ಪಿಲಿಕುಳ: ಮೇಳೈಸಿದ ಮತ್ಸ್ಯೋತ್ಸವ, ಕ್ಷೇತ್ರೋತ್ಸವ


Team Udayavani, Jul 22, 2019, 5:17 AM IST

mattya

ಮಂಗಳೂರು: ಅಲ್ಲಿ ಹಬ್ಬದ ಕಳೆ ಮೇಳೈಸಿತ್ತು. ಕೆರೆಯಿಂದ ಆಗತಾನೆ ಹಿಡಿದ ತಾಜಾ ಮೀನುಗಳನ್ನು ಖರೀದಿ ಮಾಡುವಲ್ಲಿ ಕೆಲವರು ನಿರತರಾಗಿದ್ದರೆ, ಇನ್ನೂ ಕೆಲವರು ತರಹೇವಾರಿ ಮೀನಿನ ಖಾದ್ಯಗಳನ್ನು ಸವಿಯುತ್ತಿದ್ದರು. ಒಂದಿಷ್ಟು ಮಂದಿ ಮೀನುಗಳ ಗಾತ್ರವನ್ನು ಆಶ್ಚರ್ಯದಿಂದ ನೋಡುತ್ತಿದ್ದರು.

ಅಂದಹಾಗೆ, ಈ ದೃಶ್ಯಗಳು ಕಂಡು ಬಂದಿದ್ದು ಪಿಲಿಕುಳದ ಡಾ| ಶಿವರಾಮ ಕಾರಂತ ನಿಸರ್ಗಧಾಮ ಮತ್ತು ಮೀನುಗಾರಿಕಾ ಇಲಾಖೆ ಜಂಟಿಯಾಗಿ ಪಿಲಿಕುಳ ಲೇಕ್‌ ಗಾರ್ಡನ್‌ನಲ್ಲಿ ರವಿವಾರ ಆಯೋಜಿಸಿದ್ದ ಮತ್ಸ್ಯೋತ್ಸವ ಮತ್ತು ಕ್ಷೇತ್ರೋತ್ಸವ ಕಾರ್ಯಕ್ರಮದಲ್ಲಿ. ಪಿಲಿಕುಳದ ಕೆರೆಯಲ್ಲಿ ಬೆಳೆಸಲಾಗಿದ್ದ ಕಾಟ್ಲಾ, ರೋಹ ಸಹಿತ ಇನ್ನಿತರ ಜಾತಿಯ ಮೀನುಗಳನ್ನು ಸ್ಥಳದಲ್ಲೇ ಮಾರಾಟ ಮಾಡುವ ಪ್ರಕ್ರೀಯೆಯನ್ನು ಏರ್ಪಡಿಸಲಾಗಿತ್ತು. ಹೆಚ್ಚಿನ ಮಂದಿ ಮುಗಿಬಿದ್ದು ಮೀನು ಖರೀದಿ ಮಾಡುವ ದೃಶ್ಯ ಸಾಮಾನ್ಯವಾಗಿತ್ತು.

ಕರ್ನಾಟಕ ಮೀನುಗಾರಿಕಾ ಅಭಿವೃದ್ಧಿ ನಿಗಮದ ವತಿಯಿಂದ ಆಯೋಜಿಸಿದ್ದ ಮೀನಿನಿಂದ ಮಾಡಿದ ಖಾದ್ಯಗಳ ಮಾರಾಟ ಜೋರಾಗಿತ್ತು. ಸಿಹಿ ನೀರಿನ ಮೀನುಗಳು, ಪಾಂಪ್ಲೆಟ್, ಅಂಜಲ್, ಬಂಗುಡೆ, ಸಿಗಡಿ, ಬೊಂಡಾಸು ಹಾಗೂ ಇನ್ನಿತರ ತಾಜಾ ಮೀನು ಮತ್ತು ಮೌಲ್ಯವರ್ಧಿತ ಮೀನು ಉತ್ಪನ್ನಗಳ ಮಾರಾಟದ ವ್ಯವಸ್ಥೆ ಮಾಡಲಾಗಿದೆ. ಅದೇ ರೀತಿ ತಾಜಾ ಸಮುದ್ರ ಮೀನುಗಳ ಫ್ರೈ, ಫಿಶ್‌ ಮಸಾಲಾ, ಫಿಶ್‌ ಕಬಾಬ್‌ ಹಾಗೂ ಇನ್ನಿತರ ಮೀನಿನ ಖಾದ್ಯಗಳನ್ನು ಶುಚಿ ರುಚಿಯಾಗಿ ಸ್ಥಳದಲ್ಲೇ ತಯಾರಿಸಿ ಮಾರಾಟವಿತ್ತು.

ಮೀನು ಆಹಾರ ಪದ್ಧತಿ

ಕಾರ್ಯಕ್ರಮವನ್ನು ಉದ್ಘಾಟಿಸಿದ ದ.ಕ.ಜಿ.ಪಂ. ಉಪಾಧ್ಯಕ್ಷೆ ಕಸ್ತೂರಿ ಪಂಜ ಮಾತನಾಡಿ, ಕರಾವಳಿ ಮಂದಿಗೆ ಮೀನು ಆಹಾರ ಪದ್ಧತಿ. ಉಪ ಕಸುಬಾಗಿ ಮೀನು ಮಾರಾಟ ಮಾಡುತ್ತಾರೆ. ಪಿಲಿಕುಳದಲ್ಲಿ ತಾಜಾ ಮೀನುಗಳ ಮಾರಾಟ ನಡೆಯುತ್ತಿದ್ದು, ಹೆಚ್ಚಿನ ಮಂದಿ ಖರೀದಿಗೆ ಉತ್ಸಾಹ ತೋರುತ್ತಿದ್ದಾರೆ ಎಂದರು. ದ.ಕ.ಜಿ.ಪಂ. ಅಧ್ಯಕ್ಷ ಮೀನಾಕ್ಷಿ ಶಾಂತಿಗೋಡು, ಜಿ.ಪಂ. ಸ್ಥಾಯಿ ಸಮಿತಿ ಅಧ್ಯಕ್ಷ ಯು.ಪಿ. ಇಬ್ರಾಹಿಂ, ಮೂಡುಶೆಡ್ಡೆ ಗ್ರಾ.ಪಂ. ಅಧ್ಯಕ್ಷ ಹರಿಪ್ರಸಾದ್‌ ಶೆಟ್ಟಿ, ಡಾ| ಶಿವರಾಮಕಾರಂತ ನಿಸರ್ಗಧಾಮ ಪಿಲಿಕುಳದ ಕಾರ್ಯನಿರ್ವಾಹಕ ನಿರ್ದೇಶಕಿ ಮೇಘನಾ ಆರ್‌., ಪಿಲಿಕುಳ ಜೈವಿಕ ಉದ್ಯಾನವನ ನಿರ್ದೇಶಕ ಎಸ್‌. ಜಯಪ್ರಕಾಶ್‌ ಭಂಡಾರಿ, ನಿರ್ದೇಶಕ, ಕಾರ್ಯಕಾರಿ ಮಂಡಳಿ ಸದಸ್ಯ ಸುಬ್ಬಯ್ಯ ಶೆಟ್ಟಿ, ಎನ್‌.ಜಿ. ಮೋಹನ್‌, ದ.ಕ. ಜಿಲ್ಲಾ ಕಸಾಪ ಅಧ್ಯಕ್ಷ ಪ್ರದೀಪ್‌ ಕುಮಾರ್‌ ಕಲ್ಕೂರ, ಮೀ. ಇ. ಸಹಾಯಕ ನಿರ್ದೇಶಕ ದಿಲೀಪ್‌, ಮೀನುಗಾರಿಕಾ ಕಾಲೇಜು ಸಹಾಯಕ ಪ್ರೊಫೇಸರ್‌ ಡಾ| ಮೃದುಲಾ, ಡಾ| ರಾಜೇಶ್‌, ಮೀನುಗಾರಿಕಾ ತಜ್ಞ ಡಾ| ನಜೀರ್‌, ಬೀಚ್ ಅಭಿವೃದ್ಧಿ ನಿಗಮದ ನಿಇಒ ಯತೀಶ್‌ ಬೈಕಂಪಾಡಿ ಉಪಸ್ಥಿತರಿದ್ದರು.

ಮತ್ಸ್ಯೋತ್ಸವದಲ್ಲಿ ಮೀನು ಖರೀದಿ ಜೋರಾಗಿತ್ತು. ಕಾಟ್ಲಾ, ರೋಹ, ಸೇರಿದಂತೆ ಆಗ ತಾನೇ ಕೆರೆಯಿಂದ ಬಲೆ ಹಾಕಿ ಹಿಡಿದ ಒಂದು ಕೆ.ಜಿ. ಮೀನಿಗೆ ಸುಮಾರು 150 ರೂ. ನಿಗದಿ ಪಡಿಸಲಾಗಿತ್ತು.

ಪಿಲಿಕುಳ ಕೆರೆಗೆ ಈ ಬಾರಿ ಸುಮಾರು 25,000ಕ್ಕೂ ಹೆಚ್ಚಿನ ಮೀನಿನ ಮರಿಯನ್ನು ಬಿಡಲಾಗಿದೆ. ಇವುಗಳನ್ನು ಮುಂದಿನ ವರ್ಷ ಬಲೆ ಬೀಸಿ ಹಿಡಿಯಲಾಗುತ್ತದೆ.  ಒಂದೊಂದು ಮೀನು ಸುಮಾರು ಒಂದೂವರೆ ಕೆ.ಜಿ.ಗೂ ಅಧಿಕ ತೂಕ ಬೆಳೆಯುತ್ತದೆ.

ಟಾಪ್ ನ್ಯೂಸ್

Siddaramaiah ಎಸ್‌ಐಟಿ ಮೇಲೆ ನಂಬಿಕೆಯಿಡಿ, ಸಿಬಿಐ ತನಿಖೆ ಬೇಕಿಲ್ಲ

Siddaramaiah ಎಸ್‌ಐಟಿ ಮೇಲೆ ನಂಬಿಕೆಯಿಡಿ, ಸಿಬಿಐ ತನಿಖೆ ಬೇಕಿಲ್ಲ

3 ದಿನ ರೇವಣ್ಣ ಭೇಟಿಗಿಲ್ಲ ಅವಕಾಶ; ಮಾಜಿ ಸಚಿವರಿಗೆ ಈಗ ಬೆನ್ನು ನೋವು

3 ದಿನ ರೇವಣ್ಣ ಭೇಟಿಗಿಲ್ಲ ಅವಕಾಶ; ಮಾಜಿ ಸಚಿವರಿಗೆ ಈಗ ಬೆನ್ನು ನೋವು

ಪತ್ರಕರ್ತರ ಜತೆ ದೇವರಾಜೇಗೌಡ ಮಾತನಾಡಿದ ಆಡಿಯೋ ಬಹಿರಂಗ

ಪತ್ರಕರ್ತರ ಜತೆ ದೇವರಾಜೇಗೌಡ ಮಾತನಾಡಿದ ಆಡಿಯೋ ಬಹಿರಂಗ

Prajwal Revanna ವೀಡಿಯೋ ವೈರಲ್‌: ಓರ್ವನ ಸೆರೆ

Prajwal Revanna ವೀಡಿಯೋ ವೈರಲ್‌: ಓರ್ವನ ಸೆರೆ

ನೀತಿ ಸಂಹಿತೆ ಸಡಿಲಿಕೆ: ಆಯೋಗಕ್ಕೆ ಪತ್ರ ಬರೆದು ರಾಜ್ಯ ಸರಕಾರ ಮನವಿ

ನೀತಿ ಸಂಹಿತೆ ಸಡಿಲಿಕೆ: ಆಯೋಗಕ್ಕೆ ಪತ್ರ ಬರೆದು ರಾಜ್ಯ ಸರಕಾರ ಮನವಿ

Siddaramaiah ಚುನಾವಣ ಪ್ರಚಾರ: 14 ಲಕ್ಷ ಜನರನ್ನು ಉದ್ದೇಶಿಸಿ ಸಿಎಂ ಮಾತು

Siddaramaiah ಚುನಾವಣ ಪ್ರಚಾರ: 14 ಲಕ್ಷ ಜನರನ್ನು ಉದ್ದೇಶಿಸಿ ಸಿಎಂ ಮಾತು

D.K. Shivakumar ಲೋಕದ ಡೊಂಕು ನೀವೇಕೆ ತಿದ್ದುವಿರಿ, ನಿಮ್ಮ ಮನೆಯನ್ನು ಸರಿ ಮಾಡಿಕೊಳ್ಳಿ

D.K. Shivakumar ಲೋಕದ ಡೊಂಕು ನೀವೇಕೆ ತಿದ್ದುವಿರಿ, ನಿಮ್ಮ ಮನೆಯನ್ನು ಸರಿ ಮಾಡಿಕೊಳ್ಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Road Mishap ಉಳ್ಳಾಲ: ಕಾರು ಅಪಘಾತ; ಮೂವರಿಗೆ ಗಾಯ

Road Mishap ಉಳ್ಳಾಲ: ಕಾರು ಅಪಘಾತ; ಮೂವರಿಗೆ ಗಾಯ

Panambur: ರಿಕ್ಷಾ ಚಾಲಕನ ಮೇಲೆ ಸ್ಥಳೀಯ ರಿಕ್ಷಾ ಚಾಲಕರಿಂದ ಹಲ್ಲೆ… ದೂರು ದಾಖಲು

Panambur: ರಿಕ್ಷಾ ಚಾಲಕನ ಮೇಲೆ ಸ್ಥಳೀಯ ರಿಕ್ಷಾ ಚಾಲಕರಿಂದ ಹಲ್ಲೆ… ದೂರು ದಾಖಲು

Fraud: ಕ್ರೈಂ ಬ್ರಾಂಚ್‌ ಹೆಸರಲ್ಲಿ 1.60 ಕೋ.ರೂ. ಪಡೆದು ವಂಚನೆ   

Fraud: ಕ್ರೈಂ ಬ್ರಾಂಚ್‌ ಹೆಸರಲ್ಲಿ 1.60 ಕೋ.ರೂ. ಪಡೆದು ವಂಚನೆ   

Mangaluru: ಅಪಹರಿಸಲು ಸುಪಾರಿ; ಇಬ್ಬರ ಬಂಧನ

Mangaluru: ಅಪಹರಿಸಲು ಸುಪಾರಿ; ಇಬ್ಬರ ಬಂಧನ

Mangaluru: ಟಿಪ್ಪರ್‌ ಲಾರಿ ಹರಿದು ಸ್ಕೂಟರ್‌ ಸವಾರ ಸಾವು

Mangaluru: ಟಿಪ್ಪರ್‌ ಲಾರಿ ಹರಿದು ಸ್ಕೂಟರ್‌ ಸವಾರ ಸಾವು

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Siddaramaiah ಎಸ್‌ಐಟಿ ಮೇಲೆ ನಂಬಿಕೆಯಿಡಿ, ಸಿಬಿಐ ತನಿಖೆ ಬೇಕಿಲ್ಲ

Siddaramaiah ಎಸ್‌ಐಟಿ ಮೇಲೆ ನಂಬಿಕೆಯಿಡಿ, ಸಿಬಿಐ ತನಿಖೆ ಬೇಕಿಲ್ಲ

1–wwqaeeq

Mangaluru; ಮಂಗಳಾ ಕಪ್‌ ಓಪನ್‌ ಬ್ಯಾಡ್ಮಿಂಟನ್‌ ಕೂಟಕ್ಕೆ ಚಾಲನೆ

3 ದಿನ ರೇವಣ್ಣ ಭೇಟಿಗಿಲ್ಲ ಅವಕಾಶ; ಮಾಜಿ ಸಚಿವರಿಗೆ ಈಗ ಬೆನ್ನು ನೋವು

3 ದಿನ ರೇವಣ್ಣ ಭೇಟಿಗಿಲ್ಲ ಅವಕಾಶ; ಮಾಜಿ ಸಚಿವರಿಗೆ ಈಗ ಬೆನ್ನು ನೋವು

1-weewewq

Punjab ಅಭಿಮಾನಿಗಳ ಕ್ಷಮೆ ಕೋರಿದ ನಾಯಕ ಸ್ಯಾಮ್‌ ಕರನ್‌

1-wqeqewqewq

Tennis; ಇದೇ ಕೊನೆಯ ಸೀಸನ್‌:ಡೊಮಿನಿಕ್‌ ಥೀಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.