ್ಲಿ ಈ ಬಗ್ಗೆ ಟೀಕೆಗಳು ಕೇಳಿಬರುತ್ತಿವೆ.

ಹಬ್ಬಗಳ ಸಮಯ, ಚುನಾವಣೆ ವೇಳೆ ಖಾಸಗಿ ಬಸ್‌ ಯಾನ ದರ ಏರಿಕೆ ಇದೇ ಮೊದಲಲ್ಲ. ಕಳೆದ ಹಲವು ವರ್ಷಗಳಿಂದ ಇದೇ ರೀತಿ ವಿಶೇಷ ದಿನಗಳಲ್ಲಿ ಬಸ್‌ ಟಿಕೆಟ್‌ ದರ ದುಪ್ಪಟ್ಟು ಏರಿಕೆ ಮಾಡಲಾಗುತ್ತಿದೆ. ಸಾರಿಗೆ ಸಚಿವರು, ಸಾರಿಗೆ ಇಲಾಖೆ, ಪೊಲೀಸ್‌ ಇಲಾಖೆಯಿಂದ ಹಲವು ಬಾರಿ ಕಠಿನ ಕ್ರಮ ಕೈಗೊಳ್ಳುವ ಸೂಚನೆ ನೀಡಿದರೂ ಕೆಲವೊಂದು ಬಾರಿ ಪ್ರಕರಣ ದಾಖಲು ಮಾಡಿದರೂ ದರಕ್ಕೆ ಕಡಿವಾಣ ಹಾಕಲು ಸಾಧ್ಯವಾಗಿಲ್ಲ.

ಕೆಎಸ್ಸಾರ್ಟಿಸಿ ದರ ಸದ್ಯಕ್ಕೆ ಯಥಾಸ್ಥಿತಿ
ದೂರದ ಊರುಗಳಿಗೆ ಪ್ರಯಾಣಿಸುವ ಕೆಎಸ್ಸಾರ್ಟಿಸಿ ಯಾನ ದರ ಸದ್ಯಕ್ಕೆ ಯಥಾಸ್ಥಿತಿಯಲ್ಲಿದೆ. ಕೆಎಸ್ಸಾರ್ಟಿಸಿ ಅಧಿಕಾರಿಗಳು ಹೇಳುವ ಪ್ರಕಾರ ದೂರದ ಊರುಗಳಿಗೆ ಸಂಚರಿಸುವ ಸರಕಾರಿ ಬಸ್‌ಗಳಲ್ಲಿ ಸದ್ಯ ದರ ಹೆಚ್ಚಳವಾಗಲಿಲ್ಲ. ಸರಕಾರಿ ಬಸ್‌ಗಳಲ್ಲಿ ವಿಶೇಷ ದಿನಗಳ ದರ ಮತ್ತು ಸಾಮಾನ್ಯ ದಿನಗಳ ದರ ಎಂಬ ಎರಡು ದರಪಟ್ಟಿ ಇರುತ್ತದೆ.
ಕೆಎಸ್ಸಾರ್ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿ ರಾಜೇಶ್‌ ಶೆಟ್ಟಿ “ಉದಯವಾಣಿ’ಗೆ ಪ್ರತಿಕ್ರಿಯಿಸಿ, “ಚುನಾವಣೆ ಸಮಯದಲ್ಲಿ ಕೆಎಸ್ಸಾರ್ಟಿಸಿಯಿಂದ ಹೆಚ್ಚುವರಿ ಬಸ್‌ ಕಾರ್ಯಾಚರಿಸುತ್ತದೆ. ಆ ಮಾಹಿತಿ ಸದ್ಯದಲ್ಲೇ ನೀಡಲಾಗುತ್ತದೆ. ಕೆಎಸ್ಸಾರ್ಟಿಸಿ ಯಾನಕ್ಕೆ ಸದ್ಯಟಿಕೆಟ್‌ ದರ ಹೆಚ್ಚಳ ಮಾಡಲಾಗಿಲ್ಲ. ಕಾರ್ಯಾಚರಿಸುವ ವಿಶೇಷ ಬಸ್‌ಗಳಲ್ಲಿ ಟಿಕೆಟ್‌ಗೆ ಶೇ. 10ರಷ್ಟು ಹೆಚ್ಚಿನ ದರ ಪಾವತಿಸಬೇಕಾಗುತ್ತದೆ’ ಎಂದು ಹೇಳಿದ್ದಾರೆ.

ದರ ಮತ್ತಷ್ಟು ಹೆಚ್ಚಳ ಸಾಧ್ಯತೆ
ಚುನಾವಣೆಗೆಂದು ತಮ್ಮ ತಮ್ಮ ಊರುಗಳಿಗೆ ಬರಲು ಕೆಲವು ಮಂದಿ ಇದೀಗಷ್ಟೇ ಪ್ರಯಾಣಿಕರು ಬಸ್‌ಗಳಲ್ಲಿ ಸೀಟು ಬುಕ್‌ ಮಾಡುತ್ತಿದ್ದಾರೆ. ಸೀಟು ಭರ್ತಿಯಾದಂತೆ ಹೆಚ್ಚಿನ ಬಸ್‌ ಕಾರ್ಯಾಚರಣೆ ನಡೆಸುವ ಜತೆಗೆ ಪ್ರಯಾಣ ದರ ಕೂಡ ಹೆಚ್ಚಳವಾಗುತ್ತದೆ. ಸಾಮಾನ್ಯ ದಿನಗಳಲ್ಲಿ ಬೆಂಗಳೂರಿನಿಂದ ಮಂಗಳೂರಿಗೆ 700 ರೂ.ನಿಂದ 800 ರೂ. ಇರುವ ಖಾಸಗಿ ಸೀಟರ್‌ ಬಸ್‌ ಟಿಕೆಟ್‌ ದರ ಚುನಾವಣೆಯ ಸಮಯದಲ್ಲಿ 2000 ರೂ.ಗೂ ಹೆಚ್ಚಿನ ದರಕ್ಕೆ ಏರಿಕೆಯಾಗಿದೆ.

ದೂರದೂರಿಗೆ ತೆರಳುವ ಖಾಸಗಿ ಬಸ್‌ಗಳಲ್ಲಿ ಟಿಕೆಟ್‌ ದರ ಏರಿಕೆಯಾದ ಬಗ್ಗೆ ಯಾವುದೇ ಮಾಹಿತಿ ಇಲ್ಲ. ಯಾರೂ ದೂರು ನೀಡಿಲ್ಲ. ಈ ಕುರಿತು ಸಾರಿಗೆ ಇಲಾಖೆಗೆ ಯಾರಾದರು ದೂರು ನೀಡಿದರೆ ಸೂಕ್ತ ಕ್ರಮ ಕೈಗೊಳ್ಳುತ್ತೇವೆ.
– ಜಾನ್‌ ಮಿಸ್ಕಿತ್‌, ಮಂಗಳೂರು ಆರ್‌ಟಿಒ

– ನವೀನ್‌ ಭಟ್‌ ಇಳಂತಿಲ

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Congress 1.20 ಲಕ್ಷಕ್ಕೂ ಅಧಿಕ ಮತಗಳ ಗೆಲುವು: ಪದ್ಮರಾಜ್‌ ಆರ್‌.

Congress 1.20 ಲಕ್ಷಕ್ಕೂ ಅಧಿಕ ಮತಗಳ ಗೆಲುವು: ಪದ್ಮರಾಜ್‌ ಆರ್‌.

BJP ಅಭೂತಪೂರ್ವ ವಿಜಯದ ವಿಶ್ವಾಸ: ಕಾ| ಬೃಜೇಶ್‌ ಚೌಟ

BJP ಅಭೂತಪೂರ್ವ ವಿಜಯದ ವಿಶ್ವಾಸ: ಕಾ| ಬೃಜೇಶ್‌ ಚೌಟ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.