ಮೊದಲು ಜಾಗೃತಿ, ಬಳಿಕ ದಂಡ: ಮನಪಾ ಎಚ್ಚರಿಕೆ


Team Udayavani, Jul 3, 2019, 5:00 AM IST

28

ಮಹಾನಗರ: ಮಂಗಳೂರು ನಗರ ವ್ಯಾಪ್ತಿಯಲ್ಲಿ ದಿನನಿತ್ಯ ಉತ್ಪತ್ತಿಯಾಗುತ್ತಿರುವ ತ್ಯಾಜ್ಯವನ್ನು ಹಸಿ ಕಸ ಹಾಗೂ ಒಣ ಕಸವಾಗಿ ವಿಂಗಡಿಸಿ ಮಹಾನಗರ ಪಾಲಿಕೆ ವತಿಯಿಂದ ಮಾಡಲಾಗಿರುವ ಸಂಗ್ರಹಣಾ ವ್ಯವಸ್ಥೆಗೆ ನೀಡುವ ವ್ಯವಸ್ಥೆಗೆ ಸೋಮವಾರ ಚಾಲನೆ ನೀಡಲಾಗಿದೆ.

ಮೊದಲ ಹಂತದಲ್ಲಿ ಹಸಿಕಸ, ಒಣ ಕಸ ಪ್ರತ್ಯೇಕಿಸಿ ನೀಡುವ ಬಗ್ಗೆ ಜಾಗೃತಿ ಮೂಡಿಸಲಾಗುತ್ತಿದ್ದು, ಆರೋಗ್ಯ ಅಧೀಕ್ಷಕರು ಮನೆ ಮನೆಗೆ ತೆರಳಿ ಮಾಹಿತಿ ನೀಡುತ್ತಿದ್ದಾರೆ. ಇದಾದ ಬಳಿಕವೂ ಕಸ ಪ್ರತ್ಯೇಕಿಸದೆ ಇದ್ದಲ್ಲಿ ದಂಡ ವಿಧಿಸಲಾಗುತ್ತದೆ.

ಕಸ ಪ್ರತ್ಯೇಕಿಸದೆ ನೀಡುವ ಪರಿಣಾಮ ಡ್ಯಾಪಿಂಗ್‌ ಯಾರ್ಡ್‌ಗಳಲ್ಲಿ ತ್ಯಾಜ್ಯಗಳ ವಿಂಗಡನೆ ಕಷ್ಟವಾಗುತ್ತಿದೆ. ಸಂಸ್ಕರಣೆ ಮಾಡಲು ಸಾಧ್ಯವಾಗುತ್ತಿಲ್ಲ. ಸದ್ಯ ಕಸ ವಿಂಗಡನೆಗಾಗಿ ಯಾವುದೇ ಯಂತ್ರಗಳು ಇರದೇ ಇರುವುದರಿಂದ ದಿನಕ್ಕೆ ಸಂಗ್ರಹಲ್ಲಾಗುತ್ತಿರುವ 350ರಿಂದ 450 ಟನ್‌ ಕಸಗಳನ್ನು ಡಂಪ್‌ ಮಾಡಬೇಕಾಗುತ್ತದೆ. ನಿತ್ಯ ಇಷ್ಟು ಕಸಗಳನ್ನು ಯಾರ್ಡ್‌ನಲ್ಲಿ ಹೂತರೂ ಇನ್ನೂ ನಾಲ್ಕು ವರ್ಷಗಳಲ್ಲಿ ಕಸ ಹಾಕಲು ಜಾಗದ ಕೊರತೆ ಉಂಟಾಗಲಿದೆ. ಈ ಬಗ್ಗೆ ಅನೇಕ ಬಾರಿ ಪಾಲಿಕೆ ಸಾರ್ವಜನಿಕರಿಗೆ ಮನವಿ ನೀಡಿದರೂ ಯಾವುದೇ ಪ್ರಯೋಜನವಾಗಿಲ್ಲ. ಹೀಗಾಗಿ ಪಾಲಿಕೆ ಈ ಬಾರಿ ದಂಡ ಹಾಗೂ ಕಸ ಸಂಗ್ರಹಿಸದೆ ಇರುವ ಬಗ್ಗೆ ಚಿಂತನೆ ನಡೆಸಿದೆ.

ಮಂಗಳೂರು ಮಹಾನಗರಪಾಲಿಕೆಯು ಘನತ್ಯಾಜ್ಯ ವಸ್ತುಗಳ ನಿರ್ವಹಣೆ ನಿಯಮ 2016ನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸಲು ಕ್ರಮ ವಹಿಸಿದೆ. ಘನತ್ಯಾಜ್ಯ ವಸ್ತುಗಳ ನಿರ್ವಹಣೆ ನಿಯಮ 2016ರಂತೆ ಪ್ರತಿ ಮನೆಗಳು ಹಾಗೂ ವಾಣಿಜ್ಯ ಕಟ್ಟಡಗಳಿಂದ ತ್ಯಾಜ್ಯವನ್ನು ಪ್ರತ್ಯೇಕವಾಗಿ ವಿಂಗಡಿಸಬೇಕು. ಇಲ್ಲವಾದಲ್ಲಿ ದಂಡ ತೆರಬೇಕಾಗುತ್ತದೆ.

ಮನೆ ಮನೆಗೆ ಆರೋಗ್ಯ ಅಧೀಕ್ಷಕರು
ಕಸ ಪ್ರತ್ಯೇಕಿಸುವ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಹೆಲ್ತ್ ಇನ್ಸ್‌ಪೆಕ್ಟರ್‌ಗಳನ್ನು ಮನೆ ಮನೆಗೆ ತೆರಳಿ ಜಾಗೃತಿ ಮೂಡಿಸುವ ಕೆಲಸ ಮಾಡಲಾಗುತ್ತಿದೆ. ಭೇಟಿ ನೀಡಿದ ಬಳಿಕ ಅದರ ದಾಖಲೆಗಳನ್ನು ಪರಿಸರ ಅಭಿಯಂತರಿಗೆ ನೀಡಲು ಸೂಚನೆ ನೀಡಲಾಗಿದೆ. ಒಬ್ಬ ಹೆಲ್ತ್ ಇನ್ಸ್‌ಪೆಕ್ಟರ್‌ ವಾರಕ್ಕೆ 500 ಮನೆಗಳಿಗೆ ಕಡ್ಡಾಯವಾಗಿ ತೆರಳಿ ಜಾಗೃತಿ ಮೂಡಿಸಬೇಕು ಎಂಬುದಾಗಿ ಸೂಚಿಸಲಾಗಿದೆ. ಇದನ್ನು ಹೊರತುಪಡಿಸಿ ಆ್ಯಂಟನಿ ಮ್ಯಾನೇಜ್‌ಮೆಂಟ್ ನೌಕರರು ಕೂಡ ಹಸಿ ಕಸ ಒಣ ಕಸ ಸಂಗ್ರಹಣೆ ಮಾಡುವಾಗ ಗಮನಿಸಬೇಕು ಹಾಗೂ ಜನರಿಗೆ ಈ ಬಗ್ಗೆ ತಿಳಿಸಬೇಕು. ಇಲ್ಲವಾದಲ್ಲಿ ಅವರಿಗೆ ನೀಡುವ ವೇತನದಲ್ಲಿ ಕಡಿತ ಮಾಡಲಾಗುತ್ತದೆ. ಅದಕ್ಕಾಗಿ ಆ್ಯಂಟನಿ ಸಂಸ್ಥೆಯ ಸೂಪರ್‌ವೈಸರ್‌ಗಳು ಈ ಬಗ್ಗೆ ನೌಕರರಿಗೆ ಹೇಳುತ್ತಿದ್ದಾರೆ ಎಂಬುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.

ಕಸ ಬಿಸಾಡಿದರೆ ದಂಡ!
ರಸ್ತೆಯ ಬದಿಯಲ್ಲಿ ಕಸ ಬಿಸಾಡುವವರಿಗೆ ಕರ್ನಾಟಕ ಪೌರ ನಿಗಮಗಳ ಅಧಿನಿಯಮ 1976 ಹಾಗೂ ಮಹಾನಗರ ಪಾಲಿಕೆಯ ನೈರ್ಮಲಿಕರಣ ಮತ್ತು ಘನತ್ಯಾಜ್ಯ ವಸ್ತುಗಳ ಬೈಲಾ 2018ರ ಪ್ರಕಾರ 100 ರೂ. ನಿಂದ 25,000 ರೂ. ವರೆಗೆ ದಂಡ ವಿಧಿಸಲು ಅಧಿಕಾರವಿದೆ. ಇನ್ನುಳಿದಂತೆ ನಿಷೇಧಿತ ಪ್ಲಾಸ್ಟಿಕ್‌ ಬಳಕೆ ಅಥವಾ ಮಾರಾಟವನ್ನು ಸಂಪೂರ್ಣವಾಗಿ ನಿಲ್ಲಿಸುವ ಸಲುವಾಗಿ ಕಠಿನ ಕ್ರಮ ವಹಿಸಿದೆ. ಇದರಂತೆ ಪ್ಲಾಸ್ಟಿಕ್‌ ಮಾರಾಟ ಮಾಡಿದ್ದಲ್ಲಿ ದಂಡ ಸಹಿತ ವಶಪಡಿಸಲಾಗುವುದು ಮತ್ತು ಕೇಸು ದಾಖಲಿಸಲಾಗುವುದು ಎಂದು ಮಂಗಳೂರು ಮಹಾನಗರಪಾಲಿಕೆ ತಿಳಿಸಿದೆ.

ಟಾಪ್ ನ್ಯೂಸ್

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.