![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-415x252.jpg)
Graduation: ಸ್ವದೇಶದಲ್ಲೇ ಸೇವೆಯ ಸಂಕಲ್ಪ ಅಗತ್ಯ: ಡಾ| ರಮೇಶ್ಚಂದ್ರ
ಫಾದರ್ ಮುಲ್ಲರ್ ಶಿಕ್ಷಣ ಸಂಸ್ಥೆಗಳ ಪದವಿ ಪ್ರದಾನ
Team Udayavani, Mar 20, 2024, 10:29 AM IST
![7-graduation](https://www.udayavani.com/wp-content/uploads/2024/03/7-graduation-620x372.jpg)
ಮಂಗಳೂರು: ನರ್ಸಿಂಗ್ ಸಹಿತ ವೈದ್ಯಕೀಯದ ವಿವಿಧ ಕ್ಷೇತ್ರದಲ್ಲಿರುವ ವಿದ್ಯಾರ್ಥಿಗಳು ವೃತ್ತಿ ಸೇವೆಯ ನಿಮಿತ್ತ ವಿದೇಶಗಳಿಗೆ ತೆರಳುವುದಕ್ಕೆ ಆದ್ಯತೆ ನೀಡುವ ಬದಲು, ದೇಶದೊಳಗೆಯೇ ವೈದ್ಯಕೀಯ ಸೇವೆ ಸಲ್ಲಿಸಲು ಹೆಚ್ಚು ಒತ್ತು ನೀಡಬೇಕಾಗಿದೆ ಎಂದು ಭಾರತದ ವಿದೇಶಾಂಗ ವ್ಯವಹಾರಗಳ ಇಲಾಖೆಯ ಹೆಚ್ಚುವರಿ ಕಾರ್ಯದರ್ಶಿ ಡಾ| ಎ.ವಿ.ಎಸ್. ರಮೇಶ್ ಚಂದ್ರ ಹೇಳಿದರು.
ಮಂಗಳೂರಿನ ಫಾದರ್ ಮುಲ್ಲರ್ ಸ್ಕೂಲ್ ಆಫ್ ನರ್ಸಿಂಗ್, ನರ್ಸಿಂಗ್ ಕಾಲೇಜು ಹಾಗೂ ವಾಕ್ ಮತ್ತು ಶ್ರವಣ ಕಾಲೇಜುಗಳಲ್ಲಿ ಪದವಿ ಪೂರ್ಣಗೊಳಿಸಿದ ವಿದ್ಯಾರ್ಥಿಗಳಿಗೆ ಫಾದರ್ ಮುಲ್ಲರ್ ಕನ್ವೆನ್ಶನ್ ಸೆಂಟರ್ ನಲ್ಲಿ ಮಂಗಳವಾರ ನಡೆದ ಪದವಿ ಪ್ರದಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ವಿದೇಶದಲ್ಲಿ ವೈದ್ಯಕೀಯ ಕ್ಷೇತ್ರದ ಹುದ್ದೆ ಸಹಿತ ವಿದ್ಯಾಭ್ಯಾಸದ ಸಂದರ್ಭ ಕೆಲವೊಂದು ಕ್ಲಿಷ್ಟಕರ ಸನ್ನಿವೇಶ ಎದುರಾಗಿದ್ದನ್ನು ನಾನು ಹತ್ತಿರದಿಂದ ಗಮನಿಸಿದ್ದೇನೆ. ಬಹುಮುಖ್ಯವಾಗಿ ದೇಶದಲ್ಲಿ ವೈದ್ಯಕೀಯ ಶಿಕ್ಷಣ ಪಡೆದು ದೇಶದೊಳಗೆಯೇ ಅಥವಾ ರಾಜ್ಯದೊಳಗೆಯೇ ಸೇವೆ ಸಲ್ಲಿಸುವ ಸೌಭಾಗ್ಯ ಉತ್ತಮ ಅವಕಾಶ ಎಂದರು.
ಅತ್ಯುತ್ತಮ ನರ್ಸ್ಗಳನ್ನು ಹೊಂದಿರುವ ಜಗತ್ತಿನ ವಿವಿಧ ದೇಶಗಳ ಪೈಕಿ ಭಾರತ 5ನೇ ಸ್ಥಾನ ಪಡೆದಿದೆ. ವಾಕ್ ಮತ್ತು ಶ್ರವಣ ವಿಭಾಗದಲ್ಲಿಯೂ ಭಾರತ ಗಮನೀಯ ಸಾಧನೆ ಬರೆದಿದೆ. ಗುಣಮಟ್ಟದ ವೈದ್ಯಕೀಯ ಸೇವೆ ದೇಶದ ಹಿರಿಮೆ. ಪ್ರೀತಿ, ಸಹಾನುಭೂತಿ ಇಲ್ಲಿ ಮುಖ್ಯ ಸ್ಥಾನ ಪಡೆದಿದೆ ಎಂದರು.
ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿ.ವಿ. ಸಿಂಡಿಕೇಟ್ ಸದಸ್ಯ ಪ್ರೊ| ಯು.ಟಿ. ಇಫ್ತೀಕರ್ ಫರೀದ್ ಮಾತನಾಡಿ, ಆರೋಗ್ಯ ಕ್ಷೇತ್ರದಲ್ಲಿ ನರ್ಸಿಂಗ್ ಸೇವೆಗೆ ಬಹುದೊಡ್ಡ ಗೌರವವಿದೆ. ಫಾದರ್ ಮುಲ್ಲರ್ ಸಂಸ್ಥೆಯು ವೈದ್ಯಕೀಯ ಕ್ಷೇತ್ರದಲ್ಲಿ ಸಮಾಜಕ್ಕೆ ಅದ್ವಿತೀಯ ಕೊಡುಗೆ ನೀಡಿದೆ ಎಂದು ಶ್ಲಾಘಿಸಿದರು.
ಫಾದರ್ ಮುಲ್ಲರ್ ಸಮೂಹ ಸಂಸ್ಥೆಗಳ ನಿರ್ದೇಶಕ ರೆ|ಫಾ|ರಿಚರ್ಡ್ ಅಲೋಶಿಯಸ್ ಕುವೆಲ್ಲೋ ಸ್ವಾಗತಿಸಿದರು. ಅತ್ಯುತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳಾದ ಅನಿಶಾ ಮೈಕೆಲ್ ಸಿಕ್ವೇರ, ಲಿಶ್ಮಿತಾ ಲಾರೆಲ್ ಡಿಸೋಜ, ಆ್ಯಡ್ಲೆನ್ ಐರೆಲ್ ಪಿರೇರಾ ಸಹಿತ ಹಲವು ವಿದ್ಯಾರ್ಥಿಗಳನ್ನು ಗೌರವಿಸಲಾಯಿತು.
ಎಫ್ಎಂಎಸ್ಒಎನ್ ಮತ್ತು ಎಫ್ ಎಂಸಿಒಎನ್ ಪ್ರಾಂಶುಪಾಲರಾದ ಭ| ಜೆಸಿಂತಾ ಡಿ’ಸೋಜಾ, ಎಫ್ ಎಂಸಿಯ ಸ್ಪೀಚ್ ಆ್ಯಂಡ್ ಹಿಯರಿಂಗ್ ಪ್ರಾಂಶುಪಾಲರಾದ ಪ್ರೊ| ಸಿಂಥಿಯಾ ಸಾಂತುಮಾಯರ್, ಪ್ರಮುಖರಾದ ಅಜು ಅಬ್ರಹಾಂ, ಡಾ| ಆ್ಯಗ್ನೆಸ್, ಸಿ| ಧನ್ಯ ದೇವಕಿಯ, ಡಾ| ಉದಯ್ ಕುಮಾರ್ ಉಪಸ್ಥಿತರಿದ್ದರು.
ನಗು ಮುಖದ ಸೇವೆಯೇ ಔಷಧ: ಬಿಷಪ್
ಮಂಗಳೂರು ಬಿಷಪ್ ಹಾಗೂ ಫಾದರ್ ಮುಲ್ಲರ್ ಸಂಸ್ಥೆಗಳ ಅಧ್ಯಕ್ಷ ರೈ| ರೆ| ಡಾ| ಪೀಟರ್ ಪಾವ್ಲ್ ಸಲ್ಡಾನ್ಹಾ ಮಾತನಾಡಿ, ನರ್ಸಿಂಗ್ ಸೇವೆ ಮಾನವೀಯ ಸೇವೆಯ ದ್ಯೋತಕ. ಕಷ್ಟದಲ್ಲಿರುವವರ ಕೈ ಹಿಡಿದು ಸಾಂತ್ವನದೊಂದಿಗೆ ಭರವಸೆ ನೀಡುವ ಮಹಾ ಕಾರ್ಯ ಇದರಿಂದ ನಡೆಯುತ್ತದೆ ಎಂದು ಹೇಳಿ, ರೋಗಿಯೊಬ್ಬನನ್ನು ಉಪಚರಿಸುವ ರೀತಿ ಹಾಗೂ ಅವನಿಗೆ ನಗುಮುಖದ ಸೇವೆ ನೀಡುವುದೇ ಬಹುದೊಡ್ಡ ಕಾರ್ಯ ಎಂಬುದನ್ನು ವಿದ್ಯಾರ್ಥಿಗಳು ಅರ್ಥಮಾಡಬೇಕು. ನಗುವಿನ ಮೂಲಕವೇ ಎಲ್ಲ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಸಾಧ್ಯ ಎಂದರು.
ಟಾಪ್ ನ್ಯೂಸ್
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-415x252.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!](https://www.udayavani.com/wp-content/uploads/2024/07/Pilikula-Biological-150x91.jpg)
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
![New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್ ಗ್ಯಾಂಗ್’](https://www.udayavani.com/wp-content/uploads/2024/07/POLICE-5-12-150x79.jpg)
New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್ ಗ್ಯಾಂಗ್’
![Taranga Ugadi Dhamaka2024; ಓದಿನಿಂದ ಜ್ಞಾನದ ವ್ಯಾಪ್ತಿ ವಿಸ್ತರಣೆ: ಡಾ| ಸಂಧ್ಯಾ ಎಸ್.ಪೈ](https://www.udayavani.com/wp-content/uploads/2024/07/Taranga-Ugadi-150x82.jpg)
Taranga Ugadi Dhamaka2024; ಓದಿನಿಂದ ಜ್ಞಾನದ ವ್ಯಾಪ್ತಿ ವಿಸ್ತರಣೆ: ಡಾ| ಸಂಧ್ಯಾ ಎಸ್.ಪೈ
![Mangaluru ನದಿ ದಡದಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ](https://www.udayavani.com/wp-content/uploads/2024/07/man-a-4-150x86.jpg)
Mangaluru ನದಿ ದಡದಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ
![Mobile, ಗಾಂಜಾ ಪತ್ತೆ ಹಿನ್ನೆಲೆ: ಜಿಲ್ಲಾ ಕಾರಾಗೃಹಕ್ಕೆ ಬಂಧಿಖಾನೆ ಡಿಐಜಿ ಭೇಟಿ](https://www.udayavani.com/wp-content/uploads/2024/07/dg-150x83.jpg)
Mobile, ಗಾಂಜಾ ಪತ್ತೆ ಹಿನ್ನೆಲೆ: ಜಿಲ್ಲಾ ಕಾರಾಗೃಹಕ್ಕೆ ಬಂಧಿಖಾನೆ ಡಿಐಜಿ ಭೇಟಿ
MUST WATCH
ಹೊಸ ಸೇರ್ಪಡೆ
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
![Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ](https://www.udayavani.com/wp-content/uploads/2024/07/Vidhana-Soudha-24-150x100.jpg)
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-150x100.jpg)
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
![Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!](https://www.udayavani.com/wp-content/uploads/2024/07/Pilikula-Biological-150x91.jpg)
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
![1-aaasdeqweqw](https://www.udayavani.com/wp-content/uploads/2024/07/1-aaasdeqweqw-150x100.jpg)
India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್ ಯುಗಾರಂಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.