ಎಮ್ಮೆಕೆರೆ ಅಂತಾರಾಷ್ಟ್ರೀ ಯ ಈಜುಕೊಳ; ಸಾರ್ವಜನಿಕರ ಬಳಕೆಗೆ ಶೀಘ್ರ ಮುಕ್ತ


Team Udayavani, Feb 26, 2024, 6:13 PM IST

ಎಮ್ಮೆಕೆರೆ ಅಂತಾರಾಷ್ಟ್ರೀ ಯ ಈಜುಕೊಳ; ಸಾರ್ವಜನಿಕರ ಬಳಕೆಗೆ ಶೀಘ್ರ ಮುಕ್ತ

ಮಹಾನಗರ: ಸ್ಮಾರ್ಟ್‌ಸಿಟಿ ಯೋಜನೆಯಡಿ ನಿರ್ಮಾಣವಾಗಿ ನ. 24ರಂದು ಉದ್ಘಾಟನೆಗೊಂಡು ಆ ಬಳಿಕ ಬೀಗಮುದ್ರೆ ಜಡಿಯಲಾಗಿದ್ದ ಎಮ್ಮೆಕೆರೆ ಅಂತಾರಾಷ್ಟ್ರೀಯ ಈಜು ಕೊಳದ ಬೀಗ ತೆರವುಗೊಳಿಸುವ ಸುಯೋಗ ಹತ್ತಿರವಾಗಿದೆ. ಹತ್ತು
ದಿನಗಳೊಳಗಾಗಿ ಈಜುಕೊಳ ಸಾರ್ವಜನಿಕರಿಗೆ ತೆರೆದುಕೊಳ್ಳಲಿದೆ.

ಈಜುಗಾರರಿಗೆ ಹಾಗೂ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಈಜುಕೊಳದಲ್ಲಿ ಸೌಲಭ್ಯಗಳನ್ನು ಒದಗಿಸಲಾಗುತ್ತಿದೆ. ಈಜುಕೊಳದಲ್ಲಿ ಮೂಲಸೌಲಭ್ಯ ವ್ಯವಸ್ಥೆಯನ್ನು ಹೆಚ್ಚಿಸಲು ಹಾಗೂ ಸಮರ್ಪಕ ನಿರ್ವಹಣ ಕ್ರಮ ಕೈಗೊಳ್ಳಲು ದೇಶದ ಇತರ ಈಜುಕೊಳಗಳ ಬಗ್ಗೆ ಅಧ್ಯಯನ ನಡೆಸಲಾಗಿದೆ. ಅತ್ಯುತ್ತಮ ನಿರ್ವಹಣೆ ಹೊಂದಿರುವ ಈಜುಕೊಳದ ಅಧಿಕಾರಿಗಳೊಂದಿಗೆ ಚರ್ಚಿಸಲಾಗಿದೆ.

ಪ್ರತಿ ವಿಭಾಗಗಳಲ್ಲಿ ಓರ್ವ ಕೋಚ್‌ ಹಾಗೂ ಲೈಫ್‌ ಗಾರ್ಡ್‌ ನೇಮಿಸಲಾಗುತ್ತದೆ. ಬೇಸಗೆ ರಜೆ ಹತ್ತಿರವಾಗುತ್ತಿದ್ದು, ಶಿಬಿರಗಳನ್ನು ಆಯೋಜಿಸಲು ಅನುಕೂಲವಾಗುವಂತೆ ಕ್ರಮ ವಹಿಸಲಾಗಿದೆ. ಉಳಿದಂತೆ ಎಲ್ಲ ಮೂಲ ಸೌಕರ್ಯಗಳು ವ್ಯವಸ್ಥಿತವಾಗಿವೆ. ಈಗಾಗಲೇ ಗುತ್ತಿಗೆ ವಹಿಸಿಕೊಂಡ ಸಂಸ್ಥೆಯು ಕೆಲವು ವರ್ಷ ನಿರ್ವಹಣೆ ಮಾಡಬೇಕಿದೆ.ಅದಕ್ಕೆ ಬೇಕಾದ ಕ್ರಮಗಳನ್ನು ಕೈಗೊಳ್ಳಲಾಗಿದೆ.

ಈಜುಕೊಳ ಸಂಕೀರ್ಣವನ್ನು ಕಳೆದ ವರ್ಷ ನಗರಾಭಿವೃದ್ಧಿ ಸಚಿವ ಬಿ.ಎಸ್‌. ಸುರೇಶ್‌ ಉದ್ಘಾಟಿಸಿ ದ್ದರು. ಇದೇ ವೇಳೆ ಮೂರು ದಿನಗಳ ರಾಷ್ಟ್ರೀಯ ಮಾಸ್ಟರ್ ಈಜು ಸ್ಪರ್ಧೆಯೂ ಆಯೋಜನೆಗೊಂಡಿತ್ತು. ಸ್ಪರ್ಧೆಯಲ್ಲಿ ಭಾಗವಹಿಸಿದ್ದ ಕ್ರೀಡಾಪಟುಗಳಿಂದ ಈಜುಕೊಳದ ಬಗ್ಗೆ ಮೆಚ್ಚುಗೆ ಮಾತುಗಳು ಕೇಳಿಬಂದಿತ್ತು. ಆದರೆ ಬಳಿಕ ಈಜುಕೊಳಕ್ಕೆ ಈ ವರೆಗೆ ಯಾರಿಗೂ ಪ್ರವೇಶ ಕಲ್ಪಿಸಿಲ್ಲ. ಯಾವುದೇ ಸ್ಪರ್ಧೆಗಳೂ ಆಯೋಜನೆಗೊಂಡಿಲ್ಲ.

24.94 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣ ಸುಮಾರು 2 ಎಕ್ರೆ ಜಾಗದಲ್ಲಿ 24.94 ಕೋ. ರೂ. ವೆಚ್ಚದಲ್ಲಿ ಎಮ್ಮೆಕೆರೆ ಅಂತಾರಾಷ್ಟ್ರೀಯ ಈಜುಕೊಳ ಸಿದ್ಧವಾಗಿದೆ. ಈಜುಕೊಳ ಸಂಕೀರ್ಣವು 50 ಮೀ. ಉದ್ದ,25 ಮೀ. ಅಗಲ, 2.2 ಮೀ. ನಿಂದ 1.4 ಮೀ. ವರೆಗಿನ ಆಳವನ್ನು ಹೊಂದಿದೆ.

ಕ್ರೀಡಾಪಟುಗಳಿಗೆ ತರಬೇತಿಗಾಗಿ 25 ಮೀ. ಉದ್ದ, 10 ಮೀ. ಅಗಲ ಮತ್ತು 2.2 ಮೀ. ಆಳದ ಅಭ್ಯಾಸ ಪೂಲ್‌ ಅನ್ನು ನಿರ್ಮಿಸಲಾಗಿದೆ. ಮಕ್ಕಳನ್ನು ತರಬೇತುಗೊಳಿಸಲು 13.8 ಮೀ. ಉದ್ದ, 10ಮೀ ಅಗಲ ಮತ್ತು 1.2 ಮೀ. ಆಳದ ಪುಟಾಣಿ ಈಜುಕೊಳವನ್ನು ನಿರ್ಮಿಸಲಾಗಿದೆ. ಈಜು ಕೊಳ ಸಂಕೀರ್ಣದಲ್ಲಿ ಸ್ಪರ್ಧಾಳು ಈಜುಪಟುಗಳಿಗೆ ವಸತಿ ನಿಲಯಗಳು, ಜಿಮ್ನಾಶಿಯಂ, ಬಟ್ಟೆ ಬದಲಾಯಿಸುವ ಕೊಠಡಿಗಳು, ಶೌಚಾಲಯಗಳು, ಲಾಕರ್‌ ಗಳು, ಆಡಳಿತ ಕಚೇರಿ, ಕ್ರೀಡಾ ಔಷಧ, ಚಿಕಿತ್ಸಾ ಕೊಠಡಿಗಳು, ಫಿಸಿಯೋಥೆರಪಿ ಕೇಂದ್ರ ಸಹಿತ ಅಗತ್ಯ ಸೌಲಭ್ಯ ಹೊಂದಿದೆ.

10 ದಿನಗಳೊಳಗೆ ಬಳಕೆ ಸಿದ್ಧ
ಹೊಸದಾಗಿ ನಿರ್ಮಾಣಗೊಂಡಿರುವ ಕೊಳದಲ್ಲಿ ಸಾರ್ವಜನಿಕರಿಗೆ ಯಾವ ರೀತಿ ವ್ಯವಸ್ಥೆ ಕಲ್ಪಿಸಬೇಕು. ಕೊಳದ ನಿರ್ವಹಣೆ, ಖರ್ಚು ವೆಚ್ಚಗಳು ಸಹಿತ ಇನ್ನಿತರ ವಿಚಾರಗಳ ಬಗ್ಗೆ ಮಾಹಿತಿ ಪಡೆದುಕೊಳ್ಳಲಾಗಿದೆ. ಈಜುಕೊಳದಲ್ಲಿ ಸಾರ್ವಜನಿಕರಿಗೆ ಸುಸಜ್ಜಿತ ವ್ಯವಸ್ಥೆ ಕಲ್ಪಿಸುವ ಹಿನ್ನೆಲೆಯಲ್ಲಿ ರಾಜ್ಯದ ವಿವಿಧ ಕೊಳಗಳ ಬಗ್ಗೆ ಅಧ್ಯಯನ ನಡೆಸಿ ಕ್ರಮ ವಹಿಸಲಾಗಿದೆ. 10 ದಿನಗಳೊಳಗೆ ಸಾರ್ವಜನಿಕರಿಗೆ ಈಜುಕೊಳ ತೆರೆದುಕೊಳ್ಳಲಿದೆ. ಅಂತಿಮ ತಯಾರಿಗಳು ಪೂರ್ಣಗೊಂಡಾಕ್ಷಣ ಸಾರ್ವಜನಿಕರಿಗೆ ಅವಕಾಶ ಕಲ್ಪಿಸಲಾಗುವುದು.
-ಅರುಣ್‌ ಪ್ರಭ, ಸ್ಮಾರ್ಟ್‌ ಸಿಟಿ ಪ್ರಧಾನ ವ್ಯವಸ್ಥಾಪಕ

ಟಾಪ್ ನ್ಯೂಸ್

car

Road Mishap: ಕಮರಿಗೆ ಉರುಳಿದ ಕಾರು… ಐದು ಮಕ್ಕಳು ಸೇರಿ ಎಂಟು ಮಂದಿ ಮೃತ್ಯು

Chikkamagaluru; ಮಲೆನಾಡು ಭಾಗದಲ್ಲಿ ವಾರದಿಂದ ಕರೆಂಟ್, ನೆಟ್ ವರ್ಕ್ ಇಲ್ಲ! ಜನರ ಪರದಾಟ

Chikkamagaluru; ಮಲೆನಾಡು ಭಾಗದಲ್ಲಿ ವಾರದಿಂದ ಕರೆಂಟ್, ನೆಟ್ ವರ್ಕ್ ಇಲ್ಲ! ಜನರ ಪರದಾಟ

ವಿದೇಶಿ ಪ್ರವಾಸ ಕಥನ 6: ದುಬೈ, ಶಾರ್ಜಾ, ಅಜ್ಮಾನ್ ಪರ್ಯಟನೆ-ಕರಾವಳಿಗರ ಕಲರವ!

ವಿದೇಶಿ ಪ್ರವಾಸ ಕಥನ 6: ದುಬೈ, ಶಾರ್ಜಾ, ಅಜ್ಮಾನ್ ಪರ್ಯಟನೆ-ಕರಾವಳಿಗರ ಕಲರವ!

gajanur3

ತುಂಗಾ ಭದ್ರಾ ನದಿಯಲ್ಲಿ ನೀರಿನ ಹರಿವು ಹೆಚ್ಚಳ… ಮತ್ತೆ ಜಲಾವೃತಗೊಂಡ ಪತ್ತೆಪೂರ್ ರಸ್ತೆ

g t devegowda

Mysore; ನಾನು ಮುಡಾದಿಂದ ಎಲ್ಲಿಯೂ ನಿವೇಶನ ಪಡೆದುಕೊಂಡಿಲ್ಲ: ಜಿ ಟಿ ದೇವೇಗೌಡ

Tragedy: ಅಂದು ರೀಲ್ಸ್ ಗಾಗಿ ಚಲಿಸುವ ರೈಲಿನಲ್ಲಿ ಹುಚ್ಚಾಟ… ಇಂದು ಈ ಯುವಕನ ಸ್ಥಿತಿ ನೋಡಿ

Tragedy: ಅಂದು ರೀಲ್ಸ್ ಗಾಗಿ ಚಲಿಸುವ ರೈಲಿನಲ್ಲಿ ಹುಚ್ಚಾಟ… ಇಂದು ಈ ಯುವಕನ ಸ್ಥಿತಿ ನೋಡಿ

Desi Swara: ಶ್ರೀಕೃಷ್ಣನ ಮುಕುಟದಲ್ಲಿ ನವಿಲುಗರಿ ಹೇಗೆ ಬಂತು?

Desi Swara: ಶ್ರೀಕೃಷ್ಣನ ಮುಕುಟದಲ್ಲಿ ನವಿಲುಗರಿ ಹೇಗೆ ಬಂತು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Screenshot (6) copy

Mangaluru: ಬಗೆಹರಿಯದ ಬಜಾಲ್‌ ಅಂಡರ್‌ಪಾಸ್‌ ಅವ್ಯವಸ್ಥೆ

Screenshot (2)

Mangaluru: ಸೈನಿಕರನ್ನು ಗೌರವದಿಂದ ನಡೆಸಿಕೊಳ್ಳಿ: ಬ್ರಿ| ಐ.ಎನ್‌. ರೈ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

Taranga Ugadi Dhamaka2024; ಓದಿನಿಂದ ಜ್ಞಾನದ ವ್ಯಾಪ್ತಿ ವಿಸ್ತರಣೆ: ಡಾ| ಸಂಧ್ಯಾ ಎಸ್‌.ಪೈ

Taranga Ugadi Dhamaka2024; ಓದಿನಿಂದ ಜ್ಞಾನದ ವ್ಯಾಪ್ತಿ ವಿಸ್ತರಣೆ: ಡಾ| ಸಂಧ್ಯಾ ಎಸ್‌.ಪೈ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

9-uv-fusion

College Days: ಕಾಲೇಜೆಂಬ ನೆನಪಿನ ದೋಣಿಯಲಿ

new-parli

Lok Sabha, Assembly ಕ್ಷೇತ್ರಗಳ ಪುನರ್ವಿಂಗಡಣೆ: ದಕ್ಷಿಣ ತಕರಾರು ಏನು?ಮಾಹಿತಿ ಇಲ್ಲಿದೆ

8-uv-fusion

UV Fusion: ತುಳುನಾಡಿನ ಹೆಮ್ಮೆ ಕಂಬಳ

7-uv-fusion

UV Fusion: ಮಂಗನ ಕೈಯಲ್ಲಿದೆ ಮಾಣಿಕ್ಯ

car

Road Mishap: ಕಮರಿಗೆ ಉರುಳಿದ ಕಾರು… ಐದು ಮಕ್ಕಳು ಸೇರಿ ಎಂಟು ಮಂದಿ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.