ದಾಳಿಯ ಬಗ್ಗೆ ಚಿತ್ರ ನಟ ಅನಂತನಾಗ್ ಆಕ್ರೋಶ
Team Udayavani, Feb 17, 2019, 4:25 AM IST
ಮಂಗಳೂರು: ಜಮ್ಮು ಕಾಶ್ಮೀರದ ಅವಂತಿಪೋರಾದಲ್ಲಿ ಭಾರತೀಯ ಸಿಆರ್ಪಿಎಫ್ ಯೋಧರ ಮೇಲೆ ಉಗ್ರರಿಂದ ನಡೆದ ದಾಳಿ ಆಕ್ರೋಶ ಉಂಟು ಮಾಡಿದೆ. ಸಿಟ್ಟಿನೊಂದಿಗೆ ಅಸಹಾಯಕತೆ ಕಾಡುತ್ತಿದೆ. ಈ ಘಟನೆಗಳ ಹಿಂದಿರುವ ಭಯೋತ್ಪಾದಕ ದೇಶ ಪಾಕಿಸ್ಥಾನಕ್ಕೆ ಮೋದಿ ನೇತೃತ್ವದ ಸರಕಾರ ತಕ್ಕ ಪಾಠ ಕಲಿಸಬೇಕು ಎಂದು ಹಿರಿಯ ಚಿತ್ರನಟ ಅನಂತನಾಗ್ ಹೇಳಿದರು.
ನಗರದ ಲಕ್ಷ್ಮೀ ಮೆಮೋರಿಯಲ್ ಹೋಟೆಲ್ ಮ್ಯಾನೇಜ್ಮೆಂಟ್ ಕಾಲೇಜಿನಲ್ಲಿ ಶನಿವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು. ಉಗ್ರರನ್ನು ಹತ್ತಿಕ್ಕಲು ಸೇನೆಗೆ ಹೆಚ್ಚಿನ ಬಲ ನೀಡಬೇಕು. ಕಾಶ್ಮೀರದಲ್ಲಿ ಸೇಬು ಬೆಳೆಯುತ್ತದೆ. ಜತೆಗೆ ಭಯೋತ್ಪಾದನೆಯೂ ಹುಲುಸಾಗಿ ಬೆಳೆಯುತ್ತಿದೆ. ಈ ಸಮಸ್ಯೆಗೆ ಶಾಶ್ವತ ಪರಿಹಾರ ನೀಡಬೇಕು ಎಂದವರು ಹೇಳಿದರು.
ತುಳುವಿನಲ್ಲಿ ಬಣ್ಣ
ತುಳು ಚಲನಚಿತ್ರ ರಂಗ ಬೆಳೆಯುತ್ತಿದ್ದು, “ಇಂಗ್ಲಿಷ್’ ಚಲನಚಿತ್ರದ ಮುಖೇನ ಇದೇ ಮೊದಲ ಬಾರಿಗೆ ತುಳು ಭಾಷೆಯ ಚಿತ್ರವೊಂದಕ್ಕೆ ಬಣ್ಣ ಹಚ್ಚಿದ್ದೇನೆ ಎಂದು ಇದೇವೇಳೆ ಅನಂತ್ನಾಗ್ ಹೇಳಿದರು. ಚಲನಚಿತ್ರದಲ್ಲಿ ಇಂಗ್ಲಿಷ್ ಅಧ್ಯಾಪಕನ ಪಾತ್ರ ನಿರ್ವಹಿಸಿದ್ದೇನೆ. ಇತ್ತೀಚಿನ ದಿನಗಳಲ್ಲಿ ಇಂಗ್ಲಿಷ್ ಭಾಷೆ ವ್ಯಾಪ್ತಿ ಹೆಚ್ಚುತ್ತಿದೆ. ಇದರ ನಡುವೆ ಮಾತೃ ಭಾಷೆಗೆ ಪೆಟ್ಟು ಬೀಳಬಾರದು. ಈ ತಾತ್ಪರ್ಯ ಚಲನಚಿತ್ರದಲ್ಲಿದೆ ಎಂದು ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಅನಂತ್ನಾಗ್ ಅವರ ಪತ್ನಿ ಗಾಯತ್ರಿ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
MUST WATCH
ಹೊಸ ಸೇರ್ಪಡೆ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ