![Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ](https://www.udayavani.com/wp-content/uploads/2024/07/shiruru-415x249.jpg)
Fishermen’s ಸಂಕಷ್ಟ ನಿಧಿ ಮೊತ್ತ 8 ಲಕ್ಷ ರೂ.ಗೆ ಏರಿಕೆ: ಚೇತನ್ ಬೆಂಗ್ರೆ
Team Udayavani, Feb 24, 2024, 1:00 AM IST
![Fishermen’s ಸಂಕಷ್ಟ ನಿಧಿ ಮೊತ್ತ 8 ಲಕ್ಷ ರೂ.ಗೆ ಏರಿಕೆ: ಚೇತನ್ ಬೆಂಗ್ರೆ](https://www.udayavani.com/wp-content/uploads/2024/02/kpcc-620x322.jpg)
ಮಂಗಳೂರು: ರಾಜ್ಯದ ಮೀನುಗಾರರ ಸಂಕಷ್ಟ ನಿಧಿ ಮೊತ್ತವನ್ನು 8 ಲಕ್ಷ ರೂ.ಗಳಿಗೆ ಏರಿಸಲು ಮೀನುಗಾರಿಕೆ ಸಚಿವ ಮಂಕಾಳ ವೈದ್ಯ ಅವರ ಅಧ್ಯಕ್ಷತೆಯಲ್ಲಿ ಇತ್ತೀಚೆಗೆ ನಡೆದ ಸಭೆಯಲ್ಲಿ ನಿರ್ಧರಿಸಲಾಗಿದೆ ಎಂದು ರಾಜ್ಯ ಮೀನುಗಾರರ ಸಂಕಷ್ಟ ಪರಿಹಾರ ನಿಧಿ ಸಮಿತಿ ಸದಸ್ಯ, ಕೆಪಿಸಿಸಿ ಹಿಂದುಳಿದ ವಿಭಾಗದ ಉಪಾಧ್ಯಕ್ಷ ಚೇತನ್ ಬೆಂಗ್ರೆ ತಿಳಿಸಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಂಕಷ್ಟ ನಿಧಿಯನ್ನು 6 ಲಕ್ಷ ರೂ. ಗಳಿಂದ 8 ಲಕ್ಷ ರೂ.ಗಳಿಗೆ ಏರಿಸಲು ನಿರ್ಧರಿಸಲಾಗಿದೆ. ಹಾಗೆಯೇ ರಾಜ್ಯ ಮೀನುಗಾರರ ಸಂಕಷ್ಟ ಪರಿಹಾರ ನಿಧಿ ಸಮಿತಿಯನ್ನು ಪುನಾರಚಿಸಲಾಗಿದೆ ಎಂದರು.
ಗಂಗೊಳ್ಳಿಯಲ್ಲಿ ಇತ್ತೀಚೆಗೆ ಸಂಭವಿಸಿದ್ದ ಮೀನುಗಾರರ ಬೋಟ್ ಬೆಂಕಿ ದುರಂತಕ್ಕೆ 1.75 ಕೋಟಿ ರೂ. ಹಾಗೂ ಶಿರೂರಿನಲ್ಲಿ ಮಳೆಯಿಂದ ಹಾನಿಗೊಳಗಾಗಿದ್ದ ದೋಣಿಗಳಿಗೆ ತಲಾ 1ಲಕ್ಷ ರೂ. ಪರಿಹಾರ ನೀಡಲಾಗುವುದು. ದಕ್ಕೆಯಲ್ಲಿ ಮೀನುಗಾರಿಕೆ ವೇಳೆ ಅವಘಡ ಸಂಭವಿಸಿದರೆ, ವೈದ್ಯಕೀಯ ವೆಚ್ಚದ ಶೇ. 50 ಅಥವಾ ಗರಿಷ್ಠ 3 ಲಕ್ಷ ರೂ. ಪರಿಹಾರ ನೀಡಲು ಕ್ರಮಕ್ಕೆ ಸೂಚಿಸಲಾಗಿದೆ. ಸುಮಾರು 45.5 ಕೋಟಿ ರೂ. ವೆಚ್ಚದಲ್ಲಿ ಮಂಗಳೂರು ಬಂದರು ಅಭಿವೃದ್ಧಿ ಕಾಮಗಾರಿ ಮುಂದಿನ ತಿಂಗಳು ಆರಂಭವಾಗಲಿದೆ ಎಂದರು.
ಅಳಿವೆ ಬಾಗಿಲು ಹೂಳೆತ್ತುವ ಕಾಮಗಾರಿ ಶೇ. 75 ಪೂರ್ಣಗೊಂಡಿದ್ದು, ಶೀಘ್ರವೇ ಮುಗಿಸಲು ಸೂಚಿಸಲಾಗಿದೆ. ಹಳೆ ಬಂದರಿನ ಪ್ರಥಮ ಹಂತದ ಜೆಟ್ಟಿಯನ್ನು 37.5 ಕೋಟಿ ರೂ. ವೆಚ್ಚದಲ್ಲಿ ನವೀಕರಿಸಲಾಗುತ್ತಿದೆ. ಸಾಗರಮಾಲ ಯೋಜನೆಯ 29 ಕೋಟಿ ರೂ. ವೆಚ್ಚದ ಕ್ಯಾಪಿಟಲ್ ಡ್ರೆಜ್ಜಿಂಗ್ ಕಾಮಗಾರಿ ಆರಂಭಿಸಲು ಇರುವ ತೊಡಕು ನಿವಾರಿಸಲು, ಯುವಜನತೆಗೆ ಉದ್ಯೋಗ ಕಲ್ಪಿಸಲು ಅಕ್ವಾ ಪಾರ್ಕ್ ಸ್ಥಾಪಿಸಲು ಸಭೆಯಲ್ಲಿ ಪ್ರಸ್ತಾವಿಸಲಾಗಿದೆ ಎಂದರು.
ಸಣ್ಣ ದೋಣಿ ಮೀನುಗಾರರಿಗೆ ವಾರ್ಷಿಕವಾಗಿ ಸಿಗುವ ಸಬ್ಸಿಡಿ ದರದ ಡೀಸೆಲನ್ನು 9 ಸಾವಿರ ಲೀ. ನಿಂದ 10 ಸಾವಿರ ಲೀಟರ್ಗೆ ಏರಿಸಲಾಗಿದೆ. ಹಿಂದಿನ ಕ್ರಮದ ಬದಲಾಗಿ ಸಬ್ಸಿಡಿ ದರದ ಡೀಸೆಲನ್ನು ತಲಾ ಐದು ತಿಂಗಳಿಗೊಮ್ಮೆ 5000 ಲೀಟರ್ನಂತೆ ನೀಡಲು ಸೂಚಿಸಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಬಾರಿ ಮೀನುಗಾರರ ಅಭಿವೃದ್ಧಿಗೆ ಪೂರಕ ಬಜೆಟ್ ಮಂಡಿಸಿದ್ದು, 3 ಸಾವಿರ ಕೋಟಿ ರೂ. ಆನುದಾನ ನೀಡಿದ್ದಾರೆ ಎಂದರು.
ಮಾಜಿ ಉಪಮೇಯರ್ ಕವಿತಾ ವಾಸು, ಪ್ರವಿತಾ ಕರ್ಕೇರ, ರಾಜ್ಕುಮಾರ್ ಕೋಟ್ಯಾನ್, ಮಿಥುನ್ ಚಂದನ್, ಪ್ರಸಾದ್ ಮೆಂಡನ್, ಆಲ್ಬರ್ಟ್ ಆಗಸ್ಟಿನ್ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
![Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ](https://www.udayavani.com/wp-content/uploads/2024/07/shiruru-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!](https://www.udayavani.com/wp-content/uploads/2024/07/Pilikula-Biological-150x91.jpg)
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
![New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್ ಗ್ಯಾಂಗ್’](https://www.udayavani.com/wp-content/uploads/2024/07/POLICE-5-12-150x79.jpg)
New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್ ಗ್ಯಾಂಗ್’
![Taranga Ugadi Dhamaka2024; ಓದಿನಿಂದ ಜ್ಞಾನದ ವ್ಯಾಪ್ತಿ ವಿಸ್ತರಣೆ: ಡಾ| ಸಂಧ್ಯಾ ಎಸ್.ಪೈ](https://www.udayavani.com/wp-content/uploads/2024/07/Taranga-Ugadi-150x82.jpg)
Taranga Ugadi Dhamaka2024; ಓದಿನಿಂದ ಜ್ಞಾನದ ವ್ಯಾಪ್ತಿ ವಿಸ್ತರಣೆ: ಡಾ| ಸಂಧ್ಯಾ ಎಸ್.ಪೈ
![Mangaluru ನದಿ ದಡದಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ](https://www.udayavani.com/wp-content/uploads/2024/07/man-a-4-150x86.jpg)
Mangaluru ನದಿ ದಡದಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ
![Mobile, ಗಾಂಜಾ ಪತ್ತೆ ಹಿನ್ನೆಲೆ: ಜಿಲ್ಲಾ ಕಾರಾಗೃಹಕ್ಕೆ ಬಂಧಿಖಾನೆ ಡಿಐಜಿ ಭೇಟಿ](https://www.udayavani.com/wp-content/uploads/2024/07/dg-150x83.jpg)
Mobile, ಗಾಂಜಾ ಪತ್ತೆ ಹಿನ್ನೆಲೆ: ಜಿಲ್ಲಾ ಕಾರಾಗೃಹಕ್ಕೆ ಬಂಧಿಖಾನೆ ಡಿಐಜಿ ಭೇಟಿ
MUST WATCH
ಹೊಸ ಸೇರ್ಪಡೆ
![Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ](https://www.udayavani.com/wp-content/uploads/2024/07/shiruru-150x90.jpg)
Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ
![Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ](https://www.udayavani.com/wp-content/uploads/2024/07/shi1-150x83.jpg)
Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ
![2-chithapura](https://www.udayavani.com/wp-content/uploads/2024/07/2-chithapura-150x90.jpg)
Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-150x90.jpg)
Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ
![Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ](https://www.udayavani.com/wp-content/uploads/2024/07/BUILDING-1-150x84.jpg)
Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.