ಓದುಗರ ಉತ್ತಮ ಸ್ಪಂದನೆಯಿಂದ “ಮನೆ ಮನೆಗೆ ಮಳೆಕೊಯ್ಲು’ ಅಭಿಯಾನ ಯಶಸ್ಸು

ಉದಯವಾಣಿಯ ಮೊದಲ ಹಂತದ "ಮನೆ ಮನೆಗೆ ಮಳೆಕೊಯ್ಲು' ಅಭಿಯಾನ ಮುಕ್ತಾಯ

Team Udayavani, Sep 19, 2019, 5:55 AM IST

q-17

 

ಮಹಾನಗರ: ಮನೆ ಮನೆಗಳಲ್ಲಿಯೂ ಜಲಜಾಗೃತಿ ಮೂಡಿಸಬೇಕೆಂಬ ಕಳಕಳಿಯೊಂದಿಗೆ ಜೂ. 8ರಂದು “ಉದಯವಾಣಿ’ ಆರಂಭಿಸಿದ್ದ “ಮನೆ ಮನೆಗೆ ಮಳೆಕೊಯ್ಲು’ ಅಭಿಯಾನ ಬುಧವಾರಕ್ಕೆ ಯಶಸ್ವಿ ನೂರು ದಿನ ಪೂರೈಸಿದೆ. ಶತದಿನ ತಲುಪಿದ ಅಭಿಯಾನವು ಸದ್ಯಕ್ಕೆ ಇಲ್ಲಿಗೆ ಮುಗಿಯುತ್ತಿದ್ದು, ಉದಯವಾಣಿಯ ಜಲಜಾಗೃತಿಯು ಇದೇರೀತಿ ಮುಂದುವರಿಯಲಿದೆ.

ಅಭಿಯಾನ ಆರಂಭವಾದ ದಿನದಿಂದ ಇಲ್ಲಿಯವರೆಗೆ ಸುಮಾರು 400ಕ್ಕೂ ಹೆಚ್ಚು ಮನೆಗಳಲ್ಲಿ ಮಳೆಕೊಯ್ಲು ಅಳವಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಆರಂಭಿಕ ಹಂತದಲ್ಲೇ ಮಳೆಕೊಯ್ಲು ಅಳವಡಿಸಿದವರು ತಮ್ಮ ಮನೆಯ ಬಾವಿಗಳಲ್ಲಿ ಶುದ್ಧ, ತಿಳಿಯಾದ ನೀರು ಸಿಗುತ್ತಿದೆ ಮತ್ತು ನೀರಿನ ಮಟ್ಟ ಹಿಂದೆಂದಿಗಿಂತಲೂ ಹೆಚ್ಚಾಗಿದೆ ಎಂಬ ಖುಷಿಯನ್ನು ಹಂಚಿಕೊಂಡಿದ್ದಾರೆ. ಇದು ಜಿಲ್ಲೆಯಲ್ಲಿ ಮತ್ತಷ್ಟು ಜನರು ಮಳೆಕೊಯ್ಲು ವ್ಯವಸ್ಥೆ ಅಳವಡಿಸಿ ಕೊಳ್ಳುವುದಕ್ಕೆ ಪ್ರೇರಣೆ ನೀಡಿದೆ.

ಇನ್ನೊಂದೆಡೆ, ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕ ರಾಜೇಂದ್ರ ಕಲಾºವಿ ಅವರ ಮಾರ್ಗದರ್ಶನದಲ್ಲಿ ಅದೆಷ್ಟೋ ಮನೆಗಳಲ್ಲಿ ಮಳೆಕೊಯ್ಲು ಅಳವಡಿಕೆಯಾಗಿದೆ. ಸಂಘ-ಸಂಸ್ಥೆಗಳು ತಾವೇ ಮುಂದೆ ನಿಂತು ಹಲವರ ಮನೆಗಳಲ್ಲಿ ಮಳೆಕೊಯ್ಲು ಅಳವಡಿಸಿಕೊಟ್ಟಿರುವುದು ಅಭಿಯಾನಕ್ಕೆ ಸಂದ ಮತ್ತೂಂದು ಯಶಸ್ಸು. ಮಹಿಳಾ ಮಂಡಲಗಳು, ಚರ್ಚ್‌, ಸ್ವಯಂ ಸೇವಾಸಂಸ್ಥೆಗಳು, ಶಾಲಾ ಕಾಲೇಜುಗಳಲ್ಲಿ ಮಳೆಕೊಯ್ಲು ಕಾರ್ಯಾಗಾರಗಳನ್ನು ನಡೆಸಿ ಮಳೆಕೊಯ್ಲು ಅಳವಡಿಸಲು ಪ್ರೇರಣೆ ನೀಡಿರುವುದು ಶ್ಲಾಘನೀಯ ವಾಗಿದೆ. ಅಭಿಯಾನ ಆರಂಭವಾದಾಗಿನಿಂದ ಎಲ್ಲ ಕಡೆಯಿಂದಲೂ ಉತ್ತಮ ಸ್ಪಂದನೆ, ಬೆಂಬಲ ದೊರಕಿರುವುದ ಕಾರಣಕ್ಕೆ ಈ ಅಭಿಯಾನವನ್ನು ನೂರು ದಿನಗಳ ಕಾಲ ಮುಂದುವರಿಸುವುದಕ್ಕೆ ಸಾಧ್ಯವಾಗಿದೆ. ಮಂಗಳೂರು, ದ.ಕ. ಜಿಲ್ಲೆ ಮಾತ್ರವಲ್ಲದೆ, ಉಡುಪಿ, ಕಾರ್ಕಳ, ಕಾಸರಗೋಡು ಭಾಗದ ಜನರೂ ಮಳೆಕೊಯ್ಲು ಅಭಿಯಾನವನ್ನು ಇ-ಪತ್ರಿಕೆಯಲ್ಲಿ ಓದಿ ತಮ್ಮ ಮನೆಗಳಲ್ಲಿ ಅಳವಡಿಸಿಕೊಂಡಿರುವುದು ಗಮನಾರ್ಹ.

ಮಾತುಗಳೇ ಸ್ಫೂರ್ತಿ
ನಗರದಲ್ಲಿ ಮೂರ್‍ನಾಲ್ಕು ವರ್ಷಗಳಲ್ಲಿ ಎಪ್ರಿಲ್‌-ಮೇ ತಿಂಗಳಿನಲ್ಲಿ ಕಾಡಿದ ಅತಿಯಾದ ನೀರಿನ ಸಮಸ್ಯೆ ಈ ಬಾರಿ ಮಳೆಕೊಯ್ಲು ಅಳವಡಿಸಿದ ಅಷ್ಟೂ ಮನೆಗಳಲ್ಲಿ ಕಾಣಿಸದು ಎಂಬ ವಿಶ್ವಾಸವು ಈಗಾಗಲೇ ಮಳೆಕೊಯ್ಲು ಅಳವಡಿಸಿಕೊಂಡಿರುವ ಬಹುತೇಕ ಮಂದಿಯಲ್ಲಿ ಮೂಡಿದೆ. ಮಳೆಕೊಯ್ಲು ಅಳವಡಿಸಿ ಯಶಸ್ಸು ಕಂಡ ಜನರಾಡಿದ ಮಾತುಗಳೇ ಇದಕ್ಕೆ ಸ್ಫೂರ್ತಿಯಾಗಿದೆ. ಇನ್ನಷ್ಟು ಮನೆಗಳಲ್ಲಿ ಜನ ಮಳೆಕೊಯ್ಲು ಅಳವಡಿಸಿ ಮುಂದಿನ ದಿನಗಳಲ್ಲಿ ನೀರಿನ ಅಭಾವ ಮುಕ್ತ ಪರಿಸರವನ್ನು ನಮ್ಮದಾಗಿಸಿಕೊಳ್ಳಬೇಕೆಂಬುದೇ ಪತ್ರಿಕೆಯ ಆಶಯವಾಗಿದೆ.

ನಮ್ಮ ಕಳಕಳಿ
ಭವಿಷ್ಯದಲ್ಲಿಯೂ ಪ್ರತಿಯೊಬ್ಬರೂ ತಮ್ಮ ಮನೆ-ಕಚೇರಿ, ಸಮುದಾಯಗಳಲ್ಲಿ ಮಳೆಕೊಯ್ಲು ಅಳವಡಿಸಿಕೊಳ್ಳಲು ಮುಂದಾಗಬೇಕು. ಆ ಮೂಲಕ ಬೇಸಗೆಯಲ್ಲಿ ಕಾಡುವ ಜಲಕ್ಷಾಮವನ್ನು ಹೋಗಲಾಡಿಸುವ ಜತೆಗೆ, ಅಂತರ್ಜಲ ವೃದ್ಧಿಗೂ ಕೈಜೋಡಿಸಬೇಕು ಎನ್ನುವುದು ಪತ್ರಿಕೆಯ ಕಳಕಳಿಯಾಗಿದೆ.

ಟಾಪ್ ನ್ಯೂಸ್

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

14-mng

Ullala: ಮಲಗಿದ್ದಲ್ಲೇ ಹೃದಯಾಘಾತದಿಂದ ಸಾವು

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.