ದ್ವೇಷ ಮರೆತು, ಶಾಂತಿ ಸಹಬಾಳ್ವೆ ಮೂಡಲಿ

ಜಪ್ಪಿನಮೊಗರುವಿನಲ್ಲಿ ಇಫ್ತಾರ್‌ ಸ್ನೇಹ ಸಮ್ಮಿಲನ

Team Udayavani, Apr 25, 2022, 11:41 AM IST

iftar

ಜಪ್ಪಿನಮೊಗರು: ದೇಶದಲ್ಲಿ ಮಂಗಳೂರಿಗೆ ಮಹತ್ವದ ಸ್ಥಾನವಿದೆ. ಎಲ್ಲ ಕ್ಷೇತ್ರಗಳಲ್ಲೂ ಉಜ್ವಲ ಅವಕಾಶಗಳೂ ಇವೆ. ಅದನ್ನು ನಾವು ಎಂದಿಗೂ ಕಳೆದುಕೊಳ್ಳಬಾರದು. ಸಮಾಜದಲ್ಲಿ ದ್ವೇಷ ಪಾರಮ್ಯ ಮೆರೆಯಲು ಅವಕಾಶ ನೀಡಲೇಬಾರದು ಎಂದು ನಿಟ್ಟೆ ವಿಶ್ವವಿದ್ಯಾಲಯದ ಕುಲಾಧಿಪತಿ ಎನ್‌. ವಿನಯ್‌ ಹೆಗ್ಡೆ ಆಶಿಸಿದರು.

ಜಪ್ಪಿನಮೊಗರು ಯೇನಪೊಯ ಸಾಕ್ಸರ್‌ ಗ್ರೌಂಡ್‌ನ‌ಲ್ಲಿ ಶನಿವಾರ ಸಂಜೆ ಆಯೋಜಿಸಲಾದ ಇಫ್ತಾರ್‌ ಸ್ನೇಹ ಸಮ್ಮಿಲನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಮನುಷ್ಯ ಎಷ್ಟೇ ದೊಡ್ಡ ಸಾಧನೆ ಮಾಡಿದರೂ ಕೂಡ ಆತ ಅತ್ಯುತ್ತಮ ಮನುಷ್ಯನಾಗುವುದು ಎಲ್ಲಕ್ಕಿಂತ ಮುಖ್ಯವಾಗಿದೆ. ಸಮಾಜದಲ್ಲಿ ಸೌಹಾರ್ದ ಕಾಪಾಡುವ ಅಗತ್ಯವಿದೆ. ಮಾನವರಾಗಿ ಬಾಳಿದರೆ ಮಾತ್ರ ಸೌಹಾರ್ದ ಬೆಸೆಯಲು ಸಾಧ್ಯ. ದ್ವೇಷ ದೂರವಿಟ್ಟು, ಒಟ್ಟಾಗಿ ಬದುಕಬೇಕು. ನಮ್ಮ ಮಾತುಗಳು ಸಭೆಗಳಿಗೆ ಸೀಮಿತವಾಗಿರದೆ, ಹೃದಯದಿಂದ ಬರಬೇಕು ಎಂದರು.

ವಿಶ್ವ ಭ್ರಾತೃತ್ವದ ಸಂದೇಶ

ಮಂಗಳೂರು ಬಿಷಪ್‌ ಡಾ| ಪೀಟರ್‌ ಪಾವ್ಲ್ ಸಲ್ಡಾನ್ಹಾ ಮಾತನಾಡಿ, ಮುಸ್ಲಿಮರ ಧರ್ಮ ಗ್ರಂಥವು ವಿಶ್ವ ಭ್ರಾತೃತ್ವದ ಸಂದೇಶ ಸಾರುತ್ತದೆ. ಉಪವಾಸವು ಹಸಿವಿನ ಜತೆಗೆ ಎಲ್ಲ ಕೆಡುಕುಗಳಿಂದ ದೂರವಿರಲು ಹೇಳುತ್ತದೆ. ಹಿಂದೂ, ಕ್ರೈಸ್ತರಲ್ಲೂ ಉಪವಾಸ ಆಚರಣೆಗಳಿವೆ. ಇಂಥ ಧಾರ್ಮಿಕ ಆಚರಣೆಗಳೊಂದಿಗೆ ನಾವೆಲ್ಲ ಮನುಷ್ಯರು ಎಂಬ ಭಾವನೆ ಬೇಕು. ಒಬ್ಬರ ಕಷ್ಟ, ನ್ಯೂನತೆಗಳನ್ನು ಇನ್ನೊಬ್ಬರು ಅರ್ಥ ಮಾಡಿಕೊಂಡು, ಸಹಿಷ್ಣುತೆ, ಪ್ರೀತಿ ವಿಶ್ವಾಸದಿಂದ ಬಾಳಿದರೆ ದೇವರೂ ಮೆಚ್ಚುತ್ತಾರೆ. ಬಂಧುತ್ವದ ಬದುಕು ನಾವೆಲ್ಲ ಮೈಗೂಡಿಸಿಕೊಳ್ಳಬೇಕು ಎಂದರು.

ಯೇನಪೊಯ ವಿಶ್ವವಿದ್ಯಾಲಯದ ಕುಲಾಧಿಪತಿ ಯೇನಪೊಯ ಅಬ್ದುಲ್ಲ ಕುಂಞಿ ಮಾತನಾಡಿ, ಪ್ರೀತಿ, ವಿಶ್ವಾಸ ವೃದ್ಧಿಯೇ ಇಸ್ಲಾಮ್‌ ಮತ್ತು ಉಪವಾಸದ ಉದ್ದೇಶ. ಜಗತ್ತಿನ ಎಲ್ಲ ಧರ್ಮ, ಜಾತಿ, ಮತ, ವರ್ಗ, ವರ್ಣ ಭಾಷೆಯ ವ್ಯತ್ಯಾಸಗಳನ್ನು ಅರ್ಥ ಮಾಡಿಕೊಂಡು ಪರಿಸ್ಪರ ಪ್ರೀತಿ ವಿಶ್ವಾಸದಿಂದ ಬಾಳುವುದೇ ಮಾನವ ಧರ್ಮ. ಎಲ್ಲ ಧರ್ಮಗಳು ದಯೆಯನ್ನು ಪ್ರತಿಪಾದಿಸುತ್ತಿವೆ. ನಾವು ನಮ್ಮ ಜೀವನದಲ್ಲಿ ಅದನ್ನು ಅಳವಡಿಸಿಕೊಳ್ಳಬೇಕು ಎಂದರು.

ರಾಜಕೀಯ, ಧಾರ್ಮಿಕ, ಸಾಮಾಜಿಕ, ವೈದ್ಯಕೀಯ, ಶೈಕ್ಷಣಿಕ, ಉದ್ಯಮ ಸೇರಿದಂತೆ ವಿವಿಧ ಕ್ಷೇತ್ರಗಳ ಗಣ್ಯರು ಇಫ್ತಾರ್‌ ಕೂಟದಲ್ಲಿ ಭಾಗವಹಿಸಿದ್ದರು.

ಟಾಪ್ ನ್ಯೂಸ್

banPuttur ಚುನಾವಣೆ ಕರ್ತವ್ಯ ನಿರತ ಅಂಗನವಾಡಿ ಕಾರ್ಯಕರ್ತೆಗೆ ಹಲ್ಲೆ

Puttur ಚುನಾವಣೆ ಕರ್ತವ್ಯ ನಿರತ ಅಂಗನವಾಡಿ ಕಾರ್ಯಕರ್ತೆಗೆ ಹಲ್ಲೆ

Kota ಮತದಾನ ಮಾಡಿ ಕೊನೆಯುಸಿರೆಳೆದ ಅಜ್ಜಿ!

Kota ಮತದಾನ ಮಾಡಿ ಕೊನೆಯುಸಿರೆಳೆದ ಅಜ್ಜಿ!

Bantwal: ಮನೆಯಲ್ಲೇ ಮತ ಚಲಾಯಿಸಿದ ಮಾಜಿ ಕೇಂದ್ರ ಸಚಿವ ಬಿ. ಜನಾರ್ದನ ಪೂಜಾರಿ

Bantwal: ಮನೆಯಲ್ಲೇ ಮತ ಚಲಾಯಿಸಿದ ಮಾಜಿ ಕೇಂದ್ರ ಸಚಿವ ಬಿ. ಜನಾರ್ದನ ಪೂಜಾರಿ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

ಇಂದು ಕೇಂದ್ರ ಸಚಿವ ರಾಜನಾಥ್‌ ಸಿಂಗ್‌ ಕಾಸರಗೋಡಿಗೆ

ಇಂದು ಕೇಂದ್ರ ಸಚಿವ ರಾಜನಾಥ್‌ ಸಿಂಗ್‌ ಕಾಸರಗೋಡಿಗೆ

Election Campaign 25 ವರ್ಷಗಳ ಹಿಂದೆ; ಆಗ ದುಡ್ಡಿನ ಆಸೆ ಇರಲಿಲ್ಲ…! 

Election Campaign 25 ವರ್ಷಗಳ ಹಿಂದೆ; ಆಗ ದುಡ್ಡಿನ ಆಸೆ ಇರಲಿಲ್ಲ…! 

Madikeri; ಅಯ್ಯಂಗೇರಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳ ಸೆರೆ

Madikeri; ಅಯ್ಯಂಗೇರಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳ ಸೆರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

Mangaluru ವೈದ್ಯಕೀಯ ಪದವೀಧರೆ ಪಿಜಿಯಲ್ಲಿ ಸಾವು

Mangaluru ವೈದ್ಯಕೀಯ ಪದವೀಧರೆ ಪಿಜಿಯಲ್ಲಿ ಸಾವು

17=

Mangaluru: ಬೈಕ್‌ಗೆ ಕಾರು ಢಿಕ್ಕಿ: ವಿದ್ಯಾರ್ಥಿ ಸಾವು

Moodabidri ಮೆದುಳು ಜ್ವರ ಉಲ್ಬಣಿಸಿ ವಿದ್ಯಾರ್ಥಿನಿ ನಿಧನ

Moodabidri ಮೆದುಳು ಜ್ವರ ಉಲ್ಬಣಿಸಿ ವಿದ್ಯಾರ್ಥಿನಿ ನಿಧನ

Dakshina Kannada: ಮನೆಮನೆ ಭೇಟಿ ಮೂಲಕ ಮತದಾನ ಸೌಲಭ್ಯಕ್ಕೆ ಚಾಲನೆ

Dakshina Kannada: ಮನೆಮನೆ ಭೇಟಿ ಮೂಲಕ ಮತದಾನ ಸೌಲಭ್ಯಕ್ಕೆ ಚಾಲನೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

banPuttur ಚುನಾವಣೆ ಕರ್ತವ್ಯ ನಿರತ ಅಂಗನವಾಡಿ ಕಾರ್ಯಕರ್ತೆಗೆ ಹಲ್ಲೆ

Puttur ಚುನಾವಣೆ ಕರ್ತವ್ಯ ನಿರತ ಅಂಗನವಾಡಿ ಕಾರ್ಯಕರ್ತೆಗೆ ಹಲ್ಲೆ

Kota ಮತದಾನ ಮಾಡಿ ಕೊನೆಯುಸಿರೆಳೆದ ಅಜ್ಜಿ!

Kota ಮತದಾನ ಮಾಡಿ ಕೊನೆಯುಸಿರೆಳೆದ ಅಜ್ಜಿ!

Bantwal: ಮನೆಯಲ್ಲೇ ಮತ ಚಲಾಯಿಸಿದ ಮಾಜಿ ಕೇಂದ್ರ ಸಚಿವ ಬಿ. ಜನಾರ್ದನ ಪೂಜಾರಿ

Bantwal: ಮನೆಯಲ್ಲೇ ಮತ ಚಲಾಯಿಸಿದ ಮಾಜಿ ಕೇಂದ್ರ ಸಚಿವ ಬಿ. ಜನಾರ್ದನ ಪೂಜಾರಿ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

ಇಂದು ಕೇಂದ್ರ ಸಚಿವ ರಾಜನಾಥ್‌ ಸಿಂಗ್‌ ಕಾಸರಗೋಡಿಗೆ

ಇಂದು ಕೇಂದ್ರ ಸಚಿವ ರಾಜನಾಥ್‌ ಸಿಂಗ್‌ ಕಾಸರಗೋಡಿಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.