Graduation: ಸ್ವದೇಶದಲ್ಲೇ ಸೇವೆಯ ಸಂಕಲ್ಪ ಅಗತ್ಯ: ಡಾ| ರಮೇಶ್‌ಚಂದ್ರ

ಫಾದರ್‌ ಮುಲ್ಲರ್‌ ಶಿಕ್ಷಣ ಸಂಸ್ಥೆಗಳ ಪದವಿ ಪ್ರದಾನ

Team Udayavani, Mar 20, 2024, 10:29 AM IST

7-graduation

ಮಂಗಳೂರು: ನರ್ಸಿಂಗ್‌ ಸಹಿತ ವೈದ್ಯಕೀಯದ ವಿವಿಧ ಕ್ಷೇತ್ರದಲ್ಲಿರುವ ವಿದ್ಯಾರ್ಥಿಗಳು ವೃತ್ತಿ ಸೇವೆಯ ನಿಮಿತ್ತ ವಿದೇಶಗಳಿಗೆ ತೆರಳುವುದಕ್ಕೆ ಆದ್ಯತೆ ನೀಡುವ ಬದಲು, ದೇಶದೊಳಗೆಯೇ ವೈದ್ಯಕೀಯ ಸೇವೆ ಸಲ್ಲಿಸಲು ಹೆಚ್ಚು ಒತ್ತು ನೀಡಬೇಕಾಗಿದೆ ಎಂದು ಭಾರತದ ವಿದೇಶಾಂಗ ವ್ಯವಹಾರಗಳ ಇಲಾಖೆಯ ಹೆಚ್ಚುವರಿ ಕಾರ್ಯದರ್ಶಿ ಡಾ| ಎ.ವಿ.ಎಸ್‌. ರಮೇಶ್‌ ಚಂದ್ರ ಹೇಳಿದರು.

ಮಂಗಳೂರಿನ ಫಾದರ್‌ ಮುಲ್ಲರ್‌ ಸ್ಕೂಲ್ ಆಫ್‌ ನರ್ಸಿಂಗ್‌, ನರ್ಸಿಂಗ್‌ ಕಾಲೇಜು ಹಾಗೂ ವಾಕ್‌ ಮತ್ತು ಶ್ರವಣ ಕಾಲೇಜುಗಳಲ್ಲಿ ಪದವಿ ಪೂರ್ಣಗೊಳಿಸಿದ ವಿದ್ಯಾರ್ಥಿಗಳಿಗೆ ಫಾದರ್‌ ಮುಲ್ಲರ್‌ ಕನ್ವೆನ್ಶನ್‌ ಸೆಂಟರ್‌ ನಲ್ಲಿ ಮಂಗಳವಾರ ನಡೆದ ಪದವಿ ಪ್ರದಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ‌

ವಿದೇಶದಲ್ಲಿ ವೈದ್ಯಕೀಯ ಕ್ಷೇತ್ರದ ಹುದ್ದೆ ಸಹಿತ ವಿದ್ಯಾಭ್ಯಾಸದ ಸಂದರ್ಭ ಕೆಲವೊಂದು ಕ್ಲಿಷ್ಟಕರ ಸನ್ನಿವೇಶ ಎದುರಾಗಿದ್ದನ್ನು ನಾನು ಹತ್ತಿರದಿಂದ ಗಮನಿಸಿದ್ದೇನೆ. ಬಹುಮುಖ್ಯವಾಗಿ ದೇಶದಲ್ಲಿ ವೈದ್ಯಕೀಯ ಶಿಕ್ಷಣ ಪಡೆದು ದೇಶದೊಳಗೆಯೇ ಅಥವಾ ರಾಜ್ಯದೊಳಗೆಯೇ ಸೇವೆ ಸಲ್ಲಿಸುವ ಸೌಭಾಗ್ಯ ಉತ್ತಮ ಅವಕಾಶ ಎಂದರು.

ಅತ್ಯುತ್ತಮ ನರ್ಸ್‌ಗಳನ್ನು ಹೊಂದಿರುವ ಜಗತ್ತಿನ ವಿವಿಧ ದೇಶಗಳ ಪೈಕಿ ಭಾರತ 5ನೇ ಸ್ಥಾನ ಪಡೆದಿದೆ. ವಾಕ್‌ ಮತ್ತು ಶ್ರವಣ ವಿಭಾಗದಲ್ಲಿಯೂ ಭಾರತ ಗಮನೀಯ ಸಾಧನೆ ಬರೆದಿದೆ. ಗುಣಮಟ್ಟದ ವೈದ್ಯಕೀಯ ಸೇವೆ ದೇಶದ ಹಿರಿಮೆ. ಪ್ರೀತಿ, ಸಹಾನುಭೂತಿ ಇಲ್ಲಿ ಮುಖ್ಯ ಸ್ಥಾನ ಪಡೆದಿದೆ ಎಂದರು.

ರಾಜೀವ್‌ ಗಾಂಧಿ ಆರೋಗ್ಯ ವಿಜ್ಞಾನ ವಿ.ವಿ. ಸಿಂಡಿಕೇಟ್‌ ಸದಸ್ಯ ಪ್ರೊ| ಯು.ಟಿ. ಇಫ್ತೀಕರ್‌ ಫರೀದ್‌ ಮಾತನಾಡಿ, ಆರೋಗ್ಯ ಕ್ಷೇತ್ರದಲ್ಲಿ ನರ್ಸಿಂಗ್‌ ಸೇವೆಗೆ ಬಹುದೊಡ್ಡ ಗೌರವವಿದೆ. ಫಾದರ್‌ ಮುಲ್ಲರ್‌ ಸಂಸ್ಥೆಯು ವೈದ್ಯಕೀಯ ಕ್ಷೇತ್ರದಲ್ಲಿ ಸಮಾಜಕ್ಕೆ ಅದ್ವಿತೀಯ ಕೊಡುಗೆ ನೀಡಿದೆ ಎಂದು ಶ್ಲಾಘಿಸಿದರು.

ಫಾದರ್‌ ಮುಲ್ಲರ್‌ ಸಮೂಹ ಸಂಸ್ಥೆಗಳ ನಿರ್ದೇಶಕ ರೆ|ಫಾ|ರಿಚರ್ಡ್‌ ಅಲೋಶಿಯಸ್‌ ಕುವೆಲ್ಲೋ ಸ್ವಾಗತಿಸಿದರು. ಅತ್ಯುತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳಾದ ಅನಿಶಾ ಮೈಕೆಲ್‌ ಸಿಕ್ವೇರ, ಲಿಶ್ಮಿತಾ ಲಾರೆಲ್‌ ಡಿಸೋಜ, ಆ್ಯಡ್ಲೆನ್‌ ಐರೆಲ್‌ ಪಿರೇರಾ ಸಹಿತ ಹಲವು ವಿದ್ಯಾರ್ಥಿಗಳನ್ನು ಗೌರವಿಸಲಾಯಿತು.

ಎಫ್‌ಎಂಎಸ್‌ಒಎನ್‌ ಮತ್ತು ಎಫ್‌ ಎಂಸಿಒಎನ್‌ ಪ್ರಾಂಶುಪಾಲರಾದ ಭ| ಜೆಸಿಂತಾ ಡಿ’ಸೋಜಾ, ಎಫ್‌ ಎಂಸಿಯ ಸ್ಪೀಚ್‌ ಆ್ಯಂಡ್‌ ಹಿಯರಿಂಗ್‌ ಪ್ರಾಂಶುಪಾಲರಾದ ಪ್ರೊ| ಸಿಂಥಿಯಾ ಸಾಂತುಮಾಯರ್‌, ಪ್ರಮುಖರಾದ ಅಜು ಅಬ್ರಹಾಂ, ಡಾ| ಆ್ಯಗ್ನೆಸ್‌, ಸಿ| ಧನ್ಯ ದೇವಕಿಯ, ಡಾ| ಉದಯ್‌ ಕುಮಾರ್‌ ಉಪಸ್ಥಿತರಿದ್ದರು.

ನಗು ಮುಖದ ಸೇವೆಯೇ ಔಷಧ: ಬಿಷಪ್‌

ಮಂಗಳೂರು ಬಿಷಪ್‌ ಹಾಗೂ ಫಾದರ್‌ ಮುಲ್ಲರ್‌ ಸಂಸ್ಥೆಗಳ ಅಧ್ಯಕ್ಷ ರೈ| ರೆ| ಡಾ| ಪೀಟರ್‌ ಪಾವ್ಲ್ ಸಲ್ಡಾನ್ಹಾ ಮಾತನಾಡಿ, ನರ್ಸಿಂಗ್‌ ಸೇವೆ ಮಾನವೀಯ ಸೇವೆಯ ದ್ಯೋತಕ. ಕಷ್ಟದಲ್ಲಿರುವವರ ಕೈ ಹಿಡಿದು ಸಾಂತ್ವನದೊಂದಿಗೆ ಭರವಸೆ ನೀಡುವ ಮಹಾ ಕಾರ್ಯ ಇದರಿಂದ ನಡೆಯುತ್ತದೆ ಎಂದು ಹೇಳಿ, ರೋಗಿಯೊಬ್ಬನನ್ನು ಉಪಚರಿಸುವ ರೀತಿ ಹಾಗೂ ಅವನಿಗೆ ನಗುಮುಖದ ಸೇವೆ ನೀಡುವುದೇ ಬಹುದೊಡ್ಡ ಕಾರ್ಯ ಎಂಬುದನ್ನು ವಿದ್ಯಾರ್ಥಿಗಳು ಅರ್ಥಮಾಡಬೇಕು. ನಗುವಿನ ಮೂಲಕವೇ ಎಲ್ಲ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಸಾಧ್ಯ ಎಂದರು.

 

ಟಾಪ್ ನ್ಯೂಸ್

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.