ಬಿಎಡ್‌, ಎಂಎ ಪದವೀಧರರಾದರೂ ಮಾಸಿಕ ವೇತನ 8,500 ರೂ.!

ಇದು ರಾಜ್ಯದ ವಾಲ್ಮೀಕಿ ಆಶ್ರಮ ಶಾಲೆ ಶಿಕ್ಷಕರ ಗೋಳು

Team Udayavani, Mar 29, 2023, 7:34 AM IST

ಬಿಎಡ್‌, ಎಂಎ ಪದವೀಧರರಾದರೂ ಮಾಸಿಕ ವೇತನ 8,500 ರೂ.!

ಮಂಗಳೂರು: ಎಲ್ಲ ಶಿಕ್ಷಕರಂತೆ ಇವರೂ ಮಕ್ಕಳಿಗೆ ಬೆಳಗ್ಗಿನಿಂದ ಸಂಜೆಯ ವರೆಗೆ ಶಾಲೆಗಳಲ್ಲಿ ಪಾಠ ಮಾಡುತ್ತಾರೆ. ಸರಕಾರಿ ಶಿಕ್ಷಕರು ನಿರ್ವಹಿಸುವ ಇತರ ಕೆಲಸಗಳನ್ನೂ ಮಾಡುತ್ತಾರೆ. ಬಿಎಡ್‌, ಡಿಎಡ್‌ ಪದವಿಯ ಜತೆಗೆ ಕೆಲವರು ಸ್ನಾತಕೋತ್ತರ ಪದವಿಯನ್ನೂ ಪಡೆದವರಿದ್ದಾರೆ. 20 ವರ್ಷಗಳ ಸೇವಾನುಭವವನ್ನೂ ಹೊಂದಿದ್ದಾರೆ. ಆದರೆ ಪಡೆಯುವ ಮಾಸಿಕ ವೇತನ ಮಾತ್ರ 8,500 ರೂ.!

ಸೇವಾನುಭವದ ಆಧಾರದಲ್ಲಿ ಇವರಿಗೆ ಭಡ್ತಿಯಾಗಲಿ, ಕನಿಷ್ಠ ವೇತನವಾಗಲಿ ಇಲ್ಲವೇ ಇಲ್ಲ. ಇದು ರಾಜ್ಯದ 119 ವಾಲ್ಮೀಕಿ ಆಶ್ರಮ ಶಾಲೆಗಳ ಸುಮಾರು 350 ಶಿಕ್ಷಕರ ಸ್ಥಿತಿ.

ವಿಶೇಷವಾಗಿ ಬುಡಕಟ್ಟು ಹಾಗೂ ಮೂಲ ನಿವಾಸಿಗಳ ಮಕ್ಕಳಿಗೆ ವಸತಿಯೊಂದಿಗೆ ಶಿಕ್ಷಣ ಒದಗಿಸಲು ಆರಂಭಿಸಲಾದ ವಾಲ್ಮೀಕಿ ಆಶ್ರಮ ಶಾಲೆಗಳು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯಡಿ ಕಾರ್ಯ ನಿರ್ವಹಿಸು ತ್ತಿವೆ. ಇಲ್ಲಿ ಹೊರ ಗುತ್ತಿಗೆಯಲ್ಲಿ ಸೇವೆ ಸಲ್ಲಿಸುತ್ತಿರುವ ಶಿಕ್ಷಕರಲ್ಲಿ 20 ವರ್ಷಗಳಿಗೂ ಅಧಿಕ ಸೇವಾನುಭವ ಹೊಂದಿ ದವರೂ ಇದ್ದಾರೆ.ಅವರು ಕೂಡ 8,500 ರೂ. (ಭವಿಷ್ಯನಿಧಿ ಮತ್ತಿತರ ಕಡಿತ ಸೇರಿ ಕೈಗೆ ಸಿಗುವುದು 7,416 ರೂ. ಮಾತ್ರ)ಗಳ ಮಾಸಿಕ ಗೌರವ ಧನದಲ್ಲೇ ಬದುಕು ಸಾಗಿಸುತ್ತಿದ್ದಾರೆ.

ಪಾಠ ಹಾಗೂ ಪಠ್ಯೇತರ ಚಟುವಟಿಕೆಗಳ ಜತೆಗೆ ಪರೀಕ್ಷಾ ಕಾರ್ಯ ಹಾಗೂ ಶಾಲೆಯ ಕಚೇರಿ ಕೆಲಸಗಳನ್ನೂ ನಿಭಾಯಿಸುತ್ತೇವೆ. ಬೆಳಗ್ಗೆ 9ರಿಂದ ಸಂಜೆ 5.30ರ ವರೆಗೆ ಶಾಲೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತೇವೆ. ಶಿಕ್ಷಕರೆಲ್ಲರೂ ಪದವಿ ಜತೆ ಡಿಎಡ್‌, ಬಿಎಡ್‌ ಪದವಿಯನ್ನು ಪಡೆದಿದ್ದರೆ, ಸ್ನಾತಕೋತ್ತರ ಪದವಿಯನ್ನೂ ಪಡೆದವರಿದ್ದಾರೆ. ಆರಂಭದಲ್ಲಿ ನಾನು 5,600 ರೂ. ವೇತನ ಪಡೆಯುತ್ತಿದ್ದೆ. 2019ರಲ್ಲಿ 7,396 ರೂ.ಗಳಾಗಿದ್ದು, ಬಳಿಕ ಹೆಚ್ಚಳವಾಗಿಲ್ಲ. ಸರಕಾರಕ್ಕೆ ಮನವಿ ಸಲ್ಲಿಸುತ್ತ ಬರುತ್ತಿದ್ದೇವೆ. ಭರವಸೆ ಮಾತ್ರವೇ ದೊರಕುತ್ತಿದೆ’ ಎಂದು ಹೆಸರು ಹೇಳಲಿಚ್ಛಿಸದ ದ.ಕ. ಜಿಲ್ಲೆಯ ಆಶ್ರಮ ಶಾಲೆಯ ಶಿಕ್ಷಕರೊಬ್ಬರು ಅಭಿಪ್ರಾಯಪಟ್ಟಿದ್ದಾರೆ.

ಕಡತದಲ್ಲೇ ಉಳಿದ‌ ಸಚಿವರ ಭರವಸೆ
ಹೊರಗುತ್ತಿಗೆಯಲ್ಲಿರುವ ತಮ್ಮ ವೇತನ ಹೆಚ್ಚಳ ಹಾಗೂ ಸೇವಾ ಭದ್ರತೆಗೆ ಆಗ್ರಹಿಸಿ ಈ ಶಿಕ್ಷಕರ ನಿಯೋಗದ ಬೇಡಿಕೆ¿ಚು ಮೇರೆಗೆ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಸಚಿವ ಬಿ. ಶ್ರೀರಾಮುಲು ಸ್ಪಂದಿಸಿದ್ದಾರೆ. ಈ ಶಿಕ್ಷಕರ ಗೌರವ ಧನವನ್ನು 2 ಸಾವಿರ ರೂ.ಗಳಿಗೆ ಏರಿಕೆ ಮಾಡುವ ಕುರಿತು ಅವರು ಫೆ. 21ರಂದು ಟ್ವೀಟ್‌ ಮಾಡಿದ್ದರು. ಜತೆಗೆ ಈ ಶಿಕ್ಷಕರ ನೇರ ನೇಮಕಾತಿ, ಸೇವಾ ಭದ್ರತೆ ಮತ್ತು ಕನಿಷ್ಠ ವೇತನ 25,000 ರೂ.ಗಳ ಬೇಡಿಕೆಯನ್ನು ಪರಿಗಣಿಸುವುದಾಗಿಯೂ ಹೇಳಿ ದ್ದರು. ಅಲ್ಲದೆ ಸಚಿವ ಶ್ರೀರಾಮುಲು ನೇತೃತ್ವದಲ್ಲಿ ಕಳೆದ ವರ್ಷ ಸಭೆ ನಡೆದು ವೇತನ ಹೆಚ್ಚಳ ಹಾಗೂ ಶಿಕ್ಷಕರ ಸೇವಾನುಭವದ ಆಧಾರದಲ್ಲಿ ಖಾಯಂಗೊಳಿಸುವ ಕುರಿತಂತೆ ಒಪ್ಪಿಗೆ ನೀಡಲಾಗಿತ್ತು. ಕಳೆದ ಸೆಪ್ಟಂಬರ್‌ ಅಧಿವೇಶನದಲ್ಲಿಯೂ ಈ ಬಗ್ಗೆ ಪ್ರಸ್ತಾವವಾಗಿತ್ತು. ವಿಶೇಷ ಪ್ರಕರಣದಡಿ ಶಿಕ್ಷಕರ ಪರವಾಗಿ ಸೇವಾ ಭದ್ರತೆ ಮತ್ತು ಮೂಲವೇತನ ಕೊಡಲು ಮಂಜೂರು ಮಾಡಿ ಕಡತ ಸರಕಾರಕ್ಕೆ ಸಲ್ಲಿಕೆಯಾಗಿದ್ದರೂ ಬೇಡಿಕೆ ಮಾತ್ರ ಇನ್ನೂ ಕಡತಗಳಲ್ಲೇ ಬಾಕಿಯಾಗಿದೆ.

ಸುರತ್ಕಲ್‌ ಮಧ್ಯ: ರಾಜ್ಯದ
ಏಕಮಾತ್ರ ಆಶ್ರಮ ಹೈಸ್ಕೂಲ್‌
ದ.ಕ. ಜಿಲ್ಲೆಯ ಸುರತ್ಕಲ್‌ನ ಮಧ್ಯ ಆಶ್ರಮ ಶಾಲೆ ಹೈಸ್ಕೂಲ್‌ ತರಗತಿಗಳನ್ನೂ ಹೊಂದಿದ್ದು, ಇದು ರಾಜ್ಯದಲ್ಲಿ ಪ್ರೌಢ ಶಾಲಾ ತರಗತಿ ಹೊಂದಿರುವ ಏಕ ಮಾತ್ರ ಆಶ್ರಮ ಶಾಲೆ. ಇಲ್ಲಿ ಒಟ್ಟು 177 ಮಕ್ಕಳಿದ್ದು, 12 ಶಿಕ್ಷಕರಿದ್ದಾರೆ. ಈ ಶಾಲೆಯ 10ನೇ ತರಗತಿಯಲ್ಲಿ 12 ಮಕ್ಕಳು ಕಲಿಯುತ್ತಿದ್ದು, ಶಿಕ್ಷಕರು ಶಾಲಾ ವಧಿಯ ಬಳಿಕವೂ ವಿಶೇಷ ತರಗತಿ ನಿರ್ವ ಹಿಸು ತ್ತಾರೆ. ದ.ಕ. ಜಿಲ್ಲೆಯ 12 ವಾಲ್ಮೀಕಿ ಆಶ್ರಮ ಶಾಲೆಗಳಲ್ಲಿ ಒಟ್ಟು 44 ಶಿಕ್ಷಕರು ಕಾರ್ಯ ನಿರ್ವಹಿಸುತ್ತಿದ್ದಾರೆ. ಉಡುಪಿ ಜಿಲ್ಲೆಯಲ್ಲಿದ್ದ ಐದು ಶಾಲೆಗಳಲ್ಲಿ ಪ್ರಸ್ತುತ ಒಂದು ಮಾತ್ರ ಕಾರ್ಯಾಚರಿಸುತ್ತಿದೆ. ಇಲ್ಲಿ ಮೂವರು ಶಿಕ್ಷಕರಿದ್ದಾರೆ.

ವಾಲ್ಮೀಕಿ ಆಶ್ರಮ ಶಾಲೆಯ ಶಿಕ್ಷಕರಿಗೆ 8,500 ರೂ. ಗೌರವಧನ ಸಿಗುತ್ತಿದ್ದು, 2 ಸಾವಿರ ರೂ. ಏರಿಸ ಲಾ ಗಿದೆ. ಬಹಳ ವರ್ಷ ಗಳಿಂದ ದುಡಿ ಯು ತ್ತಿರುವ ಶಿಕ್ಷಕರ ಬೇಡಿಕೆ ಯಂತೆ ಸೇವಾ ಭದ್ರತೆ ಹಾಗೂ ಕನಿಷ್ಠ ವೇತನದ ಬಗ್ಗೆ ಮುಖ್ಯ ಮಂತ್ರಿಗಳ ಜತೆ ಚರ್ಚಿ ಸಿದ್ದು, ಸಮ್ಮತಿ ಸೂಚಿಸಿದ್ದಾರೆ. ಶಿಕ್ಷಕರಿಗೆ ಪೂರಕ  ವಾದ ನಿಟ್ಟಿನಲ್ಲಿ ಶೀಘ್ರ ನಿರ್ಧಾರ ಕೈಗೊಳ್ಳ  ಲಾಗುವುದು.
– ಬಿ. ಶ್ರೀರಾಮುಲು,
ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವ

- ಸತ್ಯಾ ಕೆ.

ಟಾಪ್ ನ್ಯೂಸ್

10

ದ.ಕ: ಬಿಜೆಪಿ ಜತೆಗಿನ ಮೈತ್ರಿಗೆ ವಿರೋಧ: 42 ಮಂದಿ ಜೆಡಿಎಸ್ ಪದಾಧಿಕಾರಿಗಳು ‘ಕೈʼ ಸೇರ್ಪಡೆ

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

ಸಮೀಕ್ಷೆಗಳಲ್ಲಿ ಹಿನ್ನಡೆ; ಹೀಗಾಗಿ ಕಾಂಗ್ರೆಸ್ ಕೀಳು‌ಮಟ್ಟದ ರಾಜಕಾರಣ ಮಾಡುತ್ತಿದೆ: ಜೋಶಿ

ಸಮೀಕ್ಷೆಗಳಲ್ಲಿ ಹಿನ್ನಡೆ; ಹೀಗಾಗಿ ಕಾಂಗ್ರೆಸ್ ಕೀಳು‌ಮಟ್ಟದ ರಾಜಕಾರಣ ಮಾಡುತ್ತಿದೆ: ಜೋಶಿ

Road mishap: ಖಾಸಗಿ ಬಸ್‌ – ಕಾರು ಅಪಘಾತ; ಆಂಧ್ರ ಮೂಲದ ಮೂವರು ಮೃತ್ಯು

Road mishap: ಖಾಸಗಿ ಬಸ್‌ – ಕಾರು ಅಪಘಾತ; ಆಂಧ್ರ ಮೂಲದ ಮೂವರು ಮೃತ್ಯು

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್

Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Moodabidri ಮೆದುಳು ಜ್ವರ ಉಲ್ಬಣಿಸಿ ವಿದ್ಯಾರ್ಥಿನಿ ನಿಧನ

Moodabidri ಮೆದುಳು ಜ್ವರ ಉಲ್ಬಣಿಸಿ ವಿದ್ಯಾರ್ಥಿನಿ ನಿಧನ

Dakshina Kannada: ಮನೆಮನೆ ಭೇಟಿ ಮೂಲಕ ಮತದಾನ ಸೌಲಭ್ಯಕ್ಕೆ ಚಾಲನೆ

Dakshina Kannada: ಮನೆಮನೆ ಭೇಟಿ ಮೂಲಕ ಮತದಾನ ಸೌಲಭ್ಯಕ್ಕೆ ಚಾಲನೆ

Hajj Yatra: ಕಂತು ಪಾವತಿಗೆ ಎ. 27ರಂದು ಕೊನೆಯ ದಿನ

Hajj Yatra: ಕಂತು ಪಾವತಿಗೆ ಎ. 27ರಂದು ಕೊನೆಯ ದಿನ

Mangaluru ಪ್ರಧಾನಿಯ ಕೈ ಸೇರಿದ ಕರಾವಳಿ ಕಲಾವಿದನ “ಆಯಿಲ್‌ ಕ್ಯಾನ್ವಾಸ್‌’

Mangaluru ಪ್ರಧಾನಿಯ ಕೈ ಸೇರಿದ ಕರಾವಳಿ ಕಲಾವಿದನ “ಆಯಿಲ್‌ ಕ್ಯಾನ್ವಾಸ್‌’

ರಾಜ್ಯಪ್ರಶಸ್ತಿ ಪುರಸ್ಕೃತ ಕಲಾವಿದೆ ಗಿಡಿಗೆರೆ ರಾಮಕ್ಕ ನಿಧನ

ರಾಜ್ಯಪ್ರಶಸ್ತಿ ಪುರಸ್ಕೃತ ಕಲಾವಿದೆ ಗಿಡಿಗೆರೆ ರಾಮಕ್ಕ ನಿಧನ

MUST WATCH

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

udayavani youtube

ಶ್ರೀ ವೈಷ್ಣವಿ ದುರ್ಗಾ ದೇವಾಲಯ

udayavani youtube

ಟೈಟನ್ ಕಂಪೆನಿಯ Xylys ವಾಚ್ ವಿಶೇಷತೆಗಳೇನು ?

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

ಹೊಸ ಸೇರ್ಪಡೆ

10

ದ.ಕ: ಬಿಜೆಪಿ ಜತೆಗಿನ ಮೈತ್ರಿಗೆ ವಿರೋಧ: 42 ಮಂದಿ ಜೆಡಿಎಸ್ ಪದಾಧಿಕಾರಿಗಳು ‘ಕೈʼ ಸೇರ್ಪಡೆ

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

ಸಮೀಕ್ಷೆಗಳಲ್ಲಿ ಹಿನ್ನಡೆ; ಹೀಗಾಗಿ ಕಾಂಗ್ರೆಸ್ ಕೀಳು‌ಮಟ್ಟದ ರಾಜಕಾರಣ ಮಾಡುತ್ತಿದೆ: ಜೋಶಿ

ಸಮೀಕ್ಷೆಗಳಲ್ಲಿ ಹಿನ್ನಡೆ; ಹೀಗಾಗಿ ಕಾಂಗ್ರೆಸ್ ಕೀಳು‌ಮಟ್ಟದ ರಾಜಕಾರಣ ಮಾಡುತ್ತಿದೆ: ಜೋಶಿ

Road mishap: ಖಾಸಗಿ ಬಸ್‌ – ಕಾರು ಅಪಘಾತ; ಆಂಧ್ರ ಮೂಲದ ಮೂವರು ಮೃತ್ಯು

Road mishap: ಖಾಸಗಿ ಬಸ್‌ – ಕಾರು ಅಪಘಾತ; ಆಂಧ್ರ ಮೂಲದ ಮೂವರು ಮೃತ್ಯು

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.