ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ : ಚಾಲಕ ಅಪಾಯದಿಂದ ಪಾರು
Team Udayavani, Jul 31, 2019, 3:33 PM IST
ಮಂಗಳೂರು: ಕೊಡಿಯಾಲ್ ಬೈಲು ಪ್ರದೇಶದ ಜೈಲು ರಸ್ತೆಯ ಸಮೀಪ ಚಲಿಸುತ್ತಿದ್ದ ಕಾರೊಂದರಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡ ಘಟನೆ ಬುಧವಾರದಂದು ನಡೆದಿದೆ.
ಕಾರು ರಸ್ತೆಯಲ್ಲಿ ಸಂಚರಿಸುತ್ತಿದ್ದ ಸಂದರ್ಭದಲ್ಲೇ ಅದರ ಇಂಜಿನ್ ಭಾಗದಲ್ಲಿ ಬೆಂಕಿಯ ಕಿಡಿ ಕಾಣಿಸಿಕೊಂಡಿದೆ. ಕಿಡಿ ಮತ್ತು ಹೊಗಡ ಕಾಣಿಸಿಕೊಂಡ ತಕ್ಷಣ ಕಾರನ್ನು ಚಲಾಯಿಸುತ್ತಿದ್ದ ಅದರ ಮಾಲಕ ವಿಕ್ರಂ ಅವರು ತಕ್ಷಣವೇ ಕಾರನ್ನು ರಸ್ತೆ ಬದಿಗೆ ನಿಲ್ಲಿಸಿ ಕಾರಿನಿಂದ ಕೆಳಗೆ ಇಳಿದಿದ್ದಾರೆ. ಇದರಿಂದಾಗಿ ಸಂಭವಿಸಬಹುದಾಗಿದ್ದ ಅಪಾಯವೊಂದು ತಪ್ಪಿದೆ. ಬಳಿಕ ಅಗ್ನಿಶಾಮಕ ದಳದವರು ಸ್ಥಳಕ್ಕೆ ಆಗಮಿಸಿ ಕಾರಿಗೆ ವ್ಯಾಪಿಸುತ್ತಿದ್ದ ಬೆಂಕಿಯನ್ನು ನಂದಿಸಿದರು.
ಕಾರಿನ ಎ.ಸಿ.ಯನ್ನು ದುರಸ್ತಿಪಡಿಸಿ ತರುತ್ತಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿದೆ ಎಂಬುದಾಗಿ ಕಾರಿನ ಮಾಲಿಕ ವಿಕ್ರಂ ಅವರು ಪ್ರತಿಕ್ರಿಯೆ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ
ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್ ಭಾಟಿಯಾ ವ್ಯಂಗ್ಯ
Mangaluru ಪೆಟ್ರೋಲ್, ಡೀಸೆಲ್ ತುಟ್ಟಿ : ಪುಷ್ಪಾ ಅಮರನಾಥ್
Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!
College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ