ಜೂ. 14ರವರೆಗೆ ಮೀನುಗಾರಿಕೆಗೆ ಅವಕಾಶ
Team Udayavani, May 27, 2020, 7:07 AM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಮಂಗಳೂರು: ಮುಂಗಾರು ಅವಧಿಯಲ್ಲಿ ಆಳ ಸಮುದ್ರ ಯಾಂತ್ರೀಕೃತ ಮೀನುಗಾರಿಕೆ ನಿಷೇಧದ ಅವಧಿಯನ್ನು ಜೂನ್ 14ರ ವರೆಗೆ ಮುಂದೂಡಿ ಕೇಂದ್ರ ಸರಕಾರ ಆದೇಶ ಹೊರಡಿಸಿದೆ ಎಂದು ಕೋಟ ಶ್ರೀನಿವಾಸ ಪೂಜಾರಿ ಅವರು ಟ್ವೀಟ್ ಮಾಡಿದ್ದಾರೆ.
ಈ ಬಗ್ಗೆ ಮೀನುಗಾರಿಕಾ ಇಲಾಖೆ ಉಪ ನಿರ್ದೇಶಕ ಪಾರ್ಶ್ವನಾಥ ಅವರು ಪ್ರತಿಕ್ರಿಯಿಸಿ ‘ಮೀನುಗಾರಿಕಾ ಅವಧಿ ಮುಂದೂಡಿ ಕೇಂದ್ರ ಸರಕಾರ ಆದೇಶ ಮಾಡಿದ್ದು, ರಾಜ್ಯ ಸರಕಾರದ ಆದೇಶ ಇನ್ನಷ್ಟೇ ಬರಬೇಕಿದೆ. ಬಳಿಕ ಈ ನಿಯಮ ಅನ್ವಯವಾಗಲಿದೆ’ ಎಂದು ತಿಳಿಸಿದ್ದಾರೆ.
ಮೀನುಗಾರಿಕಾ ಇಲಾಖೆ ಋತುವಿನಂತೆ ಪಶ್ಚಿಮ ಕರಾವಳಿಯಲ್ಲಿ ಮೇ 31 ಆ ವರ್ಷದ ಮೀನುಗಾರಿಕೆಗೆ ಕೊನೆಯ ದಿನ. ಬಳಿಕ 61 ದಿನಗಳ ಕಾಲ ನಿಷೇಧ ಇರುತ್ತದೆ. ಆದರೆ ಈ ವರ್ಷ ಲಾಕ್ಡೌನ್ ಕಾರಣದಿಂದ ಮೀನುಗಾರರು ಅಪಾರ ನಷ್ಟ ಅನುಭವಿಸಿದ್ದರು. ಈ ಕಾರಣಕ್ಕಾಗಿ ನಿಷೇಧ ಅವಧಿಯನ್ನು ಜೂ. 14ರ ವರೆಗೆ ಮುಂದೂಡಲಾಗಿದೆ.
ಇತ್ತೀಚೆಗೆಯಷ್ಟೇ ದ.ಕ. ಜಿಲ್ಲೆಯಲ್ಲಿ ನಾಡದೋಣಿ ಮತ್ತು ಸಣ್ಣ ಯಾಂತ್ರೀಕೃತ ಬೋಟ್ ಮೀನುಗಾರಿಕೆಗೆ ಅವಕಾಶ ನೀಡಲಾಗಿತ್ತು. ಆಳ ಸಮುದ್ರ ಮೀನುಗಾರಿಕೆಗೆ ಮತ್ತಷ್ಟು ದಿನ ಅವಕಾಶ ನೀಡಿದರೂ, ಮೀನುಗಾರ ಕಾರ್ಮಿಕರು ಈಗಾಗಲೇ ತಮ್ಮ ಊರುಗಳಿಗೆ ತೆರಳಿದ್ದಾರೆ. ಹೀಗಾಗಿ ದೊಡ್ಡ ಮಟ್ಟದ ಲಾಭವಾಗದು ಎನ್ನುತ್ತಾರೆ ಮೀನುಗಾರ ಮುಖಂಡರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ