ತುರ್ತು ಸೇವೆ: ನೌಕರರಿಗೆ ವಿಶೇಷ ಬಸ್
Team Udayavani, Apr 25, 2020, 7:11 AM IST
ಸಾಂದರ್ಭಿಕ ಚಿತ್ರ
ಮಂಗಳೂರು: ಸರಕಾರಿ ನೌಕರರು ಮತ್ತು ಆರೋಗ್ಯ ಇಲಾಖೆ ಸಿಬಂದಿಗೆ ತುರ್ತು ಸೇವೆ ನೆಲೆಯಲ್ಲಿ ಕಚೇರಿಗೆ ಹಾಜರಾಗಲು ಅನುಕೂಲವಾಗುವಂತೆ ಕೆಎಸ್ಆರ್ಟಿಸಿ ವಿಶೇಷ ಬಸ್ ಸೌಲಭ್ಯ ಕಲ್ಪಿಸಿದೆ.
ಕೆಲವು ದಿನಗಳ ಹಿಂದೆ ಜಿಲ್ಲಾಡಳಿತದ ಕೋರಿಕೆ ಮೇರೆಗೆ ಈ ವಿಶೇಷ ಬಸ್ ಸಂಚಾರ ಆರಂಭಿಸಿದ್ದು, ಮಂಗಳೂರು ಮತ್ತು ಪುತ್ತೂರು ವಿಭಾಗಗಳಿಂದ ಒಟ್ಟು 7 ಬಸ್ಗಳು ಕಾರ್ಯಾಚರಿಸುತ್ತಿವೆ. ಪ್ರತಿ ಬಸ್ಗಳಲ್ಲಿ ಸಾಮಾಜಿಕ ಅಂತರವನ್ನು ಕಾಯ್ದುಕೊಂಡು ಕೇವಲ 30 ಮಂದಿಗೆ ಮಾತ್ರ ಪ್ರಯಾಣಿಸಲು ಅವಕಾಶ ನೀಡಲಾಗಿದೆ. ಸರಕಾರಿ ನೌಕರರು ಗುರುತಿನ ಚೀಟಿ ತೋರಿಸಿ ನಿಗದಿತ ಟಿಕೆಟ್ ದರ ಪಾವತಿಸಿ ಪ್ರಯಾಣಿಸಲು ಅವಕಾಶ ಇದೆ ಎಂದು ಕೆಎಸ್ಆರ್ಟಿಸಿ ವಿಭಾಗೀಯ ಅಧಿಕಾರಿಗಳು ತಿಳಿಸಿದ್ದಾರೆ.
ಮಂಗಳೂರು ವಿಭಾಗದಿಂದ ವೆನ್ಲಾಕ್ ಹಾಗೂ ಲೇಡಿಗೋಷನ್ ಆಸ್ಪತ್ರೆಗೆ ಆಗಮಿಸುವ ಆರೋಗ್ಯ ಸಿಬಂದಿಗೆ 3 ಬಸ್, ಜಿಲ್ಲಾಧಿಕಾರಿ ಕಚೇರಿ ನೌಕರರಿಗೆ 2 ಬಸ್ ಹಾಗೂ ಬಂಟ್ವಾಳಕ್ಕೆ ತೆರಳುವವರಿಗೆ ಒಂದು ಬಸ್ನ್ನು ಬೆಳಗ್ಗೆ ಮತ್ತು ಸಂಜೆ ಪುತ್ತೂರು ವರೆಗೆ ಓಡಿಸಲಾಗುತ್ತಿದೆ. ಅದೇ ರೀತಿ ಪುತ್ತೂರಿನಿಂದಲೂ ಮಂಗಳೂರಿಗೆ ಬೆಳಗ್ಗೆ ಮತ್ತು ಸಂಜೆ ತುರ್ತು ಸಿಬಂದಿ ಸಂಚಾರಕ್ಕೆ ಬಸ್ ಸಂಚಾರ ವ್ಯವಸ್ಥೆ ಇದೆ.
ಆರೋಗ್ಯ ಇಲಾಖೆ ಮತ್ತು ಡಿಸಿ ಕಚೇರಿ ಸಿಬಂದಿಗೆ ಮಾತ್ರ ಒದಗಿಸಿರುವ ಈ ಬಸ್ ಸೌಲಭ್ಯವನ್ನು ಇತರ ಕಚೇರಿಗಳ ಅಧಿಕಾರಿ ಮತ್ತು ಸಿಬಂದಿಗೂ ವಿಸ್ತರಿಸ ಬೇಕೆಂಬ ಬೇಡಿಕೆ ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pilikula: “ಫ್ಯಾನ್-ನೀರು’ ಆಶ್ರಯ; ಬಿಸಿಲ ಬೇಗೆಗೆ “ಪಿಲಿಕುಳ’ದಲ್ಲಿ ಪ್ರಾಣಿಗಳೂ ಸುಸ್ತು!
Dakshina Kannada ಸದ್ಯಕ್ಕೆ ನೀರಿನ ಸಮಸ್ಯೆ ಇಲ್ಲ: ಜಿಲ್ಲಾಧಿಕಾರಿ
Moodabidri: ಬೃಹತ್ ಜೈನ ಆರಾಧನಾ ಕೋಶದ ಸಂಪಾದಕ ಎಂ. ಧರ್ಮರಾಜ ಇಂದ್ರ ನಿಧನ
Mangaluru: CCB ಪೊಲೀಸರ ಕಾರ್ಯಾಚರಣೆ… ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಯ ಬಂಧನ
ಬಸ್ಗಳಿಗೆ ಬಾಗಿಲು ಅಳವಡಿಕೆ ; ಡಿಸಿ ಗಡುವು ಸಮೀಪಿಸಿದರೂ ಬಗೆಹರಿಯದ ಗೊಂದಲ!
MUST WATCH
ಹೊಸ ಸೇರ್ಪಡೆ
Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!
SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು
Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ
Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ
Bengaluru: ಪೇಂಟರ್ ಕೊಂದು ಪೊಲೀಸ್ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು